Homeಮುಖಪುಟಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ಸಿಖ್ ಧರ್ಮದ ಮೂರನೇ ಗುರುಗಳಾದ ಗುರು ಅಮರ್ ದಾಸ್, ಜನರ ಹಸಿವನ್ನು ನೀಗಿಸುವ ಲಂಗರ್‌ಗಳಿಗೆ ಒಂದು ಸಂಘಟಿತ ರೂಪ ನೀಡಿದರು.

- Advertisement -
- Advertisement -

ಲಂಗರ್… ರೈತ ಹೋರಾಟ ಶುರುವಾದಾಗಿನಿಂದ ಎಲ್ಲರ ಬಾಯಲ್ಲಿ ಬರುತ್ತಿರುವ ಮತ್ತು ಹೆಚ್ಚು ಪ್ರಚುರಗೊಳ್ಳುತ್ತಿರುವ ಪದ. ಲಂಗರ್ ಎಂದರೆ ಅಡುಗೆಮನೆ ಎಂಬ ಅರ್ಥ ಇದೆ. ಇದು ಸಿಖ್ ಸಮುದಾಯದ ಜನರು ಒಂದಾಗಿ, ಒಕ್ಕೂಟದ ರೀತಿಯಲ್ಲಿ ಅಡುಗೆ ಮಾಡಿ, ಗುರುದ್ವಾರಗಳಲ್ಲಿ ನೀಡುವ ಉಚಿತ ಊಟದ ಸೇವೆಯಾಗಿದೆ.

ಲಂಗರ್‌ಗಳಲ್ಲಿ ಯಾವುದೇ ಜಾತಿ, ಧರ್ಮ, ಲಿಂಗ, ಸಾಮಾಜಿಕ ಸ್ಥಾನಮಾನ, ಆರ್ಥಿಕ ಸ್ಥಿತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಇಲ್ಲಿ ಎಲ್ಲರು ಸಮಾನರು. ಎಲ್ಲರು ಜೊತೆಯಲ್ಲಿ ಕುಳಿತು ಊಟ ಮಾಡಬೇಕು. ಯಾರೊಬ್ಬರು ಹಸಿವಿನಿಂದ ಬಳಲಬಾರದು ಎಂಬುದು ಲಂಗರ್‌ಗಳ ಆಶಯ. ಲಂಗರ್‌ಗಳು ಸಸ್ಯಹಾರವನ್ನು ಒದಗಿಸುತ್ತವೆ. ಸಿಖ್ ಸಮುದಾಯದ ಸ್ವಯಂ ಸೇವಕರು ಲಂಗರ್‌ಗಳಲ್ಲಿ ಸೇವೆ ಸಲ್ಲಿಸುತ್ತಾರೆ.

ಲಂಗರ್‌ಗಳ ಇತಿಹಾಸ

ಲಂಗರ್‌ಗಳಿಗೆ 1500 ವರ್ಷಗಳ ಇತಿಹಾಸವಿದೆ. ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ಅವರ ಕಾಲದಿಂದಲು ಲಂಗರ್‌ಗಳು ಸೇವೆ ನೀಡುತ್ತಿವೆ. ಪಂಜಾಬ್‌ನಲ್ಲಿ ಈ ಲಂಗರ್‌ಗಳ ಆರಂಭವಾಯಿತು ಎಂದು ಪ್ರತಿಭಟನಾ ನಿರತ ಪಂಜಾಬ್‌ನ ರೈತರು ತಿಳಿಸುತ್ತಾರೆ.

ಸಿಖ್ ಧರ್ಮದ ಎರಡನೇ ಗುರುಗಳಾದ ಗುರು ಅಂಗದ್ ಅವರು ಗುರುದ್ವಾರಗಳಲ್ಲಿ ಈ ಲಂಗರ್‌ಗಳಿಗೆ ನಿಯಮಬದ್ಧವಾಗಿ ಚಾಲನೆ ನೀಡಿದವರು. ಸಿಖ್ ಧರ್ಮದ ಮೂರನೇ ಗುರುಗಳಾದ ಗುರು ಅಮರ್ ದಾಸ್, ಜನರ ಹಸಿವನ್ನು ನೀಗಿಸುವ ಲಂಗರ್‌ಗಳಿಗೆ ಒಂದು ಸಂಘಟಿತ ರೂಪ ನೀಡಿದರು. ಗುರುದ್ವಾರಗಳಿಂದ ಹೊರಭಾಗದಲ್ಲೂ ಹಸಿವಿನಿಂದ ಬಳಲುವವರಿಗೆ ಊಟ ಸಿಗಬೇಕು ಎಂದು ಪ್ರತಿಪಾದಿಸಿದರು. ತಮ್ಮನ್ನು ಭೇಟಿಯಾಗಲು ಬರುವವರು ಮೊದಲು ಊಟ ಮಾಡಿ ನಂತರ ಭೇಟಿಯಾಗಬೇಕು ಎಂಬ ಹವ್ಯಾಸವನ್ನು ಬೆಳೆಸಿದರು. ಇದು ಈಗಲೂ ಸಿಖ್ ಸಮುದಾಯದಲ್ಲಿ ಜಾರಿಯಿದೆ.

ಗಡಿಗಳಲ್ಲಿ ಲಂಗ್‌ರ್‌ಗಳು ತಲೆಎತ್ತಿದ ಬಗೆ

ಕಳೆದ 5 ತಿಂಗಳಿನಿಂದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ನಡೆಯುತ್ತಿರುವ ರೈತ ಹೋರಾಟದಲ್ಲಿ ಈ ಲಂಗರ್‌ಗಳ ಪಾತ್ರ ಪ್ರಮುಖವಾಗಿದೆ. ವಿಶ್ವದಾದ್ಯಂತ ಹಬ್ಬಿಕೊಂಡಿರುವ ಲಂಗರ್‌ಗಳು ಈ ಹೋರಾಟದಲ್ಲಿ ಚಾರಿತ್ರಿಕ ಕೊಡುಗೆ ನೀಡುತ್ತಿವೆ. ಪ್ರತಿಭಟನೆಗೆ ಬರುವವರಿಗೆ ಮೊದಲು ಲಂಗರ್‌ಗಳ ದಾರಿ ತಿಳಿಸಲಾಗುತ್ತದೆ. ಮೊದ ಮೊದಲು ಸಾಮಾನ್ಯ ಊಟಕ್ಕೆ ಮಾತ್ರ ಸೀಮಿತವಾಗಿದ್ದ ಲಂಗರ್‌ಗಳು ಈಗ ಜನರ ಜೀವನ ಶೈಲಿ ಜೊತೆಗೆ ಸಾಕಾಷ್ಟು ಬದಲಾವಣೆ ಹೊಂದಿವೆ.

ನವೆಂಬರ್ 26 ರಂದು ಪಂಜಾಬ್ ರೈತರು ಆಂಭಿಸಿದ ದೆಹಲಿ ಚಲೋ ಜೊತೆಗೆ ಲಂಗರ್‌ಗಳು ರೈತರ ಬೆನ್ನು ಹತ್ತಿದ್ದವು. ರೈತರು ತಮ್ಮ ಪ್ರತಿಭಟನಾ ಸ್ಥಳಗಳನ್ನು ಗುರುತಿಸಿ ಟ್ರ್ಯಾಲಿಗಳನ್ನು ನಿಲ್ಲಿಸಿದ ಕೂಡಲೇ ಲಂಗರ್‌ಗಳು ಕೂಡ ಕಾರ್ಯನಿರ್ವಹಿಸಲು ಆರಂಭಿಸಿದ್ದವು. ದೆಹಲಿಯ ಗಡಿಭಾಗಗಳಾದ ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್, ಶಹಾಜಾನ್ಪುರ, ಗಾಝಿಪುರ್, ಚಿಲ್ಲಾ, ಪಲ್ವಲ್ ಬಾರ್ಡರ್, ಇಂದ್ರಪ್ರಸ್ಥ ಬಾರ್ಡರ್‌ಗಳು ಸೇರಿದಂತೆ ಲಕ್ಷಾಂತರ ಜನ ಪ್ರತಿಭಟನಾಕಾರರು ಇರುವಲ್ಲಿಯೇ ಸಾವಿರಾರು ಲಂಗರ್‌ಗಳು ತಲೆ ಎತ್ತಿದವು.

ಸಿಖ್ ಧರ್ಮ ರೂಪುಗೊಂಡಿರುವುದೆ ಒಂದು ಸಂಘಟನೆಯ ಮಾದರಿಯಲ್ಲಿ. ಇಲ್ಲಿ ಎಲ್ಲರೂ ನಿಯಮಗಳಿಗೆ ಬದ್ಧರಾಗಿರಬೇಕು. ತಾವು ಸಂಪಾದಿಸಿದ ಸಂಪತ್ತಿನಲ್ಲಿ ಶೇಕಡಾ 10 ರಷ್ಟನ್ನು ಲಂಗರ್‌ಗಳಿಗೆ ಪ್ರತಿಯೊಬ್ಬರು ದೇಣಿಗೆ ನೀಡಲೇಬೇಕು. ಇದರಿಂದಲೇ ಲಂಗರ್‌ಗಳಿಗೆ ಬೇಕಾದ ದೇಣಿಗೆ ಸಂಗ್ರಹವಾಗುತ್ತದೆ.

ದಿನವೀಡಿ ಸೇವೆ

ಪ್ರತಿಭಟನಾ ಸ್ಥಳಗಳಲ್ಲಿ ತಲೆ ಎತ್ತಿರುವ ಲಂಗರ್‌ಗಳು 24 ಗಂಟೆಗಳು ಪ್ರತಿಭಟನಾ ನಿರತರ ಹಸಿವನ್ನು ಇಂಗಿಸುತ್ತಿವೆ. ಬೆಳಗ್ಗೆ 4 ಗಂಟೆಯಿಂದ ಕಾರ್ಯ ನಿರ್ವಹಿಸಲು ಆರಂಭಿಸುವ ಇವುಗಳ ಕೆಲಸ ರಾತ್ರಿ 10 ಗಂಟೆಯವರೆಗೂ ಸಾಗುತ್ತಲೇ ಇರುತ್ತದೆ. ನಂತರವೂ ಯಾರಾದರೂ ಊಟಕ್ಕೆ ಬಂದರೇ ಇಲ್ಲ ಎನ್ನುವುದಿಲ್ಲ. ರೈತ ಹೋರಾಟದಲ್ಲಿರುವ ಲಂಗರ್‌ಗಳು ಬೆಳಗ್ಗೆ ಚಹಾ ನೀಡುವ ಮೂಲಕ ಆರಂಭವಾಗುತ್ತವೆ. ರಾತ್ರಿ ಹಾಲು ನೀಡುವ ಮೂಲಕ ಕೊನೆಗೊಳ್ಳುತ್ತವೆ.

ಸಾಮಾನ್ಯ ಊಟ ಉಪಚಾರಕ್ಕೆ ಮೀಸಲಾಗಿದ್ದ ಇವುಗಳಲ್ಲಿ ಈಗ ಹಲವಾರು ಬದಲಾವಣೆಗಳು ಕಂಡು ಬಂದಿವೆ. ಹಲವು ವಿಭಿನ್ನ ಲಂಗರ್‌ಗಳು ಪ್ರತಿಭಟನಾ ಸ್ಥಳಗಳಲ್ಲಿ ತಲೆ ಎತ್ತಿವೆ. ಚಹಾದ ಲಂಗರ್, ಕೀರ್ ಕಿ ಲಂಗರ್, ಬೆಳಗಿನ ತಿಂಡಿ ಲಂಗರ್, ಊಟದ ಲಂಗರ್, ಸಂಜೆ ಸ್ಯಾಕ್ಸ್ ಲಂಗರ್, ಬರ್ಗರ್ ಲಂಗರ್, ಪಿಜ್ಜಾ ಲಂಗರ್, ಪಿಂಡಿ (ಸಿಹಿ ಉಂಡೆಗಳು) ಕಾ ಲಂಗರ್, ಹಲ್ವಾ ಮತ್ತು ಜಿಲೇಬಿ ಲಂಗರ್‌ಗಳೆಂಬ ಹಲವು ರೀತಿಯಲ್ಲಿ ಬದಲಾಗಿವೆ.

ದೇಶ-ವಿದೇಶಗಳ ಹಲವು ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲಂಗರ್‌ಗಳ ಒಂದು ಭಾಗಗಳು ಈ ಪ್ರತಿಭಟನಾ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ದೇಶ ವಿದೇಶಗಳ ಸಾವಿರಾರು ಸ್ವಯಂ ಸೇವಕರು ಲಂಗರ್‌ಗಳಲ್ಲಿ ಅಡುಗೆ ಮಾಡುವುದು, ಸ್ವಚ್ಛತೆ, ಬಡಿಸುವುದು ಸೇರಿದಂತೆ ಎಲ್ಲಾ ಕೆಲಸಗಳನ್ನು ನೋಡಿಕೊಳ್ಳುತ್ತಾರೆ.

ಗುರುದ್ವಾರಗಳ ಲಂಗರ್‌ಗಳ ಜೊತೆಗೆ ಪ್ಯಾಮಿಲಿ ಲಂಗರ್‌ಗಳು ಇಲ್ಲಿವೆ. ಹಳ್ಳಿಯ ಎರಡು ಮೂರು ಮನೆಗಳ ಸದಸ್ಯರು ಸೇರಿಯು ಲಂಗರ್‌ಗಳನ್ನು ನಡೆಸುತ್ತಿದ್ದಾರೆ. ಕುಟುಂಬದ ಲಂಗರ್‌ಗಳಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆಗೆ ಹೊರ ಭಾಗಗಳಿಂದ ಬಂದವರಿಗೂ ಆಹಾರ ಒದಗಿಸಲಾಗುತ್ತದೆ. ಇವುಗಳಲ್ಲಿ ಮನೆಯ ಸದಸ್ಯರೇ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಾರೆ.

ರೈತ ಹೋರಾಟದಲ್ಲಿರುವ ಲಂಗರ್‌ಗಳಲ್ಲಿ ಊಟ ಉಪಚಾರದ ಜೊತೆಗೆ ದಿನ ಬಳಕೆಯ ಅಗತ್ಯ ವಸ್ತುಗಳಾದ ಬ್ರಶ್, ಪೇಸ್ಟ್, ಸೋಪ್, ಶೂ, ಚಪ್ಪಲಿ, ಬಟ್ಟೆ, ಚಳಿಗಾಲದ ಕ್ರೀಮ್‌ಗಳು, ಸ್ಯಾನಿಟರಿ ನ್ಯಾಪ್ಕಿನ್ಸ್, ಒಳಉಡುಪುಗಳನ್ನು ಸಹ ನೀಡಲಾಗುತ್ತಿದೆ.

ಲಂಗ್‌ರ್‌ಗಳ ಮಹತ್ವ

70 ದಿನಗಳ ರೈತ ಹೋರಾಟದಲ್ಲಿ ಈ ಲಂಗರ್‌ಗಳ ಪಾತ್ರ ಬಹಳ ಪ್ರಾಮುಖ್ಯತೆ ಪಡೆದಿದೆ. ಹೋರಾಟಗಳು ಹಲವು ಬಾರಿ ಹಣಕಾಸು ಕೊರತೆ, ಊಟದ ವ್ಯವಸ್ಥೆ ಇಲ್ಲದ ಕಾರಣಕ್ಕೆ ಕೊನೆಗೊಂಡ ಉದಾಹರಣೆಗಳಿವೆ. ಲಕ್ಷಾಂತರ ಜನರು ಒಂದೆಡೆ ಇರುವಾಗ ಊಟ-ಉಪಚಾರಗಳು ಸರಿಯಾಗಿ ಇಲ್ಲದಿದ್ದರೇ, ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದರಿಂದ ಹೋರಾಟ ಕೂಡ ಕೊನೆಗೊಳ್ಳಬಹುದು. ಇಂತಹ ಸ್ಥಿತಿಗಳನ್ನು ಈ ಲಂಗರ್‌ಗಳು ಪಾರು ಮಾಡಿವೆ.

ಲಂಗರ್‌ಗಳಲ್ಲಿ ಮೈಕ್‌ಗಳ ಮೂಲಕ ಇಡೀ ದಿನ ಪ್ರತಿಭಟನಾಕಾರರನ್ನು ಊಟಕ್ಕೆ ಕರೆಯಲಾಗುತ್ತಿರುತ್ತದೆ. ಹೋರಾಟಕ್ಕೆ ಶಕ್ತಿ ತುಂಬುವ ವಾಕ್ಯಗಳನ್ನು ಘೋಷಿಸುತ್ತಿರುತ್ತವೆ. ಲಂಗರ್‌ಗಳು ಇಡೀ ದಿನ ಆಹಾರ, ಚಹಾ ನೀಡುವ ಮೂಲಕ ತೀವ್ರ ಚಳಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಬೆಚ್ಚಗಿನ ಭಾವ ಒದಗಿಸುತ್ತಿವೆ. ಉತ್ತಮ ಆಹಾರ ದೇಹಕ್ಕೆ ಶಕ್ತಿ ನೀಡುವ ಜೊತೆಗೆ ಮನಸ್ಸಿಗೂ ಹೋರಾಟದ ಹುಮ್ಮಸ್ಸು ನೀಡುತ್ತಿದೆ.

  • ಮಮತ ಎಂ

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...