Homeಮುಖಪುಟಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ಸಿಖ್ ಧರ್ಮದ ಮೂರನೇ ಗುರುಗಳಾದ ಗುರು ಅಮರ್ ದಾಸ್, ಜನರ ಹಸಿವನ್ನು ನೀಗಿಸುವ ಲಂಗರ್‌ಗಳಿಗೆ ಒಂದು ಸಂಘಟಿತ ರೂಪ ನೀಡಿದರು.

- Advertisement -
- Advertisement -

ಲಂಗರ್… ರೈತ ಹೋರಾಟ ಶುರುವಾದಾಗಿನಿಂದ ಎಲ್ಲರ ಬಾಯಲ್ಲಿ ಬರುತ್ತಿರುವ ಮತ್ತು ಹೆಚ್ಚು ಪ್ರಚುರಗೊಳ್ಳುತ್ತಿರುವ ಪದ. ಲಂಗರ್ ಎಂದರೆ ಅಡುಗೆಮನೆ ಎಂಬ ಅರ್ಥ ಇದೆ. ಇದು ಸಿಖ್ ಸಮುದಾಯದ ಜನರು ಒಂದಾಗಿ, ಒಕ್ಕೂಟದ ರೀತಿಯಲ್ಲಿ ಅಡುಗೆ ಮಾಡಿ, ಗುರುದ್ವಾರಗಳಲ್ಲಿ ನೀಡುವ ಉಚಿತ ಊಟದ ಸೇವೆಯಾಗಿದೆ.

ಲಂಗರ್‌ಗಳಲ್ಲಿ ಯಾವುದೇ ಜಾತಿ, ಧರ್ಮ, ಲಿಂಗ, ಸಾಮಾಜಿಕ ಸ್ಥಾನಮಾನ, ಆರ್ಥಿಕ ಸ್ಥಿತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಇಲ್ಲಿ ಎಲ್ಲರು ಸಮಾನರು. ಎಲ್ಲರು ಜೊತೆಯಲ್ಲಿ ಕುಳಿತು ಊಟ ಮಾಡಬೇಕು. ಯಾರೊಬ್ಬರು ಹಸಿವಿನಿಂದ ಬಳಲಬಾರದು ಎಂಬುದು ಲಂಗರ್‌ಗಳ ಆಶಯ. ಲಂಗರ್‌ಗಳು ಸಸ್ಯಹಾರವನ್ನು ಒದಗಿಸುತ್ತವೆ. ಸಿಖ್ ಸಮುದಾಯದ ಸ್ವಯಂ ಸೇವಕರು ಲಂಗರ್‌ಗಳಲ್ಲಿ ಸೇವೆ ಸಲ್ಲಿಸುತ್ತಾರೆ.

ಲಂಗರ್‌ಗಳ ಇತಿಹಾಸ

ಲಂಗರ್‌ಗಳಿಗೆ 1500 ವರ್ಷಗಳ ಇತಿಹಾಸವಿದೆ. ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ಅವರ ಕಾಲದಿಂದಲು ಲಂಗರ್‌ಗಳು ಸೇವೆ ನೀಡುತ್ತಿವೆ. ಪಂಜಾಬ್‌ನಲ್ಲಿ ಈ ಲಂಗರ್‌ಗಳ ಆರಂಭವಾಯಿತು ಎಂದು ಪ್ರತಿಭಟನಾ ನಿರತ ಪಂಜಾಬ್‌ನ ರೈತರು ತಿಳಿಸುತ್ತಾರೆ.

ಸಿಖ್ ಧರ್ಮದ ಎರಡನೇ ಗುರುಗಳಾದ ಗುರು ಅಂಗದ್ ಅವರು ಗುರುದ್ವಾರಗಳಲ್ಲಿ ಈ ಲಂಗರ್‌ಗಳಿಗೆ ನಿಯಮಬದ್ಧವಾಗಿ ಚಾಲನೆ ನೀಡಿದವರು. ಸಿಖ್ ಧರ್ಮದ ಮೂರನೇ ಗುರುಗಳಾದ ಗುರು ಅಮರ್ ದಾಸ್, ಜನರ ಹಸಿವನ್ನು ನೀಗಿಸುವ ಲಂಗರ್‌ಗಳಿಗೆ ಒಂದು ಸಂಘಟಿತ ರೂಪ ನೀಡಿದರು. ಗುರುದ್ವಾರಗಳಿಂದ ಹೊರಭಾಗದಲ್ಲೂ ಹಸಿವಿನಿಂದ ಬಳಲುವವರಿಗೆ ಊಟ ಸಿಗಬೇಕು ಎಂದು ಪ್ರತಿಪಾದಿಸಿದರು. ತಮ್ಮನ್ನು ಭೇಟಿಯಾಗಲು ಬರುವವರು ಮೊದಲು ಊಟ ಮಾಡಿ ನಂತರ ಭೇಟಿಯಾಗಬೇಕು ಎಂಬ ಹವ್ಯಾಸವನ್ನು ಬೆಳೆಸಿದರು. ಇದು ಈಗಲೂ ಸಿಖ್ ಸಮುದಾಯದಲ್ಲಿ ಜಾರಿಯಿದೆ.

ಗಡಿಗಳಲ್ಲಿ ಲಂಗ್‌ರ್‌ಗಳು ತಲೆಎತ್ತಿದ ಬಗೆ

ಕಳೆದ 5 ತಿಂಗಳಿನಿಂದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ನಡೆಯುತ್ತಿರುವ ರೈತ ಹೋರಾಟದಲ್ಲಿ ಈ ಲಂಗರ್‌ಗಳ ಪಾತ್ರ ಪ್ರಮುಖವಾಗಿದೆ. ವಿಶ್ವದಾದ್ಯಂತ ಹಬ್ಬಿಕೊಂಡಿರುವ ಲಂಗರ್‌ಗಳು ಈ ಹೋರಾಟದಲ್ಲಿ ಚಾರಿತ್ರಿಕ ಕೊಡುಗೆ ನೀಡುತ್ತಿವೆ. ಪ್ರತಿಭಟನೆಗೆ ಬರುವವರಿಗೆ ಮೊದಲು ಲಂಗರ್‌ಗಳ ದಾರಿ ತಿಳಿಸಲಾಗುತ್ತದೆ. ಮೊದ ಮೊದಲು ಸಾಮಾನ್ಯ ಊಟಕ್ಕೆ ಮಾತ್ರ ಸೀಮಿತವಾಗಿದ್ದ ಲಂಗರ್‌ಗಳು ಈಗ ಜನರ ಜೀವನ ಶೈಲಿ ಜೊತೆಗೆ ಸಾಕಾಷ್ಟು ಬದಲಾವಣೆ ಹೊಂದಿವೆ.

ನವೆಂಬರ್ 26 ರಂದು ಪಂಜಾಬ್ ರೈತರು ಆಂಭಿಸಿದ ದೆಹಲಿ ಚಲೋ ಜೊತೆಗೆ ಲಂಗರ್‌ಗಳು ರೈತರ ಬೆನ್ನು ಹತ್ತಿದ್ದವು. ರೈತರು ತಮ್ಮ ಪ್ರತಿಭಟನಾ ಸ್ಥಳಗಳನ್ನು ಗುರುತಿಸಿ ಟ್ರ್ಯಾಲಿಗಳನ್ನು ನಿಲ್ಲಿಸಿದ ಕೂಡಲೇ ಲಂಗರ್‌ಗಳು ಕೂಡ ಕಾರ್ಯನಿರ್ವಹಿಸಲು ಆರಂಭಿಸಿದ್ದವು. ದೆಹಲಿಯ ಗಡಿಭಾಗಗಳಾದ ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್, ಶಹಾಜಾನ್ಪುರ, ಗಾಝಿಪುರ್, ಚಿಲ್ಲಾ, ಪಲ್ವಲ್ ಬಾರ್ಡರ್, ಇಂದ್ರಪ್ರಸ್ಥ ಬಾರ್ಡರ್‌ಗಳು ಸೇರಿದಂತೆ ಲಕ್ಷಾಂತರ ಜನ ಪ್ರತಿಭಟನಾಕಾರರು ಇರುವಲ್ಲಿಯೇ ಸಾವಿರಾರು ಲಂಗರ್‌ಗಳು ತಲೆ ಎತ್ತಿದವು.

ಸಿಖ್ ಧರ್ಮ ರೂಪುಗೊಂಡಿರುವುದೆ ಒಂದು ಸಂಘಟನೆಯ ಮಾದರಿಯಲ್ಲಿ. ಇಲ್ಲಿ ಎಲ್ಲರೂ ನಿಯಮಗಳಿಗೆ ಬದ್ಧರಾಗಿರಬೇಕು. ತಾವು ಸಂಪಾದಿಸಿದ ಸಂಪತ್ತಿನಲ್ಲಿ ಶೇಕಡಾ 10 ರಷ್ಟನ್ನು ಲಂಗರ್‌ಗಳಿಗೆ ಪ್ರತಿಯೊಬ್ಬರು ದೇಣಿಗೆ ನೀಡಲೇಬೇಕು. ಇದರಿಂದಲೇ ಲಂಗರ್‌ಗಳಿಗೆ ಬೇಕಾದ ದೇಣಿಗೆ ಸಂಗ್ರಹವಾಗುತ್ತದೆ.

ದಿನವೀಡಿ ಸೇವೆ

ಪ್ರತಿಭಟನಾ ಸ್ಥಳಗಳಲ್ಲಿ ತಲೆ ಎತ್ತಿರುವ ಲಂಗರ್‌ಗಳು 24 ಗಂಟೆಗಳು ಪ್ರತಿಭಟನಾ ನಿರತರ ಹಸಿವನ್ನು ಇಂಗಿಸುತ್ತಿವೆ. ಬೆಳಗ್ಗೆ 4 ಗಂಟೆಯಿಂದ ಕಾರ್ಯ ನಿರ್ವಹಿಸಲು ಆರಂಭಿಸುವ ಇವುಗಳ ಕೆಲಸ ರಾತ್ರಿ 10 ಗಂಟೆಯವರೆಗೂ ಸಾಗುತ್ತಲೇ ಇರುತ್ತದೆ. ನಂತರವೂ ಯಾರಾದರೂ ಊಟಕ್ಕೆ ಬಂದರೇ ಇಲ್ಲ ಎನ್ನುವುದಿಲ್ಲ. ರೈತ ಹೋರಾಟದಲ್ಲಿರುವ ಲಂಗರ್‌ಗಳು ಬೆಳಗ್ಗೆ ಚಹಾ ನೀಡುವ ಮೂಲಕ ಆರಂಭವಾಗುತ್ತವೆ. ರಾತ್ರಿ ಹಾಲು ನೀಡುವ ಮೂಲಕ ಕೊನೆಗೊಳ್ಳುತ್ತವೆ.

ಸಾಮಾನ್ಯ ಊಟ ಉಪಚಾರಕ್ಕೆ ಮೀಸಲಾಗಿದ್ದ ಇವುಗಳಲ್ಲಿ ಈಗ ಹಲವಾರು ಬದಲಾವಣೆಗಳು ಕಂಡು ಬಂದಿವೆ. ಹಲವು ವಿಭಿನ್ನ ಲಂಗರ್‌ಗಳು ಪ್ರತಿಭಟನಾ ಸ್ಥಳಗಳಲ್ಲಿ ತಲೆ ಎತ್ತಿವೆ. ಚಹಾದ ಲಂಗರ್, ಕೀರ್ ಕಿ ಲಂಗರ್, ಬೆಳಗಿನ ತಿಂಡಿ ಲಂಗರ್, ಊಟದ ಲಂಗರ್, ಸಂಜೆ ಸ್ಯಾಕ್ಸ್ ಲಂಗರ್, ಬರ್ಗರ್ ಲಂಗರ್, ಪಿಜ್ಜಾ ಲಂಗರ್, ಪಿಂಡಿ (ಸಿಹಿ ಉಂಡೆಗಳು) ಕಾ ಲಂಗರ್, ಹಲ್ವಾ ಮತ್ತು ಜಿಲೇಬಿ ಲಂಗರ್‌ಗಳೆಂಬ ಹಲವು ರೀತಿಯಲ್ಲಿ ಬದಲಾಗಿವೆ.

ದೇಶ-ವಿದೇಶಗಳ ಹಲವು ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲಂಗರ್‌ಗಳ ಒಂದು ಭಾಗಗಳು ಈ ಪ್ರತಿಭಟನಾ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ದೇಶ ವಿದೇಶಗಳ ಸಾವಿರಾರು ಸ್ವಯಂ ಸೇವಕರು ಲಂಗರ್‌ಗಳಲ್ಲಿ ಅಡುಗೆ ಮಾಡುವುದು, ಸ್ವಚ್ಛತೆ, ಬಡಿಸುವುದು ಸೇರಿದಂತೆ ಎಲ್ಲಾ ಕೆಲಸಗಳನ್ನು ನೋಡಿಕೊಳ್ಳುತ್ತಾರೆ.

ಗುರುದ್ವಾರಗಳ ಲಂಗರ್‌ಗಳ ಜೊತೆಗೆ ಪ್ಯಾಮಿಲಿ ಲಂಗರ್‌ಗಳು ಇಲ್ಲಿವೆ. ಹಳ್ಳಿಯ ಎರಡು ಮೂರು ಮನೆಗಳ ಸದಸ್ಯರು ಸೇರಿಯು ಲಂಗರ್‌ಗಳನ್ನು ನಡೆಸುತ್ತಿದ್ದಾರೆ. ಕುಟುಂಬದ ಲಂಗರ್‌ಗಳಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆಗೆ ಹೊರ ಭಾಗಗಳಿಂದ ಬಂದವರಿಗೂ ಆಹಾರ ಒದಗಿಸಲಾಗುತ್ತದೆ. ಇವುಗಳಲ್ಲಿ ಮನೆಯ ಸದಸ್ಯರೇ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಾರೆ.

ರೈತ ಹೋರಾಟದಲ್ಲಿರುವ ಲಂಗರ್‌ಗಳಲ್ಲಿ ಊಟ ಉಪಚಾರದ ಜೊತೆಗೆ ದಿನ ಬಳಕೆಯ ಅಗತ್ಯ ವಸ್ತುಗಳಾದ ಬ್ರಶ್, ಪೇಸ್ಟ್, ಸೋಪ್, ಶೂ, ಚಪ್ಪಲಿ, ಬಟ್ಟೆ, ಚಳಿಗಾಲದ ಕ್ರೀಮ್‌ಗಳು, ಸ್ಯಾನಿಟರಿ ನ್ಯಾಪ್ಕಿನ್ಸ್, ಒಳಉಡುಪುಗಳನ್ನು ಸಹ ನೀಡಲಾಗುತ್ತಿದೆ.

ಲಂಗ್‌ರ್‌ಗಳ ಮಹತ್ವ

70 ದಿನಗಳ ರೈತ ಹೋರಾಟದಲ್ಲಿ ಈ ಲಂಗರ್‌ಗಳ ಪಾತ್ರ ಬಹಳ ಪ್ರಾಮುಖ್ಯತೆ ಪಡೆದಿದೆ. ಹೋರಾಟಗಳು ಹಲವು ಬಾರಿ ಹಣಕಾಸು ಕೊರತೆ, ಊಟದ ವ್ಯವಸ್ಥೆ ಇಲ್ಲದ ಕಾರಣಕ್ಕೆ ಕೊನೆಗೊಂಡ ಉದಾಹರಣೆಗಳಿವೆ. ಲಕ್ಷಾಂತರ ಜನರು ಒಂದೆಡೆ ಇರುವಾಗ ಊಟ-ಉಪಚಾರಗಳು ಸರಿಯಾಗಿ ಇಲ್ಲದಿದ್ದರೇ, ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದರಿಂದ ಹೋರಾಟ ಕೂಡ ಕೊನೆಗೊಳ್ಳಬಹುದು. ಇಂತಹ ಸ್ಥಿತಿಗಳನ್ನು ಈ ಲಂಗರ್‌ಗಳು ಪಾರು ಮಾಡಿವೆ.

ಲಂಗರ್‌ಗಳಲ್ಲಿ ಮೈಕ್‌ಗಳ ಮೂಲಕ ಇಡೀ ದಿನ ಪ್ರತಿಭಟನಾಕಾರರನ್ನು ಊಟಕ್ಕೆ ಕರೆಯಲಾಗುತ್ತಿರುತ್ತದೆ. ಹೋರಾಟಕ್ಕೆ ಶಕ್ತಿ ತುಂಬುವ ವಾಕ್ಯಗಳನ್ನು ಘೋಷಿಸುತ್ತಿರುತ್ತವೆ. ಲಂಗರ್‌ಗಳು ಇಡೀ ದಿನ ಆಹಾರ, ಚಹಾ ನೀಡುವ ಮೂಲಕ ತೀವ್ರ ಚಳಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಬೆಚ್ಚಗಿನ ಭಾವ ಒದಗಿಸುತ್ತಿವೆ. ಉತ್ತಮ ಆಹಾರ ದೇಹಕ್ಕೆ ಶಕ್ತಿ ನೀಡುವ ಜೊತೆಗೆ ಮನಸ್ಸಿಗೂ ಹೋರಾಟದ ಹುಮ್ಮಸ್ಸು ನೀಡುತ್ತಿದೆ.

  • ಮಮತ ಎಂ

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...