Homeಮುಖಪುಟಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ ಎಂದು ಐಪಿಎಲ್‌ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ

- Advertisement -
- Advertisement -

ದೇಶದಲ್ಲಿ ಕೊರೊನಾ ಸಾಂಕ್ರಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದು ಭಾರತಕ್ಕಾಗಿ ಇಡಿ ವಿಶ್ವವೇ ಮರುಗುತ್ತಿದೆ. ಜಗತ್ತಿನ ಹಲವು ದೇಶಗಳು ತಮ್ಮ ಸಹಾಯ ಹಸ್ತವನ್ನೂ ಭಾರತಕ್ಕೆ ಚಾಚಿ ತಮ್ಮ ಬೆಂಬಲ ನೀಡಿವೆ. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಪತ್ರಕೆಗಳು ವರದಿ ಮಾಡಿವೆ. ಕೊರೊನಾ ಬಂದು ಒಂದು ವರ್ಷವಾದರೂ, ಎರಡನೆ ಅಲೆಯ ಬಗ್ಗೆ ಮಾಹಿತಿ ಇದ್ದರೂ ಆರೋಗ್ಯ ವ್ಯವಸ್ಥೆಯನ್ನು ಮಾಡಿಟ್ಟುಕೊಳ್ಳದ ಸರ್ಕಾರಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ದೇಶದಲ್ಲಿ ಐಪಿಎಲ್‌ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನಗಳೆದ್ದಿವೆ. ಪ್ರಸ್ತುತ ಐಪಿಎಲ್ ನಡೆಯುತ್ತಿರುವ ದೆಹಲಿಯಲ್ಲಿ ಜನರು ಮೂಲ ಆರೋಗ್ಯ ಸೌಕರ್ಯವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದರೆ, ಕ್ರೀಡಾಂಗಣದ ಹೊರಗೆ ಆಂಬುಲೆನ್ಸ್‌ಗಳನ್ನು, ಆರೋಗ್ಯ ಸೌಲಭ್ಯವನ್ನು ಸೀಮಿತ ಜನರಿಗೆ ಮೀಸಲಾಗಿಟ್ಟು, ಸಾಮಾನ್ಯ ಜನರಿಗೆ ಅದರಿಂದ ವಂಚಿತರನ್ನಾಗಿ ಮಾಡುವುದು ನೈತಿಕತೆಯೆ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಮುಂದಿಟ್ಟಿದ್ದಾರೆ.

ಮುಂದಿನ ತಿಂಗಳಿನಿಂದ ಬೆಂಗಳೂರಿನಲ್ಲೂ ಐಪಿಎಲ್ ಪಂದ್ಯಾಟ ನಡೆಯಲಿದೆ. ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಬೆಂಗಳೂರಿನ ಪರಿಸ್ಥಿತಿ ಮುಂದಿನ ತಿಂಗಳು ಇನ್ನೂ ಹದಗೆಡಲಿದೆ ಎಂದು ಈಗಾಗಲೇ ಹಲವರು ಊಹಿಸಿದ್ದು, ಈ ಸಮಯದಲ್ಲಿ ಜೂಜಿನ ಆಟವಾದ ಐಪಿಎಲ್ ಬೇಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ದೇಶದ ಖ್ಯಾತ ಪತ್ರಕರ್ತೆ ಬರ್ಖಾದತ್‌ ಐಪಿಎಲ್ ಅನ್ನು ‘ಕಿವುಡು’ ಎಂದು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದಾರೆ.

ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “IPL ಗೂ ಈ ದೇಶಕ್ಕೂ ಸಂಬಂಧವಿದೆಯೆ? BCCI ಗೆ ಈ ದೇಶದ ಕುರಿತು ಏನಾದರೂ ಕಾಳಜಿ ಇದೆಯೆ? ಇದ್ದರೆ ಇಷ್ಟೊಂದು ಅಮಾನವೀಯತೆಯಿಂದ BCCI ವರ್ತಿಸುತ್ತಿರಲಿಲ್ಲ. ಇಂದು ದೆಹಲಿಯಲ್ಲಿ IPL ಮ್ಯಾಚ್ ಇದೆ. ದೆಹಲಿಯಲ್ಲಿ ನಿತ್ಯವೂ ನೂರಾರು ಜನರು ಕೋವಿಡ್‌ನಿಂದ ಸಾಯುತ್ತಿದ್ದು ಪರಿಸ್ಥಿತಿ ತೀರಾ ಚಿಂತಾಜನಕವಾಗಿದೆ” ಎಂದು ಬುಧವಾರ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

“ಜನಸಾಮಾನ್ಯರಿಗೆ ಹೆಣ ಸಾಗಿಸಲೂ ಸಹ ಆಂಬುಲೆನ್ಸ್‌ಗಳು ಸಿಗುತ್ತಿಲ್ಲ. ಆದರೆ IPL ಮ್ಯಾಚ್ ನಡೆಯುತ್ತಿರುವ ಮೈದಾನದ ಸುತ್ತ ಪೊಲೀಸರು ನೂರಾರು ಸಂಖ್ಯೆಯಲ್ಲಿದ್ದಾರೆ. ಆಟಗಾರರಿಗಾಗಿ ಆಂಬುಲೆನ್ಸ್‌ಗಳು ಸಜ್ಜಾಗಿ ನಿಂತಿವೆ. ಆಕ್ಸಿಜನ್ ಪೂರೈಕೆ, ಪರೀಕ್ಷೆ ಸೌಲಭ್ಯ ಎಲ್ಲವೂ ಇಲ್ಲಿ ಸಿದ್ಧವಿದೆ. ದೆಹಲಿಯಲ್ಲಿ ಸಂಕಷ್ಟದಲ್ಲಿರುವ ರೋಗಿಗಳಿಗೆ ಲಭ್ಯವಾಗಬೇಕಾದ ಸೌಲಭ್ಯಗಳು IPL ಗಾಗಿ ಮೀಸಲಿಡಲಾಗಿದೆ. ಇದೇ ಮೈದಾನದ ಪಕ್ಕದಲ್ಲಿ ಇರುವ ಸ್ಮಶಾನದಲ್ಲಿ ಕಳೆದೆರಡು ದಿನಗಳಲ್ಲಿ ನೂರಕ್ಕೂ ಹೆಚ್ಚು ಹೆಣಗಳನ್ನು ದಹನ ಮಾಡಲಾಗಿದೆ. IPL ಇಂತಹ ಸ್ಥಿತಿಯಲ್ಲೂ ಮುಂದುವರಿಯಬೇಕೆ?” ಎಂದು ಶಶಿಧರ್‌ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರು, “ಈ ಸಮಯದಲ್ಲಿ 2 ಭಾರತಗಳಿವೆ ಎಂದು ತೋರುತ್ತದೆ. ಒಂದು ಜನರು ಹಾಸಿಗೆ ಪಡೆಯಲು ಹೆಣಗಾಡುತ್ತಿರುವ ಭಾರತ. ಇನ್ನೊಂದು ಆರಾಮದಾಯ ಬಬಲ್‌ನಲ್ಲಿನ ಐಪಿಎಲ್” ಎಂದು ಹೇಳಿದ್ದಾರೆ.

ಪ್ರದೀಪ್ ಅವರು, “ದೆಹಲಿಯಲ್ಲಿ ಲಾಕ್ ಡೌನ್ ಇದೆ ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ಇದೆ. ಐಪಿಎಲ್ ನಂತಹ ಸಂಪೂರ್ಣ ವಾಣಿಜ್ಯ ಚಟುವಟಿಕೆಯನ್ನು ಏಕೆ ಅನುಮತಿಸಲಾಗಿದೆ ಎಂದು ಯಾರಾದರೂ ವಿವರಿಸಬಹುದೇ? ಲೈವ್ ಮನರಂಜನೆಗೆ ವಿನಾಯಿತಿ ಇದೆಯೇ ಅಥವಾ ಐಪಿಎಲ್‌ ರಾಜ್ಯದ ಕಾನೂನುಗಳಿಗೆ ನಿರೋಧಕವಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಸಾಮಾಜಿಕ ಕಾರ್ಯಕರ್ತ ವಿ.ಎಲ್. ಬಾಲು ಅವರು, “IPL ನಡಿಲಿ 100% ತಪ್ಪಿಲ್ಲ. ಜನ ಸ್ವಲ್ಪ (ಆಮ್ಲಜನಕ ಇಲ್ಲದೆ ಸತ್ತ ಕುಟುಂಬ, ಬೆಡ್ ಸಿಗದ ಸ್ನೇಹಿತರು) ಬಯ್ದರೆ ಅಡ್ಜಸ್ಟ್ ಮಾಡ್ಕೋಳಿ! ಅವರಿಗೆ ಬಯ್ಯೊದಿಕ್ಕಾದರು ಸ್ವಾತಂತ್ರ್ಯ ಕೋಡೋಣ ಸರ್!” ಎಂದು ವ್ಯಂಗ್ಯವಾಡಿದ್ದಾರೆ.

ವರ್ಡ್ ಟೇಲ್‌ ಎಂಬ ಟ್ವಿಟರ್‌ ಅಕೌಂಟ್‌, “ದೆಹಲಿಯ ಹೊರಗಿನ ಐಪಿಎಲ್‌ಗಾಗಿ ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ” ಎಂದು ಹೇಳಿದ್ದಾರೆ.

“ಇಡೀ ಭಾರತ ಸಂಕಷ್ಟದಲ್ಲಿರುವಾಗ, ಈ ಕ್ರಿಕೆಟಿಗರು ಮೈದಾನದಲ್ಲಿ ಆನಂದಿಸುತ್ತಿದ್ದಾರೆ! ಭಾರಿ ಅಸೂಕ್ಷ್ಮತೆ’’ ಎಂದು ಶಿಬಾ ಬಿಸ್ವಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...