Homeಮುಖಪುಟಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ ಎಂದು ಐಪಿಎಲ್‌ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ

- Advertisement -
- Advertisement -

ದೇಶದಲ್ಲಿ ಕೊರೊನಾ ಸಾಂಕ್ರಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದು ಭಾರತಕ್ಕಾಗಿ ಇಡಿ ವಿಶ್ವವೇ ಮರುಗುತ್ತಿದೆ. ಜಗತ್ತಿನ ಹಲವು ದೇಶಗಳು ತಮ್ಮ ಸಹಾಯ ಹಸ್ತವನ್ನೂ ಭಾರತಕ್ಕೆ ಚಾಚಿ ತಮ್ಮ ಬೆಂಬಲ ನೀಡಿವೆ. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಪತ್ರಕೆಗಳು ವರದಿ ಮಾಡಿವೆ. ಕೊರೊನಾ ಬಂದು ಒಂದು ವರ್ಷವಾದರೂ, ಎರಡನೆ ಅಲೆಯ ಬಗ್ಗೆ ಮಾಹಿತಿ ಇದ್ದರೂ ಆರೋಗ್ಯ ವ್ಯವಸ್ಥೆಯನ್ನು ಮಾಡಿಟ್ಟುಕೊಳ್ಳದ ಸರ್ಕಾರಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ದೇಶದಲ್ಲಿ ಐಪಿಎಲ್‌ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನಗಳೆದ್ದಿವೆ. ಪ್ರಸ್ತುತ ಐಪಿಎಲ್ ನಡೆಯುತ್ತಿರುವ ದೆಹಲಿಯಲ್ಲಿ ಜನರು ಮೂಲ ಆರೋಗ್ಯ ಸೌಕರ್ಯವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದರೆ, ಕ್ರೀಡಾಂಗಣದ ಹೊರಗೆ ಆಂಬುಲೆನ್ಸ್‌ಗಳನ್ನು, ಆರೋಗ್ಯ ಸೌಲಭ್ಯವನ್ನು ಸೀಮಿತ ಜನರಿಗೆ ಮೀಸಲಾಗಿಟ್ಟು, ಸಾಮಾನ್ಯ ಜನರಿಗೆ ಅದರಿಂದ ವಂಚಿತರನ್ನಾಗಿ ಮಾಡುವುದು ನೈತಿಕತೆಯೆ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಮುಂದಿಟ್ಟಿದ್ದಾರೆ.

ಮುಂದಿನ ತಿಂಗಳಿನಿಂದ ಬೆಂಗಳೂರಿನಲ್ಲೂ ಐಪಿಎಲ್ ಪಂದ್ಯಾಟ ನಡೆಯಲಿದೆ. ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಬೆಂಗಳೂರಿನ ಪರಿಸ್ಥಿತಿ ಮುಂದಿನ ತಿಂಗಳು ಇನ್ನೂ ಹದಗೆಡಲಿದೆ ಎಂದು ಈಗಾಗಲೇ ಹಲವರು ಊಹಿಸಿದ್ದು, ಈ ಸಮಯದಲ್ಲಿ ಜೂಜಿನ ಆಟವಾದ ಐಪಿಎಲ್ ಬೇಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ದೇಶದ ಖ್ಯಾತ ಪತ್ರಕರ್ತೆ ಬರ್ಖಾದತ್‌ ಐಪಿಎಲ್ ಅನ್ನು ‘ಕಿವುಡು’ ಎಂದು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದಾರೆ.

ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “IPL ಗೂ ಈ ದೇಶಕ್ಕೂ ಸಂಬಂಧವಿದೆಯೆ? BCCI ಗೆ ಈ ದೇಶದ ಕುರಿತು ಏನಾದರೂ ಕಾಳಜಿ ಇದೆಯೆ? ಇದ್ದರೆ ಇಷ್ಟೊಂದು ಅಮಾನವೀಯತೆಯಿಂದ BCCI ವರ್ತಿಸುತ್ತಿರಲಿಲ್ಲ. ಇಂದು ದೆಹಲಿಯಲ್ಲಿ IPL ಮ್ಯಾಚ್ ಇದೆ. ದೆಹಲಿಯಲ್ಲಿ ನಿತ್ಯವೂ ನೂರಾರು ಜನರು ಕೋವಿಡ್‌ನಿಂದ ಸಾಯುತ್ತಿದ್ದು ಪರಿಸ್ಥಿತಿ ತೀರಾ ಚಿಂತಾಜನಕವಾಗಿದೆ” ಎಂದು ಬುಧವಾರ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

“ಜನಸಾಮಾನ್ಯರಿಗೆ ಹೆಣ ಸಾಗಿಸಲೂ ಸಹ ಆಂಬುಲೆನ್ಸ್‌ಗಳು ಸಿಗುತ್ತಿಲ್ಲ. ಆದರೆ IPL ಮ್ಯಾಚ್ ನಡೆಯುತ್ತಿರುವ ಮೈದಾನದ ಸುತ್ತ ಪೊಲೀಸರು ನೂರಾರು ಸಂಖ್ಯೆಯಲ್ಲಿದ್ದಾರೆ. ಆಟಗಾರರಿಗಾಗಿ ಆಂಬುಲೆನ್ಸ್‌ಗಳು ಸಜ್ಜಾಗಿ ನಿಂತಿವೆ. ಆಕ್ಸಿಜನ್ ಪೂರೈಕೆ, ಪರೀಕ್ಷೆ ಸೌಲಭ್ಯ ಎಲ್ಲವೂ ಇಲ್ಲಿ ಸಿದ್ಧವಿದೆ. ದೆಹಲಿಯಲ್ಲಿ ಸಂಕಷ್ಟದಲ್ಲಿರುವ ರೋಗಿಗಳಿಗೆ ಲಭ್ಯವಾಗಬೇಕಾದ ಸೌಲಭ್ಯಗಳು IPL ಗಾಗಿ ಮೀಸಲಿಡಲಾಗಿದೆ. ಇದೇ ಮೈದಾನದ ಪಕ್ಕದಲ್ಲಿ ಇರುವ ಸ್ಮಶಾನದಲ್ಲಿ ಕಳೆದೆರಡು ದಿನಗಳಲ್ಲಿ ನೂರಕ್ಕೂ ಹೆಚ್ಚು ಹೆಣಗಳನ್ನು ದಹನ ಮಾಡಲಾಗಿದೆ. IPL ಇಂತಹ ಸ್ಥಿತಿಯಲ್ಲೂ ಮುಂದುವರಿಯಬೇಕೆ?” ಎಂದು ಶಶಿಧರ್‌ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರು, “ಈ ಸಮಯದಲ್ಲಿ 2 ಭಾರತಗಳಿವೆ ಎಂದು ತೋರುತ್ತದೆ. ಒಂದು ಜನರು ಹಾಸಿಗೆ ಪಡೆಯಲು ಹೆಣಗಾಡುತ್ತಿರುವ ಭಾರತ. ಇನ್ನೊಂದು ಆರಾಮದಾಯ ಬಬಲ್‌ನಲ್ಲಿನ ಐಪಿಎಲ್” ಎಂದು ಹೇಳಿದ್ದಾರೆ.

ಪ್ರದೀಪ್ ಅವರು, “ದೆಹಲಿಯಲ್ಲಿ ಲಾಕ್ ಡೌನ್ ಇದೆ ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ಇದೆ. ಐಪಿಎಲ್ ನಂತಹ ಸಂಪೂರ್ಣ ವಾಣಿಜ್ಯ ಚಟುವಟಿಕೆಯನ್ನು ಏಕೆ ಅನುಮತಿಸಲಾಗಿದೆ ಎಂದು ಯಾರಾದರೂ ವಿವರಿಸಬಹುದೇ? ಲೈವ್ ಮನರಂಜನೆಗೆ ವಿನಾಯಿತಿ ಇದೆಯೇ ಅಥವಾ ಐಪಿಎಲ್‌ ರಾಜ್ಯದ ಕಾನೂನುಗಳಿಗೆ ನಿರೋಧಕವಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಸಾಮಾಜಿಕ ಕಾರ್ಯಕರ್ತ ವಿ.ಎಲ್. ಬಾಲು ಅವರು, “IPL ನಡಿಲಿ 100% ತಪ್ಪಿಲ್ಲ. ಜನ ಸ್ವಲ್ಪ (ಆಮ್ಲಜನಕ ಇಲ್ಲದೆ ಸತ್ತ ಕುಟುಂಬ, ಬೆಡ್ ಸಿಗದ ಸ್ನೇಹಿತರು) ಬಯ್ದರೆ ಅಡ್ಜಸ್ಟ್ ಮಾಡ್ಕೋಳಿ! ಅವರಿಗೆ ಬಯ್ಯೊದಿಕ್ಕಾದರು ಸ್ವಾತಂತ್ರ್ಯ ಕೋಡೋಣ ಸರ್!” ಎಂದು ವ್ಯಂಗ್ಯವಾಡಿದ್ದಾರೆ.

ವರ್ಡ್ ಟೇಲ್‌ ಎಂಬ ಟ್ವಿಟರ್‌ ಅಕೌಂಟ್‌, “ದೆಹಲಿಯ ಹೊರಗಿನ ಐಪಿಎಲ್‌ಗಾಗಿ ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ” ಎಂದು ಹೇಳಿದ್ದಾರೆ.

“ಇಡೀ ಭಾರತ ಸಂಕಷ್ಟದಲ್ಲಿರುವಾಗ, ಈ ಕ್ರಿಕೆಟಿಗರು ಮೈದಾನದಲ್ಲಿ ಆನಂದಿಸುತ್ತಿದ್ದಾರೆ! ಭಾರಿ ಅಸೂಕ್ಷ್ಮತೆ’’ ಎಂದು ಶಿಬಾ ಬಿಸ್ವಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...