Homeಮುಖಪುಟಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ ಎಂದು ಐಪಿಎಲ್‌ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ

- Advertisement -
- Advertisement -

ದೇಶದಲ್ಲಿ ಕೊರೊನಾ ಸಾಂಕ್ರಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದು ಭಾರತಕ್ಕಾಗಿ ಇಡಿ ವಿಶ್ವವೇ ಮರುಗುತ್ತಿದೆ. ಜಗತ್ತಿನ ಹಲವು ದೇಶಗಳು ತಮ್ಮ ಸಹಾಯ ಹಸ್ತವನ್ನೂ ಭಾರತಕ್ಕೆ ಚಾಚಿ ತಮ್ಮ ಬೆಂಬಲ ನೀಡಿವೆ. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಪತ್ರಕೆಗಳು ವರದಿ ಮಾಡಿವೆ. ಕೊರೊನಾ ಬಂದು ಒಂದು ವರ್ಷವಾದರೂ, ಎರಡನೆ ಅಲೆಯ ಬಗ್ಗೆ ಮಾಹಿತಿ ಇದ್ದರೂ ಆರೋಗ್ಯ ವ್ಯವಸ್ಥೆಯನ್ನು ಮಾಡಿಟ್ಟುಕೊಳ್ಳದ ಸರ್ಕಾರಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ದೇಶದಲ್ಲಿ ಐಪಿಎಲ್‌ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನಗಳೆದ್ದಿವೆ. ಪ್ರಸ್ತುತ ಐಪಿಎಲ್ ನಡೆಯುತ್ತಿರುವ ದೆಹಲಿಯಲ್ಲಿ ಜನರು ಮೂಲ ಆರೋಗ್ಯ ಸೌಕರ್ಯವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದರೆ, ಕ್ರೀಡಾಂಗಣದ ಹೊರಗೆ ಆಂಬುಲೆನ್ಸ್‌ಗಳನ್ನು, ಆರೋಗ್ಯ ಸೌಲಭ್ಯವನ್ನು ಸೀಮಿತ ಜನರಿಗೆ ಮೀಸಲಾಗಿಟ್ಟು, ಸಾಮಾನ್ಯ ಜನರಿಗೆ ಅದರಿಂದ ವಂಚಿತರನ್ನಾಗಿ ಮಾಡುವುದು ನೈತಿಕತೆಯೆ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಮುಂದಿಟ್ಟಿದ್ದಾರೆ.

ಮುಂದಿನ ತಿಂಗಳಿನಿಂದ ಬೆಂಗಳೂರಿನಲ್ಲೂ ಐಪಿಎಲ್ ಪಂದ್ಯಾಟ ನಡೆಯಲಿದೆ. ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಬೆಂಗಳೂರಿನ ಪರಿಸ್ಥಿತಿ ಮುಂದಿನ ತಿಂಗಳು ಇನ್ನೂ ಹದಗೆಡಲಿದೆ ಎಂದು ಈಗಾಗಲೇ ಹಲವರು ಊಹಿಸಿದ್ದು, ಈ ಸಮಯದಲ್ಲಿ ಜೂಜಿನ ಆಟವಾದ ಐಪಿಎಲ್ ಬೇಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ದೇಶದ ಖ್ಯಾತ ಪತ್ರಕರ್ತೆ ಬರ್ಖಾದತ್‌ ಐಪಿಎಲ್ ಅನ್ನು ‘ಕಿವುಡು’ ಎಂದು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದಾರೆ.

ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “IPL ಗೂ ಈ ದೇಶಕ್ಕೂ ಸಂಬಂಧವಿದೆಯೆ? BCCI ಗೆ ಈ ದೇಶದ ಕುರಿತು ಏನಾದರೂ ಕಾಳಜಿ ಇದೆಯೆ? ಇದ್ದರೆ ಇಷ್ಟೊಂದು ಅಮಾನವೀಯತೆಯಿಂದ BCCI ವರ್ತಿಸುತ್ತಿರಲಿಲ್ಲ. ಇಂದು ದೆಹಲಿಯಲ್ಲಿ IPL ಮ್ಯಾಚ್ ಇದೆ. ದೆಹಲಿಯಲ್ಲಿ ನಿತ್ಯವೂ ನೂರಾರು ಜನರು ಕೋವಿಡ್‌ನಿಂದ ಸಾಯುತ್ತಿದ್ದು ಪರಿಸ್ಥಿತಿ ತೀರಾ ಚಿಂತಾಜನಕವಾಗಿದೆ” ಎಂದು ಬುಧವಾರ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

“ಜನಸಾಮಾನ್ಯರಿಗೆ ಹೆಣ ಸಾಗಿಸಲೂ ಸಹ ಆಂಬುಲೆನ್ಸ್‌ಗಳು ಸಿಗುತ್ತಿಲ್ಲ. ಆದರೆ IPL ಮ್ಯಾಚ್ ನಡೆಯುತ್ತಿರುವ ಮೈದಾನದ ಸುತ್ತ ಪೊಲೀಸರು ನೂರಾರು ಸಂಖ್ಯೆಯಲ್ಲಿದ್ದಾರೆ. ಆಟಗಾರರಿಗಾಗಿ ಆಂಬುಲೆನ್ಸ್‌ಗಳು ಸಜ್ಜಾಗಿ ನಿಂತಿವೆ. ಆಕ್ಸಿಜನ್ ಪೂರೈಕೆ, ಪರೀಕ್ಷೆ ಸೌಲಭ್ಯ ಎಲ್ಲವೂ ಇಲ್ಲಿ ಸಿದ್ಧವಿದೆ. ದೆಹಲಿಯಲ್ಲಿ ಸಂಕಷ್ಟದಲ್ಲಿರುವ ರೋಗಿಗಳಿಗೆ ಲಭ್ಯವಾಗಬೇಕಾದ ಸೌಲಭ್ಯಗಳು IPL ಗಾಗಿ ಮೀಸಲಿಡಲಾಗಿದೆ. ಇದೇ ಮೈದಾನದ ಪಕ್ಕದಲ್ಲಿ ಇರುವ ಸ್ಮಶಾನದಲ್ಲಿ ಕಳೆದೆರಡು ದಿನಗಳಲ್ಲಿ ನೂರಕ್ಕೂ ಹೆಚ್ಚು ಹೆಣಗಳನ್ನು ದಹನ ಮಾಡಲಾಗಿದೆ. IPL ಇಂತಹ ಸ್ಥಿತಿಯಲ್ಲೂ ಮುಂದುವರಿಯಬೇಕೆ?” ಎಂದು ಶಶಿಧರ್‌ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರು, “ಈ ಸಮಯದಲ್ಲಿ 2 ಭಾರತಗಳಿವೆ ಎಂದು ತೋರುತ್ತದೆ. ಒಂದು ಜನರು ಹಾಸಿಗೆ ಪಡೆಯಲು ಹೆಣಗಾಡುತ್ತಿರುವ ಭಾರತ. ಇನ್ನೊಂದು ಆರಾಮದಾಯ ಬಬಲ್‌ನಲ್ಲಿನ ಐಪಿಎಲ್” ಎಂದು ಹೇಳಿದ್ದಾರೆ.

ಪ್ರದೀಪ್ ಅವರು, “ದೆಹಲಿಯಲ್ಲಿ ಲಾಕ್ ಡೌನ್ ಇದೆ ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ಇದೆ. ಐಪಿಎಲ್ ನಂತಹ ಸಂಪೂರ್ಣ ವಾಣಿಜ್ಯ ಚಟುವಟಿಕೆಯನ್ನು ಏಕೆ ಅನುಮತಿಸಲಾಗಿದೆ ಎಂದು ಯಾರಾದರೂ ವಿವರಿಸಬಹುದೇ? ಲೈವ್ ಮನರಂಜನೆಗೆ ವಿನಾಯಿತಿ ಇದೆಯೇ ಅಥವಾ ಐಪಿಎಲ್‌ ರಾಜ್ಯದ ಕಾನೂನುಗಳಿಗೆ ನಿರೋಧಕವಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಸಾಮಾಜಿಕ ಕಾರ್ಯಕರ್ತ ವಿ.ಎಲ್. ಬಾಲು ಅವರು, “IPL ನಡಿಲಿ 100% ತಪ್ಪಿಲ್ಲ. ಜನ ಸ್ವಲ್ಪ (ಆಮ್ಲಜನಕ ಇಲ್ಲದೆ ಸತ್ತ ಕುಟುಂಬ, ಬೆಡ್ ಸಿಗದ ಸ್ನೇಹಿತರು) ಬಯ್ದರೆ ಅಡ್ಜಸ್ಟ್ ಮಾಡ್ಕೋಳಿ! ಅವರಿಗೆ ಬಯ್ಯೊದಿಕ್ಕಾದರು ಸ್ವಾತಂತ್ರ್ಯ ಕೋಡೋಣ ಸರ್!” ಎಂದು ವ್ಯಂಗ್ಯವಾಡಿದ್ದಾರೆ.

ವರ್ಡ್ ಟೇಲ್‌ ಎಂಬ ಟ್ವಿಟರ್‌ ಅಕೌಂಟ್‌, “ದೆಹಲಿಯ ಹೊರಗಿನ ಐಪಿಎಲ್‌ಗಾಗಿ ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ” ಎಂದು ಹೇಳಿದ್ದಾರೆ.

“ಇಡೀ ಭಾರತ ಸಂಕಷ್ಟದಲ್ಲಿರುವಾಗ, ಈ ಕ್ರಿಕೆಟಿಗರು ಮೈದಾನದಲ್ಲಿ ಆನಂದಿಸುತ್ತಿದ್ದಾರೆ! ಭಾರಿ ಅಸೂಕ್ಷ್ಮತೆ’’ ಎಂದು ಶಿಬಾ ಬಿಸ್ವಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...