Homeಮುಖಪುಟಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ ಎಂದು ಐಪಿಎಲ್‌ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ

- Advertisement -
- Advertisement -

ದೇಶದಲ್ಲಿ ಕೊರೊನಾ ಸಾಂಕ್ರಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದು ಭಾರತಕ್ಕಾಗಿ ಇಡಿ ವಿಶ್ವವೇ ಮರುಗುತ್ತಿದೆ. ಜಗತ್ತಿನ ಹಲವು ದೇಶಗಳು ತಮ್ಮ ಸಹಾಯ ಹಸ್ತವನ್ನೂ ಭಾರತಕ್ಕೆ ಚಾಚಿ ತಮ್ಮ ಬೆಂಬಲ ನೀಡಿವೆ. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಪತ್ರಕೆಗಳು ವರದಿ ಮಾಡಿವೆ. ಕೊರೊನಾ ಬಂದು ಒಂದು ವರ್ಷವಾದರೂ, ಎರಡನೆ ಅಲೆಯ ಬಗ್ಗೆ ಮಾಹಿತಿ ಇದ್ದರೂ ಆರೋಗ್ಯ ವ್ಯವಸ್ಥೆಯನ್ನು ಮಾಡಿಟ್ಟುಕೊಳ್ಳದ ಸರ್ಕಾರಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ದೇಶದಲ್ಲಿ ಐಪಿಎಲ್‌ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನಗಳೆದ್ದಿವೆ. ಪ್ರಸ್ತುತ ಐಪಿಎಲ್ ನಡೆಯುತ್ತಿರುವ ದೆಹಲಿಯಲ್ಲಿ ಜನರು ಮೂಲ ಆರೋಗ್ಯ ಸೌಕರ್ಯವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದರೆ, ಕ್ರೀಡಾಂಗಣದ ಹೊರಗೆ ಆಂಬುಲೆನ್ಸ್‌ಗಳನ್ನು, ಆರೋಗ್ಯ ಸೌಲಭ್ಯವನ್ನು ಸೀಮಿತ ಜನರಿಗೆ ಮೀಸಲಾಗಿಟ್ಟು, ಸಾಮಾನ್ಯ ಜನರಿಗೆ ಅದರಿಂದ ವಂಚಿತರನ್ನಾಗಿ ಮಾಡುವುದು ನೈತಿಕತೆಯೆ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಮುಂದಿಟ್ಟಿದ್ದಾರೆ.

ಮುಂದಿನ ತಿಂಗಳಿನಿಂದ ಬೆಂಗಳೂರಿನಲ್ಲೂ ಐಪಿಎಲ್ ಪಂದ್ಯಾಟ ನಡೆಯಲಿದೆ. ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಬೆಂಗಳೂರಿನ ಪರಿಸ್ಥಿತಿ ಮುಂದಿನ ತಿಂಗಳು ಇನ್ನೂ ಹದಗೆಡಲಿದೆ ಎಂದು ಈಗಾಗಲೇ ಹಲವರು ಊಹಿಸಿದ್ದು, ಈ ಸಮಯದಲ್ಲಿ ಜೂಜಿನ ಆಟವಾದ ಐಪಿಎಲ್ ಬೇಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ದೇಶದ ಖ್ಯಾತ ಪತ್ರಕರ್ತೆ ಬರ್ಖಾದತ್‌ ಐಪಿಎಲ್ ಅನ್ನು ‘ಕಿವುಡು’ ಎಂದು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದಾರೆ.

ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “IPL ಗೂ ಈ ದೇಶಕ್ಕೂ ಸಂಬಂಧವಿದೆಯೆ? BCCI ಗೆ ಈ ದೇಶದ ಕುರಿತು ಏನಾದರೂ ಕಾಳಜಿ ಇದೆಯೆ? ಇದ್ದರೆ ಇಷ್ಟೊಂದು ಅಮಾನವೀಯತೆಯಿಂದ BCCI ವರ್ತಿಸುತ್ತಿರಲಿಲ್ಲ. ಇಂದು ದೆಹಲಿಯಲ್ಲಿ IPL ಮ್ಯಾಚ್ ಇದೆ. ದೆಹಲಿಯಲ್ಲಿ ನಿತ್ಯವೂ ನೂರಾರು ಜನರು ಕೋವಿಡ್‌ನಿಂದ ಸಾಯುತ್ತಿದ್ದು ಪರಿಸ್ಥಿತಿ ತೀರಾ ಚಿಂತಾಜನಕವಾಗಿದೆ” ಎಂದು ಬುಧವಾರ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

“ಜನಸಾಮಾನ್ಯರಿಗೆ ಹೆಣ ಸಾಗಿಸಲೂ ಸಹ ಆಂಬುಲೆನ್ಸ್‌ಗಳು ಸಿಗುತ್ತಿಲ್ಲ. ಆದರೆ IPL ಮ್ಯಾಚ್ ನಡೆಯುತ್ತಿರುವ ಮೈದಾನದ ಸುತ್ತ ಪೊಲೀಸರು ನೂರಾರು ಸಂಖ್ಯೆಯಲ್ಲಿದ್ದಾರೆ. ಆಟಗಾರರಿಗಾಗಿ ಆಂಬುಲೆನ್ಸ್‌ಗಳು ಸಜ್ಜಾಗಿ ನಿಂತಿವೆ. ಆಕ್ಸಿಜನ್ ಪೂರೈಕೆ, ಪರೀಕ್ಷೆ ಸೌಲಭ್ಯ ಎಲ್ಲವೂ ಇಲ್ಲಿ ಸಿದ್ಧವಿದೆ. ದೆಹಲಿಯಲ್ಲಿ ಸಂಕಷ್ಟದಲ್ಲಿರುವ ರೋಗಿಗಳಿಗೆ ಲಭ್ಯವಾಗಬೇಕಾದ ಸೌಲಭ್ಯಗಳು IPL ಗಾಗಿ ಮೀಸಲಿಡಲಾಗಿದೆ. ಇದೇ ಮೈದಾನದ ಪಕ್ಕದಲ್ಲಿ ಇರುವ ಸ್ಮಶಾನದಲ್ಲಿ ಕಳೆದೆರಡು ದಿನಗಳಲ್ಲಿ ನೂರಕ್ಕೂ ಹೆಚ್ಚು ಹೆಣಗಳನ್ನು ದಹನ ಮಾಡಲಾಗಿದೆ. IPL ಇಂತಹ ಸ್ಥಿತಿಯಲ್ಲೂ ಮುಂದುವರಿಯಬೇಕೆ?” ಎಂದು ಶಶಿಧರ್‌ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರು, “ಈ ಸಮಯದಲ್ಲಿ 2 ಭಾರತಗಳಿವೆ ಎಂದು ತೋರುತ್ತದೆ. ಒಂದು ಜನರು ಹಾಸಿಗೆ ಪಡೆಯಲು ಹೆಣಗಾಡುತ್ತಿರುವ ಭಾರತ. ಇನ್ನೊಂದು ಆರಾಮದಾಯ ಬಬಲ್‌ನಲ್ಲಿನ ಐಪಿಎಲ್” ಎಂದು ಹೇಳಿದ್ದಾರೆ.

ಪ್ರದೀಪ್ ಅವರು, “ದೆಹಲಿಯಲ್ಲಿ ಲಾಕ್ ಡೌನ್ ಇದೆ ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ಇದೆ. ಐಪಿಎಲ್ ನಂತಹ ಸಂಪೂರ್ಣ ವಾಣಿಜ್ಯ ಚಟುವಟಿಕೆಯನ್ನು ಏಕೆ ಅನುಮತಿಸಲಾಗಿದೆ ಎಂದು ಯಾರಾದರೂ ವಿವರಿಸಬಹುದೇ? ಲೈವ್ ಮನರಂಜನೆಗೆ ವಿನಾಯಿತಿ ಇದೆಯೇ ಅಥವಾ ಐಪಿಎಲ್‌ ರಾಜ್ಯದ ಕಾನೂನುಗಳಿಗೆ ನಿರೋಧಕವಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಸಾಮಾಜಿಕ ಕಾರ್ಯಕರ್ತ ವಿ.ಎಲ್. ಬಾಲು ಅವರು, “IPL ನಡಿಲಿ 100% ತಪ್ಪಿಲ್ಲ. ಜನ ಸ್ವಲ್ಪ (ಆಮ್ಲಜನಕ ಇಲ್ಲದೆ ಸತ್ತ ಕುಟುಂಬ, ಬೆಡ್ ಸಿಗದ ಸ್ನೇಹಿತರು) ಬಯ್ದರೆ ಅಡ್ಜಸ್ಟ್ ಮಾಡ್ಕೋಳಿ! ಅವರಿಗೆ ಬಯ್ಯೊದಿಕ್ಕಾದರು ಸ್ವಾತಂತ್ರ್ಯ ಕೋಡೋಣ ಸರ್!” ಎಂದು ವ್ಯಂಗ್ಯವಾಡಿದ್ದಾರೆ.

ವರ್ಡ್ ಟೇಲ್‌ ಎಂಬ ಟ್ವಿಟರ್‌ ಅಕೌಂಟ್‌, “ದೆಹಲಿಯ ಹೊರಗಿನ ಐಪಿಎಲ್‌ಗಾಗಿ ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ” ಎಂದು ಹೇಳಿದ್ದಾರೆ.

“ಇಡೀ ಭಾರತ ಸಂಕಷ್ಟದಲ್ಲಿರುವಾಗ, ಈ ಕ್ರಿಕೆಟಿಗರು ಮೈದಾನದಲ್ಲಿ ಆನಂದಿಸುತ್ತಿದ್ದಾರೆ! ಭಾರಿ ಅಸೂಕ್ಷ್ಮತೆ’’ ಎಂದು ಶಿಬಾ ಬಿಸ್ವಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...