Homeಮುಖಪುಟಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ ಎಂದು ಐಪಿಎಲ್‌ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ

- Advertisement -
- Advertisement -

ದೇಶದಲ್ಲಿ ಕೊರೊನಾ ಸಾಂಕ್ರಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದು ಭಾರತಕ್ಕಾಗಿ ಇಡಿ ವಿಶ್ವವೇ ಮರುಗುತ್ತಿದೆ. ಜಗತ್ತಿನ ಹಲವು ದೇಶಗಳು ತಮ್ಮ ಸಹಾಯ ಹಸ್ತವನ್ನೂ ಭಾರತಕ್ಕೆ ಚಾಚಿ ತಮ್ಮ ಬೆಂಬಲ ನೀಡಿವೆ. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಪತ್ರಕೆಗಳು ವರದಿ ಮಾಡಿವೆ. ಕೊರೊನಾ ಬಂದು ಒಂದು ವರ್ಷವಾದರೂ, ಎರಡನೆ ಅಲೆಯ ಬಗ್ಗೆ ಮಾಹಿತಿ ಇದ್ದರೂ ಆರೋಗ್ಯ ವ್ಯವಸ್ಥೆಯನ್ನು ಮಾಡಿಟ್ಟುಕೊಳ್ಳದ ಸರ್ಕಾರಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ದೇಶದಲ್ಲಿ ಐಪಿಎಲ್‌ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನಗಳೆದ್ದಿವೆ. ಪ್ರಸ್ತುತ ಐಪಿಎಲ್ ನಡೆಯುತ್ತಿರುವ ದೆಹಲಿಯಲ್ಲಿ ಜನರು ಮೂಲ ಆರೋಗ್ಯ ಸೌಕರ್ಯವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದರೆ, ಕ್ರೀಡಾಂಗಣದ ಹೊರಗೆ ಆಂಬುಲೆನ್ಸ್‌ಗಳನ್ನು, ಆರೋಗ್ಯ ಸೌಲಭ್ಯವನ್ನು ಸೀಮಿತ ಜನರಿಗೆ ಮೀಸಲಾಗಿಟ್ಟು, ಸಾಮಾನ್ಯ ಜನರಿಗೆ ಅದರಿಂದ ವಂಚಿತರನ್ನಾಗಿ ಮಾಡುವುದು ನೈತಿಕತೆಯೆ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಮುಂದಿಟ್ಟಿದ್ದಾರೆ.

ಮುಂದಿನ ತಿಂಗಳಿನಿಂದ ಬೆಂಗಳೂರಿನಲ್ಲೂ ಐಪಿಎಲ್ ಪಂದ್ಯಾಟ ನಡೆಯಲಿದೆ. ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಬೆಂಗಳೂರಿನ ಪರಿಸ್ಥಿತಿ ಮುಂದಿನ ತಿಂಗಳು ಇನ್ನೂ ಹದಗೆಡಲಿದೆ ಎಂದು ಈಗಾಗಲೇ ಹಲವರು ಊಹಿಸಿದ್ದು, ಈ ಸಮಯದಲ್ಲಿ ಜೂಜಿನ ಆಟವಾದ ಐಪಿಎಲ್ ಬೇಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ದೇಶದ ಖ್ಯಾತ ಪತ್ರಕರ್ತೆ ಬರ್ಖಾದತ್‌ ಐಪಿಎಲ್ ಅನ್ನು ‘ಕಿವುಡು’ ಎಂದು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದಾರೆ.

ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “IPL ಗೂ ಈ ದೇಶಕ್ಕೂ ಸಂಬಂಧವಿದೆಯೆ? BCCI ಗೆ ಈ ದೇಶದ ಕುರಿತು ಏನಾದರೂ ಕಾಳಜಿ ಇದೆಯೆ? ಇದ್ದರೆ ಇಷ್ಟೊಂದು ಅಮಾನವೀಯತೆಯಿಂದ BCCI ವರ್ತಿಸುತ್ತಿರಲಿಲ್ಲ. ಇಂದು ದೆಹಲಿಯಲ್ಲಿ IPL ಮ್ಯಾಚ್ ಇದೆ. ದೆಹಲಿಯಲ್ಲಿ ನಿತ್ಯವೂ ನೂರಾರು ಜನರು ಕೋವಿಡ್‌ನಿಂದ ಸಾಯುತ್ತಿದ್ದು ಪರಿಸ್ಥಿತಿ ತೀರಾ ಚಿಂತಾಜನಕವಾಗಿದೆ” ಎಂದು ಬುಧವಾರ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

“ಜನಸಾಮಾನ್ಯರಿಗೆ ಹೆಣ ಸಾಗಿಸಲೂ ಸಹ ಆಂಬುಲೆನ್ಸ್‌ಗಳು ಸಿಗುತ್ತಿಲ್ಲ. ಆದರೆ IPL ಮ್ಯಾಚ್ ನಡೆಯುತ್ತಿರುವ ಮೈದಾನದ ಸುತ್ತ ಪೊಲೀಸರು ನೂರಾರು ಸಂಖ್ಯೆಯಲ್ಲಿದ್ದಾರೆ. ಆಟಗಾರರಿಗಾಗಿ ಆಂಬುಲೆನ್ಸ್‌ಗಳು ಸಜ್ಜಾಗಿ ನಿಂತಿವೆ. ಆಕ್ಸಿಜನ್ ಪೂರೈಕೆ, ಪರೀಕ್ಷೆ ಸೌಲಭ್ಯ ಎಲ್ಲವೂ ಇಲ್ಲಿ ಸಿದ್ಧವಿದೆ. ದೆಹಲಿಯಲ್ಲಿ ಸಂಕಷ್ಟದಲ್ಲಿರುವ ರೋಗಿಗಳಿಗೆ ಲಭ್ಯವಾಗಬೇಕಾದ ಸೌಲಭ್ಯಗಳು IPL ಗಾಗಿ ಮೀಸಲಿಡಲಾಗಿದೆ. ಇದೇ ಮೈದಾನದ ಪಕ್ಕದಲ್ಲಿ ಇರುವ ಸ್ಮಶಾನದಲ್ಲಿ ಕಳೆದೆರಡು ದಿನಗಳಲ್ಲಿ ನೂರಕ್ಕೂ ಹೆಚ್ಚು ಹೆಣಗಳನ್ನು ದಹನ ಮಾಡಲಾಗಿದೆ. IPL ಇಂತಹ ಸ್ಥಿತಿಯಲ್ಲೂ ಮುಂದುವರಿಯಬೇಕೆ?” ಎಂದು ಶಶಿಧರ್‌ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರು, “ಈ ಸಮಯದಲ್ಲಿ 2 ಭಾರತಗಳಿವೆ ಎಂದು ತೋರುತ್ತದೆ. ಒಂದು ಜನರು ಹಾಸಿಗೆ ಪಡೆಯಲು ಹೆಣಗಾಡುತ್ತಿರುವ ಭಾರತ. ಇನ್ನೊಂದು ಆರಾಮದಾಯ ಬಬಲ್‌ನಲ್ಲಿನ ಐಪಿಎಲ್” ಎಂದು ಹೇಳಿದ್ದಾರೆ.

ಪ್ರದೀಪ್ ಅವರು, “ದೆಹಲಿಯಲ್ಲಿ ಲಾಕ್ ಡೌನ್ ಇದೆ ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ಇದೆ. ಐಪಿಎಲ್ ನಂತಹ ಸಂಪೂರ್ಣ ವಾಣಿಜ್ಯ ಚಟುವಟಿಕೆಯನ್ನು ಏಕೆ ಅನುಮತಿಸಲಾಗಿದೆ ಎಂದು ಯಾರಾದರೂ ವಿವರಿಸಬಹುದೇ? ಲೈವ್ ಮನರಂಜನೆಗೆ ವಿನಾಯಿತಿ ಇದೆಯೇ ಅಥವಾ ಐಪಿಎಲ್‌ ರಾಜ್ಯದ ಕಾನೂನುಗಳಿಗೆ ನಿರೋಧಕವಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಸಾಮಾಜಿಕ ಕಾರ್ಯಕರ್ತ ವಿ.ಎಲ್. ಬಾಲು ಅವರು, “IPL ನಡಿಲಿ 100% ತಪ್ಪಿಲ್ಲ. ಜನ ಸ್ವಲ್ಪ (ಆಮ್ಲಜನಕ ಇಲ್ಲದೆ ಸತ್ತ ಕುಟುಂಬ, ಬೆಡ್ ಸಿಗದ ಸ್ನೇಹಿತರು) ಬಯ್ದರೆ ಅಡ್ಜಸ್ಟ್ ಮಾಡ್ಕೋಳಿ! ಅವರಿಗೆ ಬಯ್ಯೊದಿಕ್ಕಾದರು ಸ್ವಾತಂತ್ರ್ಯ ಕೋಡೋಣ ಸರ್!” ಎಂದು ವ್ಯಂಗ್ಯವಾಡಿದ್ದಾರೆ.

ವರ್ಡ್ ಟೇಲ್‌ ಎಂಬ ಟ್ವಿಟರ್‌ ಅಕೌಂಟ್‌, “ದೆಹಲಿಯ ಹೊರಗಿನ ಐಪಿಎಲ್‌ಗಾಗಿ ಕ್ರಿಕೆಟ್ ಮೈದಾನದಲ್ಲಿ ಆಂಬುಲೆನ್ಸ್‌ ನಿಲ್ಲಿಸಲಾಗಿದೆ. ಆದರೆ ರೋಗಿಗಳಿಗೆ ಅಥವಾ ಮೃತ ದೇಹಗಳಿಗೆ ಈ ಆಂಬುಲೆನ್ಸ್‌‌ ಲಭ್ಯವಿಲ್ಲ” ಎಂದು ಹೇಳಿದ್ದಾರೆ.

“ಇಡೀ ಭಾರತ ಸಂಕಷ್ಟದಲ್ಲಿರುವಾಗ, ಈ ಕ್ರಿಕೆಟಿಗರು ಮೈದಾನದಲ್ಲಿ ಆನಂದಿಸುತ್ತಿದ್ದಾರೆ! ಭಾರಿ ಅಸೂಕ್ಷ್ಮತೆ’’ ಎಂದು ಶಿಬಾ ಬಿಸ್ವಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಇದನ್ನೂ ಓದಿ: #ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....