Homeಫ್ಯಾಕ್ಟ್‌ಚೆಕ್ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

- Advertisement -
- Advertisement -

ನಾನು ಇಂದು ಬೆಳಿಗ್ಗೆ 4.30ಕ್ಕೆ ಗಾಢ ನಿದ್ರೆ ಮಾಡುತ್ತಿರುವಾಗ ಮನೆಯಿಂದ ನಮ್ಮ ಚಿಕ್ಕಪ್ಪನ ಮಗ ಕಾಲ್ ಮಾಡಿದ. ನಾನು ಗಾಬರಿಯಿಂದ ಫೋನ್ ತೆಗೆದೆ. ಈಗಾಗಲೇ ಲಾಕ್‌ಡೌನ್‌ನಿಂದಾಗಿ ಮನೆಗೆ ಹೋಗದೇ ಬೆಂಗಳೂರಿನಲ್ಲೇ ಇರುವುದರಿಂದ ಕೊರೊನಾ ವೈರಸ್ ಬಗ್ಗೆ ಆತಂಕದಲ್ಲಿರುವಾಗ ಇಂತಹ ಕಾಲ್ ಬೆಳ್ಳಂ ಬೆಳಿಗ್ಗೆ ಬಂದುದರಿಂದ ಭಯವಾಯಿತು. ನನ್ನ ತಮ್ಮನ ಕಾಲ್‌ ರಿಸಿವ್ ಮಾಡುತ್ತಲೇ ಅಣ್ಣ ಎದ್ದೇಳು ಎದ್ದೇಳು ಅಂದ. ನಾನು ಎದ್ದಿದಿನಿ ಹೇಳೋ ಏನೋ ಅಂದೆ. ಮೊದಲು ಎದ್ದು ಕುಳಿತಿಕೋ, ನಮ್ಮ ಅತ್ತೆ ಹೇಳಿದರು ಈಗ ಯಾರು ಮಲಗಬಾರದಂತೆ ಎದ್ದೇ ಇರಬೇಕೆಂತೆ ಅಂತ ಹೇಳೀದ. ನಾನು ಆಯಿತು ಅಂತ ಕಾಲ್ ಕಟ್ ಮಾಡಿ ಮಲಗಿದೆ.

ಆದರೆ ಬೆಳಿಗ್ಗೆ ಎದ್ದು ಕಾಲ್ ಮಾಡಿ ವಿಷಯ ಏನು ಎಂದು ವಿಚಾರಿಸದರೆ, ಎಲ್ಲೋ ಹಸು ಹೊಟ್ಟೆಯಲ್ಲಿ ಮಗು ಹುಟ್ಟಿದೆಯಂತೆ. ಹಾಗಾಗಿ ಇವತ್ತು ಬೆಳಿಗಿನ ಜಾವಾ ನಿದ್ದೆ ಮಾಡಿದ್ರೆ ಏನಾದರೂ ಆಗುತ್ತೆ ಅಂತ ನಮ್ಮ ಏರಿಯಾದವರನ್ನೆಲ್ಲ ಎಬ್ಬಿಸಿದ್ದಾರೆ. ಎಲ್ಲರೂ ಫೋನ್‌ ಮಾಡಿ ಹೇಳು ಅಂದರು, ಅದಕ್ಕಾಗಿ ನಿನಗೆ ಕಾಲ್ ಮಾಡಿದೆ ಅಂದ. ನಾನು ಇವೆಲ್ಲ ನಂಬಬೇಡ ಬರೀ ಸುಳ್ಳು ಸುದ್ಧಿಗಳು ಬುದ್ಧಿ ಇಲ್ವಾ ನಿಮಗೆ ಎಂದು ಬೈಯ್ದು ಫೋನಿಟ್ಟೆ.

ಆನಂತರ ತಿಳಿಯಿತು ಇದು ಎಲ್ಲಾ ಹಳ್ಳಿಹಳ್ಳಿಗಳಿಗೂ ಹಬ್ಬುತ್ತಿದೆ ಎಂದು. ವಾಟ್ಸಪ್‌ನಲ್ಲಿ ನಿರಂತರವಾಗಿ ಈ ರೀತಿಯ ಸುಳ್ಳು ಸುದ್ಧಿಗಳನ್ನು ಹರಡಿ ಗ್ರಾಮೀಣ ಜನರನ್ನು ಇಂತಹ ಮೌಢ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಹುನ್ನಾರವೆ ಇದೆ ಹಾಗಾಗಿ ಇದರ ಕುರಿತು ಫ್ಯಾಕ್ಟ್‌ಚೆಕ್ ಮಾಡಲು ನಿರ್ಧರಿಸಿದೆವು.

ವಾಟ್ಸಾಪ್‌ನಲ್ಲಿ ಹಸುವೊಂದು ಮಗುವಿಗೆ ಜನ್ಮಕೊಟ್ಟಿದೆ ಎಂಬ ಐದು ಚಿತ್ರಗಳು ಹರಿದಾಡುತ್ತಿವೆ. ಇವುಗಳನ್ನು ಗೂಗಲ್‌ ರಿವರ್ಸ್‌ ಸರ್ಚ್‌ ಮಾಡಿದಾಗ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆ ಔಶಾ ತಾಲ್ಲೂಕಿನಲ್ಲಿ ವಿಕಲಾಂಗ ಮಗುವೊಂದು ಜನಿಸಿದ್ದು ಮಾತು ಬರುತ್ತಿಲ್ಲ ಎಂದು ಸುದ್ದಿ ಹರಡಿದೆ. ಹಾಗಾಗಿ ಅದು ಹುಟ್ಟಿದ ಸಮಯದಲ್ಲಿ ಉಳಿದವರೂ ಎಚ್ಚರವಿರಬೇಕು ಇಲ್ಲದಿದ್ದರೆ ಅವರ ಮಾತು ನಿಂತು ಹೋಗುತ್ತದೆ ಎಂದು ಯಾರೋ ಕಿಡಿಗೇಡಿಗಳು ಸುದ್ದಿ ಹರಡಿದ್ದಾರೆ.

ಅಲ್ಲಿಂದ ಒಬ್ಬರಿಂದ ಒಬ್ಬರಿಗೆ ನಿದ್ದೆ ಮಾಡಬೇಡಿ ಎದ್ದೇಳಿ ಎಂದು ಎಚ್ಚರಿಸುವ, ಇಡೀ ರಾತ್ರಿ ಎಚ್ಚರದಿಂದಿರುವ ಚಾಳಿ ಶುರುವಾಗಿದೆ ಮಾತ್ರವಲ್ಲ, ಆ ಮಗು ಹಸುವಿಗೆ ಹುಟ್ಟಿದ್ದು ಎಂಬ ಸುಳ್ಳು ಸಹ ಸೇರಿಕೊಂಡಿದೆ. ಅದೇ ಫೋಟೊಗಳನ್ನು ಷೇರ್‌ ಮಾಡಿ ಆಂಧ್ರ ಪ್ರದೇಶದ ಯಾವುದೋ ಊರು ಎಂದೆಲ್ಲಾ ಸುಳ್ಳು ಪಸರಿಸಿದೆ. ಅದೇ ಕಾಲ್ ಕೊನೆಗೆ ಬೆಂಗಳೂರನ್ನು ಸಹ ಮುಟ್ಟಿದೆ. ಇದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ವೆಬ್‌ಸೈಟ್‌ ಸಕಲ್‌.ಕಾಂ ಸ್ಪಷ್ಟಪಡಿಸಿದೆ.

ಅಲ್ಲದೇ ಸಂಬಂಧವಿಲ್ಲದ ಫೋಟೊಗಳನ್ನೆಲ್ಲಾ ಷೇರ್‌ ಮಾಡಲಾಗಿದೆ. ಆಂಧ್ರದ ಎದುಟ್ಲ ಗೋಪಾಲ್‌ಪೇಟ್‌ ತಾಲ್ಲೂಕು ಎಂಬಲ್ಲಿ ನಡೆದಿದೆ ಎಂಬ ಫೋಟೊಗಳನ್ನು ಸಹ ಹರಿಬಿಡಲಾಗಿದೆ. ಒಟ್ಟಾರೆ ಇದೊಂದು ಶುದ್ಧ ಮೌಢ್ಯಾಚರಣೆಯಾಗಿದೆ.

ಇಂತಹ ವದಂತಿಗಳನ್ನು ಹರಡುವ ಮೂಲಕ, ಕಾರಣವಿಲ್ಲದೆ ಜನರಲ್ಲಿ ಭಯವದ ವಾತಾವರಣ ಸೃಷ್ಟಿಸಲಾಗುತ್ತದೆ. ಯಾರೋ ಮಾನಸಿಕ ಅಸ್ವಸ್ಥರು ಈ ಸುಳ್ಳು ಸುದ್ದಿ ಹರಡಿದ್ದಾರೆ. ಇದರಿಂದ ಯಾವುದೇ ಅಪಾಯ ಯಾರಿಗೂ ಆಗುವುದಿಲ್ಲ. ಮಗು ಬೆಳೆಯುತ್ತಿದ್ದಂತೆ ಮಗುವಿನ ಮಾತುಕತೆಯ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಆದ್ದರಿಂದ ಜನರು ವದಂತಿಗಳಿಗೆ ಬಲಿಯಾಗಬಾರದು. ಎಂದು ಔಶಾ ತಾಲ್ಲೂಕಿನ ಮೂಢನಂಬಿಕೆ ನಿರ್ಮೂಲನಾ ಸಮಿತಿಯ ಅಧ್ಯಕ್ಷ ಸಚಿನ್ ಮಿಟ್ಕರಿ ತಿಳಿಸಿದ್ದಾರೆ.

ಇತ್ತಿಚಿಗೆ ಉತ್ತರಕರ್ನಾಟಕದ ಹಳ್ಳಿಗಳಲ್ಲಿ ನಿಮ್ಮ ತಾಳಿಯಲ್ಲಿರುವ ಹವಳವನ್ನು ಕುಟ್ಟಿ ಪುಡಿಮಾಡಬೇಕು ಇಲ್ಲವಾದರೆ ನಿಮ್ಮ ಗಂಡು ಸತ್ತು ಹೋಗುತ್ತಾನೆ ಎಂದು ಸುಳ್ಳು ಸುದ್ಧಿ ಹಬ್ಬಿಸಿದ್ದಾರೆ ಇದರಿಂದ ಗ್ರಾಮೀಣ ಹೆಣ್ಣು ಮಕ್ಕಳು ಹಾಗೇ ಮಾಡಿದ್ದಾರೆ.

ಇನ್ನು ಕೆಲವು ತಿಂಗಳುಗಳ ಕೆಳಗೆ ಒಬ್ಬನೇ ಮಗ ಇದ್ದರೆ ಆತನಿಗೆ ಅತ್ತೆಯಂದಿರು ಬೆಳ್ಳಿ ಕಡಗ ಹಾಕಬೇಕು ಇಲ್ಲವಾದರೆ ಆತನಿಗೆ ಕೇಡಾಗುತ್ತದೆ ಎಂದು ಹೇಳಿದ್ದರು ಇದಕ್ಕಾಗಿ ಜನ ಸಾಲ ಮಾಡಿ ಬೆಳ್ಳಿ ಅಂಗಡಿಗಳ ಬಾಗಿಲು ತಟ್ಟಿದ್ದರು. ಆದಾದ ಕೆಲವೇ ದಿನಗಳಿಗೆ ಬೆಳ್ಳಿ ಕಡಗ ಇದ್ದರೆ ತೆಗೆದು ಹಾಗಬೇಕು ಎಂದರೆ ತೆಗೆದು ಹಾಕಿದ್ಧಾರೆ. ಈ ರೀತಿ ಗ್ರಾಮೀಣ ಜನರ ಜೀವನದ ಜೊತೆ ಸುಳ್ಳು ಸುದ್ಧಿಗಳನ್ನು ಹಬ್ಬಿಸಿ ಆಟ ಆಡುತ್ತಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಈ ಬಗ್ಗೆ ಸರ್ಕಾರಗಳು ಒಂದಷ್ಟು ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇತ್ತಿಚಿಗೆ ವಿದ್ಯಾವಂತರೇ ಸುಳ್ಳು ಸುದ್ಧಿಗಳನ್ನು ಹರಡುತ್ತಿರುವುದು ಹೆಚ್ಚಾಗಿದೆ. ಇದನ್ನು ಮೊದಲು ನಿಲ್ಲಿಸಬೇಕು. ಸತ್ಯ ಎಂದು ತಿಳಿಯದ ಹೊರತು ವಿಷಯಗಳನ್ನು ಶೇರ್ ಮಾಡದೆ ಇರುವುದನ್ನು ರೂಢಿಸಿಕೊಳ್ಳಬೇಕು.

ಇದನ್ನೂ ಓದಿ:

ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...