Homeಫ್ಯಾಕ್ಟ್‌ಚೆಕ್ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

- Advertisement -
- Advertisement -

ನಾನು ಇಂದು ಬೆಳಿಗ್ಗೆ 4.30ಕ್ಕೆ ಗಾಢ ನಿದ್ರೆ ಮಾಡುತ್ತಿರುವಾಗ ಮನೆಯಿಂದ ನಮ್ಮ ಚಿಕ್ಕಪ್ಪನ ಮಗ ಕಾಲ್ ಮಾಡಿದ. ನಾನು ಗಾಬರಿಯಿಂದ ಫೋನ್ ತೆಗೆದೆ. ಈಗಾಗಲೇ ಲಾಕ್‌ಡೌನ್‌ನಿಂದಾಗಿ ಮನೆಗೆ ಹೋಗದೇ ಬೆಂಗಳೂರಿನಲ್ಲೇ ಇರುವುದರಿಂದ ಕೊರೊನಾ ವೈರಸ್ ಬಗ್ಗೆ ಆತಂಕದಲ್ಲಿರುವಾಗ ಇಂತಹ ಕಾಲ್ ಬೆಳ್ಳಂ ಬೆಳಿಗ್ಗೆ ಬಂದುದರಿಂದ ಭಯವಾಯಿತು. ನನ್ನ ತಮ್ಮನ ಕಾಲ್‌ ರಿಸಿವ್ ಮಾಡುತ್ತಲೇ ಅಣ್ಣ ಎದ್ದೇಳು ಎದ್ದೇಳು ಅಂದ. ನಾನು ಎದ್ದಿದಿನಿ ಹೇಳೋ ಏನೋ ಅಂದೆ. ಮೊದಲು ಎದ್ದು ಕುಳಿತಿಕೋ, ನಮ್ಮ ಅತ್ತೆ ಹೇಳಿದರು ಈಗ ಯಾರು ಮಲಗಬಾರದಂತೆ ಎದ್ದೇ ಇರಬೇಕೆಂತೆ ಅಂತ ಹೇಳೀದ. ನಾನು ಆಯಿತು ಅಂತ ಕಾಲ್ ಕಟ್ ಮಾಡಿ ಮಲಗಿದೆ.

ಆದರೆ ಬೆಳಿಗ್ಗೆ ಎದ್ದು ಕಾಲ್ ಮಾಡಿ ವಿಷಯ ಏನು ಎಂದು ವಿಚಾರಿಸದರೆ, ಎಲ್ಲೋ ಹಸು ಹೊಟ್ಟೆಯಲ್ಲಿ ಮಗು ಹುಟ್ಟಿದೆಯಂತೆ. ಹಾಗಾಗಿ ಇವತ್ತು ಬೆಳಿಗಿನ ಜಾವಾ ನಿದ್ದೆ ಮಾಡಿದ್ರೆ ಏನಾದರೂ ಆಗುತ್ತೆ ಅಂತ ನಮ್ಮ ಏರಿಯಾದವರನ್ನೆಲ್ಲ ಎಬ್ಬಿಸಿದ್ದಾರೆ. ಎಲ್ಲರೂ ಫೋನ್‌ ಮಾಡಿ ಹೇಳು ಅಂದರು, ಅದಕ್ಕಾಗಿ ನಿನಗೆ ಕಾಲ್ ಮಾಡಿದೆ ಅಂದ. ನಾನು ಇವೆಲ್ಲ ನಂಬಬೇಡ ಬರೀ ಸುಳ್ಳು ಸುದ್ಧಿಗಳು ಬುದ್ಧಿ ಇಲ್ವಾ ನಿಮಗೆ ಎಂದು ಬೈಯ್ದು ಫೋನಿಟ್ಟೆ.

ಆನಂತರ ತಿಳಿಯಿತು ಇದು ಎಲ್ಲಾ ಹಳ್ಳಿಹಳ್ಳಿಗಳಿಗೂ ಹಬ್ಬುತ್ತಿದೆ ಎಂದು. ವಾಟ್ಸಪ್‌ನಲ್ಲಿ ನಿರಂತರವಾಗಿ ಈ ರೀತಿಯ ಸುಳ್ಳು ಸುದ್ಧಿಗಳನ್ನು ಹರಡಿ ಗ್ರಾಮೀಣ ಜನರನ್ನು ಇಂತಹ ಮೌಢ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಹುನ್ನಾರವೆ ಇದೆ ಹಾಗಾಗಿ ಇದರ ಕುರಿತು ಫ್ಯಾಕ್ಟ್‌ಚೆಕ್ ಮಾಡಲು ನಿರ್ಧರಿಸಿದೆವು.

ವಾಟ್ಸಾಪ್‌ನಲ್ಲಿ ಹಸುವೊಂದು ಮಗುವಿಗೆ ಜನ್ಮಕೊಟ್ಟಿದೆ ಎಂಬ ಐದು ಚಿತ್ರಗಳು ಹರಿದಾಡುತ್ತಿವೆ. ಇವುಗಳನ್ನು ಗೂಗಲ್‌ ರಿವರ್ಸ್‌ ಸರ್ಚ್‌ ಮಾಡಿದಾಗ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆ ಔಶಾ ತಾಲ್ಲೂಕಿನಲ್ಲಿ ವಿಕಲಾಂಗ ಮಗುವೊಂದು ಜನಿಸಿದ್ದು ಮಾತು ಬರುತ್ತಿಲ್ಲ ಎಂದು ಸುದ್ದಿ ಹರಡಿದೆ. ಹಾಗಾಗಿ ಅದು ಹುಟ್ಟಿದ ಸಮಯದಲ್ಲಿ ಉಳಿದವರೂ ಎಚ್ಚರವಿರಬೇಕು ಇಲ್ಲದಿದ್ದರೆ ಅವರ ಮಾತು ನಿಂತು ಹೋಗುತ್ತದೆ ಎಂದು ಯಾರೋ ಕಿಡಿಗೇಡಿಗಳು ಸುದ್ದಿ ಹರಡಿದ್ದಾರೆ.

ಅಲ್ಲಿಂದ ಒಬ್ಬರಿಂದ ಒಬ್ಬರಿಗೆ ನಿದ್ದೆ ಮಾಡಬೇಡಿ ಎದ್ದೇಳಿ ಎಂದು ಎಚ್ಚರಿಸುವ, ಇಡೀ ರಾತ್ರಿ ಎಚ್ಚರದಿಂದಿರುವ ಚಾಳಿ ಶುರುವಾಗಿದೆ ಮಾತ್ರವಲ್ಲ, ಆ ಮಗು ಹಸುವಿಗೆ ಹುಟ್ಟಿದ್ದು ಎಂಬ ಸುಳ್ಳು ಸಹ ಸೇರಿಕೊಂಡಿದೆ. ಅದೇ ಫೋಟೊಗಳನ್ನು ಷೇರ್‌ ಮಾಡಿ ಆಂಧ್ರ ಪ್ರದೇಶದ ಯಾವುದೋ ಊರು ಎಂದೆಲ್ಲಾ ಸುಳ್ಳು ಪಸರಿಸಿದೆ. ಅದೇ ಕಾಲ್ ಕೊನೆಗೆ ಬೆಂಗಳೂರನ್ನು ಸಹ ಮುಟ್ಟಿದೆ. ಇದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ವೆಬ್‌ಸೈಟ್‌ ಸಕಲ್‌.ಕಾಂ ಸ್ಪಷ್ಟಪಡಿಸಿದೆ.

ಅಲ್ಲದೇ ಸಂಬಂಧವಿಲ್ಲದ ಫೋಟೊಗಳನ್ನೆಲ್ಲಾ ಷೇರ್‌ ಮಾಡಲಾಗಿದೆ. ಆಂಧ್ರದ ಎದುಟ್ಲ ಗೋಪಾಲ್‌ಪೇಟ್‌ ತಾಲ್ಲೂಕು ಎಂಬಲ್ಲಿ ನಡೆದಿದೆ ಎಂಬ ಫೋಟೊಗಳನ್ನು ಸಹ ಹರಿಬಿಡಲಾಗಿದೆ. ಒಟ್ಟಾರೆ ಇದೊಂದು ಶುದ್ಧ ಮೌಢ್ಯಾಚರಣೆಯಾಗಿದೆ.

ಇಂತಹ ವದಂತಿಗಳನ್ನು ಹರಡುವ ಮೂಲಕ, ಕಾರಣವಿಲ್ಲದೆ ಜನರಲ್ಲಿ ಭಯವದ ವಾತಾವರಣ ಸೃಷ್ಟಿಸಲಾಗುತ್ತದೆ. ಯಾರೋ ಮಾನಸಿಕ ಅಸ್ವಸ್ಥರು ಈ ಸುಳ್ಳು ಸುದ್ದಿ ಹರಡಿದ್ದಾರೆ. ಇದರಿಂದ ಯಾವುದೇ ಅಪಾಯ ಯಾರಿಗೂ ಆಗುವುದಿಲ್ಲ. ಮಗು ಬೆಳೆಯುತ್ತಿದ್ದಂತೆ ಮಗುವಿನ ಮಾತುಕತೆಯ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಆದ್ದರಿಂದ ಜನರು ವದಂತಿಗಳಿಗೆ ಬಲಿಯಾಗಬಾರದು. ಎಂದು ಔಶಾ ತಾಲ್ಲೂಕಿನ ಮೂಢನಂಬಿಕೆ ನಿರ್ಮೂಲನಾ ಸಮಿತಿಯ ಅಧ್ಯಕ್ಷ ಸಚಿನ್ ಮಿಟ್ಕರಿ ತಿಳಿಸಿದ್ದಾರೆ.

ಇತ್ತಿಚಿಗೆ ಉತ್ತರಕರ್ನಾಟಕದ ಹಳ್ಳಿಗಳಲ್ಲಿ ನಿಮ್ಮ ತಾಳಿಯಲ್ಲಿರುವ ಹವಳವನ್ನು ಕುಟ್ಟಿ ಪುಡಿಮಾಡಬೇಕು ಇಲ್ಲವಾದರೆ ನಿಮ್ಮ ಗಂಡು ಸತ್ತು ಹೋಗುತ್ತಾನೆ ಎಂದು ಸುಳ್ಳು ಸುದ್ಧಿ ಹಬ್ಬಿಸಿದ್ದಾರೆ ಇದರಿಂದ ಗ್ರಾಮೀಣ ಹೆಣ್ಣು ಮಕ್ಕಳು ಹಾಗೇ ಮಾಡಿದ್ದಾರೆ.

ಇನ್ನು ಕೆಲವು ತಿಂಗಳುಗಳ ಕೆಳಗೆ ಒಬ್ಬನೇ ಮಗ ಇದ್ದರೆ ಆತನಿಗೆ ಅತ್ತೆಯಂದಿರು ಬೆಳ್ಳಿ ಕಡಗ ಹಾಕಬೇಕು ಇಲ್ಲವಾದರೆ ಆತನಿಗೆ ಕೇಡಾಗುತ್ತದೆ ಎಂದು ಹೇಳಿದ್ದರು ಇದಕ್ಕಾಗಿ ಜನ ಸಾಲ ಮಾಡಿ ಬೆಳ್ಳಿ ಅಂಗಡಿಗಳ ಬಾಗಿಲು ತಟ್ಟಿದ್ದರು. ಆದಾದ ಕೆಲವೇ ದಿನಗಳಿಗೆ ಬೆಳ್ಳಿ ಕಡಗ ಇದ್ದರೆ ತೆಗೆದು ಹಾಗಬೇಕು ಎಂದರೆ ತೆಗೆದು ಹಾಕಿದ್ಧಾರೆ. ಈ ರೀತಿ ಗ್ರಾಮೀಣ ಜನರ ಜೀವನದ ಜೊತೆ ಸುಳ್ಳು ಸುದ್ಧಿಗಳನ್ನು ಹಬ್ಬಿಸಿ ಆಟ ಆಡುತ್ತಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಈ ಬಗ್ಗೆ ಸರ್ಕಾರಗಳು ಒಂದಷ್ಟು ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇತ್ತಿಚಿಗೆ ವಿದ್ಯಾವಂತರೇ ಸುಳ್ಳು ಸುದ್ಧಿಗಳನ್ನು ಹರಡುತ್ತಿರುವುದು ಹೆಚ್ಚಾಗಿದೆ. ಇದನ್ನು ಮೊದಲು ನಿಲ್ಲಿಸಬೇಕು. ಸತ್ಯ ಎಂದು ತಿಳಿಯದ ಹೊರತು ವಿಷಯಗಳನ್ನು ಶೇರ್ ಮಾಡದೆ ಇರುವುದನ್ನು ರೂಢಿಸಿಕೊಳ್ಳಬೇಕು.

ಇದನ್ನೂ ಓದಿ:

ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...