Homeಫ್ಯಾಕ್ಟ್‌ಚೆಕ್ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

- Advertisement -
- Advertisement -

ನಾನು ಇಂದು ಬೆಳಿಗ್ಗೆ 4.30ಕ್ಕೆ ಗಾಢ ನಿದ್ರೆ ಮಾಡುತ್ತಿರುವಾಗ ಮನೆಯಿಂದ ನಮ್ಮ ಚಿಕ್ಕಪ್ಪನ ಮಗ ಕಾಲ್ ಮಾಡಿದ. ನಾನು ಗಾಬರಿಯಿಂದ ಫೋನ್ ತೆಗೆದೆ. ಈಗಾಗಲೇ ಲಾಕ್‌ಡೌನ್‌ನಿಂದಾಗಿ ಮನೆಗೆ ಹೋಗದೇ ಬೆಂಗಳೂರಿನಲ್ಲೇ ಇರುವುದರಿಂದ ಕೊರೊನಾ ವೈರಸ್ ಬಗ್ಗೆ ಆತಂಕದಲ್ಲಿರುವಾಗ ಇಂತಹ ಕಾಲ್ ಬೆಳ್ಳಂ ಬೆಳಿಗ್ಗೆ ಬಂದುದರಿಂದ ಭಯವಾಯಿತು. ನನ್ನ ತಮ್ಮನ ಕಾಲ್‌ ರಿಸಿವ್ ಮಾಡುತ್ತಲೇ ಅಣ್ಣ ಎದ್ದೇಳು ಎದ್ದೇಳು ಅಂದ. ನಾನು ಎದ್ದಿದಿನಿ ಹೇಳೋ ಏನೋ ಅಂದೆ. ಮೊದಲು ಎದ್ದು ಕುಳಿತಿಕೋ, ನಮ್ಮ ಅತ್ತೆ ಹೇಳಿದರು ಈಗ ಯಾರು ಮಲಗಬಾರದಂತೆ ಎದ್ದೇ ಇರಬೇಕೆಂತೆ ಅಂತ ಹೇಳೀದ. ನಾನು ಆಯಿತು ಅಂತ ಕಾಲ್ ಕಟ್ ಮಾಡಿ ಮಲಗಿದೆ.

ಆದರೆ ಬೆಳಿಗ್ಗೆ ಎದ್ದು ಕಾಲ್ ಮಾಡಿ ವಿಷಯ ಏನು ಎಂದು ವಿಚಾರಿಸದರೆ, ಎಲ್ಲೋ ಹಸು ಹೊಟ್ಟೆಯಲ್ಲಿ ಮಗು ಹುಟ್ಟಿದೆಯಂತೆ. ಹಾಗಾಗಿ ಇವತ್ತು ಬೆಳಿಗಿನ ಜಾವಾ ನಿದ್ದೆ ಮಾಡಿದ್ರೆ ಏನಾದರೂ ಆಗುತ್ತೆ ಅಂತ ನಮ್ಮ ಏರಿಯಾದವರನ್ನೆಲ್ಲ ಎಬ್ಬಿಸಿದ್ದಾರೆ. ಎಲ್ಲರೂ ಫೋನ್‌ ಮಾಡಿ ಹೇಳು ಅಂದರು, ಅದಕ್ಕಾಗಿ ನಿನಗೆ ಕಾಲ್ ಮಾಡಿದೆ ಅಂದ. ನಾನು ಇವೆಲ್ಲ ನಂಬಬೇಡ ಬರೀ ಸುಳ್ಳು ಸುದ್ಧಿಗಳು ಬುದ್ಧಿ ಇಲ್ವಾ ನಿಮಗೆ ಎಂದು ಬೈಯ್ದು ಫೋನಿಟ್ಟೆ.

ಆನಂತರ ತಿಳಿಯಿತು ಇದು ಎಲ್ಲಾ ಹಳ್ಳಿಹಳ್ಳಿಗಳಿಗೂ ಹಬ್ಬುತ್ತಿದೆ ಎಂದು. ವಾಟ್ಸಪ್‌ನಲ್ಲಿ ನಿರಂತರವಾಗಿ ಈ ರೀತಿಯ ಸುಳ್ಳು ಸುದ್ಧಿಗಳನ್ನು ಹರಡಿ ಗ್ರಾಮೀಣ ಜನರನ್ನು ಇಂತಹ ಮೌಢ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಹುನ್ನಾರವೆ ಇದೆ ಹಾಗಾಗಿ ಇದರ ಕುರಿತು ಫ್ಯಾಕ್ಟ್‌ಚೆಕ್ ಮಾಡಲು ನಿರ್ಧರಿಸಿದೆವು.

ವಾಟ್ಸಾಪ್‌ನಲ್ಲಿ ಹಸುವೊಂದು ಮಗುವಿಗೆ ಜನ್ಮಕೊಟ್ಟಿದೆ ಎಂಬ ಐದು ಚಿತ್ರಗಳು ಹರಿದಾಡುತ್ತಿವೆ. ಇವುಗಳನ್ನು ಗೂಗಲ್‌ ರಿವರ್ಸ್‌ ಸರ್ಚ್‌ ಮಾಡಿದಾಗ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆ ಔಶಾ ತಾಲ್ಲೂಕಿನಲ್ಲಿ ವಿಕಲಾಂಗ ಮಗುವೊಂದು ಜನಿಸಿದ್ದು ಮಾತು ಬರುತ್ತಿಲ್ಲ ಎಂದು ಸುದ್ದಿ ಹರಡಿದೆ. ಹಾಗಾಗಿ ಅದು ಹುಟ್ಟಿದ ಸಮಯದಲ್ಲಿ ಉಳಿದವರೂ ಎಚ್ಚರವಿರಬೇಕು ಇಲ್ಲದಿದ್ದರೆ ಅವರ ಮಾತು ನಿಂತು ಹೋಗುತ್ತದೆ ಎಂದು ಯಾರೋ ಕಿಡಿಗೇಡಿಗಳು ಸುದ್ದಿ ಹರಡಿದ್ದಾರೆ.

ಅಲ್ಲಿಂದ ಒಬ್ಬರಿಂದ ಒಬ್ಬರಿಗೆ ನಿದ್ದೆ ಮಾಡಬೇಡಿ ಎದ್ದೇಳಿ ಎಂದು ಎಚ್ಚರಿಸುವ, ಇಡೀ ರಾತ್ರಿ ಎಚ್ಚರದಿಂದಿರುವ ಚಾಳಿ ಶುರುವಾಗಿದೆ ಮಾತ್ರವಲ್ಲ, ಆ ಮಗು ಹಸುವಿಗೆ ಹುಟ್ಟಿದ್ದು ಎಂಬ ಸುಳ್ಳು ಸಹ ಸೇರಿಕೊಂಡಿದೆ. ಅದೇ ಫೋಟೊಗಳನ್ನು ಷೇರ್‌ ಮಾಡಿ ಆಂಧ್ರ ಪ್ರದೇಶದ ಯಾವುದೋ ಊರು ಎಂದೆಲ್ಲಾ ಸುಳ್ಳು ಪಸರಿಸಿದೆ. ಅದೇ ಕಾಲ್ ಕೊನೆಗೆ ಬೆಂಗಳೂರನ್ನು ಸಹ ಮುಟ್ಟಿದೆ. ಇದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ವೆಬ್‌ಸೈಟ್‌ ಸಕಲ್‌.ಕಾಂ ಸ್ಪಷ್ಟಪಡಿಸಿದೆ.

ಅಲ್ಲದೇ ಸಂಬಂಧವಿಲ್ಲದ ಫೋಟೊಗಳನ್ನೆಲ್ಲಾ ಷೇರ್‌ ಮಾಡಲಾಗಿದೆ. ಆಂಧ್ರದ ಎದುಟ್ಲ ಗೋಪಾಲ್‌ಪೇಟ್‌ ತಾಲ್ಲೂಕು ಎಂಬಲ್ಲಿ ನಡೆದಿದೆ ಎಂಬ ಫೋಟೊಗಳನ್ನು ಸಹ ಹರಿಬಿಡಲಾಗಿದೆ. ಒಟ್ಟಾರೆ ಇದೊಂದು ಶುದ್ಧ ಮೌಢ್ಯಾಚರಣೆಯಾಗಿದೆ.

ಇಂತಹ ವದಂತಿಗಳನ್ನು ಹರಡುವ ಮೂಲಕ, ಕಾರಣವಿಲ್ಲದೆ ಜನರಲ್ಲಿ ಭಯವದ ವಾತಾವರಣ ಸೃಷ್ಟಿಸಲಾಗುತ್ತದೆ. ಯಾರೋ ಮಾನಸಿಕ ಅಸ್ವಸ್ಥರು ಈ ಸುಳ್ಳು ಸುದ್ದಿ ಹರಡಿದ್ದಾರೆ. ಇದರಿಂದ ಯಾವುದೇ ಅಪಾಯ ಯಾರಿಗೂ ಆಗುವುದಿಲ್ಲ. ಮಗು ಬೆಳೆಯುತ್ತಿದ್ದಂತೆ ಮಗುವಿನ ಮಾತುಕತೆಯ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಆದ್ದರಿಂದ ಜನರು ವದಂತಿಗಳಿಗೆ ಬಲಿಯಾಗಬಾರದು. ಎಂದು ಔಶಾ ತಾಲ್ಲೂಕಿನ ಮೂಢನಂಬಿಕೆ ನಿರ್ಮೂಲನಾ ಸಮಿತಿಯ ಅಧ್ಯಕ್ಷ ಸಚಿನ್ ಮಿಟ್ಕರಿ ತಿಳಿಸಿದ್ದಾರೆ.

ಇತ್ತಿಚಿಗೆ ಉತ್ತರಕರ್ನಾಟಕದ ಹಳ್ಳಿಗಳಲ್ಲಿ ನಿಮ್ಮ ತಾಳಿಯಲ್ಲಿರುವ ಹವಳವನ್ನು ಕುಟ್ಟಿ ಪುಡಿಮಾಡಬೇಕು ಇಲ್ಲವಾದರೆ ನಿಮ್ಮ ಗಂಡು ಸತ್ತು ಹೋಗುತ್ತಾನೆ ಎಂದು ಸುಳ್ಳು ಸುದ್ಧಿ ಹಬ್ಬಿಸಿದ್ದಾರೆ ಇದರಿಂದ ಗ್ರಾಮೀಣ ಹೆಣ್ಣು ಮಕ್ಕಳು ಹಾಗೇ ಮಾಡಿದ್ದಾರೆ.

ಇನ್ನು ಕೆಲವು ತಿಂಗಳುಗಳ ಕೆಳಗೆ ಒಬ್ಬನೇ ಮಗ ಇದ್ದರೆ ಆತನಿಗೆ ಅತ್ತೆಯಂದಿರು ಬೆಳ್ಳಿ ಕಡಗ ಹಾಕಬೇಕು ಇಲ್ಲವಾದರೆ ಆತನಿಗೆ ಕೇಡಾಗುತ್ತದೆ ಎಂದು ಹೇಳಿದ್ದರು ಇದಕ್ಕಾಗಿ ಜನ ಸಾಲ ಮಾಡಿ ಬೆಳ್ಳಿ ಅಂಗಡಿಗಳ ಬಾಗಿಲು ತಟ್ಟಿದ್ದರು. ಆದಾದ ಕೆಲವೇ ದಿನಗಳಿಗೆ ಬೆಳ್ಳಿ ಕಡಗ ಇದ್ದರೆ ತೆಗೆದು ಹಾಗಬೇಕು ಎಂದರೆ ತೆಗೆದು ಹಾಕಿದ್ಧಾರೆ. ಈ ರೀತಿ ಗ್ರಾಮೀಣ ಜನರ ಜೀವನದ ಜೊತೆ ಸುಳ್ಳು ಸುದ್ಧಿಗಳನ್ನು ಹಬ್ಬಿಸಿ ಆಟ ಆಡುತ್ತಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಈ ಬಗ್ಗೆ ಸರ್ಕಾರಗಳು ಒಂದಷ್ಟು ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇತ್ತಿಚಿಗೆ ವಿದ್ಯಾವಂತರೇ ಸುಳ್ಳು ಸುದ್ಧಿಗಳನ್ನು ಹರಡುತ್ತಿರುವುದು ಹೆಚ್ಚಾಗಿದೆ. ಇದನ್ನು ಮೊದಲು ನಿಲ್ಲಿಸಬೇಕು. ಸತ್ಯ ಎಂದು ತಿಳಿಯದ ಹೊರತು ವಿಷಯಗಳನ್ನು ಶೇರ್ ಮಾಡದೆ ಇರುವುದನ್ನು ರೂಢಿಸಿಕೊಳ್ಳಬೇಕು.

ಇದನ್ನೂ ಓದಿ:

ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...