Homeಫ್ಯಾಕ್ಟ್‌ಚೆಕ್ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

- Advertisement -
- Advertisement -

ನಾನು ಇಂದು ಬೆಳಿಗ್ಗೆ 4.30ಕ್ಕೆ ಗಾಢ ನಿದ್ರೆ ಮಾಡುತ್ತಿರುವಾಗ ಮನೆಯಿಂದ ನಮ್ಮ ಚಿಕ್ಕಪ್ಪನ ಮಗ ಕಾಲ್ ಮಾಡಿದ. ನಾನು ಗಾಬರಿಯಿಂದ ಫೋನ್ ತೆಗೆದೆ. ಈಗಾಗಲೇ ಲಾಕ್‌ಡೌನ್‌ನಿಂದಾಗಿ ಮನೆಗೆ ಹೋಗದೇ ಬೆಂಗಳೂರಿನಲ್ಲೇ ಇರುವುದರಿಂದ ಕೊರೊನಾ ವೈರಸ್ ಬಗ್ಗೆ ಆತಂಕದಲ್ಲಿರುವಾಗ ಇಂತಹ ಕಾಲ್ ಬೆಳ್ಳಂ ಬೆಳಿಗ್ಗೆ ಬಂದುದರಿಂದ ಭಯವಾಯಿತು. ನನ್ನ ತಮ್ಮನ ಕಾಲ್‌ ರಿಸಿವ್ ಮಾಡುತ್ತಲೇ ಅಣ್ಣ ಎದ್ದೇಳು ಎದ್ದೇಳು ಅಂದ. ನಾನು ಎದ್ದಿದಿನಿ ಹೇಳೋ ಏನೋ ಅಂದೆ. ಮೊದಲು ಎದ್ದು ಕುಳಿತಿಕೋ, ನಮ್ಮ ಅತ್ತೆ ಹೇಳಿದರು ಈಗ ಯಾರು ಮಲಗಬಾರದಂತೆ ಎದ್ದೇ ಇರಬೇಕೆಂತೆ ಅಂತ ಹೇಳೀದ. ನಾನು ಆಯಿತು ಅಂತ ಕಾಲ್ ಕಟ್ ಮಾಡಿ ಮಲಗಿದೆ.

ಆದರೆ ಬೆಳಿಗ್ಗೆ ಎದ್ದು ಕಾಲ್ ಮಾಡಿ ವಿಷಯ ಏನು ಎಂದು ವಿಚಾರಿಸದರೆ, ಎಲ್ಲೋ ಹಸು ಹೊಟ್ಟೆಯಲ್ಲಿ ಮಗು ಹುಟ್ಟಿದೆಯಂತೆ. ಹಾಗಾಗಿ ಇವತ್ತು ಬೆಳಿಗಿನ ಜಾವಾ ನಿದ್ದೆ ಮಾಡಿದ್ರೆ ಏನಾದರೂ ಆಗುತ್ತೆ ಅಂತ ನಮ್ಮ ಏರಿಯಾದವರನ್ನೆಲ್ಲ ಎಬ್ಬಿಸಿದ್ದಾರೆ. ಎಲ್ಲರೂ ಫೋನ್‌ ಮಾಡಿ ಹೇಳು ಅಂದರು, ಅದಕ್ಕಾಗಿ ನಿನಗೆ ಕಾಲ್ ಮಾಡಿದೆ ಅಂದ. ನಾನು ಇವೆಲ್ಲ ನಂಬಬೇಡ ಬರೀ ಸುಳ್ಳು ಸುದ್ಧಿಗಳು ಬುದ್ಧಿ ಇಲ್ವಾ ನಿಮಗೆ ಎಂದು ಬೈಯ್ದು ಫೋನಿಟ್ಟೆ.

ಆನಂತರ ತಿಳಿಯಿತು ಇದು ಎಲ್ಲಾ ಹಳ್ಳಿಹಳ್ಳಿಗಳಿಗೂ ಹಬ್ಬುತ್ತಿದೆ ಎಂದು. ವಾಟ್ಸಪ್‌ನಲ್ಲಿ ನಿರಂತರವಾಗಿ ಈ ರೀತಿಯ ಸುಳ್ಳು ಸುದ್ಧಿಗಳನ್ನು ಹರಡಿ ಗ್ರಾಮೀಣ ಜನರನ್ನು ಇಂತಹ ಮೌಢ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಹುನ್ನಾರವೆ ಇದೆ ಹಾಗಾಗಿ ಇದರ ಕುರಿತು ಫ್ಯಾಕ್ಟ್‌ಚೆಕ್ ಮಾಡಲು ನಿರ್ಧರಿಸಿದೆವು.

ವಾಟ್ಸಾಪ್‌ನಲ್ಲಿ ಹಸುವೊಂದು ಮಗುವಿಗೆ ಜನ್ಮಕೊಟ್ಟಿದೆ ಎಂಬ ಐದು ಚಿತ್ರಗಳು ಹರಿದಾಡುತ್ತಿವೆ. ಇವುಗಳನ್ನು ಗೂಗಲ್‌ ರಿವರ್ಸ್‌ ಸರ್ಚ್‌ ಮಾಡಿದಾಗ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆ ಔಶಾ ತಾಲ್ಲೂಕಿನಲ್ಲಿ ವಿಕಲಾಂಗ ಮಗುವೊಂದು ಜನಿಸಿದ್ದು ಮಾತು ಬರುತ್ತಿಲ್ಲ ಎಂದು ಸುದ್ದಿ ಹರಡಿದೆ. ಹಾಗಾಗಿ ಅದು ಹುಟ್ಟಿದ ಸಮಯದಲ್ಲಿ ಉಳಿದವರೂ ಎಚ್ಚರವಿರಬೇಕು ಇಲ್ಲದಿದ್ದರೆ ಅವರ ಮಾತು ನಿಂತು ಹೋಗುತ್ತದೆ ಎಂದು ಯಾರೋ ಕಿಡಿಗೇಡಿಗಳು ಸುದ್ದಿ ಹರಡಿದ್ದಾರೆ.

ಅಲ್ಲಿಂದ ಒಬ್ಬರಿಂದ ಒಬ್ಬರಿಗೆ ನಿದ್ದೆ ಮಾಡಬೇಡಿ ಎದ್ದೇಳಿ ಎಂದು ಎಚ್ಚರಿಸುವ, ಇಡೀ ರಾತ್ರಿ ಎಚ್ಚರದಿಂದಿರುವ ಚಾಳಿ ಶುರುವಾಗಿದೆ ಮಾತ್ರವಲ್ಲ, ಆ ಮಗು ಹಸುವಿಗೆ ಹುಟ್ಟಿದ್ದು ಎಂಬ ಸುಳ್ಳು ಸಹ ಸೇರಿಕೊಂಡಿದೆ. ಅದೇ ಫೋಟೊಗಳನ್ನು ಷೇರ್‌ ಮಾಡಿ ಆಂಧ್ರ ಪ್ರದೇಶದ ಯಾವುದೋ ಊರು ಎಂದೆಲ್ಲಾ ಸುಳ್ಳು ಪಸರಿಸಿದೆ. ಅದೇ ಕಾಲ್ ಕೊನೆಗೆ ಬೆಂಗಳೂರನ್ನು ಸಹ ಮುಟ್ಟಿದೆ. ಇದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ವೆಬ್‌ಸೈಟ್‌ ಸಕಲ್‌.ಕಾಂ ಸ್ಪಷ್ಟಪಡಿಸಿದೆ.

ಅಲ್ಲದೇ ಸಂಬಂಧವಿಲ್ಲದ ಫೋಟೊಗಳನ್ನೆಲ್ಲಾ ಷೇರ್‌ ಮಾಡಲಾಗಿದೆ. ಆಂಧ್ರದ ಎದುಟ್ಲ ಗೋಪಾಲ್‌ಪೇಟ್‌ ತಾಲ್ಲೂಕು ಎಂಬಲ್ಲಿ ನಡೆದಿದೆ ಎಂಬ ಫೋಟೊಗಳನ್ನು ಸಹ ಹರಿಬಿಡಲಾಗಿದೆ. ಒಟ್ಟಾರೆ ಇದೊಂದು ಶುದ್ಧ ಮೌಢ್ಯಾಚರಣೆಯಾಗಿದೆ.

ಇಂತಹ ವದಂತಿಗಳನ್ನು ಹರಡುವ ಮೂಲಕ, ಕಾರಣವಿಲ್ಲದೆ ಜನರಲ್ಲಿ ಭಯವದ ವಾತಾವರಣ ಸೃಷ್ಟಿಸಲಾಗುತ್ತದೆ. ಯಾರೋ ಮಾನಸಿಕ ಅಸ್ವಸ್ಥರು ಈ ಸುಳ್ಳು ಸುದ್ದಿ ಹರಡಿದ್ದಾರೆ. ಇದರಿಂದ ಯಾವುದೇ ಅಪಾಯ ಯಾರಿಗೂ ಆಗುವುದಿಲ್ಲ. ಮಗು ಬೆಳೆಯುತ್ತಿದ್ದಂತೆ ಮಗುವಿನ ಮಾತುಕತೆಯ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಆದ್ದರಿಂದ ಜನರು ವದಂತಿಗಳಿಗೆ ಬಲಿಯಾಗಬಾರದು. ಎಂದು ಔಶಾ ತಾಲ್ಲೂಕಿನ ಮೂಢನಂಬಿಕೆ ನಿರ್ಮೂಲನಾ ಸಮಿತಿಯ ಅಧ್ಯಕ್ಷ ಸಚಿನ್ ಮಿಟ್ಕರಿ ತಿಳಿಸಿದ್ದಾರೆ.

ಇತ್ತಿಚಿಗೆ ಉತ್ತರಕರ್ನಾಟಕದ ಹಳ್ಳಿಗಳಲ್ಲಿ ನಿಮ್ಮ ತಾಳಿಯಲ್ಲಿರುವ ಹವಳವನ್ನು ಕುಟ್ಟಿ ಪುಡಿಮಾಡಬೇಕು ಇಲ್ಲವಾದರೆ ನಿಮ್ಮ ಗಂಡು ಸತ್ತು ಹೋಗುತ್ತಾನೆ ಎಂದು ಸುಳ್ಳು ಸುದ್ಧಿ ಹಬ್ಬಿಸಿದ್ದಾರೆ ಇದರಿಂದ ಗ್ರಾಮೀಣ ಹೆಣ್ಣು ಮಕ್ಕಳು ಹಾಗೇ ಮಾಡಿದ್ದಾರೆ.

ಇನ್ನು ಕೆಲವು ತಿಂಗಳುಗಳ ಕೆಳಗೆ ಒಬ್ಬನೇ ಮಗ ಇದ್ದರೆ ಆತನಿಗೆ ಅತ್ತೆಯಂದಿರು ಬೆಳ್ಳಿ ಕಡಗ ಹಾಕಬೇಕು ಇಲ್ಲವಾದರೆ ಆತನಿಗೆ ಕೇಡಾಗುತ್ತದೆ ಎಂದು ಹೇಳಿದ್ದರು ಇದಕ್ಕಾಗಿ ಜನ ಸಾಲ ಮಾಡಿ ಬೆಳ್ಳಿ ಅಂಗಡಿಗಳ ಬಾಗಿಲು ತಟ್ಟಿದ್ದರು. ಆದಾದ ಕೆಲವೇ ದಿನಗಳಿಗೆ ಬೆಳ್ಳಿ ಕಡಗ ಇದ್ದರೆ ತೆಗೆದು ಹಾಗಬೇಕು ಎಂದರೆ ತೆಗೆದು ಹಾಕಿದ್ಧಾರೆ. ಈ ರೀತಿ ಗ್ರಾಮೀಣ ಜನರ ಜೀವನದ ಜೊತೆ ಸುಳ್ಳು ಸುದ್ಧಿಗಳನ್ನು ಹಬ್ಬಿಸಿ ಆಟ ಆಡುತ್ತಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಈ ಬಗ್ಗೆ ಸರ್ಕಾರಗಳು ಒಂದಷ್ಟು ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇತ್ತಿಚಿಗೆ ವಿದ್ಯಾವಂತರೇ ಸುಳ್ಳು ಸುದ್ಧಿಗಳನ್ನು ಹರಡುತ್ತಿರುವುದು ಹೆಚ್ಚಾಗಿದೆ. ಇದನ್ನು ಮೊದಲು ನಿಲ್ಲಿಸಬೇಕು. ಸತ್ಯ ಎಂದು ತಿಳಿಯದ ಹೊರತು ವಿಷಯಗಳನ್ನು ಶೇರ್ ಮಾಡದೆ ಇರುವುದನ್ನು ರೂಢಿಸಿಕೊಳ್ಳಬೇಕು.

ಇದನ್ನೂ ಓದಿ:

ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...