Homeಫ್ಯಾಕ್ಟ್‌ಚೆಕ್ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

- Advertisement -
- Advertisement -

ನಾನು ಇಂದು ಬೆಳಿಗ್ಗೆ 4.30ಕ್ಕೆ ಗಾಢ ನಿದ್ರೆ ಮಾಡುತ್ತಿರುವಾಗ ಮನೆಯಿಂದ ನಮ್ಮ ಚಿಕ್ಕಪ್ಪನ ಮಗ ಕಾಲ್ ಮಾಡಿದ. ನಾನು ಗಾಬರಿಯಿಂದ ಫೋನ್ ತೆಗೆದೆ. ಈಗಾಗಲೇ ಲಾಕ್‌ಡೌನ್‌ನಿಂದಾಗಿ ಮನೆಗೆ ಹೋಗದೇ ಬೆಂಗಳೂರಿನಲ್ಲೇ ಇರುವುದರಿಂದ ಕೊರೊನಾ ವೈರಸ್ ಬಗ್ಗೆ ಆತಂಕದಲ್ಲಿರುವಾಗ ಇಂತಹ ಕಾಲ್ ಬೆಳ್ಳಂ ಬೆಳಿಗ್ಗೆ ಬಂದುದರಿಂದ ಭಯವಾಯಿತು. ನನ್ನ ತಮ್ಮನ ಕಾಲ್‌ ರಿಸಿವ್ ಮಾಡುತ್ತಲೇ ಅಣ್ಣ ಎದ್ದೇಳು ಎದ್ದೇಳು ಅಂದ. ನಾನು ಎದ್ದಿದಿನಿ ಹೇಳೋ ಏನೋ ಅಂದೆ. ಮೊದಲು ಎದ್ದು ಕುಳಿತಿಕೋ, ನಮ್ಮ ಅತ್ತೆ ಹೇಳಿದರು ಈಗ ಯಾರು ಮಲಗಬಾರದಂತೆ ಎದ್ದೇ ಇರಬೇಕೆಂತೆ ಅಂತ ಹೇಳೀದ. ನಾನು ಆಯಿತು ಅಂತ ಕಾಲ್ ಕಟ್ ಮಾಡಿ ಮಲಗಿದೆ.

ಆದರೆ ಬೆಳಿಗ್ಗೆ ಎದ್ದು ಕಾಲ್ ಮಾಡಿ ವಿಷಯ ಏನು ಎಂದು ವಿಚಾರಿಸದರೆ, ಎಲ್ಲೋ ಹಸು ಹೊಟ್ಟೆಯಲ್ಲಿ ಮಗು ಹುಟ್ಟಿದೆಯಂತೆ. ಹಾಗಾಗಿ ಇವತ್ತು ಬೆಳಿಗಿನ ಜಾವಾ ನಿದ್ದೆ ಮಾಡಿದ್ರೆ ಏನಾದರೂ ಆಗುತ್ತೆ ಅಂತ ನಮ್ಮ ಏರಿಯಾದವರನ್ನೆಲ್ಲ ಎಬ್ಬಿಸಿದ್ದಾರೆ. ಎಲ್ಲರೂ ಫೋನ್‌ ಮಾಡಿ ಹೇಳು ಅಂದರು, ಅದಕ್ಕಾಗಿ ನಿನಗೆ ಕಾಲ್ ಮಾಡಿದೆ ಅಂದ. ನಾನು ಇವೆಲ್ಲ ನಂಬಬೇಡ ಬರೀ ಸುಳ್ಳು ಸುದ್ಧಿಗಳು ಬುದ್ಧಿ ಇಲ್ವಾ ನಿಮಗೆ ಎಂದು ಬೈಯ್ದು ಫೋನಿಟ್ಟೆ.

ಆನಂತರ ತಿಳಿಯಿತು ಇದು ಎಲ್ಲಾ ಹಳ್ಳಿಹಳ್ಳಿಗಳಿಗೂ ಹಬ್ಬುತ್ತಿದೆ ಎಂದು. ವಾಟ್ಸಪ್‌ನಲ್ಲಿ ನಿರಂತರವಾಗಿ ಈ ರೀತಿಯ ಸುಳ್ಳು ಸುದ್ಧಿಗಳನ್ನು ಹರಡಿ ಗ್ರಾಮೀಣ ಜನರನ್ನು ಇಂತಹ ಮೌಢ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಹುನ್ನಾರವೆ ಇದೆ ಹಾಗಾಗಿ ಇದರ ಕುರಿತು ಫ್ಯಾಕ್ಟ್‌ಚೆಕ್ ಮಾಡಲು ನಿರ್ಧರಿಸಿದೆವು.

ವಾಟ್ಸಾಪ್‌ನಲ್ಲಿ ಹಸುವೊಂದು ಮಗುವಿಗೆ ಜನ್ಮಕೊಟ್ಟಿದೆ ಎಂಬ ಐದು ಚಿತ್ರಗಳು ಹರಿದಾಡುತ್ತಿವೆ. ಇವುಗಳನ್ನು ಗೂಗಲ್‌ ರಿವರ್ಸ್‌ ಸರ್ಚ್‌ ಮಾಡಿದಾಗ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆ ಔಶಾ ತಾಲ್ಲೂಕಿನಲ್ಲಿ ವಿಕಲಾಂಗ ಮಗುವೊಂದು ಜನಿಸಿದ್ದು ಮಾತು ಬರುತ್ತಿಲ್ಲ ಎಂದು ಸುದ್ದಿ ಹರಡಿದೆ. ಹಾಗಾಗಿ ಅದು ಹುಟ್ಟಿದ ಸಮಯದಲ್ಲಿ ಉಳಿದವರೂ ಎಚ್ಚರವಿರಬೇಕು ಇಲ್ಲದಿದ್ದರೆ ಅವರ ಮಾತು ನಿಂತು ಹೋಗುತ್ತದೆ ಎಂದು ಯಾರೋ ಕಿಡಿಗೇಡಿಗಳು ಸುದ್ದಿ ಹರಡಿದ್ದಾರೆ.

ಅಲ್ಲಿಂದ ಒಬ್ಬರಿಂದ ಒಬ್ಬರಿಗೆ ನಿದ್ದೆ ಮಾಡಬೇಡಿ ಎದ್ದೇಳಿ ಎಂದು ಎಚ್ಚರಿಸುವ, ಇಡೀ ರಾತ್ರಿ ಎಚ್ಚರದಿಂದಿರುವ ಚಾಳಿ ಶುರುವಾಗಿದೆ ಮಾತ್ರವಲ್ಲ, ಆ ಮಗು ಹಸುವಿಗೆ ಹುಟ್ಟಿದ್ದು ಎಂಬ ಸುಳ್ಳು ಸಹ ಸೇರಿಕೊಂಡಿದೆ. ಅದೇ ಫೋಟೊಗಳನ್ನು ಷೇರ್‌ ಮಾಡಿ ಆಂಧ್ರ ಪ್ರದೇಶದ ಯಾವುದೋ ಊರು ಎಂದೆಲ್ಲಾ ಸುಳ್ಳು ಪಸರಿಸಿದೆ. ಅದೇ ಕಾಲ್ ಕೊನೆಗೆ ಬೆಂಗಳೂರನ್ನು ಸಹ ಮುಟ್ಟಿದೆ. ಇದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ವೆಬ್‌ಸೈಟ್‌ ಸಕಲ್‌.ಕಾಂ ಸ್ಪಷ್ಟಪಡಿಸಿದೆ.

ಅಲ್ಲದೇ ಸಂಬಂಧವಿಲ್ಲದ ಫೋಟೊಗಳನ್ನೆಲ್ಲಾ ಷೇರ್‌ ಮಾಡಲಾಗಿದೆ. ಆಂಧ್ರದ ಎದುಟ್ಲ ಗೋಪಾಲ್‌ಪೇಟ್‌ ತಾಲ್ಲೂಕು ಎಂಬಲ್ಲಿ ನಡೆದಿದೆ ಎಂಬ ಫೋಟೊಗಳನ್ನು ಸಹ ಹರಿಬಿಡಲಾಗಿದೆ. ಒಟ್ಟಾರೆ ಇದೊಂದು ಶುದ್ಧ ಮೌಢ್ಯಾಚರಣೆಯಾಗಿದೆ.

ಇಂತಹ ವದಂತಿಗಳನ್ನು ಹರಡುವ ಮೂಲಕ, ಕಾರಣವಿಲ್ಲದೆ ಜನರಲ್ಲಿ ಭಯವದ ವಾತಾವರಣ ಸೃಷ್ಟಿಸಲಾಗುತ್ತದೆ. ಯಾರೋ ಮಾನಸಿಕ ಅಸ್ವಸ್ಥರು ಈ ಸುಳ್ಳು ಸುದ್ದಿ ಹರಡಿದ್ದಾರೆ. ಇದರಿಂದ ಯಾವುದೇ ಅಪಾಯ ಯಾರಿಗೂ ಆಗುವುದಿಲ್ಲ. ಮಗು ಬೆಳೆಯುತ್ತಿದ್ದಂತೆ ಮಗುವಿನ ಮಾತುಕತೆಯ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ. ಆದ್ದರಿಂದ ಜನರು ವದಂತಿಗಳಿಗೆ ಬಲಿಯಾಗಬಾರದು. ಎಂದು ಔಶಾ ತಾಲ್ಲೂಕಿನ ಮೂಢನಂಬಿಕೆ ನಿರ್ಮೂಲನಾ ಸಮಿತಿಯ ಅಧ್ಯಕ್ಷ ಸಚಿನ್ ಮಿಟ್ಕರಿ ತಿಳಿಸಿದ್ದಾರೆ.

ಇತ್ತಿಚಿಗೆ ಉತ್ತರಕರ್ನಾಟಕದ ಹಳ್ಳಿಗಳಲ್ಲಿ ನಿಮ್ಮ ತಾಳಿಯಲ್ಲಿರುವ ಹವಳವನ್ನು ಕುಟ್ಟಿ ಪುಡಿಮಾಡಬೇಕು ಇಲ್ಲವಾದರೆ ನಿಮ್ಮ ಗಂಡು ಸತ್ತು ಹೋಗುತ್ತಾನೆ ಎಂದು ಸುಳ್ಳು ಸುದ್ಧಿ ಹಬ್ಬಿಸಿದ್ದಾರೆ ಇದರಿಂದ ಗ್ರಾಮೀಣ ಹೆಣ್ಣು ಮಕ್ಕಳು ಹಾಗೇ ಮಾಡಿದ್ದಾರೆ.

ಇನ್ನು ಕೆಲವು ತಿಂಗಳುಗಳ ಕೆಳಗೆ ಒಬ್ಬನೇ ಮಗ ಇದ್ದರೆ ಆತನಿಗೆ ಅತ್ತೆಯಂದಿರು ಬೆಳ್ಳಿ ಕಡಗ ಹಾಕಬೇಕು ಇಲ್ಲವಾದರೆ ಆತನಿಗೆ ಕೇಡಾಗುತ್ತದೆ ಎಂದು ಹೇಳಿದ್ದರು ಇದಕ್ಕಾಗಿ ಜನ ಸಾಲ ಮಾಡಿ ಬೆಳ್ಳಿ ಅಂಗಡಿಗಳ ಬಾಗಿಲು ತಟ್ಟಿದ್ದರು. ಆದಾದ ಕೆಲವೇ ದಿನಗಳಿಗೆ ಬೆಳ್ಳಿ ಕಡಗ ಇದ್ದರೆ ತೆಗೆದು ಹಾಗಬೇಕು ಎಂದರೆ ತೆಗೆದು ಹಾಕಿದ್ಧಾರೆ. ಈ ರೀತಿ ಗ್ರಾಮೀಣ ಜನರ ಜೀವನದ ಜೊತೆ ಸುಳ್ಳು ಸುದ್ಧಿಗಳನ್ನು ಹಬ್ಬಿಸಿ ಆಟ ಆಡುತ್ತಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಈ ಬಗ್ಗೆ ಸರ್ಕಾರಗಳು ಒಂದಷ್ಟು ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇತ್ತಿಚಿಗೆ ವಿದ್ಯಾವಂತರೇ ಸುಳ್ಳು ಸುದ್ಧಿಗಳನ್ನು ಹರಡುತ್ತಿರುವುದು ಹೆಚ್ಚಾಗಿದೆ. ಇದನ್ನು ಮೊದಲು ನಿಲ್ಲಿಸಬೇಕು. ಸತ್ಯ ಎಂದು ತಿಳಿಯದ ಹೊರತು ವಿಷಯಗಳನ್ನು ಶೇರ್ ಮಾಡದೆ ಇರುವುದನ್ನು ರೂಢಿಸಿಕೊಳ್ಳಬೇಕು.

ಇದನ್ನೂ ಓದಿ:

ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...