Homeಕರ್ನಾಟಕಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

- Advertisement -
- Advertisement -

ಪವಿತ್ರ ಕೇಸರಿ ಬಟ್ಟೆ ತೊಟ್ಟು ಅಪಮಾನ ಮಾಡಬೇಡಿ. ಕೇಸರಿ ಪವಿತ್ರ ವಸ್ತ್ರ. ಅದಕ್ಕೊಂದು ಪಾವಿತ್ರ್ಯತೆ ಇದೆ. ಅದನ್ನು ಹೆಗಲ ಮೇಲೆ ಹಾಕಿಕೊಂಡು ಮಾಡಬಾರದ್ದನ್ನು ಮಾಡಿ ಶ್ರೀರಾಮ ಮತ್ತು ಹಿಂದೂ ಧರ್ಮಕ್ಕೆ ಕಳಂಕ ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು ನಗರದ ಕಲಾಮಂದಿರದಲ್ಲಿ ʼಜೆಪಿ ವಿಚಾರ ವೇದಿಕೆʼ ಹಮ್ಮಿಕೊಂಡಿದ್ದ ʼಸರ್ವ ಜನಾಂಗದ ತೋಟ; ಭಾವೈಕ್ಯತೆಯ ಒಂದು ಚರ್ಚೆʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಸೂಕ್ಷ್ಮ ವಿಷಯಗಳ ಮೂಲಕ ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, “ಶ್ರೀರಾಮನ ಹೆಸರೇಳಿಕೊಂಡು ರಾವಣ ರಾಜ್ಯ ಸೃಷ್ಟಿ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಅಭಿವೃದ್ಧಿಯ ವಿಷಯ ಇಟ್ಟುಕೊಂಡು ಮತ ಕೇಳುತ್ತಿಲ್ಲ. ಅದರ ಬಳಿ ಅಂಥ ಜನಪರ ವಿಷಯಗಳೇ ಇಲ್ಲ. ಅದಕ್ಕಾಗಿ ನೆಮ್ಮದಿಯಾಗಿದ್ದ ಕರ್ನಾಟಕದಲ್ಲಿ ಶಾಂತಿಯನ್ನು ಕದಡಿ ಜನರ ಬದುಕು ಹಾಳು ಮಾಡಲು ಹೊರಟಿದೆ. ಮಾವು ಖರೀದಿ ವಿಷಯದಲ್ಲೂ ಧರ್ಮವನ್ನು ಎಳೆದುತಂದು ರೈತರ ಬದುಕನ್ನೂ ಹಾಳು ಮಾಡಲು ಹುನ್ನಾರ ನಡೆಸಿದೆ. ಬಿಜೆಪಿಗೆ ಧೈರ್ಯವಿದ್ದರೆ ʼಕಾಯಕವೆ ಕೈಲಾಸʼ ಎಂದು ಹೇಳಿಕೊಂಡು ಮತ ಕೇಳಲಿ, ಆದರೆ ಒಡೆದು ಆಳುವ ನೀತಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಡಿ. ಹಣೆಗೆ ಬೊಟ್ಟು ಇಟ್ಟುಕೊಂಡು ಜೈಶ್ರೀರಾಂ ಎಂದರೆ ರೈತರು ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳನ್ನು ಉಗ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, ಮನೆಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ. ಕರ್ನಾಟಕವನ್ನು ರಾವಣ ರಾಜ್ಯ ಮಾಡಬೇಡಿ, ಕೈಲಾದರೆ ರಾಮರಾಜ್ಯ ನಿರ್ಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿವೆ. ಅದೆಂದಿಗೂ ಸಾಧ್ಯವಾಗುವುದಿಲ್ಲ. ಅಲ್ಲಿ ನಡೆದ ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಎಲ್ಲೆಲ್ಲೂ ಬಿಜೆಪಿಯ ದ್ವಂದ್ವ ನಿಲುವು ಎದ್ದು ಕಾಣುತ್ತಿದೆ. ಸರಕಾರ ರಾಜ್ಯದ ಪ್ರತಿ ಕುಟುಂಬವು ನೆಮ್ಮದಿಯಾಗಿ ಬದುಕುವಂಥ ವಾತಾವರಣ ನಿರ್ಮಾಣ ಮಾಡಬೇಕು. ಅಭಿವೃದ್ಧಿಶೀಲ ಕರ್ನಾಟಕವನ್ನು ಎಲ್ಲಾ ರೀತಿಯಲ್ಲೂ ಹಾಳು ಮಾಡಿ ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿದೆ. ಅದಕ್ಕೆ ಅವಕಾಶ ಕೊಡಬಾರದು. ಈ ವೇದಿಕೆಯ ಮೂಲಕ ಇಡೀ ರಾಜ್ಯಕ್ಕೆ ಈ ಸಂದೇಶವನ್ನು ಕೊಡಬೇಕಾಗಿದೆ ಎಂದಿದ್ದಾರೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಕರ ಪತ್ರ ಹಂಚುತ್ತಿದ್ದರೂ, ಧರ್ಮ ಧರ್ಮಗಳ ದ್ವೇಷ ಸೃಷ್ಟಿ ಮಾಡುತ್ತಿದ್ದರೂ ಸರಕಾರ ಏನೂ ಕ್ರಮ ಏಕೆ ಕೈಗೊಳ್ಳಲಿಲ್ಲ. ಮುಖ್ಯಮಂತ್ರಿಯೂ ಮೌನವಾಗಿದ್ದಾರೆ. ಅವರು ಮೌನಿಬಾಬಗಳಾಗಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ನನಗೆ 2023ರ ಚುನಾವಣೆ ಮುಖ್ಯವಲ್ಲ, ಧರ್ಮಾತೀತ ಸಮಾಜ ಗಟ್ಟಿಯಾಗಬೇಕು. ಹಿಜಾಬ್ ನಂತಹ ಒಂದು ಸಣ್ಣ ಘಟನೆ ದೊಡ್ಡದಾಗಲು ಸರಕಾರದ ನಿರ್ಲಕ್ಷ್ಯವೇ ಕಾರಣ. ಸರಕಾರವೇ ಕಿಡಿಗೇಡಿಗಳಿಗೆ ಉತ್ತೇಜನ ಕೊಟ್ಟು ಮೌನವಾಯಿತು. ಈ ಮೂಲಕ ಅಶಾಂತಿ ವಾತಾವರಣ ನಿರ್ಮಾಣ ಮಾಡಿದರು. ಕೆಲವರು ಮೌನವಾಗಿ ಇರುವ ಕಾರಣ ಈ ವಿವಾದವು ರಾಜ್ಯ, ದೇಶ ಹಾಗೂ ವಿದೇಶಕ್ಕೂ ವ್ಯಾಪಿಸಿತು. ಈ ವಿಷಯವನ್ನು ಮಾತನಾಡಲು ಕಾಂಗ್ರೆಸ್‌ ಹಿಂದೇಟು ಹಾಕಿತು ಎಂದಿದ್ದಾರೆ.

ಸರಕಾರ ಕೋವಿಡ್‌ ಹೆಸರಿನಲ್ಲಿ ಹಣ ಲೂಟಿ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿಗಳು; ವಿಧಾನಂಡಲ ಕಲಾಪದ ವೇಳೆ ಎಲ್ಲ ಪಕ್ಷಗಳ ಶಾಸಕರಿಗೆ ಸಚಿವರುಗಳು ಭೋಜನ ವ್ಯವಸ್ಥೆ ಮಾಡುವ ಸಂಪ್ರದಾಯವಿದೆ. ಅದೇ ಸರದಿಯಲ್ಲಿ ಕೋವಿಡ್‌ ನಿರ್ವಹಣೆ ಮಾಡಿದ ಇಲಾಖೆಯ ಸಚಿವರು ಬೋಜನ ವ್ಯವಸ್ಥೆ ಮಾಡಿದ್ದರು. ನನಗೂ ಆಹ್ವಾನ ನೀಡಿದ್ದರು. ಆಗ ಬಿಜೆಪಿಯ ಕೆಲ ಶಾಸಕರು ನನ್ನಲ್ಲಿ ಬಂದು, “ಅಣ್ಣಾ, ನೀನು ಹೋಗ್ಬಿಟ್ಟಿಯಾ ಊಟಕ್ಕೆ. ನೀನೇನಾದರೂ ಆ ಊಟ ಮಾಡಿದರೆ ಕೋವಿಡ್ ನಿಂದ ಸತ್ತಿರುವರು ಪಿಶಾಚಿಗಳಾಗಿ ಕಾಡುತ್ತಾರೆ” ಎಂದು ಹೇಳಿದರು. ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಷ್ಟು ಪ್ರಮಾಣದಲ್ಲಿ ಲೂಟಿ ಮಾಡಿದರು ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಂವಾದವನ್ನು ಹಿರಿಯ ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಶ್ರೀ ಬಸವಧ್ಯಾನ ಮಂದಿರದ ಶ್ರೀ ಬಸವಲಿಂಗ ಮೂರ್ತಿ ಶರಣರು ಮಾತನಾಡಿದರು. ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಮೈಸೂರಿನ ಸಿಎಸ್‌ಐ ಅಧ್ಯಕ್ಷರಾದ ರೆವರಂಡ್‌ ಗುರುಶಾಂತ್,‌ ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಅಧ್ಯಕ್ಷ ಮೌಲಾನ ಜಖಾವುಲ್ಲಾ ಸಿದ್ದಿಕಿ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್‌ ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...