Homeಕರ್ನಾಟಕಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

- Advertisement -
- Advertisement -

ಪವಿತ್ರ ಕೇಸರಿ ಬಟ್ಟೆ ತೊಟ್ಟು ಅಪಮಾನ ಮಾಡಬೇಡಿ. ಕೇಸರಿ ಪವಿತ್ರ ವಸ್ತ್ರ. ಅದಕ್ಕೊಂದು ಪಾವಿತ್ರ್ಯತೆ ಇದೆ. ಅದನ್ನು ಹೆಗಲ ಮೇಲೆ ಹಾಕಿಕೊಂಡು ಮಾಡಬಾರದ್ದನ್ನು ಮಾಡಿ ಶ್ರೀರಾಮ ಮತ್ತು ಹಿಂದೂ ಧರ್ಮಕ್ಕೆ ಕಳಂಕ ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು ನಗರದ ಕಲಾಮಂದಿರದಲ್ಲಿ ʼಜೆಪಿ ವಿಚಾರ ವೇದಿಕೆʼ ಹಮ್ಮಿಕೊಂಡಿದ್ದ ʼಸರ್ವ ಜನಾಂಗದ ತೋಟ; ಭಾವೈಕ್ಯತೆಯ ಒಂದು ಚರ್ಚೆʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಸೂಕ್ಷ್ಮ ವಿಷಯಗಳ ಮೂಲಕ ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, “ಶ್ರೀರಾಮನ ಹೆಸರೇಳಿಕೊಂಡು ರಾವಣ ರಾಜ್ಯ ಸೃಷ್ಟಿ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಅಭಿವೃದ್ಧಿಯ ವಿಷಯ ಇಟ್ಟುಕೊಂಡು ಮತ ಕೇಳುತ್ತಿಲ್ಲ. ಅದರ ಬಳಿ ಅಂಥ ಜನಪರ ವಿಷಯಗಳೇ ಇಲ್ಲ. ಅದಕ್ಕಾಗಿ ನೆಮ್ಮದಿಯಾಗಿದ್ದ ಕರ್ನಾಟಕದಲ್ಲಿ ಶಾಂತಿಯನ್ನು ಕದಡಿ ಜನರ ಬದುಕು ಹಾಳು ಮಾಡಲು ಹೊರಟಿದೆ. ಮಾವು ಖರೀದಿ ವಿಷಯದಲ್ಲೂ ಧರ್ಮವನ್ನು ಎಳೆದುತಂದು ರೈತರ ಬದುಕನ್ನೂ ಹಾಳು ಮಾಡಲು ಹುನ್ನಾರ ನಡೆಸಿದೆ. ಬಿಜೆಪಿಗೆ ಧೈರ್ಯವಿದ್ದರೆ ʼಕಾಯಕವೆ ಕೈಲಾಸʼ ಎಂದು ಹೇಳಿಕೊಂಡು ಮತ ಕೇಳಲಿ, ಆದರೆ ಒಡೆದು ಆಳುವ ನೀತಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಡಿ. ಹಣೆಗೆ ಬೊಟ್ಟು ಇಟ್ಟುಕೊಂಡು ಜೈಶ್ರೀರಾಂ ಎಂದರೆ ರೈತರು ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳನ್ನು ಉಗ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, ಮನೆಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ. ಕರ್ನಾಟಕವನ್ನು ರಾವಣ ರಾಜ್ಯ ಮಾಡಬೇಡಿ, ಕೈಲಾದರೆ ರಾಮರಾಜ್ಯ ನಿರ್ಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿವೆ. ಅದೆಂದಿಗೂ ಸಾಧ್ಯವಾಗುವುದಿಲ್ಲ. ಅಲ್ಲಿ ನಡೆದ ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಎಲ್ಲೆಲ್ಲೂ ಬಿಜೆಪಿಯ ದ್ವಂದ್ವ ನಿಲುವು ಎದ್ದು ಕಾಣುತ್ತಿದೆ. ಸರಕಾರ ರಾಜ್ಯದ ಪ್ರತಿ ಕುಟುಂಬವು ನೆಮ್ಮದಿಯಾಗಿ ಬದುಕುವಂಥ ವಾತಾವರಣ ನಿರ್ಮಾಣ ಮಾಡಬೇಕು. ಅಭಿವೃದ್ಧಿಶೀಲ ಕರ್ನಾಟಕವನ್ನು ಎಲ್ಲಾ ರೀತಿಯಲ್ಲೂ ಹಾಳು ಮಾಡಿ ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿದೆ. ಅದಕ್ಕೆ ಅವಕಾಶ ಕೊಡಬಾರದು. ಈ ವೇದಿಕೆಯ ಮೂಲಕ ಇಡೀ ರಾಜ್ಯಕ್ಕೆ ಈ ಸಂದೇಶವನ್ನು ಕೊಡಬೇಕಾಗಿದೆ ಎಂದಿದ್ದಾರೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಕರ ಪತ್ರ ಹಂಚುತ್ತಿದ್ದರೂ, ಧರ್ಮ ಧರ್ಮಗಳ ದ್ವೇಷ ಸೃಷ್ಟಿ ಮಾಡುತ್ತಿದ್ದರೂ ಸರಕಾರ ಏನೂ ಕ್ರಮ ಏಕೆ ಕೈಗೊಳ್ಳಲಿಲ್ಲ. ಮುಖ್ಯಮಂತ್ರಿಯೂ ಮೌನವಾಗಿದ್ದಾರೆ. ಅವರು ಮೌನಿಬಾಬಗಳಾಗಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ನನಗೆ 2023ರ ಚುನಾವಣೆ ಮುಖ್ಯವಲ್ಲ, ಧರ್ಮಾತೀತ ಸಮಾಜ ಗಟ್ಟಿಯಾಗಬೇಕು. ಹಿಜಾಬ್ ನಂತಹ ಒಂದು ಸಣ್ಣ ಘಟನೆ ದೊಡ್ಡದಾಗಲು ಸರಕಾರದ ನಿರ್ಲಕ್ಷ್ಯವೇ ಕಾರಣ. ಸರಕಾರವೇ ಕಿಡಿಗೇಡಿಗಳಿಗೆ ಉತ್ತೇಜನ ಕೊಟ್ಟು ಮೌನವಾಯಿತು. ಈ ಮೂಲಕ ಅಶಾಂತಿ ವಾತಾವರಣ ನಿರ್ಮಾಣ ಮಾಡಿದರು. ಕೆಲವರು ಮೌನವಾಗಿ ಇರುವ ಕಾರಣ ಈ ವಿವಾದವು ರಾಜ್ಯ, ದೇಶ ಹಾಗೂ ವಿದೇಶಕ್ಕೂ ವ್ಯಾಪಿಸಿತು. ಈ ವಿಷಯವನ್ನು ಮಾತನಾಡಲು ಕಾಂಗ್ರೆಸ್‌ ಹಿಂದೇಟು ಹಾಕಿತು ಎಂದಿದ್ದಾರೆ.

ಸರಕಾರ ಕೋವಿಡ್‌ ಹೆಸರಿನಲ್ಲಿ ಹಣ ಲೂಟಿ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿಗಳು; ವಿಧಾನಂಡಲ ಕಲಾಪದ ವೇಳೆ ಎಲ್ಲ ಪಕ್ಷಗಳ ಶಾಸಕರಿಗೆ ಸಚಿವರುಗಳು ಭೋಜನ ವ್ಯವಸ್ಥೆ ಮಾಡುವ ಸಂಪ್ರದಾಯವಿದೆ. ಅದೇ ಸರದಿಯಲ್ಲಿ ಕೋವಿಡ್‌ ನಿರ್ವಹಣೆ ಮಾಡಿದ ಇಲಾಖೆಯ ಸಚಿವರು ಬೋಜನ ವ್ಯವಸ್ಥೆ ಮಾಡಿದ್ದರು. ನನಗೂ ಆಹ್ವಾನ ನೀಡಿದ್ದರು. ಆಗ ಬಿಜೆಪಿಯ ಕೆಲ ಶಾಸಕರು ನನ್ನಲ್ಲಿ ಬಂದು, “ಅಣ್ಣಾ, ನೀನು ಹೋಗ್ಬಿಟ್ಟಿಯಾ ಊಟಕ್ಕೆ. ನೀನೇನಾದರೂ ಆ ಊಟ ಮಾಡಿದರೆ ಕೋವಿಡ್ ನಿಂದ ಸತ್ತಿರುವರು ಪಿಶಾಚಿಗಳಾಗಿ ಕಾಡುತ್ತಾರೆ” ಎಂದು ಹೇಳಿದರು. ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಷ್ಟು ಪ್ರಮಾಣದಲ್ಲಿ ಲೂಟಿ ಮಾಡಿದರು ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಂವಾದವನ್ನು ಹಿರಿಯ ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಶ್ರೀ ಬಸವಧ್ಯಾನ ಮಂದಿರದ ಶ್ರೀ ಬಸವಲಿಂಗ ಮೂರ್ತಿ ಶರಣರು ಮಾತನಾಡಿದರು. ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಮೈಸೂರಿನ ಸಿಎಸ್‌ಐ ಅಧ್ಯಕ್ಷರಾದ ರೆವರಂಡ್‌ ಗುರುಶಾಂತ್,‌ ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಅಧ್ಯಕ್ಷ ಮೌಲಾನ ಜಖಾವುಲ್ಲಾ ಸಿದ್ದಿಕಿ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್‌ ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...