Homeಕರ್ನಾಟಕಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

- Advertisement -
- Advertisement -

ಪವಿತ್ರ ಕೇಸರಿ ಬಟ್ಟೆ ತೊಟ್ಟು ಅಪಮಾನ ಮಾಡಬೇಡಿ. ಕೇಸರಿ ಪವಿತ್ರ ವಸ್ತ್ರ. ಅದಕ್ಕೊಂದು ಪಾವಿತ್ರ್ಯತೆ ಇದೆ. ಅದನ್ನು ಹೆಗಲ ಮೇಲೆ ಹಾಕಿಕೊಂಡು ಮಾಡಬಾರದ್ದನ್ನು ಮಾಡಿ ಶ್ರೀರಾಮ ಮತ್ತು ಹಿಂದೂ ಧರ್ಮಕ್ಕೆ ಕಳಂಕ ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು ನಗರದ ಕಲಾಮಂದಿರದಲ್ಲಿ ʼಜೆಪಿ ವಿಚಾರ ವೇದಿಕೆʼ ಹಮ್ಮಿಕೊಂಡಿದ್ದ ʼಸರ್ವ ಜನಾಂಗದ ತೋಟ; ಭಾವೈಕ್ಯತೆಯ ಒಂದು ಚರ್ಚೆʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಸೂಕ್ಷ್ಮ ವಿಷಯಗಳ ಮೂಲಕ ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, “ಶ್ರೀರಾಮನ ಹೆಸರೇಳಿಕೊಂಡು ರಾವಣ ರಾಜ್ಯ ಸೃಷ್ಟಿ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಅಭಿವೃದ್ಧಿಯ ವಿಷಯ ಇಟ್ಟುಕೊಂಡು ಮತ ಕೇಳುತ್ತಿಲ್ಲ. ಅದರ ಬಳಿ ಅಂಥ ಜನಪರ ವಿಷಯಗಳೇ ಇಲ್ಲ. ಅದಕ್ಕಾಗಿ ನೆಮ್ಮದಿಯಾಗಿದ್ದ ಕರ್ನಾಟಕದಲ್ಲಿ ಶಾಂತಿಯನ್ನು ಕದಡಿ ಜನರ ಬದುಕು ಹಾಳು ಮಾಡಲು ಹೊರಟಿದೆ. ಮಾವು ಖರೀದಿ ವಿಷಯದಲ್ಲೂ ಧರ್ಮವನ್ನು ಎಳೆದುತಂದು ರೈತರ ಬದುಕನ್ನೂ ಹಾಳು ಮಾಡಲು ಹುನ್ನಾರ ನಡೆಸಿದೆ. ಬಿಜೆಪಿಗೆ ಧೈರ್ಯವಿದ್ದರೆ ʼಕಾಯಕವೆ ಕೈಲಾಸʼ ಎಂದು ಹೇಳಿಕೊಂಡು ಮತ ಕೇಳಲಿ, ಆದರೆ ಒಡೆದು ಆಳುವ ನೀತಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಡಿ. ಹಣೆಗೆ ಬೊಟ್ಟು ಇಟ್ಟುಕೊಂಡು ಜೈಶ್ರೀರಾಂ ಎಂದರೆ ರೈತರು ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳನ್ನು ಉಗ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, ಮನೆಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ. ಕರ್ನಾಟಕವನ್ನು ರಾವಣ ರಾಜ್ಯ ಮಾಡಬೇಡಿ, ಕೈಲಾದರೆ ರಾಮರಾಜ್ಯ ನಿರ್ಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿವೆ. ಅದೆಂದಿಗೂ ಸಾಧ್ಯವಾಗುವುದಿಲ್ಲ. ಅಲ್ಲಿ ನಡೆದ ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಎಲ್ಲೆಲ್ಲೂ ಬಿಜೆಪಿಯ ದ್ವಂದ್ವ ನಿಲುವು ಎದ್ದು ಕಾಣುತ್ತಿದೆ. ಸರಕಾರ ರಾಜ್ಯದ ಪ್ರತಿ ಕುಟುಂಬವು ನೆಮ್ಮದಿಯಾಗಿ ಬದುಕುವಂಥ ವಾತಾವರಣ ನಿರ್ಮಾಣ ಮಾಡಬೇಕು. ಅಭಿವೃದ್ಧಿಶೀಲ ಕರ್ನಾಟಕವನ್ನು ಎಲ್ಲಾ ರೀತಿಯಲ್ಲೂ ಹಾಳು ಮಾಡಿ ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿದೆ. ಅದಕ್ಕೆ ಅವಕಾಶ ಕೊಡಬಾರದು. ಈ ವೇದಿಕೆಯ ಮೂಲಕ ಇಡೀ ರಾಜ್ಯಕ್ಕೆ ಈ ಸಂದೇಶವನ್ನು ಕೊಡಬೇಕಾಗಿದೆ ಎಂದಿದ್ದಾರೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಕರ ಪತ್ರ ಹಂಚುತ್ತಿದ್ದರೂ, ಧರ್ಮ ಧರ್ಮಗಳ ದ್ವೇಷ ಸೃಷ್ಟಿ ಮಾಡುತ್ತಿದ್ದರೂ ಸರಕಾರ ಏನೂ ಕ್ರಮ ಏಕೆ ಕೈಗೊಳ್ಳಲಿಲ್ಲ. ಮುಖ್ಯಮಂತ್ರಿಯೂ ಮೌನವಾಗಿದ್ದಾರೆ. ಅವರು ಮೌನಿಬಾಬಗಳಾಗಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ನನಗೆ 2023ರ ಚುನಾವಣೆ ಮುಖ್ಯವಲ್ಲ, ಧರ್ಮಾತೀತ ಸಮಾಜ ಗಟ್ಟಿಯಾಗಬೇಕು. ಹಿಜಾಬ್ ನಂತಹ ಒಂದು ಸಣ್ಣ ಘಟನೆ ದೊಡ್ಡದಾಗಲು ಸರಕಾರದ ನಿರ್ಲಕ್ಷ್ಯವೇ ಕಾರಣ. ಸರಕಾರವೇ ಕಿಡಿಗೇಡಿಗಳಿಗೆ ಉತ್ತೇಜನ ಕೊಟ್ಟು ಮೌನವಾಯಿತು. ಈ ಮೂಲಕ ಅಶಾಂತಿ ವಾತಾವರಣ ನಿರ್ಮಾಣ ಮಾಡಿದರು. ಕೆಲವರು ಮೌನವಾಗಿ ಇರುವ ಕಾರಣ ಈ ವಿವಾದವು ರಾಜ್ಯ, ದೇಶ ಹಾಗೂ ವಿದೇಶಕ್ಕೂ ವ್ಯಾಪಿಸಿತು. ಈ ವಿಷಯವನ್ನು ಮಾತನಾಡಲು ಕಾಂಗ್ರೆಸ್‌ ಹಿಂದೇಟು ಹಾಕಿತು ಎಂದಿದ್ದಾರೆ.

ಸರಕಾರ ಕೋವಿಡ್‌ ಹೆಸರಿನಲ್ಲಿ ಹಣ ಲೂಟಿ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿಗಳು; ವಿಧಾನಂಡಲ ಕಲಾಪದ ವೇಳೆ ಎಲ್ಲ ಪಕ್ಷಗಳ ಶಾಸಕರಿಗೆ ಸಚಿವರುಗಳು ಭೋಜನ ವ್ಯವಸ್ಥೆ ಮಾಡುವ ಸಂಪ್ರದಾಯವಿದೆ. ಅದೇ ಸರದಿಯಲ್ಲಿ ಕೋವಿಡ್‌ ನಿರ್ವಹಣೆ ಮಾಡಿದ ಇಲಾಖೆಯ ಸಚಿವರು ಬೋಜನ ವ್ಯವಸ್ಥೆ ಮಾಡಿದ್ದರು. ನನಗೂ ಆಹ್ವಾನ ನೀಡಿದ್ದರು. ಆಗ ಬಿಜೆಪಿಯ ಕೆಲ ಶಾಸಕರು ನನ್ನಲ್ಲಿ ಬಂದು, “ಅಣ್ಣಾ, ನೀನು ಹೋಗ್ಬಿಟ್ಟಿಯಾ ಊಟಕ್ಕೆ. ನೀನೇನಾದರೂ ಆ ಊಟ ಮಾಡಿದರೆ ಕೋವಿಡ್ ನಿಂದ ಸತ್ತಿರುವರು ಪಿಶಾಚಿಗಳಾಗಿ ಕಾಡುತ್ತಾರೆ” ಎಂದು ಹೇಳಿದರು. ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಷ್ಟು ಪ್ರಮಾಣದಲ್ಲಿ ಲೂಟಿ ಮಾಡಿದರು ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಂವಾದವನ್ನು ಹಿರಿಯ ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಶ್ರೀ ಬಸವಧ್ಯಾನ ಮಂದಿರದ ಶ್ರೀ ಬಸವಲಿಂಗ ಮೂರ್ತಿ ಶರಣರು ಮಾತನಾಡಿದರು. ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಮೈಸೂರಿನ ಸಿಎಸ್‌ಐ ಅಧ್ಯಕ್ಷರಾದ ರೆವರಂಡ್‌ ಗುರುಶಾಂತ್,‌ ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಅಧ್ಯಕ್ಷ ಮೌಲಾನ ಜಖಾವುಲ್ಲಾ ಸಿದ್ದಿಕಿ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್‌ ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...