Homeಕರ್ನಾಟಕಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

ಕೇಸರಿ ವಸ್ತ್ರ ಪವಿತ್ರವಾದದ್ದು; ಅದನ್ನು ಧರಿಸಿ ಮಾಡಬಾರದ್ದನ್ನು ಮಾಡಬೇಡಿ: ಎಚ್‌ಡಿಕೆ

- Advertisement -
- Advertisement -

ಪವಿತ್ರ ಕೇಸರಿ ಬಟ್ಟೆ ತೊಟ್ಟು ಅಪಮಾನ ಮಾಡಬೇಡಿ. ಕೇಸರಿ ಪವಿತ್ರ ವಸ್ತ್ರ. ಅದಕ್ಕೊಂದು ಪಾವಿತ್ರ್ಯತೆ ಇದೆ. ಅದನ್ನು ಹೆಗಲ ಮೇಲೆ ಹಾಕಿಕೊಂಡು ಮಾಡಬಾರದ್ದನ್ನು ಮಾಡಿ ಶ್ರೀರಾಮ ಮತ್ತು ಹಿಂದೂ ಧರ್ಮಕ್ಕೆ ಕಳಂಕ ತರಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು ನಗರದ ಕಲಾಮಂದಿರದಲ್ಲಿ ʼಜೆಪಿ ವಿಚಾರ ವೇದಿಕೆʼ ಹಮ್ಮಿಕೊಂಡಿದ್ದ ʼಸರ್ವ ಜನಾಂಗದ ತೋಟ; ಭಾವೈಕ್ಯತೆಯ ಒಂದು ಚರ್ಚೆʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ಸೂಕ್ಷ್ಮ ವಿಷಯಗಳ ಮೂಲಕ ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, “ಶ್ರೀರಾಮನ ಹೆಸರೇಳಿಕೊಂಡು ರಾವಣ ರಾಜ್ಯ ಸೃಷ್ಟಿ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಅಭಿವೃದ್ಧಿಯ ವಿಷಯ ಇಟ್ಟುಕೊಂಡು ಮತ ಕೇಳುತ್ತಿಲ್ಲ. ಅದರ ಬಳಿ ಅಂಥ ಜನಪರ ವಿಷಯಗಳೇ ಇಲ್ಲ. ಅದಕ್ಕಾಗಿ ನೆಮ್ಮದಿಯಾಗಿದ್ದ ಕರ್ನಾಟಕದಲ್ಲಿ ಶಾಂತಿಯನ್ನು ಕದಡಿ ಜನರ ಬದುಕು ಹಾಳು ಮಾಡಲು ಹೊರಟಿದೆ. ಮಾವು ಖರೀದಿ ವಿಷಯದಲ್ಲೂ ಧರ್ಮವನ್ನು ಎಳೆದುತಂದು ರೈತರ ಬದುಕನ್ನೂ ಹಾಳು ಮಾಡಲು ಹುನ್ನಾರ ನಡೆಸಿದೆ. ಬಿಜೆಪಿಗೆ ಧೈರ್ಯವಿದ್ದರೆ ʼಕಾಯಕವೆ ಕೈಲಾಸʼ ಎಂದು ಹೇಳಿಕೊಂಡು ಮತ ಕೇಳಲಿ, ಆದರೆ ಒಡೆದು ಆಳುವ ನೀತಿಯನ್ನು ಮುಂದಿಟ್ಟುಕೊಂಡು ಮತ ಕೇಳಬೇಡಿ. ಹಣೆಗೆ ಬೊಟ್ಟು ಇಟ್ಟುಕೊಂಡು ಜೈಶ್ರೀರಾಂ ಎಂದರೆ ರೈತರು ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ಅಶಾಂತಿ ಸೃಷ್ಟಿ ಮಾಡುತ್ತಿರುವ ಸಂಘಟನೆಗಳನ್ನು ಉಗ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, ಮನೆಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಬೇಡಿ. ಕರ್ನಾಟಕವನ್ನು ರಾವಣ ರಾಜ್ಯ ಮಾಡಬೇಡಿ, ಕೈಲಾದರೆ ರಾಮರಾಜ್ಯ ನಿರ್ಮಾಣ ಮಾಡಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿವೆ. ಅದೆಂದಿಗೂ ಸಾಧ್ಯವಾಗುವುದಿಲ್ಲ. ಅಲ್ಲಿ ನಡೆದ ಅವರ ಆಟ ಇಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಎಲ್ಲೆಲ್ಲೂ ಬಿಜೆಪಿಯ ದ್ವಂದ್ವ ನಿಲುವು ಎದ್ದು ಕಾಣುತ್ತಿದೆ. ಸರಕಾರ ರಾಜ್ಯದ ಪ್ರತಿ ಕುಟುಂಬವು ನೆಮ್ಮದಿಯಾಗಿ ಬದುಕುವಂಥ ವಾತಾವರಣ ನಿರ್ಮಾಣ ಮಾಡಬೇಕು. ಅಭಿವೃದ್ಧಿಶೀಲ ಕರ್ನಾಟಕವನ್ನು ಎಲ್ಲಾ ರೀತಿಯಲ್ಲೂ ಹಾಳು ಮಾಡಿ ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿದೆ. ಅದಕ್ಕೆ ಅವಕಾಶ ಕೊಡಬಾರದು. ಈ ವೇದಿಕೆಯ ಮೂಲಕ ಇಡೀ ರಾಜ್ಯಕ್ಕೆ ಈ ಸಂದೇಶವನ್ನು ಕೊಡಬೇಕಾಗಿದೆ ಎಂದಿದ್ದಾರೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಕರ ಪತ್ರ ಹಂಚುತ್ತಿದ್ದರೂ, ಧರ್ಮ ಧರ್ಮಗಳ ದ್ವೇಷ ಸೃಷ್ಟಿ ಮಾಡುತ್ತಿದ್ದರೂ ಸರಕಾರ ಏನೂ ಕ್ರಮ ಏಕೆ ಕೈಗೊಳ್ಳಲಿಲ್ಲ. ಮುಖ್ಯಮಂತ್ರಿಯೂ ಮೌನವಾಗಿದ್ದಾರೆ. ಅವರು ಮೌನಿಬಾಬಗಳಾಗಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ನನಗೆ 2023ರ ಚುನಾವಣೆ ಮುಖ್ಯವಲ್ಲ, ಧರ್ಮಾತೀತ ಸಮಾಜ ಗಟ್ಟಿಯಾಗಬೇಕು. ಹಿಜಾಬ್ ನಂತಹ ಒಂದು ಸಣ್ಣ ಘಟನೆ ದೊಡ್ಡದಾಗಲು ಸರಕಾರದ ನಿರ್ಲಕ್ಷ್ಯವೇ ಕಾರಣ. ಸರಕಾರವೇ ಕಿಡಿಗೇಡಿಗಳಿಗೆ ಉತ್ತೇಜನ ಕೊಟ್ಟು ಮೌನವಾಯಿತು. ಈ ಮೂಲಕ ಅಶಾಂತಿ ವಾತಾವರಣ ನಿರ್ಮಾಣ ಮಾಡಿದರು. ಕೆಲವರು ಮೌನವಾಗಿ ಇರುವ ಕಾರಣ ಈ ವಿವಾದವು ರಾಜ್ಯ, ದೇಶ ಹಾಗೂ ವಿದೇಶಕ್ಕೂ ವ್ಯಾಪಿಸಿತು. ಈ ವಿಷಯವನ್ನು ಮಾತನಾಡಲು ಕಾಂಗ್ರೆಸ್‌ ಹಿಂದೇಟು ಹಾಕಿತು ಎಂದಿದ್ದಾರೆ.

ಸರಕಾರ ಕೋವಿಡ್‌ ಹೆಸರಿನಲ್ಲಿ ಹಣ ಲೂಟಿ ಮಾಡಿದೆ ಎಂದು ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿಗಳು; ವಿಧಾನಂಡಲ ಕಲಾಪದ ವೇಳೆ ಎಲ್ಲ ಪಕ್ಷಗಳ ಶಾಸಕರಿಗೆ ಸಚಿವರುಗಳು ಭೋಜನ ವ್ಯವಸ್ಥೆ ಮಾಡುವ ಸಂಪ್ರದಾಯವಿದೆ. ಅದೇ ಸರದಿಯಲ್ಲಿ ಕೋವಿಡ್‌ ನಿರ್ವಹಣೆ ಮಾಡಿದ ಇಲಾಖೆಯ ಸಚಿವರು ಬೋಜನ ವ್ಯವಸ್ಥೆ ಮಾಡಿದ್ದರು. ನನಗೂ ಆಹ್ವಾನ ನೀಡಿದ್ದರು. ಆಗ ಬಿಜೆಪಿಯ ಕೆಲ ಶಾಸಕರು ನನ್ನಲ್ಲಿ ಬಂದು, “ಅಣ್ಣಾ, ನೀನು ಹೋಗ್ಬಿಟ್ಟಿಯಾ ಊಟಕ್ಕೆ. ನೀನೇನಾದರೂ ಆ ಊಟ ಮಾಡಿದರೆ ಕೋವಿಡ್ ನಿಂದ ಸತ್ತಿರುವರು ಪಿಶಾಚಿಗಳಾಗಿ ಕಾಡುತ್ತಾರೆ” ಎಂದು ಹೇಳಿದರು. ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಷ್ಟು ಪ್ರಮಾಣದಲ್ಲಿ ಲೂಟಿ ಮಾಡಿದರು ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಂವಾದವನ್ನು ಹಿರಿಯ ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಶ್ರೀ ಬಸವಧ್ಯಾನ ಮಂದಿರದ ಶ್ರೀ ಬಸವಲಿಂಗ ಮೂರ್ತಿ ಶರಣರು ಮಾತನಾಡಿದರು. ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಮೈಸೂರಿನ ಸಿಎಸ್‌ಐ ಅಧ್ಯಕ್ಷರಾದ ರೆವರಂಡ್‌ ಗುರುಶಾಂತ್,‌ ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಅಧ್ಯಕ್ಷ ಮೌಲಾನ ಜಖಾವುಲ್ಲಾ ಸಿದ್ದಿಕಿ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್‌ ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...