Homeಕರ್ನಾಟಕ'ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ': ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

‘ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ’: ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

- Advertisement -
- Advertisement -

ಮಹಿಳಾ ದಿನಾಚರಣೆಯಂದೇ (Women’s Day) ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಅವರು, ಮಹಿಳೆಯೊಬ್ಬರ ಮೇಲೆ ಕೂಗಾಡಿ ಅವಮಾನ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮತ್ಯಾಲಪೇಟೆಯಲ್ಲಿ ನಡೆದಿದೆ.

ಕೋಲಾರ ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕೋಲಾರ ಸಂಸದ ಎಸ್.ಮುನಿಸ್ವಾಮಿ ಉದ್ಘಾಟಿಸಿದರು. ಈ ಕಾರ್ಯಕ್ರಮದ ಪ್ರಯುಕ್ತ ಸುಜಾತಾ ಎಂಬವರು ಮಾರಾಟ ಮಳಿಗೆ ತೆರೆದಿದ್ದರು. ಅವರು ಹಣೆಗೆ ಕುಂಕುಮ ಧರಿಸಿಲ್ಲವೆಂದು ಅವರ ವಿರುದ್ಧ ಸಂಸದ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಮಹಿಳೆಗೆ ಸಂಸದರು ಅವಮಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಸಂಸದರು ಹಾಗೂ ಅವರ ಬೆಂಬಲಿಗರು ಮಳಿಗೆಯ ಮುಂದೆ ನಿಂತು ಅವಮಾನಿಸಿದ್ದು, ”ಏನಮ್ಮ ನಿನ್ನ ಹೆಸರು, ಹಣೆಗೆ ಯಾಕೆ ಕುಂಕುಮ ಹಾಕಿಲ್ಲ? ಹಣ ಕೊಟ್ಟು ಬಲವಂತವಾಗಿ ಮತಾಂತರ ಮಾಡಿದ್ದಾರೆ ಅಲ್ಲವಾ? ವೈಷ್ಣವಿ ಎಂಬುದಾಗಿ ಅಂಗಡಿ ಹೆಸರನ್ನು ಯಾಕೆ ಇಟ್ಟುಕೊಂಡಿದ್ದೀಯಾ? ಎಂದು ವ್ಯಕ್ತಿ ಸ್ವಾತಂತ್ರ್ಯವನ್ನೇ ಪ್ರಶ್ನಿಸಿದ್ದಾರೆ. ಈ ವೇಳೆ ಶಾಸಕ ಶ್ರೀನಿವಾಸಗೌಡ ತಡೆದರೂ ಸುಮ್ಮನಿರದ ಮುನಿಸ್ವಾಮಿ ಕೂಗಾಡಿದ್ದಾರೆ. ಪರಿಷತ್ ಸದಸ್ಯ ಗೋವಿಂದರಾಜು ಕೂಡ ಸಮಾಧಾನಿಸಲು ಯತ್ನಿಸಿದ್ದಾರೆ. ಆದರೆ, ಯಾರ ಮಾತಿನಿಂದಲೂ ಮುನಿಸ್ವಾಮಿ ಸಿಟ್ಟು ತಣ್ಣಗಾಗಿಲ್ಲ.”

”ಮುಂದುವರಿದು, ಯಾರೊ ಕಾಸು ಕೊಡುತ್ತಾರೆ ಅಂತ ಸುಜಾತ ಅಂತ ಹೆಸರು ಇಟ್ಟುಕೊಂಡಿದ್ದೀಯಾ? ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್ ಸೆನ್ಸ್ ಇಲ್ಲ. ತಂದೆ ಹೆಸರು ಬದಲಾಯಿಸುತ್ತೀಯಾ ನೀನು? ಅದನ್ನೆಲ್ಲ ಇಟ್ಟುಕೊಳ್ಳುವುದಕ್ಕೆ ಯೋಗ್ಯತೆ ಇಲ್ಲ ನಿನಗೆ..” ಎಂದು ಏಕವಚನದಲ್ಲೇ ಸಂಸದರು ಹರಿಹಾಯ್ದಿದ್ದಾರೆ. ಈ ವೇಳೆ, ಸಂಸದರಿಗೆ ಉತ್ತರಿಸಲಾಗದೆ ಮಹಿಳೆ ತಡಬಡಾಯಿಸಿದ್ದಾರೆ.

ಇದನ್ನೂ ಓದಿ: ಲಂಚಾರೋಪಿ ಮಾಡಾಳ್‌ಗೆ ಜಾಮೀನು ವಿಚಾರ: ವಕೀಲರ ಸಂಘದಿಂದ ತೀವ್ರ ಕಳವಳ ವ್ಯಕ್ತ; ಸಿಜೆಐಗೆ ಪತ್ರ

ಸಂಸದರು ಮಹಿಳೆಯನ್ನು ತರಾಟೆಗೆ ತೆಗದುಕೊಳ್ಳುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂಸದರ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯರಿಗೆ ಅವರ ಉಡುಗೆತೊಡುಗೆ ವಿಚಾರದಲ್ಲಿ ಅವರದೇ ಆದ ಸ್ವಾತಂತ್ರ್ಯ ಇರುತ್ತದೆ ಅದನ್ನು ಪ್ರಶ್ನೆ ಮಾಡುವ ಹಕ್ಕು ಸಂಸದರಿಗೆ ಇಲ್ಲ ಎಂದು ಬಿಜೆಪಿ ಸಂಸದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಸಂಸದರ ವರ್ತನೆಯನ್ನು ಖಂಡಿಸಿರುವ ಕಾಂಗ್ರೆಸ್, ಇಂತಹ ಘಟನೆಗಳು ಬಿಜೆಪಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ. “ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ” ಎಂದು ಬಿಜೆಪಿ ಸಂಸದ ಮುನಿಸ್ವಾಮಿ ಮಹಿಳೆಗೆ ಅವಮಾನಿಸಿದ್ದು ಬಿಜೆಪಿಯ ಮಹಿಳಾ ವಿರೋಧಿ ನೀತಿಗೆ ಸಾಕ್ಷಿ. ಮಹಿಳೆಯರ ಸ್ವತಂತ್ರ ಕಸಿಯಲು, ಅವರ ಉಡುಗೆ ತೊಡುಗೆ ನಿರ್ಧರಿಸಲು ಬಿಜೆಪಿಗೆ ಯಾವ ಹಕ್ಕಿದೆ? ಮಹಿಳಾ ದಿನದಂದೇ ಮಹಿಳೆಗೆ ಅವಮಾನಿಸಿ ವಿಕೃತಿ ಮೆರೆದಿದೆ! ಎಂದು ಟ್ವೀಟ್ ಮಾಡಿದೆ.

ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ರೋಶ ಹೊರಹಾಕಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...