Homeಕರ್ನಾಟಕ'ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ': ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

‘ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ’: ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

- Advertisement -
- Advertisement -

ಮಹಿಳಾ ದಿನಾಚರಣೆಯಂದೇ (Women’s Day) ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಅವರು, ಮಹಿಳೆಯೊಬ್ಬರ ಮೇಲೆ ಕೂಗಾಡಿ ಅವಮಾನ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮತ್ಯಾಲಪೇಟೆಯಲ್ಲಿ ನಡೆದಿದೆ.

ಕೋಲಾರ ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕೋಲಾರ ಸಂಸದ ಎಸ್.ಮುನಿಸ್ವಾಮಿ ಉದ್ಘಾಟಿಸಿದರು. ಈ ಕಾರ್ಯಕ್ರಮದ ಪ್ರಯುಕ್ತ ಸುಜಾತಾ ಎಂಬವರು ಮಾರಾಟ ಮಳಿಗೆ ತೆರೆದಿದ್ದರು. ಅವರು ಹಣೆಗೆ ಕುಂಕುಮ ಧರಿಸಿಲ್ಲವೆಂದು ಅವರ ವಿರುದ್ಧ ಸಂಸದ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಮಹಿಳೆಗೆ ಸಂಸದರು ಅವಮಾನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಸಂಸದರು ಹಾಗೂ ಅವರ ಬೆಂಬಲಿಗರು ಮಳಿಗೆಯ ಮುಂದೆ ನಿಂತು ಅವಮಾನಿಸಿದ್ದು, ”ಏನಮ್ಮ ನಿನ್ನ ಹೆಸರು, ಹಣೆಗೆ ಯಾಕೆ ಕುಂಕುಮ ಹಾಕಿಲ್ಲ? ಹಣ ಕೊಟ್ಟು ಬಲವಂತವಾಗಿ ಮತಾಂತರ ಮಾಡಿದ್ದಾರೆ ಅಲ್ಲವಾ? ವೈಷ್ಣವಿ ಎಂಬುದಾಗಿ ಅಂಗಡಿ ಹೆಸರನ್ನು ಯಾಕೆ ಇಟ್ಟುಕೊಂಡಿದ್ದೀಯಾ? ಎಂದು ವ್ಯಕ್ತಿ ಸ್ವಾತಂತ್ರ್ಯವನ್ನೇ ಪ್ರಶ್ನಿಸಿದ್ದಾರೆ. ಈ ವೇಳೆ ಶಾಸಕ ಶ್ರೀನಿವಾಸಗೌಡ ತಡೆದರೂ ಸುಮ್ಮನಿರದ ಮುನಿಸ್ವಾಮಿ ಕೂಗಾಡಿದ್ದಾರೆ. ಪರಿಷತ್ ಸದಸ್ಯ ಗೋವಿಂದರಾಜು ಕೂಡ ಸಮಾಧಾನಿಸಲು ಯತ್ನಿಸಿದ್ದಾರೆ. ಆದರೆ, ಯಾರ ಮಾತಿನಿಂದಲೂ ಮುನಿಸ್ವಾಮಿ ಸಿಟ್ಟು ತಣ್ಣಗಾಗಿಲ್ಲ.”

”ಮುಂದುವರಿದು, ಯಾರೊ ಕಾಸು ಕೊಡುತ್ತಾರೆ ಅಂತ ಸುಜಾತ ಅಂತ ಹೆಸರು ಇಟ್ಟುಕೊಂಡಿದ್ದೀಯಾ? ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್ ಸೆನ್ಸ್ ಇಲ್ಲ. ತಂದೆ ಹೆಸರು ಬದಲಾಯಿಸುತ್ತೀಯಾ ನೀನು? ಅದನ್ನೆಲ್ಲ ಇಟ್ಟುಕೊಳ್ಳುವುದಕ್ಕೆ ಯೋಗ್ಯತೆ ಇಲ್ಲ ನಿನಗೆ..” ಎಂದು ಏಕವಚನದಲ್ಲೇ ಸಂಸದರು ಹರಿಹಾಯ್ದಿದ್ದಾರೆ. ಈ ವೇಳೆ, ಸಂಸದರಿಗೆ ಉತ್ತರಿಸಲಾಗದೆ ಮಹಿಳೆ ತಡಬಡಾಯಿಸಿದ್ದಾರೆ.

ಇದನ್ನೂ ಓದಿ: ಲಂಚಾರೋಪಿ ಮಾಡಾಳ್‌ಗೆ ಜಾಮೀನು ವಿಚಾರ: ವಕೀಲರ ಸಂಘದಿಂದ ತೀವ್ರ ಕಳವಳ ವ್ಯಕ್ತ; ಸಿಜೆಐಗೆ ಪತ್ರ

ಸಂಸದರು ಮಹಿಳೆಯನ್ನು ತರಾಟೆಗೆ ತೆಗದುಕೊಳ್ಳುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂಸದರ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯರಿಗೆ ಅವರ ಉಡುಗೆತೊಡುಗೆ ವಿಚಾರದಲ್ಲಿ ಅವರದೇ ಆದ ಸ್ವಾತಂತ್ರ್ಯ ಇರುತ್ತದೆ ಅದನ್ನು ಪ್ರಶ್ನೆ ಮಾಡುವ ಹಕ್ಕು ಸಂಸದರಿಗೆ ಇಲ್ಲ ಎಂದು ಬಿಜೆಪಿ ಸಂಸದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಸಂಸದರ ವರ್ತನೆಯನ್ನು ಖಂಡಿಸಿರುವ ಕಾಂಗ್ರೆಸ್, ಇಂತಹ ಘಟನೆಗಳು ಬಿಜೆಪಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ. “ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ” ಎಂದು ಬಿಜೆಪಿ ಸಂಸದ ಮುನಿಸ್ವಾಮಿ ಮಹಿಳೆಗೆ ಅವಮಾನಿಸಿದ್ದು ಬಿಜೆಪಿಯ ಮಹಿಳಾ ವಿರೋಧಿ ನೀತಿಗೆ ಸಾಕ್ಷಿ. ಮಹಿಳೆಯರ ಸ್ವತಂತ್ರ ಕಸಿಯಲು, ಅವರ ಉಡುಗೆ ತೊಡುಗೆ ನಿರ್ಧರಿಸಲು ಬಿಜೆಪಿಗೆ ಯಾವ ಹಕ್ಕಿದೆ? ಮಹಿಳಾ ದಿನದಂದೇ ಮಹಿಳೆಗೆ ಅವಮಾನಿಸಿ ವಿಕೃತಿ ಮೆರೆದಿದೆ! ಎಂದು ಟ್ವೀಟ್ ಮಾಡಿದೆ.

ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ರೋಶ ಹೊರಹಾಕಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...