Homeಮುಖಪುಟಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು...!

ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

- Advertisement -
- Advertisement -

ಭಾರತವು ಹಲವಾರು ರಾಜಕೀಯ ನಿರ್ಧಾರದಿಂದಾಗಿ ಮೊದಲೇ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿತ್ತು. ಏಕಾಏಕಿ ಎರಗಿದ ಕೊರೊನಾದಿಂದಾಗಿ ಈ ಆರ್ಥಿಕ ಮುಗ್ಗಟ್ಟು ಇನ್ನೂ ತೀವ್ರ ರೂಪ ಪಡೆದುಕೊಂಡಿದೆ. ಈ ಹಿಂದಿನಿಂದಲೂ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ದೂರುಗಳಿದ್ದವು. ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಇದನ್ನು ಬಹಿರಂಗವಾಗಿಯೆ ಹೇಳಿದ್ದರು.

ಕೊರೊನಾ ಲಾಕ್ ಡೌನ್ ನಂತರ ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನಿಲುಗಡೆಯಾದ್ದರಿಂದ ಆರ್ಥಿಕತೆಯೂ ಒಂದು ಹಂತಕ್ಕೆ ನಿಂತೆ ಹೋಗಿತ್ತು. ಒಂದು ಕಡೆ ಕೊರೊನಾ ಭಯ ಹಾಗೂ ಇನ್ನೊಂದು ಕಡೆ ಆರ್ಥಿಕ ಬಿಕ್ಕಟ್ಟಿನಿಂದ ರಾಜ್ಯ ಸರ್ಕಾರಗಳು ನಲುಗಿ ಹೋಗಿವೆ.

ಇದಕ್ಕಾಗಿಯೇ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಲಾಕ್ ಡೌನ್ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಒಂದು ಹಂತದಲ್ಲಿ ಪ್ರಭುತ್ವದ ಖಜಾನೆ ತುಂಬಿಸುವ ‘ಮದ್ಯ’ ಮಾರಾಟಕ್ಕೆ ತುರಾತುರಿಯಲ್ಲಿ ಅವಕಾಶ ನೀಡಲಾಯಿತು.

ಮದ್ಯ ನಿಷೇದಕ್ಕೆ ಇದು ಸರಿಯಾದ ಕಾಲ ಎಂದು ಹಲವಾರು ಕಡೆಯಿಂದ ಸಲಹೆಗಳು ಬಂದವು ಹಾಗೂ ಸರ್ಕಾರದ ಈ ಮದ್ಯ ಮಾರಾಟಕ್ಕೆ ಎಲ್ಲೆಡೆ ವಿರೋಧವೂ ವ್ಯಕ್ತವಾಯಿತು. ಆದರೆ ತನ್ನ ಖಜಾನೆ ತುಂಬಿಸುವ ಈ ದಾರಿಯನ್ನು ಸರ್ಕಾರ ಯಾವುದೇ ಕಾರಣಕ್ಕೆ ಬಿಟ್ಟುಕೊಡುವ ಮಾತನ್ನು ಎತ್ತಲೇ ಇಲ್ಲ. ತನ್ನ ಆದಾಯದ ಪ್ರಮುಖ ಪಾಲು ತುಂಬುವ ಈ ಮೂಲವನ್ನು ಬೇಡವೆನ್ನಲು ಯಾವ ರಾಜ್ಯಗಳೂ ಹೋಗಲಿಲ್ಲ.

ಆದರೆ ವಿಪರ್ಯಾಸವಿರುವುದು ರಾಜ್ಯಗಳನ್ನು ಆಳುತ್ತಿರುವ ವಿವಿದ ರಾಜಕೀಯ ಪಕ್ಷಗಳ ನಡೆಗಳ ಮೇಲೆ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಆಡಳಿತವಿರುವ ರಾಜ್ಯಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುತ್ತದೆ ಇನ್ನೋಂದೆಡೆ ವಿರೋಧ ಪಕ್ಷಗಳ ಸ್ಥಾನದಲ್ಲಿರುವ ರಾಜ್ಯಗಳಲ್ಲಿ ಅದೇ ಪಕ್ಷಗಳು ವಿರೋಧವನ್ನೂ ಮಾಡುತ್ತದೆ. ಈ ಬಗ್ಗೆ ಪತ್ರಕರ್ತರಾದ ರಾಜ್ ದೀಪ್ ಸರ್ದೇಸಾಯಿ ಟ್ವೀಟ್ ಮಾಡಿ ರಾಜಕೀಯ ಪಕ್ಷಗಳಲ್ಲಿ ಇರುವ ದ್ವಂದ್ವತೆಯನ್ನು ಎತ್ತಿ ತೋರಿಸಿದ್ದರು.

ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆಯುತ್ತದೆ, ವಿರೋಧ ಪಕ್ಷವಾದ ಬಿಜೆಪಿ ವಿರೋಧಿಸುತ್ತದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ವಿರೋಧಿಸುತ್ತದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಸರ್ಕಾರ ತೆರೆಯುತ್ತದೆ ಎಎಪಿ ವಿರೋಧಿಸುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಸರ್ಕಾರ ತೆರೆಯುತ್ತದೆ, ಬಿಜೆಪಿ ವಿರೋಧಿಸುತ್ತದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ಅದನ್ನು ವಿರೋಧಿಸುತ್ತದೆ. ಮದ್ಯ ಕೂಡಾ ರಾಜಕೀಯದಂತೆ ಶಾಶ್ವತ ಸ್ನೇಹಿತರು ಅಥವಾ ಶತ್ರುಗಳನ್ನು ಹೊಂದಿಲ್ಲ, ಎಂದು ಪತ್ರಕರ್ತ ರಾಜ್‌ದೀಪ್‌ ಟ್ವಿಟ್ಟರ್‌ನಲ್ಲಿ ರಾಜಕೀಯ ಪಕ್ಷದ ದ್ವಂದ್ವದ ಬಗ್ಗೆ ಹೇಳಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸಮಯದಲ್ಲಿ ರಾಜಕೀಯ ಚಡುವಟಿಕೆ ಕೂಡಾ ಗರಿಗೆದರಿದೆ ಎಂದು ಕೂಡಾ ಹೇಳಬಹುದು. ಮದ್ಯದ ವಿಷಯದಲ್ಲಿ ಯಾವ ರಾಜಕೀಯ ಪಕ್ಷಗಳೂ ಸರಿಯಾದ ನಿಲುವನ್ನು ಹೊಂದಿಲ್ಲ. ಜನರ ಆರೋಗ್ಯದ ಹೊರತಾಗಿ ಅದೊಂದು ಆದಾಯದ ಮೂಲ, ಅದನ್ನು ಕಳೆದು ಕೊಳ್ಳಲು ಯಾವ ಸರ್ಕಾರಗಳೂ ತಯಾರಾಗಿಲ್ಲ.

ಇದೇ ಸಂದರ್ಭದಲ್ಲಿ ಮದ್ಯ ಪಾನ ಮಾಡುವುದರಿಂದ ಕೊರೊನಾ ಕೊಲ್ಲಬಹುದು ಎಂದ ಸುಳ್ಳು ಸಂದೇಶ ಎಲ್ಲೆಡೆ ಹರಡುತ್ತಿದೆ. ಈ ಕುರಿತು ಡಬ್ಲುಎಚ್‌ಓ ಸ್ಪಷ್ಟನೆ ನೀಡಿದ್ದು ಅದು ಸಂಪೂರ್ಣ ಸುಳ್ಳು ಎಂದಿದೆ. ಕೊರೊನಾ ವಿರುದ್ಧ ಹೋರಾಡಲು ಮನುಷ್ಯರು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಬೇಕು. ರೋಗ ನಿರೋಧಕ ಶಕ್ತಿ ಹೊಂದಿರಬೇಕು. ಮದ್ಯ ಪಾನ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಮದ್ಯಪಾನದಿಂದ ದೂರ ಇರಬೇಕೆಂದು WHO ಸಲಹೆ ನೀಡಿದೆ.


ಓದಿ: ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...