Homeಮುಖಪುಟಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು...!

ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

- Advertisement -
- Advertisement -

ಭಾರತವು ಹಲವಾರು ರಾಜಕೀಯ ನಿರ್ಧಾರದಿಂದಾಗಿ ಮೊದಲೇ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿತ್ತು. ಏಕಾಏಕಿ ಎರಗಿದ ಕೊರೊನಾದಿಂದಾಗಿ ಈ ಆರ್ಥಿಕ ಮುಗ್ಗಟ್ಟು ಇನ್ನೂ ತೀವ್ರ ರೂಪ ಪಡೆದುಕೊಂಡಿದೆ. ಈ ಹಿಂದಿನಿಂದಲೂ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ದೂರುಗಳಿದ್ದವು. ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಇದನ್ನು ಬಹಿರಂಗವಾಗಿಯೆ ಹೇಳಿದ್ದರು.

ಕೊರೊನಾ ಲಾಕ್ ಡೌನ್ ನಂತರ ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನಿಲುಗಡೆಯಾದ್ದರಿಂದ ಆರ್ಥಿಕತೆಯೂ ಒಂದು ಹಂತಕ್ಕೆ ನಿಂತೆ ಹೋಗಿತ್ತು. ಒಂದು ಕಡೆ ಕೊರೊನಾ ಭಯ ಹಾಗೂ ಇನ್ನೊಂದು ಕಡೆ ಆರ್ಥಿಕ ಬಿಕ್ಕಟ್ಟಿನಿಂದ ರಾಜ್ಯ ಸರ್ಕಾರಗಳು ನಲುಗಿ ಹೋಗಿವೆ.

ಇದಕ್ಕಾಗಿಯೇ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಲಾಕ್ ಡೌನ್ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಒಂದು ಹಂತದಲ್ಲಿ ಪ್ರಭುತ್ವದ ಖಜಾನೆ ತುಂಬಿಸುವ ‘ಮದ್ಯ’ ಮಾರಾಟಕ್ಕೆ ತುರಾತುರಿಯಲ್ಲಿ ಅವಕಾಶ ನೀಡಲಾಯಿತು.

ಮದ್ಯ ನಿಷೇದಕ್ಕೆ ಇದು ಸರಿಯಾದ ಕಾಲ ಎಂದು ಹಲವಾರು ಕಡೆಯಿಂದ ಸಲಹೆಗಳು ಬಂದವು ಹಾಗೂ ಸರ್ಕಾರದ ಈ ಮದ್ಯ ಮಾರಾಟಕ್ಕೆ ಎಲ್ಲೆಡೆ ವಿರೋಧವೂ ವ್ಯಕ್ತವಾಯಿತು. ಆದರೆ ತನ್ನ ಖಜಾನೆ ತುಂಬಿಸುವ ಈ ದಾರಿಯನ್ನು ಸರ್ಕಾರ ಯಾವುದೇ ಕಾರಣಕ್ಕೆ ಬಿಟ್ಟುಕೊಡುವ ಮಾತನ್ನು ಎತ್ತಲೇ ಇಲ್ಲ. ತನ್ನ ಆದಾಯದ ಪ್ರಮುಖ ಪಾಲು ತುಂಬುವ ಈ ಮೂಲವನ್ನು ಬೇಡವೆನ್ನಲು ಯಾವ ರಾಜ್ಯಗಳೂ ಹೋಗಲಿಲ್ಲ.

ಆದರೆ ವಿಪರ್ಯಾಸವಿರುವುದು ರಾಜ್ಯಗಳನ್ನು ಆಳುತ್ತಿರುವ ವಿವಿದ ರಾಜಕೀಯ ಪಕ್ಷಗಳ ನಡೆಗಳ ಮೇಲೆ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಆಡಳಿತವಿರುವ ರಾಜ್ಯಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುತ್ತದೆ ಇನ್ನೋಂದೆಡೆ ವಿರೋಧ ಪಕ್ಷಗಳ ಸ್ಥಾನದಲ್ಲಿರುವ ರಾಜ್ಯಗಳಲ್ಲಿ ಅದೇ ಪಕ್ಷಗಳು ವಿರೋಧವನ್ನೂ ಮಾಡುತ್ತದೆ. ಈ ಬಗ್ಗೆ ಪತ್ರಕರ್ತರಾದ ರಾಜ್ ದೀಪ್ ಸರ್ದೇಸಾಯಿ ಟ್ವೀಟ್ ಮಾಡಿ ರಾಜಕೀಯ ಪಕ್ಷಗಳಲ್ಲಿ ಇರುವ ದ್ವಂದ್ವತೆಯನ್ನು ಎತ್ತಿ ತೋರಿಸಿದ್ದರು.

ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆಯುತ್ತದೆ, ವಿರೋಧ ಪಕ್ಷವಾದ ಬಿಜೆಪಿ ವಿರೋಧಿಸುತ್ತದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ವಿರೋಧಿಸುತ್ತದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಸರ್ಕಾರ ತೆರೆಯುತ್ತದೆ ಎಎಪಿ ವಿರೋಧಿಸುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಸರ್ಕಾರ ತೆರೆಯುತ್ತದೆ, ಬಿಜೆಪಿ ವಿರೋಧಿಸುತ್ತದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ಅದನ್ನು ವಿರೋಧಿಸುತ್ತದೆ. ಮದ್ಯ ಕೂಡಾ ರಾಜಕೀಯದಂತೆ ಶಾಶ್ವತ ಸ್ನೇಹಿತರು ಅಥವಾ ಶತ್ರುಗಳನ್ನು ಹೊಂದಿಲ್ಲ, ಎಂದು ಪತ್ರಕರ್ತ ರಾಜ್‌ದೀಪ್‌ ಟ್ವಿಟ್ಟರ್‌ನಲ್ಲಿ ರಾಜಕೀಯ ಪಕ್ಷದ ದ್ವಂದ್ವದ ಬಗ್ಗೆ ಹೇಳಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸಮಯದಲ್ಲಿ ರಾಜಕೀಯ ಚಡುವಟಿಕೆ ಕೂಡಾ ಗರಿಗೆದರಿದೆ ಎಂದು ಕೂಡಾ ಹೇಳಬಹುದು. ಮದ್ಯದ ವಿಷಯದಲ್ಲಿ ಯಾವ ರಾಜಕೀಯ ಪಕ್ಷಗಳೂ ಸರಿಯಾದ ನಿಲುವನ್ನು ಹೊಂದಿಲ್ಲ. ಜನರ ಆರೋಗ್ಯದ ಹೊರತಾಗಿ ಅದೊಂದು ಆದಾಯದ ಮೂಲ, ಅದನ್ನು ಕಳೆದು ಕೊಳ್ಳಲು ಯಾವ ಸರ್ಕಾರಗಳೂ ತಯಾರಾಗಿಲ್ಲ.

ಇದೇ ಸಂದರ್ಭದಲ್ಲಿ ಮದ್ಯ ಪಾನ ಮಾಡುವುದರಿಂದ ಕೊರೊನಾ ಕೊಲ್ಲಬಹುದು ಎಂದ ಸುಳ್ಳು ಸಂದೇಶ ಎಲ್ಲೆಡೆ ಹರಡುತ್ತಿದೆ. ಈ ಕುರಿತು ಡಬ್ಲುಎಚ್‌ಓ ಸ್ಪಷ್ಟನೆ ನೀಡಿದ್ದು ಅದು ಸಂಪೂರ್ಣ ಸುಳ್ಳು ಎಂದಿದೆ. ಕೊರೊನಾ ವಿರುದ್ಧ ಹೋರಾಡಲು ಮನುಷ್ಯರು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಬೇಕು. ರೋಗ ನಿರೋಧಕ ಶಕ್ತಿ ಹೊಂದಿರಬೇಕು. ಮದ್ಯ ಪಾನ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಮದ್ಯಪಾನದಿಂದ ದೂರ ಇರಬೇಕೆಂದು WHO ಸಲಹೆ ನೀಡಿದೆ.


ಓದಿ: ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...