Homeಮುಖಪುಟಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು...!

ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

- Advertisement -
- Advertisement -

ಭಾರತವು ಹಲವಾರು ರಾಜಕೀಯ ನಿರ್ಧಾರದಿಂದಾಗಿ ಮೊದಲೇ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿತ್ತು. ಏಕಾಏಕಿ ಎರಗಿದ ಕೊರೊನಾದಿಂದಾಗಿ ಈ ಆರ್ಥಿಕ ಮುಗ್ಗಟ್ಟು ಇನ್ನೂ ತೀವ್ರ ರೂಪ ಪಡೆದುಕೊಂಡಿದೆ. ಈ ಹಿಂದಿನಿಂದಲೂ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ದೂರುಗಳಿದ್ದವು. ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಇದನ್ನು ಬಹಿರಂಗವಾಗಿಯೆ ಹೇಳಿದ್ದರು.

ಕೊರೊನಾ ಲಾಕ್ ಡೌನ್ ನಂತರ ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನಿಲುಗಡೆಯಾದ್ದರಿಂದ ಆರ್ಥಿಕತೆಯೂ ಒಂದು ಹಂತಕ್ಕೆ ನಿಂತೆ ಹೋಗಿತ್ತು. ಒಂದು ಕಡೆ ಕೊರೊನಾ ಭಯ ಹಾಗೂ ಇನ್ನೊಂದು ಕಡೆ ಆರ್ಥಿಕ ಬಿಕ್ಕಟ್ಟಿನಿಂದ ರಾಜ್ಯ ಸರ್ಕಾರಗಳು ನಲುಗಿ ಹೋಗಿವೆ.

ಇದಕ್ಕಾಗಿಯೇ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಲಾಕ್ ಡೌನ್ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಒಂದು ಹಂತದಲ್ಲಿ ಪ್ರಭುತ್ವದ ಖಜಾನೆ ತುಂಬಿಸುವ ‘ಮದ್ಯ’ ಮಾರಾಟಕ್ಕೆ ತುರಾತುರಿಯಲ್ಲಿ ಅವಕಾಶ ನೀಡಲಾಯಿತು.

ಮದ್ಯ ನಿಷೇದಕ್ಕೆ ಇದು ಸರಿಯಾದ ಕಾಲ ಎಂದು ಹಲವಾರು ಕಡೆಯಿಂದ ಸಲಹೆಗಳು ಬಂದವು ಹಾಗೂ ಸರ್ಕಾರದ ಈ ಮದ್ಯ ಮಾರಾಟಕ್ಕೆ ಎಲ್ಲೆಡೆ ವಿರೋಧವೂ ವ್ಯಕ್ತವಾಯಿತು. ಆದರೆ ತನ್ನ ಖಜಾನೆ ತುಂಬಿಸುವ ಈ ದಾರಿಯನ್ನು ಸರ್ಕಾರ ಯಾವುದೇ ಕಾರಣಕ್ಕೆ ಬಿಟ್ಟುಕೊಡುವ ಮಾತನ್ನು ಎತ್ತಲೇ ಇಲ್ಲ. ತನ್ನ ಆದಾಯದ ಪ್ರಮುಖ ಪಾಲು ತುಂಬುವ ಈ ಮೂಲವನ್ನು ಬೇಡವೆನ್ನಲು ಯಾವ ರಾಜ್ಯಗಳೂ ಹೋಗಲಿಲ್ಲ.

ಆದರೆ ವಿಪರ್ಯಾಸವಿರುವುದು ರಾಜ್ಯಗಳನ್ನು ಆಳುತ್ತಿರುವ ವಿವಿದ ರಾಜಕೀಯ ಪಕ್ಷಗಳ ನಡೆಗಳ ಮೇಲೆ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಆಡಳಿತವಿರುವ ರಾಜ್ಯಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುತ್ತದೆ ಇನ್ನೋಂದೆಡೆ ವಿರೋಧ ಪಕ್ಷಗಳ ಸ್ಥಾನದಲ್ಲಿರುವ ರಾಜ್ಯಗಳಲ್ಲಿ ಅದೇ ಪಕ್ಷಗಳು ವಿರೋಧವನ್ನೂ ಮಾಡುತ್ತದೆ. ಈ ಬಗ್ಗೆ ಪತ್ರಕರ್ತರಾದ ರಾಜ್ ದೀಪ್ ಸರ್ದೇಸಾಯಿ ಟ್ವೀಟ್ ಮಾಡಿ ರಾಜಕೀಯ ಪಕ್ಷಗಳಲ್ಲಿ ಇರುವ ದ್ವಂದ್ವತೆಯನ್ನು ಎತ್ತಿ ತೋರಿಸಿದ್ದರು.

ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆಯುತ್ತದೆ, ವಿರೋಧ ಪಕ್ಷವಾದ ಬಿಜೆಪಿ ವಿರೋಧಿಸುತ್ತದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ವಿರೋಧಿಸುತ್ತದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಸರ್ಕಾರ ತೆರೆಯುತ್ತದೆ ಎಎಪಿ ವಿರೋಧಿಸುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಸರ್ಕಾರ ತೆರೆಯುತ್ತದೆ, ಬಿಜೆಪಿ ವಿರೋಧಿಸುತ್ತದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ಅದನ್ನು ವಿರೋಧಿಸುತ್ತದೆ. ಮದ್ಯ ಕೂಡಾ ರಾಜಕೀಯದಂತೆ ಶಾಶ್ವತ ಸ್ನೇಹಿತರು ಅಥವಾ ಶತ್ರುಗಳನ್ನು ಹೊಂದಿಲ್ಲ, ಎಂದು ಪತ್ರಕರ್ತ ರಾಜ್‌ದೀಪ್‌ ಟ್ವಿಟ್ಟರ್‌ನಲ್ಲಿ ರಾಜಕೀಯ ಪಕ್ಷದ ದ್ವಂದ್ವದ ಬಗ್ಗೆ ಹೇಳಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸಮಯದಲ್ಲಿ ರಾಜಕೀಯ ಚಡುವಟಿಕೆ ಕೂಡಾ ಗರಿಗೆದರಿದೆ ಎಂದು ಕೂಡಾ ಹೇಳಬಹುದು. ಮದ್ಯದ ವಿಷಯದಲ್ಲಿ ಯಾವ ರಾಜಕೀಯ ಪಕ್ಷಗಳೂ ಸರಿಯಾದ ನಿಲುವನ್ನು ಹೊಂದಿಲ್ಲ. ಜನರ ಆರೋಗ್ಯದ ಹೊರತಾಗಿ ಅದೊಂದು ಆದಾಯದ ಮೂಲ, ಅದನ್ನು ಕಳೆದು ಕೊಳ್ಳಲು ಯಾವ ಸರ್ಕಾರಗಳೂ ತಯಾರಾಗಿಲ್ಲ.

ಇದೇ ಸಂದರ್ಭದಲ್ಲಿ ಮದ್ಯ ಪಾನ ಮಾಡುವುದರಿಂದ ಕೊರೊನಾ ಕೊಲ್ಲಬಹುದು ಎಂದ ಸುಳ್ಳು ಸಂದೇಶ ಎಲ್ಲೆಡೆ ಹರಡುತ್ತಿದೆ. ಈ ಕುರಿತು ಡಬ್ಲುಎಚ್‌ಓ ಸ್ಪಷ್ಟನೆ ನೀಡಿದ್ದು ಅದು ಸಂಪೂರ್ಣ ಸುಳ್ಳು ಎಂದಿದೆ. ಕೊರೊನಾ ವಿರುದ್ಧ ಹೋರಾಡಲು ಮನುಷ್ಯರು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಬೇಕು. ರೋಗ ನಿರೋಧಕ ಶಕ್ತಿ ಹೊಂದಿರಬೇಕು. ಮದ್ಯ ಪಾನ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಮದ್ಯಪಾನದಿಂದ ದೂರ ಇರಬೇಕೆಂದು WHO ಸಲಹೆ ನೀಡಿದೆ.


ಓದಿ: ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....