Homeಮುಖಪುಟಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು...!

ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

- Advertisement -
- Advertisement -

ಭಾರತವು ಹಲವಾರು ರಾಜಕೀಯ ನಿರ್ಧಾರದಿಂದಾಗಿ ಮೊದಲೇ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿತ್ತು. ಏಕಾಏಕಿ ಎರಗಿದ ಕೊರೊನಾದಿಂದಾಗಿ ಈ ಆರ್ಥಿಕ ಮುಗ್ಗಟ್ಟು ಇನ್ನೂ ತೀವ್ರ ರೂಪ ಪಡೆದುಕೊಂಡಿದೆ. ಈ ಹಿಂದಿನಿಂದಲೂ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ದೂರುಗಳಿದ್ದವು. ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಇದನ್ನು ಬಹಿರಂಗವಾಗಿಯೆ ಹೇಳಿದ್ದರು.

ಕೊರೊನಾ ಲಾಕ್ ಡೌನ್ ನಂತರ ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನಿಲುಗಡೆಯಾದ್ದರಿಂದ ಆರ್ಥಿಕತೆಯೂ ಒಂದು ಹಂತಕ್ಕೆ ನಿಂತೆ ಹೋಗಿತ್ತು. ಒಂದು ಕಡೆ ಕೊರೊನಾ ಭಯ ಹಾಗೂ ಇನ್ನೊಂದು ಕಡೆ ಆರ್ಥಿಕ ಬಿಕ್ಕಟ್ಟಿನಿಂದ ರಾಜ್ಯ ಸರ್ಕಾರಗಳು ನಲುಗಿ ಹೋಗಿವೆ.

ಇದಕ್ಕಾಗಿಯೇ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಲಾಕ್ ಡೌನ್ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಒಂದು ಹಂತದಲ್ಲಿ ಪ್ರಭುತ್ವದ ಖಜಾನೆ ತುಂಬಿಸುವ ‘ಮದ್ಯ’ ಮಾರಾಟಕ್ಕೆ ತುರಾತುರಿಯಲ್ಲಿ ಅವಕಾಶ ನೀಡಲಾಯಿತು.

ಮದ್ಯ ನಿಷೇದಕ್ಕೆ ಇದು ಸರಿಯಾದ ಕಾಲ ಎಂದು ಹಲವಾರು ಕಡೆಯಿಂದ ಸಲಹೆಗಳು ಬಂದವು ಹಾಗೂ ಸರ್ಕಾರದ ಈ ಮದ್ಯ ಮಾರಾಟಕ್ಕೆ ಎಲ್ಲೆಡೆ ವಿರೋಧವೂ ವ್ಯಕ್ತವಾಯಿತು. ಆದರೆ ತನ್ನ ಖಜಾನೆ ತುಂಬಿಸುವ ಈ ದಾರಿಯನ್ನು ಸರ್ಕಾರ ಯಾವುದೇ ಕಾರಣಕ್ಕೆ ಬಿಟ್ಟುಕೊಡುವ ಮಾತನ್ನು ಎತ್ತಲೇ ಇಲ್ಲ. ತನ್ನ ಆದಾಯದ ಪ್ರಮುಖ ಪಾಲು ತುಂಬುವ ಈ ಮೂಲವನ್ನು ಬೇಡವೆನ್ನಲು ಯಾವ ರಾಜ್ಯಗಳೂ ಹೋಗಲಿಲ್ಲ.

ಆದರೆ ವಿಪರ್ಯಾಸವಿರುವುದು ರಾಜ್ಯಗಳನ್ನು ಆಳುತ್ತಿರುವ ವಿವಿದ ರಾಜಕೀಯ ಪಕ್ಷಗಳ ನಡೆಗಳ ಮೇಲೆ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಆಡಳಿತವಿರುವ ರಾಜ್ಯಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುತ್ತದೆ ಇನ್ನೋಂದೆಡೆ ವಿರೋಧ ಪಕ್ಷಗಳ ಸ್ಥಾನದಲ್ಲಿರುವ ರಾಜ್ಯಗಳಲ್ಲಿ ಅದೇ ಪಕ್ಷಗಳು ವಿರೋಧವನ್ನೂ ಮಾಡುತ್ತದೆ. ಈ ಬಗ್ಗೆ ಪತ್ರಕರ್ತರಾದ ರಾಜ್ ದೀಪ್ ಸರ್ದೇಸಾಯಿ ಟ್ವೀಟ್ ಮಾಡಿ ರಾಜಕೀಯ ಪಕ್ಷಗಳಲ್ಲಿ ಇರುವ ದ್ವಂದ್ವತೆಯನ್ನು ಎತ್ತಿ ತೋರಿಸಿದ್ದರು.

ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆಯುತ್ತದೆ, ವಿರೋಧ ಪಕ್ಷವಾದ ಬಿಜೆಪಿ ವಿರೋಧಿಸುತ್ತದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ವಿರೋಧಿಸುತ್ತದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಸರ್ಕಾರ ತೆರೆಯುತ್ತದೆ ಎಎಪಿ ವಿರೋಧಿಸುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಸರ್ಕಾರ ತೆರೆಯುತ್ತದೆ, ಬಿಜೆಪಿ ವಿರೋಧಿಸುತ್ತದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ಅದನ್ನು ವಿರೋಧಿಸುತ್ತದೆ. ಮದ್ಯ ಕೂಡಾ ರಾಜಕೀಯದಂತೆ ಶಾಶ್ವತ ಸ್ನೇಹಿತರು ಅಥವಾ ಶತ್ರುಗಳನ್ನು ಹೊಂದಿಲ್ಲ, ಎಂದು ಪತ್ರಕರ್ತ ರಾಜ್‌ದೀಪ್‌ ಟ್ವಿಟ್ಟರ್‌ನಲ್ಲಿ ರಾಜಕೀಯ ಪಕ್ಷದ ದ್ವಂದ್ವದ ಬಗ್ಗೆ ಹೇಳಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸಮಯದಲ್ಲಿ ರಾಜಕೀಯ ಚಡುವಟಿಕೆ ಕೂಡಾ ಗರಿಗೆದರಿದೆ ಎಂದು ಕೂಡಾ ಹೇಳಬಹುದು. ಮದ್ಯದ ವಿಷಯದಲ್ಲಿ ಯಾವ ರಾಜಕೀಯ ಪಕ್ಷಗಳೂ ಸರಿಯಾದ ನಿಲುವನ್ನು ಹೊಂದಿಲ್ಲ. ಜನರ ಆರೋಗ್ಯದ ಹೊರತಾಗಿ ಅದೊಂದು ಆದಾಯದ ಮೂಲ, ಅದನ್ನು ಕಳೆದು ಕೊಳ್ಳಲು ಯಾವ ಸರ್ಕಾರಗಳೂ ತಯಾರಾಗಿಲ್ಲ.

ಇದೇ ಸಂದರ್ಭದಲ್ಲಿ ಮದ್ಯ ಪಾನ ಮಾಡುವುದರಿಂದ ಕೊರೊನಾ ಕೊಲ್ಲಬಹುದು ಎಂದ ಸುಳ್ಳು ಸಂದೇಶ ಎಲ್ಲೆಡೆ ಹರಡುತ್ತಿದೆ. ಈ ಕುರಿತು ಡಬ್ಲುಎಚ್‌ಓ ಸ್ಪಷ್ಟನೆ ನೀಡಿದ್ದು ಅದು ಸಂಪೂರ್ಣ ಸುಳ್ಳು ಎಂದಿದೆ. ಕೊರೊನಾ ವಿರುದ್ಧ ಹೋರಾಡಲು ಮನುಷ್ಯರು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಬೇಕು. ರೋಗ ನಿರೋಧಕ ಶಕ್ತಿ ಹೊಂದಿರಬೇಕು. ಮದ್ಯ ಪಾನ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಮದ್ಯಪಾನದಿಂದ ದೂರ ಇರಬೇಕೆಂದು WHO ಸಲಹೆ ನೀಡಿದೆ.


ಓದಿ: ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...