Homeಮುಖಪುಟಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು...!

ಮದ್ಯ ಮಾರಾಟ ಹಾಗೂ ರಾಜಕೀಯ ಪಕ್ಷಗಳು ದ್ವಂದ್ವ ನಿಲುವುಗಳು…!

- Advertisement -
- Advertisement -

ಭಾರತವು ಹಲವಾರು ರಾಜಕೀಯ ನಿರ್ಧಾರದಿಂದಾಗಿ ಮೊದಲೇ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿತ್ತು. ಏಕಾಏಕಿ ಎರಗಿದ ಕೊರೊನಾದಿಂದಾಗಿ ಈ ಆರ್ಥಿಕ ಮುಗ್ಗಟ್ಟು ಇನ್ನೂ ತೀವ್ರ ರೂಪ ಪಡೆದುಕೊಂಡಿದೆ. ಈ ಹಿಂದಿನಿಂದಲೂ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ದೂರುಗಳಿದ್ದವು. ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಇದನ್ನು ಬಹಿರಂಗವಾಗಿಯೆ ಹೇಳಿದ್ದರು.

ಕೊರೊನಾ ಲಾಕ್ ಡೌನ್ ನಂತರ ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನಿಲುಗಡೆಯಾದ್ದರಿಂದ ಆರ್ಥಿಕತೆಯೂ ಒಂದು ಹಂತಕ್ಕೆ ನಿಂತೆ ಹೋಗಿತ್ತು. ಒಂದು ಕಡೆ ಕೊರೊನಾ ಭಯ ಹಾಗೂ ಇನ್ನೊಂದು ಕಡೆ ಆರ್ಥಿಕ ಬಿಕ್ಕಟ್ಟಿನಿಂದ ರಾಜ್ಯ ಸರ್ಕಾರಗಳು ನಲುಗಿ ಹೋಗಿವೆ.

ಇದಕ್ಕಾಗಿಯೇ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಲಾಕ್ ಡೌನ್ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಒಂದು ಹಂತದಲ್ಲಿ ಪ್ರಭುತ್ವದ ಖಜಾನೆ ತುಂಬಿಸುವ ‘ಮದ್ಯ’ ಮಾರಾಟಕ್ಕೆ ತುರಾತುರಿಯಲ್ಲಿ ಅವಕಾಶ ನೀಡಲಾಯಿತು.

ಮದ್ಯ ನಿಷೇದಕ್ಕೆ ಇದು ಸರಿಯಾದ ಕಾಲ ಎಂದು ಹಲವಾರು ಕಡೆಯಿಂದ ಸಲಹೆಗಳು ಬಂದವು ಹಾಗೂ ಸರ್ಕಾರದ ಈ ಮದ್ಯ ಮಾರಾಟಕ್ಕೆ ಎಲ್ಲೆಡೆ ವಿರೋಧವೂ ವ್ಯಕ್ತವಾಯಿತು. ಆದರೆ ತನ್ನ ಖಜಾನೆ ತುಂಬಿಸುವ ಈ ದಾರಿಯನ್ನು ಸರ್ಕಾರ ಯಾವುದೇ ಕಾರಣಕ್ಕೆ ಬಿಟ್ಟುಕೊಡುವ ಮಾತನ್ನು ಎತ್ತಲೇ ಇಲ್ಲ. ತನ್ನ ಆದಾಯದ ಪ್ರಮುಖ ಪಾಲು ತುಂಬುವ ಈ ಮೂಲವನ್ನು ಬೇಡವೆನ್ನಲು ಯಾವ ರಾಜ್ಯಗಳೂ ಹೋಗಲಿಲ್ಲ.

ಆದರೆ ವಿಪರ್ಯಾಸವಿರುವುದು ರಾಜ್ಯಗಳನ್ನು ಆಳುತ್ತಿರುವ ವಿವಿದ ರಾಜಕೀಯ ಪಕ್ಷಗಳ ನಡೆಗಳ ಮೇಲೆ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಆಡಳಿತವಿರುವ ರಾಜ್ಯಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುತ್ತದೆ ಇನ್ನೋಂದೆಡೆ ವಿರೋಧ ಪಕ್ಷಗಳ ಸ್ಥಾನದಲ್ಲಿರುವ ರಾಜ್ಯಗಳಲ್ಲಿ ಅದೇ ಪಕ್ಷಗಳು ವಿರೋಧವನ್ನೂ ಮಾಡುತ್ತದೆ. ಈ ಬಗ್ಗೆ ಪತ್ರಕರ್ತರಾದ ರಾಜ್ ದೀಪ್ ಸರ್ದೇಸಾಯಿ ಟ್ವೀಟ್ ಮಾಡಿ ರಾಜಕೀಯ ಪಕ್ಷಗಳಲ್ಲಿ ಇರುವ ದ್ವಂದ್ವತೆಯನ್ನು ಎತ್ತಿ ತೋರಿಸಿದ್ದರು.

ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆಯುತ್ತದೆ, ವಿರೋಧ ಪಕ್ಷವಾದ ಬಿಜೆಪಿ ವಿರೋಧಿಸುತ್ತದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ವಿರೋಧಿಸುತ್ತದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಸರ್ಕಾರ ತೆರೆಯುತ್ತದೆ ಎಎಪಿ ವಿರೋಧಿಸುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಸರ್ಕಾರ ತೆರೆಯುತ್ತದೆ, ಬಿಜೆಪಿ ವಿರೋಧಿಸುತ್ತದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ತೆರೆಯುತ್ತದೆ, ಕಾಂಗ್ರೆಸ್ ಅದನ್ನು ವಿರೋಧಿಸುತ್ತದೆ. ಮದ್ಯ ಕೂಡಾ ರಾಜಕೀಯದಂತೆ ಶಾಶ್ವತ ಸ್ನೇಹಿತರು ಅಥವಾ ಶತ್ರುಗಳನ್ನು ಹೊಂದಿಲ್ಲ, ಎಂದು ಪತ್ರಕರ್ತ ರಾಜ್‌ದೀಪ್‌ ಟ್ವಿಟ್ಟರ್‌ನಲ್ಲಿ ರಾಜಕೀಯ ಪಕ್ಷದ ದ್ವಂದ್ವದ ಬಗ್ಗೆ ಹೇಳಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸಮಯದಲ್ಲಿ ರಾಜಕೀಯ ಚಡುವಟಿಕೆ ಕೂಡಾ ಗರಿಗೆದರಿದೆ ಎಂದು ಕೂಡಾ ಹೇಳಬಹುದು. ಮದ್ಯದ ವಿಷಯದಲ್ಲಿ ಯಾವ ರಾಜಕೀಯ ಪಕ್ಷಗಳೂ ಸರಿಯಾದ ನಿಲುವನ್ನು ಹೊಂದಿಲ್ಲ. ಜನರ ಆರೋಗ್ಯದ ಹೊರತಾಗಿ ಅದೊಂದು ಆದಾಯದ ಮೂಲ, ಅದನ್ನು ಕಳೆದು ಕೊಳ್ಳಲು ಯಾವ ಸರ್ಕಾರಗಳೂ ತಯಾರಾಗಿಲ್ಲ.

ಇದೇ ಸಂದರ್ಭದಲ್ಲಿ ಮದ್ಯ ಪಾನ ಮಾಡುವುದರಿಂದ ಕೊರೊನಾ ಕೊಲ್ಲಬಹುದು ಎಂದ ಸುಳ್ಳು ಸಂದೇಶ ಎಲ್ಲೆಡೆ ಹರಡುತ್ತಿದೆ. ಈ ಕುರಿತು ಡಬ್ಲುಎಚ್‌ಓ ಸ್ಪಷ್ಟನೆ ನೀಡಿದ್ದು ಅದು ಸಂಪೂರ್ಣ ಸುಳ್ಳು ಎಂದಿದೆ. ಕೊರೊನಾ ವಿರುದ್ಧ ಹೋರಾಡಲು ಮನುಷ್ಯರು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಬೇಕು. ರೋಗ ನಿರೋಧಕ ಶಕ್ತಿ ಹೊಂದಿರಬೇಕು. ಮದ್ಯ ಪಾನ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಮದ್ಯಪಾನದಿಂದ ದೂರ ಇರಬೇಕೆಂದು WHO ಸಲಹೆ ನೀಡಿದೆ.


ಓದಿ: ಮದ್ಯ ಹೋಂ ಡೆಲೆವರಿ ಮಾಡುವಂತೆ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸಲಹೆ


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...