Homeಕರ್ನಾಟಕ‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

- Advertisement -
- Advertisement -

“ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರು ಕೊಲೆಯಾಗಿದ್ದರ ಬಗ್ಗೆ ಇಲ್ಲಿಯ (ಕರಾವಳಿ) ಮುಖಂಡರು ಇದುವರೆಗೂ ಬಾಯಿ ತೆರೆದಿಲ್ಲ. ಇನ್ನು ಧರ್ಮಸ್ಥಳದ ದಲಿತ ವ್ಯಕ್ತಿ ದಿನೇಶ ಅವರು ಕೊಲೆಯಾಗಿರುವುದನ್ನು ಖಂಡಿಸುತ್ತಾರಾ?” ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ನೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಅವರು, “ನಮ್ಮಲ್ಲಿ ಕೊಲೆಯಾದವರು ಮುಖ್ಯವಲ್ಲ, ಯಾರು ಕೊಲೆ ಮಾಡಿದ್ದೆನ್ನುವುದು ಮುಖ್ಯ. ಹಾಗಾಗಿ ಶರತ್ ಮಡಿವಾಳನ ಜೀವಕ್ಕಿರುವ ಬೆಲೆ ವಿನಾಯಕ ಬಾಳಿಗರ ಜೀವಕ್ಕಿಲ್ಲ. ಹರ್ಷನ ಜೀವಕ್ಕಿರುವ ಬೆಲೆ ದಿನೇಶರ ಜೀವಕ್ಕಿಲ್ಲ” ಎಂದು ವಿಷಾದಿಸಿದ್ದಾರೆ.

“ಅಷ್ಟೇ ಯಾಕೆ ಪಾಕ್ ಸೈನಿಕರಿಂದ ಹತರಾದ ಯೋಧರಿಗಿರುವ ಬೆಲೆ ಗಾಲ್ವಾನ್‍ನಲ್ಲಿ ಚೀನೀ ಸೈನಿಕರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗಿಲ್ಲ. ಅದೇ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಅಪಹರಿಸಿದ ಹತ್ತು ಮಂದಿ ಭಾರತೀಯ ಸೈನಿಕರ ಬಗ್ಗೆ ನಮ್ಮಲ್ಲಿ ಯಾವತ್ತಾದರೂ ಚರ್ಚೆ ನಡೆದಿದೆಯೇ? ಊಹುಂ! ನಮ್ಮಲ್ಲಿ ನೀರವ ಮೌನ” ಎಂದು ಹೇಳಿದ್ದಾರೆ.

ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

“ನಮ್ಮ ದೇಶಭಕ್ತಿ ಉಕ್ಕಿ ಹರಿಯಬೇಕಾದರೆ, ನಮ್ಮ ಘೋಷಣೆಗಳು ಮುಗಿಲು ಮುಟ್ಟಬೇಕಾದರೆ, ನಮ್ಮ ಜನರ ಹಾಗೂ ನಾಯಕರ ಎದೆಯ ವಿಸ್ತೀರ್ಣ ಜಗತ್ತಿಗೆ ತಿಳಿಯಬೇಕಾದರೆ ನಮ್ಮ ಶತ್ರು ಮುಸ್ಲಿಮನಾಗಿರಬೇಕು ಇಲ್ಲವೇ ನಮ್ಮ ಸಂತ್ರಸ್ತರು ಸಮಾಜದ ಗಣ್ಯ ವರ್ಗದವರಾಗಿರಬೇಕು” ಎಂದು ಅವರು ಟೀಕಿಸಿದ್ದಾರೆ.

“ಇಲ್ಲಿ ಮುಸ್ಲಿಮರ ಜೀವಕ್ಕೆ ಬೆಲೆಯಿಲ್ಲ. ಆದರೆ ಮುಸ್ಲಿಮರಿಂದ ಕೊಲೆಯಾದ ದೇಹಕ್ಕೆ ಬೆಲೆಯಿದೆ. ಇದು ಸಿರಿವಂತರ ಸಮಾಜ, ಇದು ಗಣ್ಯರ ಸಮಾಜ, ಇದು ಮೇಲ್ವರ್ಗದವರ ಸಮಾಜ. ಇಲ್ಲಿ ದೊಡ್ಡವರ, ಉಳ್ಳವರ ಪ್ರಾಣಕ್ಕೆ ಬೆಲೆಯೇ ಹೊರತು, ತಳವರ್ಗದ, ಬಡವರ ಪ್ರಾಣಕ್ಕಲ್ಲ. ಇದು ಇಂದಿನ ವಿದ್ಯಾಮಾನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕರಾವಳಿಯ ಸಾಮಾನ್ಯರು ಬುದ್ಧಿವಂತರಾಗುತ್ತಿದ್ದಾರೆ’

“ನಮ್ಮ ಕರಾವಳಿ ಯಾಕೆ ಶಾಂತವಾಗಿದೆ? ಮಂಗಳೂರಿನಲ್ಲಿ ನಾಗವನ ದೇವಸ್ಥಾನಕ್ಕೆ ಅಪಚಾರವಾದರೂ ಕೂಡ ನಮ್ಮವರು ಶಾಂತವಾಗಿದ್ದಾರೆ. ದೂರದ ಶಿವಮೊಗ್ಗದಲ್ಲಿ ಸಂಘಟನೆಯ ಯುವಕರನ್ನು ಕೊಲೆ ಮಾಡಿದರೂ ನಮ್ಮ ಮಂಗಳೂರು ಶಾಂತವಾಗಿದೆ. ಕರಾವಳಿಯ ಜನ ಬುದ್ಧಿವಂತರು. ಇದಕ್ಕೆಲ್ಲ ಮುಖ್ಯ ಕಾರಣ- ಕರಾವಳಿ ಜನ ತಮ್ಮ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ ಮಾಡುತ್ತಿರುವುದು” ಎಂದು ಸುನಿಲ್ ಬಜಿಲಕೇರಿ ತಿಳಿಸಿದ್ದಾರೆ.

“ಒಂದು ಸಂದರ್ಭದಲ್ಲಿ ಕರಾವಳಿಯ ಹಿಂದುಳಿದ ವರ್ಗದ ಮನೆಗಳಲ್ಲಿ ಕಾರ್ಪೆಂಟರ್, ಮೆಕಾನಿಕ್, ಪ್ಲಂಬರ್ ಪೇಂಟರ್ ಮತ್ತು ಕೂಲಿ ಕೆಲಸ, ಮೇಸ್ತ್ರಿ ಕೆಲಸ ಮಾಡುವವರೇ ಹೆಚ್ಚಾಗಿದ್ದರು. ಈ ಹಿಂದುಳಿದ ವರ್ಗದ ಇಂಥ ಯುವಕರನ್ನು ಪ್ರಚೋದಿಸಲು ಸುಲಭವಾಗುತ್ತಿತ್ತು. ಸುರತ್ಕಲ್ ಪ್ರದೇಶದಲ್ಲಿ ಸತ್ಯಜಿತ್ ಹಿಡಿತವಿದ್ದು ಅವರು ತನ್ನ ಯುವಕರನ್ನು ಯಾವುದೇ ಗಲಭೆಗೆ ಹೋಗದಂತೆ ನಿಯಂತ್ರಿಸಿದ್ದಾರೆ. ಕಾರಣ ಅವರಿಗೆ ಬಿಜೆಪಿಯ ಕುತಂತ್ರ ತಿಳಿದದ್ದು, ಕುದ್ರೋಳಿ ಬಜಿಲಕೇರಿ ಇವತ್ತು ತುಂಬಾ ಶಾಂತವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಬಲಿದಾನಿಗಳ ಕುಟುಂಬಕ್ಕೆ ಎಂಎಲ್‌ಎ ಟಿಕೆಟ್ ನೀಡಿ’

ಹಿಂದುತ್ವ ಹೆಸರಲ್ಲಿ, ಮತೀಯ ರಾಜಕಾರಣದ ಹೆಸರಲ್ಲಿ ಬಡವರ ಮಕ್ಕಳು ಬಲಿಪಶುಗಳಾಗುತ್ತಿದ್ದಾರೆ ಎಂಬ ಜಾಗೃತಿ ಮೂಡಿಸಲಾಗುತ್ತಿದ್ದು, ಅದರ ಭಾಗವಾಗಿ ಕೊಲೆಯಾದ ಕಾರ್ಯಕರ್ತರ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಈ ಸಂಬಂಧ ಶಿಕ್ಷಣ ತಜ್ಞ ಹಾಗೂ ಹಿರಿಯ ಸಾಮಾಜಿಕ ಹೋರಾಟಗಾರ ಎಂ.ಜಿ.ಹೆಗಡೆಯವರು ದನಿಗೂಡಿಸಿದ್ದಾರೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಡವರ ಮಕ್ಕಳ ಆ ವೇಷಗಳನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ದಾಹ ತೀರಿಸಿಕೊಳ್ಳುತ್ತಿರುವ ದಲ್ಬಾಜಿ ನಾಯಕರಿಗೆ ಮುಂದಿದೆ ಮಾರಿ ಹಬ್ಬ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...