Homeಕರ್ನಾಟಕ‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

- Advertisement -
- Advertisement -

“ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರು ಕೊಲೆಯಾಗಿದ್ದರ ಬಗ್ಗೆ ಇಲ್ಲಿಯ (ಕರಾವಳಿ) ಮುಖಂಡರು ಇದುವರೆಗೂ ಬಾಯಿ ತೆರೆದಿಲ್ಲ. ಇನ್ನು ಧರ್ಮಸ್ಥಳದ ದಲಿತ ವ್ಯಕ್ತಿ ದಿನೇಶ ಅವರು ಕೊಲೆಯಾಗಿರುವುದನ್ನು ಖಂಡಿಸುತ್ತಾರಾ?” ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ನೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಅವರು, “ನಮ್ಮಲ್ಲಿ ಕೊಲೆಯಾದವರು ಮುಖ್ಯವಲ್ಲ, ಯಾರು ಕೊಲೆ ಮಾಡಿದ್ದೆನ್ನುವುದು ಮುಖ್ಯ. ಹಾಗಾಗಿ ಶರತ್ ಮಡಿವಾಳನ ಜೀವಕ್ಕಿರುವ ಬೆಲೆ ವಿನಾಯಕ ಬಾಳಿಗರ ಜೀವಕ್ಕಿಲ್ಲ. ಹರ್ಷನ ಜೀವಕ್ಕಿರುವ ಬೆಲೆ ದಿನೇಶರ ಜೀವಕ್ಕಿಲ್ಲ” ಎಂದು ವಿಷಾದಿಸಿದ್ದಾರೆ.

“ಅಷ್ಟೇ ಯಾಕೆ ಪಾಕ್ ಸೈನಿಕರಿಂದ ಹತರಾದ ಯೋಧರಿಗಿರುವ ಬೆಲೆ ಗಾಲ್ವಾನ್‍ನಲ್ಲಿ ಚೀನೀ ಸೈನಿಕರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗಿಲ್ಲ. ಅದೇ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಅಪಹರಿಸಿದ ಹತ್ತು ಮಂದಿ ಭಾರತೀಯ ಸೈನಿಕರ ಬಗ್ಗೆ ನಮ್ಮಲ್ಲಿ ಯಾವತ್ತಾದರೂ ಚರ್ಚೆ ನಡೆದಿದೆಯೇ? ಊಹುಂ! ನಮ್ಮಲ್ಲಿ ನೀರವ ಮೌನ” ಎಂದು ಹೇಳಿದ್ದಾರೆ.

ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

“ನಮ್ಮ ದೇಶಭಕ್ತಿ ಉಕ್ಕಿ ಹರಿಯಬೇಕಾದರೆ, ನಮ್ಮ ಘೋಷಣೆಗಳು ಮುಗಿಲು ಮುಟ್ಟಬೇಕಾದರೆ, ನಮ್ಮ ಜನರ ಹಾಗೂ ನಾಯಕರ ಎದೆಯ ವಿಸ್ತೀರ್ಣ ಜಗತ್ತಿಗೆ ತಿಳಿಯಬೇಕಾದರೆ ನಮ್ಮ ಶತ್ರು ಮುಸ್ಲಿಮನಾಗಿರಬೇಕು ಇಲ್ಲವೇ ನಮ್ಮ ಸಂತ್ರಸ್ತರು ಸಮಾಜದ ಗಣ್ಯ ವರ್ಗದವರಾಗಿರಬೇಕು” ಎಂದು ಅವರು ಟೀಕಿಸಿದ್ದಾರೆ.

“ಇಲ್ಲಿ ಮುಸ್ಲಿಮರ ಜೀವಕ್ಕೆ ಬೆಲೆಯಿಲ್ಲ. ಆದರೆ ಮುಸ್ಲಿಮರಿಂದ ಕೊಲೆಯಾದ ದೇಹಕ್ಕೆ ಬೆಲೆಯಿದೆ. ಇದು ಸಿರಿವಂತರ ಸಮಾಜ, ಇದು ಗಣ್ಯರ ಸಮಾಜ, ಇದು ಮೇಲ್ವರ್ಗದವರ ಸಮಾಜ. ಇಲ್ಲಿ ದೊಡ್ಡವರ, ಉಳ್ಳವರ ಪ್ರಾಣಕ್ಕೆ ಬೆಲೆಯೇ ಹೊರತು, ತಳವರ್ಗದ, ಬಡವರ ಪ್ರಾಣಕ್ಕಲ್ಲ. ಇದು ಇಂದಿನ ವಿದ್ಯಾಮಾನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕರಾವಳಿಯ ಸಾಮಾನ್ಯರು ಬುದ್ಧಿವಂತರಾಗುತ್ತಿದ್ದಾರೆ’

“ನಮ್ಮ ಕರಾವಳಿ ಯಾಕೆ ಶಾಂತವಾಗಿದೆ? ಮಂಗಳೂರಿನಲ್ಲಿ ನಾಗವನ ದೇವಸ್ಥಾನಕ್ಕೆ ಅಪಚಾರವಾದರೂ ಕೂಡ ನಮ್ಮವರು ಶಾಂತವಾಗಿದ್ದಾರೆ. ದೂರದ ಶಿವಮೊಗ್ಗದಲ್ಲಿ ಸಂಘಟನೆಯ ಯುವಕರನ್ನು ಕೊಲೆ ಮಾಡಿದರೂ ನಮ್ಮ ಮಂಗಳೂರು ಶಾಂತವಾಗಿದೆ. ಕರಾವಳಿಯ ಜನ ಬುದ್ಧಿವಂತರು. ಇದಕ್ಕೆಲ್ಲ ಮುಖ್ಯ ಕಾರಣ- ಕರಾವಳಿ ಜನ ತಮ್ಮ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ ಮಾಡುತ್ತಿರುವುದು” ಎಂದು ಸುನಿಲ್ ಬಜಿಲಕೇರಿ ತಿಳಿಸಿದ್ದಾರೆ.

“ಒಂದು ಸಂದರ್ಭದಲ್ಲಿ ಕರಾವಳಿಯ ಹಿಂದುಳಿದ ವರ್ಗದ ಮನೆಗಳಲ್ಲಿ ಕಾರ್ಪೆಂಟರ್, ಮೆಕಾನಿಕ್, ಪ್ಲಂಬರ್ ಪೇಂಟರ್ ಮತ್ತು ಕೂಲಿ ಕೆಲಸ, ಮೇಸ್ತ್ರಿ ಕೆಲಸ ಮಾಡುವವರೇ ಹೆಚ್ಚಾಗಿದ್ದರು. ಈ ಹಿಂದುಳಿದ ವರ್ಗದ ಇಂಥ ಯುವಕರನ್ನು ಪ್ರಚೋದಿಸಲು ಸುಲಭವಾಗುತ್ತಿತ್ತು. ಸುರತ್ಕಲ್ ಪ್ರದೇಶದಲ್ಲಿ ಸತ್ಯಜಿತ್ ಹಿಡಿತವಿದ್ದು ಅವರು ತನ್ನ ಯುವಕರನ್ನು ಯಾವುದೇ ಗಲಭೆಗೆ ಹೋಗದಂತೆ ನಿಯಂತ್ರಿಸಿದ್ದಾರೆ. ಕಾರಣ ಅವರಿಗೆ ಬಿಜೆಪಿಯ ಕುತಂತ್ರ ತಿಳಿದದ್ದು, ಕುದ್ರೋಳಿ ಬಜಿಲಕೇರಿ ಇವತ್ತು ತುಂಬಾ ಶಾಂತವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಬಲಿದಾನಿಗಳ ಕುಟುಂಬಕ್ಕೆ ಎಂಎಲ್‌ಎ ಟಿಕೆಟ್ ನೀಡಿ’

ಹಿಂದುತ್ವ ಹೆಸರಲ್ಲಿ, ಮತೀಯ ರಾಜಕಾರಣದ ಹೆಸರಲ್ಲಿ ಬಡವರ ಮಕ್ಕಳು ಬಲಿಪಶುಗಳಾಗುತ್ತಿದ್ದಾರೆ ಎಂಬ ಜಾಗೃತಿ ಮೂಡಿಸಲಾಗುತ್ತಿದ್ದು, ಅದರ ಭಾಗವಾಗಿ ಕೊಲೆಯಾದ ಕಾರ್ಯಕರ್ತರ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಈ ಸಂಬಂಧ ಶಿಕ್ಷಣ ತಜ್ಞ ಹಾಗೂ ಹಿರಿಯ ಸಾಮಾಜಿಕ ಹೋರಾಟಗಾರ ಎಂ.ಜಿ.ಹೆಗಡೆಯವರು ದನಿಗೂಡಿಸಿದ್ದಾರೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಡವರ ಮಕ್ಕಳ ಆ ವೇಷಗಳನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ದಾಹ ತೀರಿಸಿಕೊಳ್ಳುತ್ತಿರುವ ದಲ್ಬಾಜಿ ನಾಯಕರಿಗೆ ಮುಂದಿದೆ ಮಾರಿ ಹಬ್ಬ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...