Homeಕರ್ನಾಟಕ‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

- Advertisement -
- Advertisement -

“ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರು ಕೊಲೆಯಾಗಿದ್ದರ ಬಗ್ಗೆ ಇಲ್ಲಿಯ (ಕರಾವಳಿ) ಮುಖಂಡರು ಇದುವರೆಗೂ ಬಾಯಿ ತೆರೆದಿಲ್ಲ. ಇನ್ನು ಧರ್ಮಸ್ಥಳದ ದಲಿತ ವ್ಯಕ್ತಿ ದಿನೇಶ ಅವರು ಕೊಲೆಯಾಗಿರುವುದನ್ನು ಖಂಡಿಸುತ್ತಾರಾ?” ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ನೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಅವರು, “ನಮ್ಮಲ್ಲಿ ಕೊಲೆಯಾದವರು ಮುಖ್ಯವಲ್ಲ, ಯಾರು ಕೊಲೆ ಮಾಡಿದ್ದೆನ್ನುವುದು ಮುಖ್ಯ. ಹಾಗಾಗಿ ಶರತ್ ಮಡಿವಾಳನ ಜೀವಕ್ಕಿರುವ ಬೆಲೆ ವಿನಾಯಕ ಬಾಳಿಗರ ಜೀವಕ್ಕಿಲ್ಲ. ಹರ್ಷನ ಜೀವಕ್ಕಿರುವ ಬೆಲೆ ದಿನೇಶರ ಜೀವಕ್ಕಿಲ್ಲ” ಎಂದು ವಿಷಾದಿಸಿದ್ದಾರೆ.

“ಅಷ್ಟೇ ಯಾಕೆ ಪಾಕ್ ಸೈನಿಕರಿಂದ ಹತರಾದ ಯೋಧರಿಗಿರುವ ಬೆಲೆ ಗಾಲ್ವಾನ್‍ನಲ್ಲಿ ಚೀನೀ ಸೈನಿಕರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗಿಲ್ಲ. ಅದೇ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಅಪಹರಿಸಿದ ಹತ್ತು ಮಂದಿ ಭಾರತೀಯ ಸೈನಿಕರ ಬಗ್ಗೆ ನಮ್ಮಲ್ಲಿ ಯಾವತ್ತಾದರೂ ಚರ್ಚೆ ನಡೆದಿದೆಯೇ? ಊಹುಂ! ನಮ್ಮಲ್ಲಿ ನೀರವ ಮೌನ” ಎಂದು ಹೇಳಿದ್ದಾರೆ.

ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

“ನಮ್ಮ ದೇಶಭಕ್ತಿ ಉಕ್ಕಿ ಹರಿಯಬೇಕಾದರೆ, ನಮ್ಮ ಘೋಷಣೆಗಳು ಮುಗಿಲು ಮುಟ್ಟಬೇಕಾದರೆ, ನಮ್ಮ ಜನರ ಹಾಗೂ ನಾಯಕರ ಎದೆಯ ವಿಸ್ತೀರ್ಣ ಜಗತ್ತಿಗೆ ತಿಳಿಯಬೇಕಾದರೆ ನಮ್ಮ ಶತ್ರು ಮುಸ್ಲಿಮನಾಗಿರಬೇಕು ಇಲ್ಲವೇ ನಮ್ಮ ಸಂತ್ರಸ್ತರು ಸಮಾಜದ ಗಣ್ಯ ವರ್ಗದವರಾಗಿರಬೇಕು” ಎಂದು ಅವರು ಟೀಕಿಸಿದ್ದಾರೆ.

“ಇಲ್ಲಿ ಮುಸ್ಲಿಮರ ಜೀವಕ್ಕೆ ಬೆಲೆಯಿಲ್ಲ. ಆದರೆ ಮುಸ್ಲಿಮರಿಂದ ಕೊಲೆಯಾದ ದೇಹಕ್ಕೆ ಬೆಲೆಯಿದೆ. ಇದು ಸಿರಿವಂತರ ಸಮಾಜ, ಇದು ಗಣ್ಯರ ಸಮಾಜ, ಇದು ಮೇಲ್ವರ್ಗದವರ ಸಮಾಜ. ಇಲ್ಲಿ ದೊಡ್ಡವರ, ಉಳ್ಳವರ ಪ್ರಾಣಕ್ಕೆ ಬೆಲೆಯೇ ಹೊರತು, ತಳವರ್ಗದ, ಬಡವರ ಪ್ರಾಣಕ್ಕಲ್ಲ. ಇದು ಇಂದಿನ ವಿದ್ಯಾಮಾನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕರಾವಳಿಯ ಸಾಮಾನ್ಯರು ಬುದ್ಧಿವಂತರಾಗುತ್ತಿದ್ದಾರೆ’

“ನಮ್ಮ ಕರಾವಳಿ ಯಾಕೆ ಶಾಂತವಾಗಿದೆ? ಮಂಗಳೂರಿನಲ್ಲಿ ನಾಗವನ ದೇವಸ್ಥಾನಕ್ಕೆ ಅಪಚಾರವಾದರೂ ಕೂಡ ನಮ್ಮವರು ಶಾಂತವಾಗಿದ್ದಾರೆ. ದೂರದ ಶಿವಮೊಗ್ಗದಲ್ಲಿ ಸಂಘಟನೆಯ ಯುವಕರನ್ನು ಕೊಲೆ ಮಾಡಿದರೂ ನಮ್ಮ ಮಂಗಳೂರು ಶಾಂತವಾಗಿದೆ. ಕರಾವಳಿಯ ಜನ ಬುದ್ಧಿವಂತರು. ಇದಕ್ಕೆಲ್ಲ ಮುಖ್ಯ ಕಾರಣ- ಕರಾವಳಿ ಜನ ತಮ್ಮ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ ಮಾಡುತ್ತಿರುವುದು” ಎಂದು ಸುನಿಲ್ ಬಜಿಲಕೇರಿ ತಿಳಿಸಿದ್ದಾರೆ.

“ಒಂದು ಸಂದರ್ಭದಲ್ಲಿ ಕರಾವಳಿಯ ಹಿಂದುಳಿದ ವರ್ಗದ ಮನೆಗಳಲ್ಲಿ ಕಾರ್ಪೆಂಟರ್, ಮೆಕಾನಿಕ್, ಪ್ಲಂಬರ್ ಪೇಂಟರ್ ಮತ್ತು ಕೂಲಿ ಕೆಲಸ, ಮೇಸ್ತ್ರಿ ಕೆಲಸ ಮಾಡುವವರೇ ಹೆಚ್ಚಾಗಿದ್ದರು. ಈ ಹಿಂದುಳಿದ ವರ್ಗದ ಇಂಥ ಯುವಕರನ್ನು ಪ್ರಚೋದಿಸಲು ಸುಲಭವಾಗುತ್ತಿತ್ತು. ಸುರತ್ಕಲ್ ಪ್ರದೇಶದಲ್ಲಿ ಸತ್ಯಜಿತ್ ಹಿಡಿತವಿದ್ದು ಅವರು ತನ್ನ ಯುವಕರನ್ನು ಯಾವುದೇ ಗಲಭೆಗೆ ಹೋಗದಂತೆ ನಿಯಂತ್ರಿಸಿದ್ದಾರೆ. ಕಾರಣ ಅವರಿಗೆ ಬಿಜೆಪಿಯ ಕುತಂತ್ರ ತಿಳಿದದ್ದು, ಕುದ್ರೋಳಿ ಬಜಿಲಕೇರಿ ಇವತ್ತು ತುಂಬಾ ಶಾಂತವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಬಲಿದಾನಿಗಳ ಕುಟುಂಬಕ್ಕೆ ಎಂಎಲ್‌ಎ ಟಿಕೆಟ್ ನೀಡಿ’

ಹಿಂದುತ್ವ ಹೆಸರಲ್ಲಿ, ಮತೀಯ ರಾಜಕಾರಣದ ಹೆಸರಲ್ಲಿ ಬಡವರ ಮಕ್ಕಳು ಬಲಿಪಶುಗಳಾಗುತ್ತಿದ್ದಾರೆ ಎಂಬ ಜಾಗೃತಿ ಮೂಡಿಸಲಾಗುತ್ತಿದ್ದು, ಅದರ ಭಾಗವಾಗಿ ಕೊಲೆಯಾದ ಕಾರ್ಯಕರ್ತರ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಈ ಸಂಬಂಧ ಶಿಕ್ಷಣ ತಜ್ಞ ಹಾಗೂ ಹಿರಿಯ ಸಾಮಾಜಿಕ ಹೋರಾಟಗಾರ ಎಂ.ಜಿ.ಹೆಗಡೆಯವರು ದನಿಗೂಡಿಸಿದ್ದಾರೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಡವರ ಮಕ್ಕಳ ಆ ವೇಷಗಳನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ದಾಹ ತೀರಿಸಿಕೊಳ್ಳುತ್ತಿರುವ ದಲ್ಬಾಜಿ ನಾಯಕರಿಗೆ ಮುಂದಿದೆ ಮಾರಿ ಹಬ್ಬ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...