Homeಮುಖಪುಟಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

- Advertisement -
- Advertisement -

ತಮಿಳುನಾಡಿನಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಕೇಳುತ್ತಿರುವ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಮತ್ತು ಪ್ರಬಲ ಪ್ರಾದೇಶಿಕ ಪಕ್ಷ ಡಿಎಂಕೆ ನಡುವಿನ ಸ್ಥಾನ ಹಂಚಿಕೆ ಮಾತುಕತೆ ಸ್ಥಗಿತಗೊಂಡಿದೆ.
ಡಿಎಂಕೆ-ಕಾಂಗ್ರೆಸ್ ಮೈತ್ರಿ ಮುರಿಯುವ ಹಂತದಲ್ಲಿದೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

2018 ರ ಡಿಸೆಂಬರ್‌ನಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ತಮ್ಮ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರಿಂದ ಪಕ್ಷದ ಆಡಳಿತವನ್ನು ವಹಿಸಿಕೊಂಡಿದ್ದರು, ಆಗಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು 2019 ರ ಸಾರ್ವತ್ರಿಕ ಚುನಾವಣೆಗಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಪ್ರಸ್ತಾಪಿಸಿದಾಗ ದೇಶವನ್ನು ಅಚ್ಚರಿಗೊಳಿಸಿತು. ಅದು ಅಚ್ಚರಿ ಉಂಟು ಮಾಡಿತ್ತು.

ಕಾಂಗ್ರೆಸ್‌ನ ಸುದೀರ್ಘ ಮಿತ್ರಪಕ್ಷಗಳಲ್ಲಿ ಒಬ್ಬರಾದ ಡಿಎಂಕೆಯ ಸ್ಟಾಲಿನ್ ರಾಹುಲ್ ಗಾಂಧಿಯವರ ಹೆಸರನ್ನು ಪ್ರಸ್ತಾಪಿಸಿದ ಮೊದಲ ಯುಪಿಎ ನಾಯಕರಾಗಿದ್ದರು.
ಈಗ, ಎರಡು ವರ್ಷಗಳ ನಂತರ, ಡಿಎಂಕೆ ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಮುರಿಯುವ ಅಂಚಿನಲ್ಲಿದೆ! 2006, 2011 ಮತ್ತು 2016 ರಲ್ಲಿ ಸತತ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಅದರ ಅತಿದೊಡ್ಡ ಪಾಲುದಾರ ಮಿತ್ರಪಕ್ಷವಾಗಿದ್ದ ಕಾಂಗ್ರೆಸ್‌ನೊಂದಿಗೆ ಡಿಎಂಕೆ ಸ್ವಲ್ಪ ಕಠಣವಾಗಿ ವರ್ತಿಸುತ್ತಿದೆ. ಇದನ್ನು ಸೈಕಾಲಿಜಿಕಲ್ ಮೂವ್ (ಮಾನಸಿಕ ನಡೆ) ಎನ್ನಲಾಗುತ್ತಿದೆ.

2021 ರ ವಿಧಾನಸಭಾ ಚುನಾವಣೆಗೆ ಮುನ್ನ, ಡಿಎಂಕೆ ಸ್ಪಷ್ಟವಾಗಿ ಕಾಂಗ್ರೆಸ್ ಕೇವಲ 20 ಸ್ಥಾನಗಳನ್ನು ಮಾತ್ರ ನೀಡಬಲ್ಲೆವು ಎಂದು ಹೇಳಿದೆ. ಮೊದಲಿಗೆ 18 ಸ್ಥಾನ ನೀಡುವುದಾಗಿ ಹೇಳಿದ ಅದು ಆರಂಭಿಕ ಮಾತುಕತೆಗಳ ನಂತರ 20 ಸ್ಥಾನದ ಆಫರ್ ಮಾಡಿದೆ.

ಈಗ ಕಾಂಗ್ರೆಸ್ ಮೇಲೆ ಜವಾಬ್ದಾರಿ ಇದೆ, ಮೈತ್ರಿಯಲ್ಲಿ ಮುಂದುವರಿಯಬೇಕೋ, ಇಲ್ಲವೋ ಎಂಬುದನ್ನು ಅದು ನಿರ್ಧರಿಸುವ ಕಾಲ ಬಂದಿದೆ. 2016 ಕ್ಕೆ ಹೋಲಿಸಿದರೆ ಕೇವಲ ಅರ್ಧದಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಬೇಕು ಅಥವಾ ಮೈತ್ರಿಯಿಂದ ಹೊರನಡೆಯಲು ಸಿದ್ಧವಾಗಬೇಕು.

ಹಾಗಾದರೆ ಡಿಎಂಕೆ ಈ ಆಕ್ರಮಣಕಾರಿ ನಿಲುವನ್ನು ಏಕೆ ಅಳವಡಿಸಿಕೊಂಡಿದೆ? “ಇದು ಮಾನಸಿಕ ನಡೆ” ಎಂದು ಡಿಎಂಕೆಯ ಉನ್ನತ ಮೂಲವೊಂದು ಹೇಳುತ್ತಿದೆ.. “ಕಾಂಗ್ರೆಸ್ ಹೊರನಡೆದರೆ ನಮಗೆ ಬೇಸರವಿಲ್ಲ. ವಾಸ್ತವವಾಗಿ ಅವರು ಮೈತ್ರಿಯಿಂದ ಹೊರಗುಳಿಯಬೇಕು ಎಂದು ಹಲವರು ಪ್ರತಿಪಾದಿಸುತ್ತಾರೆ. ಪಕ್ಷವು ದೊಡ್ಡ ಮೈತ್ರಿಯ ಭಾಗವಾಗಿದ್ದರೆ ಮಾತ್ರ ಡಿಎಂಕೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಎಂದು ಅನೇಕ ಮತದಾರರು ಭಾವಿಸುತ್ತಾರೆ, ನಾವು ಆ ಕಲ್ಪನೆಯನ್ನು ಮುರಿಯಬೇಕಾಗಿದೆ. ಕಾಂಗ್ರೆಸ್ಸಿನಂತಹ ಮೈತ್ರಿ ಪಾಲುದಾರರಿಲ್ಲದೆ ಡಿಎಂಕೆ ಭರ್ಜರಿ ಜಯ ಸಾಧಿಸಬಹುದು ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಪಕ್ಷದ ಕಾರ್ಯತಂತ್ರ ತಂಡದ ಅನೇಕ ನಾಯಕರು ಮತ್ತು ಸದಸ್ಯರು ಮಾತನಾಡುತ್ತಾ, ಕಾಂಗ್ರೆಸ್ಸಿನ ಉಪಸ್ಥಿತಿಯು ಡಿಎಂಕೆ ಭವಿಷ್ಯವನ್ನು ಹಾನಿಗೊಳಿಸುತ್ತದೆ ಮತ್ತು ಡಿಎಂಕೆಯ ಒಟ್ಟಾರೆ ಪ್ರಮಾಣವನ್ನು ತಗ್ಗಿಸುತ್ತದೆ ಎಂಬುದು ಅವರ ಅಂದಾಜಾಗಿದೆ.

“ದಕ್ಷಿಣ ತಮಿಳುನಾಡಿನ ಜೊತೆಗೆ, ಕನ್ಯಾಕುಮಾರಿಯಂತಹ ಜಿಲ್ಲೆಗಳಲ್ಲಿ, ಕಾಂಗ್ರೆಸ್‌ಗೆ ಎಲ್ಲಿಯೂ ಗಮನಾರ್ಹವಾದ ಮತ ಬ್ಯಾಂಕ್ ಇಲ್ಲ. ವಾಸ್ತವವಾಗಿ ಪ್ರತಿ ಚುನಾವಣೆಯಲ್ಲೂ ನಾವು ಸ್ಥಳೀಯ ಡಿಎಂಕೆ ನಾಯಕರ ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡುವ ಮೂಲಕ ಡಿಎಂಕೆ ಆಕಾಂಕ್ಷಿಗಳಲ್ಲಿ ಅಸಮಾಧಾನ ಮೂಡಿಸುತ್ತಿದ್ದೆವೆ. ಅವರು ಅಂತಿಮವಾಗಿ ಪಕ್ಷದ ವಿರುದ್ಧ ದಂಗೆ ಏಳುತ್ತಾರೆ ” ಎಂದು ಡಿಎಂಕೆ ಮೂಲವೊಂದು ತಿಳಿಸಿದೆ.

ಡಿಎಂಕೆ ಅಂದಾಜೆಂದರೆ, ಪಶ್ಚಿಮ ತಮಿಳುನಾಡು ಎಐಎಡಿಎಂಕೆ ಭದ್ರಕೋಟೆಯಾಯಿತು. ಇದಕ್ಕೆ ಕಾರಣ, ಪಕ್ಷವು ಈ ಪ್ರದೇಶದ ಸ್ಥಾನಗಳನ್ನು ಕೇವಲ ಮೈತ್ರಿಯ ಕಾರಣಕ್ಕೆ ಕಾಂಗ್ರೆಸ್‌ಗೆ ಬಿಟ್ಟುಕೊಡುತ್ತ ಬಂದಿದ್ದು. ಪಕ್ಷವು ಈಗ ತನ್ನದೇ ಆದ ನಾಯಕರು ಸ್ಪರ್ಧಿಸಿ ಈ ಭಾಗದಲ್ಲಿ ಒಂದು ಶಕ್ತಿಯಾಗಿ ಪುನರುಜ್ಜೀವನಗೊಳ್ಳಬೇಕೆಂದು ಬಯಸಿದೆ.

ಮತ್ತೊಂದು ಡಿಎಂಕೆ ಮೂಲವು, 2021 ಡಿಎಂಕೆ ಚುನಾವಣೆಯಾಗಿದೆ ಮತ್ತು ಕಾಂಗ್ರೆಸ್ ಕೂಡ ಅದನ್ನು ಅರ್ಥಮಾಡಿಕೊಂಡಿದೆ ಎಂದು ಹೇಳಿದರು. “ನಮ್ಮ ಲೆಕ್ಕಾಚಾರಗಳನ್ನು ಆಧರಿಸಿ, ನಾವು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸುತ್ತೇವೆ, ಕಾಂಗ್ರೆಸ್ ಅರ್ಥಮಾಡಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ. ಇದು ಅಗ್ರಿಸ್ಸಿವ್ ವಿಚಾರ ಅಲ್ಲ, ವಾಸ್ತವದ ಲೆಕ್ಕಾಚಾರ” ಎಂದು ತಿಳಿಸಿದೆ.

ತಿರುಮವಾಲವನ್ ನೇತೃತ್ವದ ವಿಸಿಕೆ ಎಂಬ ಮತ್ತೊಂದು ಮೈತ್ರಿ ಪಾಲುದಾರರೊಂದಿಗಿನ ಮಾತುಕತೆಗಳಲ್ಲಿ ಡಿಎಂಕೆ ಕಠಿಣವಾಗಿದೆ. ವಿಸಿಕೆ 10 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರೂ, ಡಿಎಂಕೆ ಕೇವಲ ಆರು ಸ್ಥಾನಗಳಲ್ಲಿ ಸ್ಪರ್ಧಿಸಲು ಸೂಚಿಚಿದೆ. ಮಾತುಕತೆಯ ನಂತರ, ಗುರುವಾರ ಮಧ್ಯಾಹ್ನ ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ತಿರುಮವಾಲವನ್ ಅವರ ಮೈತ್ರಿಯಲ್ಲಿ ಪಕ್ಷವು ಕಾರ್ಯತಂತ್ರದ ಪ್ರಯೋಜನವನ್ನು ಹೊಂದಿದೆ, ಕಾಂಗ್ರೆಸ್‌ಗೆ ಅದರ ಕೊರತೆಯಿದೆ ಎಂಬ ಕಾರಣದಿಂದಾಗಿ ಪಕ್ಷವು ವಿಸಿಕೆಯನ್ನು ಮಿತ್ರಪಕ್ಷವಾಗಿ ಇಟ್ಟುಕೊಳ್ಳಲು ಬಯಸುತ್ತದೆ ಎಂದು ಡಿಎಂಕೆ ನಾಯಕರು ಹೇಳಿದರು. ಎಐಎಡಿಎಂಕೆ ಮೈತ್ರಿಕೂಟದ ಭಾಗವಾಗಿರುವ ವನ್ನಿಯಾರ್ ನೇತೃತ್ವದ ಪಿಎಂಕೆ ವಿರುದ್ಧ ದಲಿತ ಸಮುದಾಯದ ಮತಗಳನ್ನು ಕ್ರೂಢೀಕರಿಸಲು ವಿಸಿಕೆ ಸಹಾಯ ಮಾಡುತ್ತದೆ.

ಡಿಎಂಕೆ ಪರವಾಗಿ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಭಾರತೀಯ ರಾಜಕೀಯ ಕ್ರಿಯಾ ಸಮಿತಿ (ಐಪಿಎಸಿ) ಕಾರ್ಯತಂತ್ರ ರೂಪಿಸುತ್ತಿದೆ. ಸಲಹಾ ಸಂಸ್ಥೆಯ ದೈನಂದಿನ ಅಂದಾಜು ಪಕ್ಷಕ್ಕೆ ಭರ್ಜರಿ ಜಯವನ್ನು ಊಹಿಸುತ್ತಲೇ ಇವೆ. ಇದು ಮೂಡಿಸಿದ ವಿಶ್ವಾಸದಿಂದಾಗಿ, ಅಗತ್ಯಬಿದ್ದರೆ ಕಾಂಗ್ರೆಸ್‌ಗೆ ವಿದಾಯ ಹೇಳುವ ಡಿಎಂಕೆ ಸಿದ್ಧವಾಗಿದೆ.
ಕಾಂಗ್ರೆಸ್ಸಿನ ಹಿರಿಯ ಮುಖಂಡರೊಬ್ಬರು, ತಮ್ಮ ಸಂಶೋಧನೆ ಅಥವಾ ರಾಜಕೀಯ ತಿಳುವಳಿಕೆಯ ಆಧಾರದ ಮೇಲೆ ಪ್ರಶಾಂತ್ ಅವರ ಐಪಿಎಸಿ ಸಲಹೆಗಳನ್ನು ನೀಡಬಹುದು. ಆದರೆ ಈ ಜೂಜು ವರ್ಕ್ಔಟ್ ಆಗದಿದ್ದರೆ ಸ್ಟಾಲಿನ್ ರಾಜಕೀಯ ಪರಿಣಾಮಗಳನ್ನು ಭರಿಸಬೇಕಾಗುತ್ತದೆ’ ಎಂದಿದ್ದಾರೆ.

“ಕರುಣಾನಿಧಿ ಅವರು ಮಹಾ ಮೈತ್ರಿ ಬಯಸಿದ ರಾಜಕಾರಣಿಯಾಗಿದ್ದರೆ ಮತ್ತು ಅನೇಕ ರಾಜಕೀಯ ಪಕ್ಷಗಳು ಒಪ್ಪಿಕೊಂಡಿದ್ದ ನಾಯಕರಾಗಿದ್ದರೆ, ಸ್ಟಾಲಿನ್‌ಗಾಗಿ ರೂಪಿಸಲಾಗಿರುವ ಮಾರ್ಗವು ವಿಭಿನ್ನವಾಗಿದೆ. ಅದು ‘ಏಕಾಂಗಿಯಾಗಿ ಗೆಲ್ಲಬಲ್ಲ ಡಿಎಂಕೆ ಮಾರ್ಗ” ಎಂದು ಡಿಎಂಕೆ ಮೂಲಗಳು ವಾದಿಸುತ್ತಿವೆ. ಏಪ್ರಿಲ್ 6 ರ ಚುನಾವಣೆಯಲ್ಲಿ ಈ ಹೆಚ್ಚಿನ ಪಾಲಿನ, ರಿಸ್ಕ್ ಜೂಜು ಲಾಭ ತರುತ್ತದೆಯೇ ಎಂಬುದನ್ನು ಕಾದು ನೊಡಬೇಕಿದೆ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...