Homeಮುಖಪುಟಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

- Advertisement -
- Advertisement -

ತಮಿಳುನಾಡಿನಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಕೇಳುತ್ತಿರುವ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಮತ್ತು ಪ್ರಬಲ ಪ್ರಾದೇಶಿಕ ಪಕ್ಷ ಡಿಎಂಕೆ ನಡುವಿನ ಸ್ಥಾನ ಹಂಚಿಕೆ ಮಾತುಕತೆ ಸ್ಥಗಿತಗೊಂಡಿದೆ.
ಡಿಎಂಕೆ-ಕಾಂಗ್ರೆಸ್ ಮೈತ್ರಿ ಮುರಿಯುವ ಹಂತದಲ್ಲಿದೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

2018 ರ ಡಿಸೆಂಬರ್‌ನಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ತಮ್ಮ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರಿಂದ ಪಕ್ಷದ ಆಡಳಿತವನ್ನು ವಹಿಸಿಕೊಂಡಿದ್ದರು, ಆಗಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು 2019 ರ ಸಾರ್ವತ್ರಿಕ ಚುನಾವಣೆಗಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಪ್ರಸ್ತಾಪಿಸಿದಾಗ ದೇಶವನ್ನು ಅಚ್ಚರಿಗೊಳಿಸಿತು. ಅದು ಅಚ್ಚರಿ ಉಂಟು ಮಾಡಿತ್ತು.

ಕಾಂಗ್ರೆಸ್‌ನ ಸುದೀರ್ಘ ಮಿತ್ರಪಕ್ಷಗಳಲ್ಲಿ ಒಬ್ಬರಾದ ಡಿಎಂಕೆಯ ಸ್ಟಾಲಿನ್ ರಾಹುಲ್ ಗಾಂಧಿಯವರ ಹೆಸರನ್ನು ಪ್ರಸ್ತಾಪಿಸಿದ ಮೊದಲ ಯುಪಿಎ ನಾಯಕರಾಗಿದ್ದರು.
ಈಗ, ಎರಡು ವರ್ಷಗಳ ನಂತರ, ಡಿಎಂಕೆ ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಮುರಿಯುವ ಅಂಚಿನಲ್ಲಿದೆ! 2006, 2011 ಮತ್ತು 2016 ರಲ್ಲಿ ಸತತ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಅದರ ಅತಿದೊಡ್ಡ ಪಾಲುದಾರ ಮಿತ್ರಪಕ್ಷವಾಗಿದ್ದ ಕಾಂಗ್ರೆಸ್‌ನೊಂದಿಗೆ ಡಿಎಂಕೆ ಸ್ವಲ್ಪ ಕಠಣವಾಗಿ ವರ್ತಿಸುತ್ತಿದೆ. ಇದನ್ನು ಸೈಕಾಲಿಜಿಕಲ್ ಮೂವ್ (ಮಾನಸಿಕ ನಡೆ) ಎನ್ನಲಾಗುತ್ತಿದೆ.

2021 ರ ವಿಧಾನಸಭಾ ಚುನಾವಣೆಗೆ ಮುನ್ನ, ಡಿಎಂಕೆ ಸ್ಪಷ್ಟವಾಗಿ ಕಾಂಗ್ರೆಸ್ ಕೇವಲ 20 ಸ್ಥಾನಗಳನ್ನು ಮಾತ್ರ ನೀಡಬಲ್ಲೆವು ಎಂದು ಹೇಳಿದೆ. ಮೊದಲಿಗೆ 18 ಸ್ಥಾನ ನೀಡುವುದಾಗಿ ಹೇಳಿದ ಅದು ಆರಂಭಿಕ ಮಾತುಕತೆಗಳ ನಂತರ 20 ಸ್ಥಾನದ ಆಫರ್ ಮಾಡಿದೆ.

ಈಗ ಕಾಂಗ್ರೆಸ್ ಮೇಲೆ ಜವಾಬ್ದಾರಿ ಇದೆ, ಮೈತ್ರಿಯಲ್ಲಿ ಮುಂದುವರಿಯಬೇಕೋ, ಇಲ್ಲವೋ ಎಂಬುದನ್ನು ಅದು ನಿರ್ಧರಿಸುವ ಕಾಲ ಬಂದಿದೆ. 2016 ಕ್ಕೆ ಹೋಲಿಸಿದರೆ ಕೇವಲ ಅರ್ಧದಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಬೇಕು ಅಥವಾ ಮೈತ್ರಿಯಿಂದ ಹೊರನಡೆಯಲು ಸಿದ್ಧವಾಗಬೇಕು.

ಹಾಗಾದರೆ ಡಿಎಂಕೆ ಈ ಆಕ್ರಮಣಕಾರಿ ನಿಲುವನ್ನು ಏಕೆ ಅಳವಡಿಸಿಕೊಂಡಿದೆ? “ಇದು ಮಾನಸಿಕ ನಡೆ” ಎಂದು ಡಿಎಂಕೆಯ ಉನ್ನತ ಮೂಲವೊಂದು ಹೇಳುತ್ತಿದೆ.. “ಕಾಂಗ್ರೆಸ್ ಹೊರನಡೆದರೆ ನಮಗೆ ಬೇಸರವಿಲ್ಲ. ವಾಸ್ತವವಾಗಿ ಅವರು ಮೈತ್ರಿಯಿಂದ ಹೊರಗುಳಿಯಬೇಕು ಎಂದು ಹಲವರು ಪ್ರತಿಪಾದಿಸುತ್ತಾರೆ. ಪಕ್ಷವು ದೊಡ್ಡ ಮೈತ್ರಿಯ ಭಾಗವಾಗಿದ್ದರೆ ಮಾತ್ರ ಡಿಎಂಕೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಎಂದು ಅನೇಕ ಮತದಾರರು ಭಾವಿಸುತ್ತಾರೆ, ನಾವು ಆ ಕಲ್ಪನೆಯನ್ನು ಮುರಿಯಬೇಕಾಗಿದೆ. ಕಾಂಗ್ರೆಸ್ಸಿನಂತಹ ಮೈತ್ರಿ ಪಾಲುದಾರರಿಲ್ಲದೆ ಡಿಎಂಕೆ ಭರ್ಜರಿ ಜಯ ಸಾಧಿಸಬಹುದು ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಪಕ್ಷದ ಕಾರ್ಯತಂತ್ರ ತಂಡದ ಅನೇಕ ನಾಯಕರು ಮತ್ತು ಸದಸ್ಯರು ಮಾತನಾಡುತ್ತಾ, ಕಾಂಗ್ರೆಸ್ಸಿನ ಉಪಸ್ಥಿತಿಯು ಡಿಎಂಕೆ ಭವಿಷ್ಯವನ್ನು ಹಾನಿಗೊಳಿಸುತ್ತದೆ ಮತ್ತು ಡಿಎಂಕೆಯ ಒಟ್ಟಾರೆ ಪ್ರಮಾಣವನ್ನು ತಗ್ಗಿಸುತ್ತದೆ ಎಂಬುದು ಅವರ ಅಂದಾಜಾಗಿದೆ.

“ದಕ್ಷಿಣ ತಮಿಳುನಾಡಿನ ಜೊತೆಗೆ, ಕನ್ಯಾಕುಮಾರಿಯಂತಹ ಜಿಲ್ಲೆಗಳಲ್ಲಿ, ಕಾಂಗ್ರೆಸ್‌ಗೆ ಎಲ್ಲಿಯೂ ಗಮನಾರ್ಹವಾದ ಮತ ಬ್ಯಾಂಕ್ ಇಲ್ಲ. ವಾಸ್ತವವಾಗಿ ಪ್ರತಿ ಚುನಾವಣೆಯಲ್ಲೂ ನಾವು ಸ್ಥಳೀಯ ಡಿಎಂಕೆ ನಾಯಕರ ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡುವ ಮೂಲಕ ಡಿಎಂಕೆ ಆಕಾಂಕ್ಷಿಗಳಲ್ಲಿ ಅಸಮಾಧಾನ ಮೂಡಿಸುತ್ತಿದ್ದೆವೆ. ಅವರು ಅಂತಿಮವಾಗಿ ಪಕ್ಷದ ವಿರುದ್ಧ ದಂಗೆ ಏಳುತ್ತಾರೆ ” ಎಂದು ಡಿಎಂಕೆ ಮೂಲವೊಂದು ತಿಳಿಸಿದೆ.

ಡಿಎಂಕೆ ಅಂದಾಜೆಂದರೆ, ಪಶ್ಚಿಮ ತಮಿಳುನಾಡು ಎಐಎಡಿಎಂಕೆ ಭದ್ರಕೋಟೆಯಾಯಿತು. ಇದಕ್ಕೆ ಕಾರಣ, ಪಕ್ಷವು ಈ ಪ್ರದೇಶದ ಸ್ಥಾನಗಳನ್ನು ಕೇವಲ ಮೈತ್ರಿಯ ಕಾರಣಕ್ಕೆ ಕಾಂಗ್ರೆಸ್‌ಗೆ ಬಿಟ್ಟುಕೊಡುತ್ತ ಬಂದಿದ್ದು. ಪಕ್ಷವು ಈಗ ತನ್ನದೇ ಆದ ನಾಯಕರು ಸ್ಪರ್ಧಿಸಿ ಈ ಭಾಗದಲ್ಲಿ ಒಂದು ಶಕ್ತಿಯಾಗಿ ಪುನರುಜ್ಜೀವನಗೊಳ್ಳಬೇಕೆಂದು ಬಯಸಿದೆ.

ಮತ್ತೊಂದು ಡಿಎಂಕೆ ಮೂಲವು, 2021 ಡಿಎಂಕೆ ಚುನಾವಣೆಯಾಗಿದೆ ಮತ್ತು ಕಾಂಗ್ರೆಸ್ ಕೂಡ ಅದನ್ನು ಅರ್ಥಮಾಡಿಕೊಂಡಿದೆ ಎಂದು ಹೇಳಿದರು. “ನಮ್ಮ ಲೆಕ್ಕಾಚಾರಗಳನ್ನು ಆಧರಿಸಿ, ನಾವು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸುತ್ತೇವೆ, ಕಾಂಗ್ರೆಸ್ ಅರ್ಥಮಾಡಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ. ಇದು ಅಗ್ರಿಸ್ಸಿವ್ ವಿಚಾರ ಅಲ್ಲ, ವಾಸ್ತವದ ಲೆಕ್ಕಾಚಾರ” ಎಂದು ತಿಳಿಸಿದೆ.

ತಿರುಮವಾಲವನ್ ನೇತೃತ್ವದ ವಿಸಿಕೆ ಎಂಬ ಮತ್ತೊಂದು ಮೈತ್ರಿ ಪಾಲುದಾರರೊಂದಿಗಿನ ಮಾತುಕತೆಗಳಲ್ಲಿ ಡಿಎಂಕೆ ಕಠಿಣವಾಗಿದೆ. ವಿಸಿಕೆ 10 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರೂ, ಡಿಎಂಕೆ ಕೇವಲ ಆರು ಸ್ಥಾನಗಳಲ್ಲಿ ಸ್ಪರ್ಧಿಸಲು ಸೂಚಿಚಿದೆ. ಮಾತುಕತೆಯ ನಂತರ, ಗುರುವಾರ ಮಧ್ಯಾಹ್ನ ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ತಿರುಮವಾಲವನ್ ಅವರ ಮೈತ್ರಿಯಲ್ಲಿ ಪಕ್ಷವು ಕಾರ್ಯತಂತ್ರದ ಪ್ರಯೋಜನವನ್ನು ಹೊಂದಿದೆ, ಕಾಂಗ್ರೆಸ್‌ಗೆ ಅದರ ಕೊರತೆಯಿದೆ ಎಂಬ ಕಾರಣದಿಂದಾಗಿ ಪಕ್ಷವು ವಿಸಿಕೆಯನ್ನು ಮಿತ್ರಪಕ್ಷವಾಗಿ ಇಟ್ಟುಕೊಳ್ಳಲು ಬಯಸುತ್ತದೆ ಎಂದು ಡಿಎಂಕೆ ನಾಯಕರು ಹೇಳಿದರು. ಎಐಎಡಿಎಂಕೆ ಮೈತ್ರಿಕೂಟದ ಭಾಗವಾಗಿರುವ ವನ್ನಿಯಾರ್ ನೇತೃತ್ವದ ಪಿಎಂಕೆ ವಿರುದ್ಧ ದಲಿತ ಸಮುದಾಯದ ಮತಗಳನ್ನು ಕ್ರೂಢೀಕರಿಸಲು ವಿಸಿಕೆ ಸಹಾಯ ಮಾಡುತ್ತದೆ.

ಡಿಎಂಕೆ ಪರವಾಗಿ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಭಾರತೀಯ ರಾಜಕೀಯ ಕ್ರಿಯಾ ಸಮಿತಿ (ಐಪಿಎಸಿ) ಕಾರ್ಯತಂತ್ರ ರೂಪಿಸುತ್ತಿದೆ. ಸಲಹಾ ಸಂಸ್ಥೆಯ ದೈನಂದಿನ ಅಂದಾಜು ಪಕ್ಷಕ್ಕೆ ಭರ್ಜರಿ ಜಯವನ್ನು ಊಹಿಸುತ್ತಲೇ ಇವೆ. ಇದು ಮೂಡಿಸಿದ ವಿಶ್ವಾಸದಿಂದಾಗಿ, ಅಗತ್ಯಬಿದ್ದರೆ ಕಾಂಗ್ರೆಸ್‌ಗೆ ವಿದಾಯ ಹೇಳುವ ಡಿಎಂಕೆ ಸಿದ್ಧವಾಗಿದೆ.
ಕಾಂಗ್ರೆಸ್ಸಿನ ಹಿರಿಯ ಮುಖಂಡರೊಬ್ಬರು, ತಮ್ಮ ಸಂಶೋಧನೆ ಅಥವಾ ರಾಜಕೀಯ ತಿಳುವಳಿಕೆಯ ಆಧಾರದ ಮೇಲೆ ಪ್ರಶಾಂತ್ ಅವರ ಐಪಿಎಸಿ ಸಲಹೆಗಳನ್ನು ನೀಡಬಹುದು. ಆದರೆ ಈ ಜೂಜು ವರ್ಕ್ಔಟ್ ಆಗದಿದ್ದರೆ ಸ್ಟಾಲಿನ್ ರಾಜಕೀಯ ಪರಿಣಾಮಗಳನ್ನು ಭರಿಸಬೇಕಾಗುತ್ತದೆ’ ಎಂದಿದ್ದಾರೆ.

“ಕರುಣಾನಿಧಿ ಅವರು ಮಹಾ ಮೈತ್ರಿ ಬಯಸಿದ ರಾಜಕಾರಣಿಯಾಗಿದ್ದರೆ ಮತ್ತು ಅನೇಕ ರಾಜಕೀಯ ಪಕ್ಷಗಳು ಒಪ್ಪಿಕೊಂಡಿದ್ದ ನಾಯಕರಾಗಿದ್ದರೆ, ಸ್ಟಾಲಿನ್‌ಗಾಗಿ ರೂಪಿಸಲಾಗಿರುವ ಮಾರ್ಗವು ವಿಭಿನ್ನವಾಗಿದೆ. ಅದು ‘ಏಕಾಂಗಿಯಾಗಿ ಗೆಲ್ಲಬಲ್ಲ ಡಿಎಂಕೆ ಮಾರ್ಗ” ಎಂದು ಡಿಎಂಕೆ ಮೂಲಗಳು ವಾದಿಸುತ್ತಿವೆ. ಏಪ್ರಿಲ್ 6 ರ ಚುನಾವಣೆಯಲ್ಲಿ ಈ ಹೆಚ್ಚಿನ ಪಾಲಿನ, ರಿಸ್ಕ್ ಜೂಜು ಲಾಭ ತರುತ್ತದೆಯೇ ಎಂಬುದನ್ನು ಕಾದು ನೊಡಬೇಕಿದೆ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...