Homeಮುಖಪುಟಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

ಸೀಟು ಹಂಚಿಕೆ ವಿವಾದ: ಅಪಾಯದ ಅಂಚಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ?

- Advertisement -
- Advertisement -

ತಮಿಳುನಾಡಿನಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಕೇಳುತ್ತಿರುವ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಮತ್ತು ಪ್ರಬಲ ಪ್ರಾದೇಶಿಕ ಪಕ್ಷ ಡಿಎಂಕೆ ನಡುವಿನ ಸ್ಥಾನ ಹಂಚಿಕೆ ಮಾತುಕತೆ ಸ್ಥಗಿತಗೊಂಡಿದೆ.
ಡಿಎಂಕೆ-ಕಾಂಗ್ರೆಸ್ ಮೈತ್ರಿ ಮುರಿಯುವ ಹಂತದಲ್ಲಿದೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

2018 ರ ಡಿಸೆಂಬರ್‌ನಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ತಮ್ಮ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರಿಂದ ಪಕ್ಷದ ಆಡಳಿತವನ್ನು ವಹಿಸಿಕೊಂಡಿದ್ದರು, ಆಗಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು 2019 ರ ಸಾರ್ವತ್ರಿಕ ಚುನಾವಣೆಗಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಪ್ರಸ್ತಾಪಿಸಿದಾಗ ದೇಶವನ್ನು ಅಚ್ಚರಿಗೊಳಿಸಿತು. ಅದು ಅಚ್ಚರಿ ಉಂಟು ಮಾಡಿತ್ತು.

ಕಾಂಗ್ರೆಸ್‌ನ ಸುದೀರ್ಘ ಮಿತ್ರಪಕ್ಷಗಳಲ್ಲಿ ಒಬ್ಬರಾದ ಡಿಎಂಕೆಯ ಸ್ಟಾಲಿನ್ ರಾಹುಲ್ ಗಾಂಧಿಯವರ ಹೆಸರನ್ನು ಪ್ರಸ್ತಾಪಿಸಿದ ಮೊದಲ ಯುಪಿಎ ನಾಯಕರಾಗಿದ್ದರು.
ಈಗ, ಎರಡು ವರ್ಷಗಳ ನಂತರ, ಡಿಎಂಕೆ ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಮುರಿಯುವ ಅಂಚಿನಲ್ಲಿದೆ! 2006, 2011 ಮತ್ತು 2016 ರಲ್ಲಿ ಸತತ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಅದರ ಅತಿದೊಡ್ಡ ಪಾಲುದಾರ ಮಿತ್ರಪಕ್ಷವಾಗಿದ್ದ ಕಾಂಗ್ರೆಸ್‌ನೊಂದಿಗೆ ಡಿಎಂಕೆ ಸ್ವಲ್ಪ ಕಠಣವಾಗಿ ವರ್ತಿಸುತ್ತಿದೆ. ಇದನ್ನು ಸೈಕಾಲಿಜಿಕಲ್ ಮೂವ್ (ಮಾನಸಿಕ ನಡೆ) ಎನ್ನಲಾಗುತ್ತಿದೆ.

2021 ರ ವಿಧಾನಸಭಾ ಚುನಾವಣೆಗೆ ಮುನ್ನ, ಡಿಎಂಕೆ ಸ್ಪಷ್ಟವಾಗಿ ಕಾಂಗ್ರೆಸ್ ಕೇವಲ 20 ಸ್ಥಾನಗಳನ್ನು ಮಾತ್ರ ನೀಡಬಲ್ಲೆವು ಎಂದು ಹೇಳಿದೆ. ಮೊದಲಿಗೆ 18 ಸ್ಥಾನ ನೀಡುವುದಾಗಿ ಹೇಳಿದ ಅದು ಆರಂಭಿಕ ಮಾತುಕತೆಗಳ ನಂತರ 20 ಸ್ಥಾನದ ಆಫರ್ ಮಾಡಿದೆ.

ಈಗ ಕಾಂಗ್ರೆಸ್ ಮೇಲೆ ಜವಾಬ್ದಾರಿ ಇದೆ, ಮೈತ್ರಿಯಲ್ಲಿ ಮುಂದುವರಿಯಬೇಕೋ, ಇಲ್ಲವೋ ಎಂಬುದನ್ನು ಅದು ನಿರ್ಧರಿಸುವ ಕಾಲ ಬಂದಿದೆ. 2016 ಕ್ಕೆ ಹೋಲಿಸಿದರೆ ಕೇವಲ ಅರ್ಧದಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಬೇಕು ಅಥವಾ ಮೈತ್ರಿಯಿಂದ ಹೊರನಡೆಯಲು ಸಿದ್ಧವಾಗಬೇಕು.

ಹಾಗಾದರೆ ಡಿಎಂಕೆ ಈ ಆಕ್ರಮಣಕಾರಿ ನಿಲುವನ್ನು ಏಕೆ ಅಳವಡಿಸಿಕೊಂಡಿದೆ? “ಇದು ಮಾನಸಿಕ ನಡೆ” ಎಂದು ಡಿಎಂಕೆಯ ಉನ್ನತ ಮೂಲವೊಂದು ಹೇಳುತ್ತಿದೆ.. “ಕಾಂಗ್ರೆಸ್ ಹೊರನಡೆದರೆ ನಮಗೆ ಬೇಸರವಿಲ್ಲ. ವಾಸ್ತವವಾಗಿ ಅವರು ಮೈತ್ರಿಯಿಂದ ಹೊರಗುಳಿಯಬೇಕು ಎಂದು ಹಲವರು ಪ್ರತಿಪಾದಿಸುತ್ತಾರೆ. ಪಕ್ಷವು ದೊಡ್ಡ ಮೈತ್ರಿಯ ಭಾಗವಾಗಿದ್ದರೆ ಮಾತ್ರ ಡಿಎಂಕೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಎಂದು ಅನೇಕ ಮತದಾರರು ಭಾವಿಸುತ್ತಾರೆ, ನಾವು ಆ ಕಲ್ಪನೆಯನ್ನು ಮುರಿಯಬೇಕಾಗಿದೆ. ಕಾಂಗ್ರೆಸ್ಸಿನಂತಹ ಮೈತ್ರಿ ಪಾಲುದಾರರಿಲ್ಲದೆ ಡಿಎಂಕೆ ಭರ್ಜರಿ ಜಯ ಸಾಧಿಸಬಹುದು ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಪಕ್ಷದ ಕಾರ್ಯತಂತ್ರ ತಂಡದ ಅನೇಕ ನಾಯಕರು ಮತ್ತು ಸದಸ್ಯರು ಮಾತನಾಡುತ್ತಾ, ಕಾಂಗ್ರೆಸ್ಸಿನ ಉಪಸ್ಥಿತಿಯು ಡಿಎಂಕೆ ಭವಿಷ್ಯವನ್ನು ಹಾನಿಗೊಳಿಸುತ್ತದೆ ಮತ್ತು ಡಿಎಂಕೆಯ ಒಟ್ಟಾರೆ ಪ್ರಮಾಣವನ್ನು ತಗ್ಗಿಸುತ್ತದೆ ಎಂಬುದು ಅವರ ಅಂದಾಜಾಗಿದೆ.

“ದಕ್ಷಿಣ ತಮಿಳುನಾಡಿನ ಜೊತೆಗೆ, ಕನ್ಯಾಕುಮಾರಿಯಂತಹ ಜಿಲ್ಲೆಗಳಲ್ಲಿ, ಕಾಂಗ್ರೆಸ್‌ಗೆ ಎಲ್ಲಿಯೂ ಗಮನಾರ್ಹವಾದ ಮತ ಬ್ಯಾಂಕ್ ಇಲ್ಲ. ವಾಸ್ತವವಾಗಿ ಪ್ರತಿ ಚುನಾವಣೆಯಲ್ಲೂ ನಾವು ಸ್ಥಳೀಯ ಡಿಎಂಕೆ ನಾಯಕರ ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡುವ ಮೂಲಕ ಡಿಎಂಕೆ ಆಕಾಂಕ್ಷಿಗಳಲ್ಲಿ ಅಸಮಾಧಾನ ಮೂಡಿಸುತ್ತಿದ್ದೆವೆ. ಅವರು ಅಂತಿಮವಾಗಿ ಪಕ್ಷದ ವಿರುದ್ಧ ದಂಗೆ ಏಳುತ್ತಾರೆ ” ಎಂದು ಡಿಎಂಕೆ ಮೂಲವೊಂದು ತಿಳಿಸಿದೆ.

ಡಿಎಂಕೆ ಅಂದಾಜೆಂದರೆ, ಪಶ್ಚಿಮ ತಮಿಳುನಾಡು ಎಐಎಡಿಎಂಕೆ ಭದ್ರಕೋಟೆಯಾಯಿತು. ಇದಕ್ಕೆ ಕಾರಣ, ಪಕ್ಷವು ಈ ಪ್ರದೇಶದ ಸ್ಥಾನಗಳನ್ನು ಕೇವಲ ಮೈತ್ರಿಯ ಕಾರಣಕ್ಕೆ ಕಾಂಗ್ರೆಸ್‌ಗೆ ಬಿಟ್ಟುಕೊಡುತ್ತ ಬಂದಿದ್ದು. ಪಕ್ಷವು ಈಗ ತನ್ನದೇ ಆದ ನಾಯಕರು ಸ್ಪರ್ಧಿಸಿ ಈ ಭಾಗದಲ್ಲಿ ಒಂದು ಶಕ್ತಿಯಾಗಿ ಪುನರುಜ್ಜೀವನಗೊಳ್ಳಬೇಕೆಂದು ಬಯಸಿದೆ.

ಮತ್ತೊಂದು ಡಿಎಂಕೆ ಮೂಲವು, 2021 ಡಿಎಂಕೆ ಚುನಾವಣೆಯಾಗಿದೆ ಮತ್ತು ಕಾಂಗ್ರೆಸ್ ಕೂಡ ಅದನ್ನು ಅರ್ಥಮಾಡಿಕೊಂಡಿದೆ ಎಂದು ಹೇಳಿದರು. “ನಮ್ಮ ಲೆಕ್ಕಾಚಾರಗಳನ್ನು ಆಧರಿಸಿ, ನಾವು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸುತ್ತೇವೆ, ಕಾಂಗ್ರೆಸ್ ಅರ್ಥಮಾಡಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ. ಇದು ಅಗ್ರಿಸ್ಸಿವ್ ವಿಚಾರ ಅಲ್ಲ, ವಾಸ್ತವದ ಲೆಕ್ಕಾಚಾರ” ಎಂದು ತಿಳಿಸಿದೆ.

ತಿರುಮವಾಲವನ್ ನೇತೃತ್ವದ ವಿಸಿಕೆ ಎಂಬ ಮತ್ತೊಂದು ಮೈತ್ರಿ ಪಾಲುದಾರರೊಂದಿಗಿನ ಮಾತುಕತೆಗಳಲ್ಲಿ ಡಿಎಂಕೆ ಕಠಿಣವಾಗಿದೆ. ವಿಸಿಕೆ 10 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರೂ, ಡಿಎಂಕೆ ಕೇವಲ ಆರು ಸ್ಥಾನಗಳಲ್ಲಿ ಸ್ಪರ್ಧಿಸಲು ಸೂಚಿಚಿದೆ. ಮಾತುಕತೆಯ ನಂತರ, ಗುರುವಾರ ಮಧ್ಯಾಹ್ನ ಒಪ್ಪಂದವನ್ನು ಮಾಡಿಕೊಳ್ಳಲಾಯಿತು. ತಿರುಮವಾಲವನ್ ಅವರ ಮೈತ್ರಿಯಲ್ಲಿ ಪಕ್ಷವು ಕಾರ್ಯತಂತ್ರದ ಪ್ರಯೋಜನವನ್ನು ಹೊಂದಿದೆ, ಕಾಂಗ್ರೆಸ್‌ಗೆ ಅದರ ಕೊರತೆಯಿದೆ ಎಂಬ ಕಾರಣದಿಂದಾಗಿ ಪಕ್ಷವು ವಿಸಿಕೆಯನ್ನು ಮಿತ್ರಪಕ್ಷವಾಗಿ ಇಟ್ಟುಕೊಳ್ಳಲು ಬಯಸುತ್ತದೆ ಎಂದು ಡಿಎಂಕೆ ನಾಯಕರು ಹೇಳಿದರು. ಎಐಎಡಿಎಂಕೆ ಮೈತ್ರಿಕೂಟದ ಭಾಗವಾಗಿರುವ ವನ್ನಿಯಾರ್ ನೇತೃತ್ವದ ಪಿಎಂಕೆ ವಿರುದ್ಧ ದಲಿತ ಸಮುದಾಯದ ಮತಗಳನ್ನು ಕ್ರೂಢೀಕರಿಸಲು ವಿಸಿಕೆ ಸಹಾಯ ಮಾಡುತ್ತದೆ.

ಡಿಎಂಕೆ ಪರವಾಗಿ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಭಾರತೀಯ ರಾಜಕೀಯ ಕ್ರಿಯಾ ಸಮಿತಿ (ಐಪಿಎಸಿ) ಕಾರ್ಯತಂತ್ರ ರೂಪಿಸುತ್ತಿದೆ. ಸಲಹಾ ಸಂಸ್ಥೆಯ ದೈನಂದಿನ ಅಂದಾಜು ಪಕ್ಷಕ್ಕೆ ಭರ್ಜರಿ ಜಯವನ್ನು ಊಹಿಸುತ್ತಲೇ ಇವೆ. ಇದು ಮೂಡಿಸಿದ ವಿಶ್ವಾಸದಿಂದಾಗಿ, ಅಗತ್ಯಬಿದ್ದರೆ ಕಾಂಗ್ರೆಸ್‌ಗೆ ವಿದಾಯ ಹೇಳುವ ಡಿಎಂಕೆ ಸಿದ್ಧವಾಗಿದೆ.
ಕಾಂಗ್ರೆಸ್ಸಿನ ಹಿರಿಯ ಮುಖಂಡರೊಬ್ಬರು, ತಮ್ಮ ಸಂಶೋಧನೆ ಅಥವಾ ರಾಜಕೀಯ ತಿಳುವಳಿಕೆಯ ಆಧಾರದ ಮೇಲೆ ಪ್ರಶಾಂತ್ ಅವರ ಐಪಿಎಸಿ ಸಲಹೆಗಳನ್ನು ನೀಡಬಹುದು. ಆದರೆ ಈ ಜೂಜು ವರ್ಕ್ಔಟ್ ಆಗದಿದ್ದರೆ ಸ್ಟಾಲಿನ್ ರಾಜಕೀಯ ಪರಿಣಾಮಗಳನ್ನು ಭರಿಸಬೇಕಾಗುತ್ತದೆ’ ಎಂದಿದ್ದಾರೆ.

“ಕರುಣಾನಿಧಿ ಅವರು ಮಹಾ ಮೈತ್ರಿ ಬಯಸಿದ ರಾಜಕಾರಣಿಯಾಗಿದ್ದರೆ ಮತ್ತು ಅನೇಕ ರಾಜಕೀಯ ಪಕ್ಷಗಳು ಒಪ್ಪಿಕೊಂಡಿದ್ದ ನಾಯಕರಾಗಿದ್ದರೆ, ಸ್ಟಾಲಿನ್‌ಗಾಗಿ ರೂಪಿಸಲಾಗಿರುವ ಮಾರ್ಗವು ವಿಭಿನ್ನವಾಗಿದೆ. ಅದು ‘ಏಕಾಂಗಿಯಾಗಿ ಗೆಲ್ಲಬಲ್ಲ ಡಿಎಂಕೆ ಮಾರ್ಗ” ಎಂದು ಡಿಎಂಕೆ ಮೂಲಗಳು ವಾದಿಸುತ್ತಿವೆ. ಏಪ್ರಿಲ್ 6 ರ ಚುನಾವಣೆಯಲ್ಲಿ ಈ ಹೆಚ್ಚಿನ ಪಾಲಿನ, ರಿಸ್ಕ್ ಜೂಜು ಲಾಭ ತರುತ್ತದೆಯೇ ಎಂಬುದನ್ನು ಕಾದು ನೊಡಬೇಕಿದೆ.


ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...