Homeಡೇಟಾ ಖೋಲಿಕೊರೊನಾಗೆ ಔಷಧಿ: ಏಳು ಕೋಟೆಯ ರಾಜದುರ್ಗದಲ್ಲಿ ಲಸಿಕಾಯಣದ ರಹಸ್ಯ

ಕೊರೊನಾಗೆ ಔಷಧಿ: ಏಳು ಕೋಟೆಯ ರಾಜದುರ್ಗದಲ್ಲಿ ಲಸಿಕಾಯಣದ ರಹಸ್ಯ

ಅದರ ನಮ್ಮವರು ಲಸಿಕೆ ಮಾಡತೇನಿ ಅಂತ ಹೇಳಿ ಟೂ ಮಿನಿಟ್ ಮ್ಯಾಗಿ ಮಾಡಾಕ ಹೊಂಟಾರ.

- Advertisement -
- Advertisement -

“ಕುಂಟ ಕುಂಟ ಕುರವತ್ತಿ, ರಂಟಿ ಹೊಡಿಯೋ ಬಾಳಪ್ಪ’’ ಅನ್ನೋದು ನಮ್ಮ ಬಾಲ್ಯದ ಫೇವರಿಟ್ ಹಾಡು. ಅದನ್ನ ಯಾರನ್ನರ ರೇಗಿಸಲಿಕ್ಕೆ ಹಾಡುತ್ತಾ ಇದ್ವಿ. ಯಾಕ ಅಂದ್ರ ನಮ್ಮ ಸಾಲಿಯೊಳಗ ಪ್ರತಿ ಕ್ಲಾಸ್‍ದಾಗು ಒಬ್ಬ ಕುಂಟ ಇರತಿದ್ದ.

ಅವರೆಲ್ಲರೂ ಪೋಲಿಯೋದಿಂದ ಕುಂಟತಿದ್ದರು.

ಈಗ ನೀವು ಯಾವುದರ ಶಹರ ಅಥವಾ ಹಳ್ಳಿಯ ಸರ್ಕಾರಿ ಸಾಲಿಗೆ ಹೋಗಿ ಹುಡುಕಿದರ ಒಬ್ಬನ ಒಬ್ಬ ಪೋಲಿಯೋ ರೋಗಿ ಸಿಗಂಗಿಲ್ಲ.

ಅದಕ್ಕ ಕಾರಣ ಎನಪಾ ಅಂದ್ರ, ಸುಮಾರು 25 ವರ್ಷದಿಂದ ನಮ್ಮ ದೇಶದಾಗ ನಡದುಕೊಂಡು ಬಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ.

ಭಾರತ ಸರಕಾರ, ವಿಶ್ವ ಆರೋಗ್ಯ ಸಂಸ್ಥೆ, ರೋಟರಿ ಕ್ಲಬ್, ಗೇಟ್ಸ್ ಫೌಂಡೇಶನ್ ಇತ್ಯಾದಿ ಸಂಸ್ಥೆಗಳ ಪ್ರಯತ್ನದಿಂದ ನಮ್ಮ ದೇಶದ ಎಲ್ಲಾ ಮಕ್ಕಳಿಗೂ ಉಚಿತವಾಗಿ ಇಷ್ಟು ವರ್ಷಗಟ್ಟಲೆ ಲಸಿಕೆ ಸಿಕ್ಕದ.

ಅದಕ್ಕ ಎರಡು ಕಾರಣ ಅದಾವು. ಆ ರೋಗ ಬರದಂಗ ಒಬ್ಬ ಪುಣ್ಯಾತ್ಮ ಲಸಿಕೆ ಕಂಡು ಹಿಡದ. ಮತ್ತು ಅದನ್ನು ಪೇಟೆಂಟು ಮಾಡಿ ರೊಕ್ಕ ಹೊಡಿಯೋ ವಿಚಾರ ಮಾಡಲಿಲ್ಲ.

ಭಾರತದಂತಹ ಬಡ, ಹಿಂದುಳಿದ ಅಸಂಖ್ಯ ದೇಶಗಳ ಕೋಟ್ಯಾಂತರ ಜನ ತಂಪ ಹೊತ್ತಿನಾಗ ನೆನೆಸಬೇಕಾದ ಆ ಮನುಷ್ಯನ ಹೆಸರು ಜೋನಾಸ ಸಾಲ್ಕ.

ಜಗತ್ತಿನಾದ್ಯಂತ ಕೋಟ್ಯಾಂತರ ಜನರ ಅಂಗವೈಕಲ್ಯ ತಪ್ಪಿಸಿದ ಈ ವಿಜ್ಞಾನಿಗೆ ಸಾವಿರಾರು ಪ್ರಶಸ್ತಿ ಬಂದವು. ಆದರ ಪ್ರಚಾರದಿಂದ ದೂರ ಇರಲು ಇಷ್ಟ ಪಡುತ್ತಾ ಇದ್ದ ಜೋನಾಸ, ‘ಈ ಕೀರ್ತಿ ಶನಿ ನನ್ನ ಕೆಲಸಕ್ಕೆ ಅಡ್ಡವಾಗುತ್ತಾನೆ’ ಅಂತ ಹೇಳುತ್ತಿದ್ದರು. ಈ ಲಸಿಕೆಗೆ ಪೇಟೆಂಟು ಮಾಡಿಸೋದಿಲ್ಲವೇ ಅಂತ ಕೇಳಿದರೆ ‘ಸೂರ್ಯನಿಗೆ ಪೇಟೆಂಟು ಮಾಡಬಹುದೇ’ ಅಂತ ಉತ್ತರ ಕೊಟ್ಟರು.

ಅರೆ ಶಿಕ್ಷಣ ಪಡೆದ ವಲಸೆ ಕಾರ್ಮಿಕರ ಮಗನಾಗಿದ್ದ ಜೋನಾಸ ಅವರು ಕಷ್ಟಪಟ್ಟು ಕಾಲೇಜಿಗೆ ಸೇರಿದರು.

ವೈದ್ಯ ಪದವಿಯ ನಂತರ ಸಂಶೋಧನೆ ನಡೆಸಬೇಕು ಅಂತ ಆಸ್ಪತ್ರೆ ಸೇರದೆ ಪ್ರಯೋಗಶಾಲೆ ಸೇರಿಕೊಂಡರು. ಅಮೇರಿಕದ ಮಕ್ಕಳಲ್ಲಿ ಹೆಚ್ಚು ಆಗ್ತಾ ಇರೋ ಪೋಲಿಯೋ ಪಿಡುಗು ನೋಡಿ ಬೇಸತ್ತು ಇದಕ್ಕ ಏನರ ಮಾಡ್ಬೇಕಲೇ ಅಂತ ಹೇಳಿ ಪೋಲಿಯೋ ವೈರಸ್ಸಿನ ಹಿಂದ ಬಿದ್ದರು.

ಸುಮಾರು ಒಂಬತ್ತು ವರ್ಷ ಸಂಶೋಧನೆ ಮಾಡಿದ ಮ್ಯಾಲೆ ಆ ವೈರಸ್ಸಿನ ನಿರ್ಜೀವ ಜೀವಾಣು ಹೊರಗ ತಗದು ಅದನ್ನ ಆರೋಗ್ಯವಂತ ಪ್ರಾಣಿ ಹಾಗೂ ಮನುಷ್ಯರ ದೇಹದೊಳಗ ಹಾಕಿ, ಅದನ್ನ ಸೋಲಿಸಿದ ಯಾಂಟೀಬಾಡಿ ಜೀವಕೋಶಗಳನ್ನ ತಗದು ಸಣ್ಣ ಮಕ್ಕಳಿಗೆ ಕೊಟ್ಟಾಗ ಲಸಿಕೆ ತಯಾರು ಆತು.

ಅದನ್ನ ಪರೀಕ್ಷೆ ಮಾಡಲಾರದೇ ಜನ ಸಾಮಾನ್ಯರಿಗೆ ಕೊಡಬಾರದು ಅಂತ ಹೇಳಿ ಪ್ರಾಯೋಗಿಕ ಪರೀಕ್ಷೆ ಮಾಡಿದರು. ಅದರಾಗ ಸುಮಾರು 18 ಲಕ್ಷ ಶಾಲಾ ವಿದ್ಯಾರ್ಥಿಗಳು, ಎರಡೂ ಕಾಲು ಲಕ್ಷ ಇತರೆ ವಿದ್ಯಾರ್ಥಿಗಳು, 65 ಸಾವಿರ ಶಿಕ್ಷಕರು, 20 ಸಾವಿರ ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ಇಂಥದೇ ಕೆಲಸ ಮಾಡಿದ ಇನ್ನೊಬ್ಬ ದೊಡ್ಡ ಮನುಷ್ಯ ಅಂದ್ರ ಆಲ್ಬರ್ಟ್ ಸಾಬಿನ. ಪೋಲಂಡ್ ದೇಶದಾಗ ಹುಟ್ಟಿದ ಈ ಮನುಷ್ಯ ಅಮೇರಿಕದಾಗ ಸಂಶೋಧನೆ ಮಾಡಿ ಔಷದಿ ತರ ನುಂಗೋ ಲಸಿಕೆ ಕಂಡು ಹಿಡದರು. ಈಗ ಎಲ್ಲಾ ದೇಶದಾಗ ಕೊಡೋ ಲಸಿಕೆ ಇದ ಸಾಬಿನ ಲಸಿಕೆ. ಇವರ ಓಪಿವಿ ಅಥವಾ ಬಾಯಿಯಿಂದ ತೊಗೊಳಲೋ ಲಸಿಕೆಯನ್ನು ಕಮ್ಮಿ ಅಂದರೂ ಹತ್ತು ಕೋಟಿ ಜನರ ಮ್ಯಾಲೆ ಪರೀಕ್ಷೆ ಮಾಡಲಾಯಿತು.

ಇಂತಹ ದುರಿತ ಕಾಲದಾಗ ಈ ಪುಣ್ಯವಂತರ ನೆನಪು ಯಾಕ ಆತಪ ಅಂದ್ರ ನಮ್ಮ ಸರಕಾರದವರು ಕೊರೊನಾ ವೈರಾಣು ವಿರುದ್ಧ ಒಂದು ಲಸಿಕೆ ರೆಡಿ ಮಾಡಾಕ ಹೊಂಟಾರು. ಅದು ಇನ್ನೂ ಕಾದು ಬೆಂದು ತಯಾರು ಆಗೋಕಿಂತಾ ಮೊದಲಿಗೆ ನಮ್ಮ ಮೂಗು ಬಾಯಿ ಹಿಡದು ಅದನ್ನ ಕೂಡಸಾಕ ತಯಾರಿ ಮಾಡಾಕ ಹತ್ಯಾರ್.

ಅದು ಹೆಂಗಪಾ ಅಂದ್ರ ಮದುವಿ ಮನಿಯೊಳಗ ದೊಡ್ಡ ಅಡಿಗಿ ತಯಾರು ಆಗೋ ಮುಂದ ಅಡಿಗಿ ಭಟ್ಟರಿಗೆ ಎನರ ಸಂಶಯ ಬಂದರ್ ಕಲ್ಯಾಣಮಂಟಪದ ಹೊರಗ ಕೂತಿರೋ ಭಿಕ್ಷ ಬೇಡುವರಿಗೆ ಕೊಟ್ಟು ನೋಡತಾರಲ್ಲಾ, ಹಂಗ.

ನಿಮಗ ಒಂದು ಲೆಕ್ಕ ಕೊಡತೇನಿ. ಜೋನಾಸ ಅವರ ಪರೀಕ್ಷೆಗೆ ಒಳಗಾದವರು ಸುಮಾರು 20 ಲಕ್ಷ ಮಂದಿ. ಅದು 1946 ರ ಸುಮಾರಿಗೆ ಅಮೇರಿಕಾದ ಜನ ಸಂಖ್ಯೆಯ ಶೇಕಡಾ ಒಂದರಷ್ಟು. ಇನ್ನ ಸಾಬಿನ ಅವರ ಪರೀಕ್ಷೆ ಯೊಳಗ 1960 ರಾಗ ಪಾಲುಗೊಂಡವರು ಸುಮಾರು 10 ಕೋಟಿ, ಅದು ಆವಾಗಿನ ವಿಶ್ವದ ಜನಸಂಖ್ಯೆಯ ಶೇಕಡಾ 3 ರಷ್ಟು.

ಅದರ ನಮ್ಮವರು ಲಸಿಕೆ ಮಾಡತೇನಿ ಅಂತ ಹೇಳಿ ಟೂ ಮಿನಿಟ್ ಮ್ಯಾಗಿ ಮಾಡಾಕ ಹೊಂಟಾರ.

ಮಾರ್ಚ್ 23 ರ ಸರಕಾರದವರು ವಿಧಿಸಿ, ಜನತಾ ಕರಫ್ಯೂ ಅಂತ ಹೆಸರು ಇಟ್ಟ ದಿನದ ನಂತರ ನಮ್ಮ ದೇಶದ 11 ಖಾಸಗಿ ಕಂಪನಿಗಳು ಲಸಿಕೆ ತಯಾರಿಕೆ ಆರಂಭ ಮಾಡಿದವು. ಆದರಾಗ ಇಬ್ಬರು ಭಾರಿ ಜೋರಾಗಿ ಓಡಿ ಮುಂದ ಹೋಗಿ ನಾವು ಕೋರೋನಾ ಲಸಿಕೆ ತಯಾರು ಮಾಡಿದೇವು. ನಮಗ ಜನರ ಮ್ಯಾಲೆ ಅದನ ಪ್ರಯೋಗ ಮಾಡಾಕ ಅನುಮತಿ ಕೊಡರಿ ಅಂತ ಸರ್ಕಾರದ ಮುಂದ ಕೂತರು. ಈ ವಿಷಮ ಸ್ಥಿತಿಯೊಳಗ ಸರಕಾರ ಎನ್ನೂ ಮಾಡಿಲ್ಲ ಅಂತ ಬೈಸಿಕೊಂಡು ಸಾಕಾಗಿದ್ದ ಸರ್ಕಾರದ ಮಂತ್ರಿ ಹಾಗೂ ಅವರ ಬಾಬುಗಳು ಅವರಿಗೆ ಹೂಂ ಅಂತ ಸೀಟಿ ಹೊಡದುಬಿಟ್ಟರು. ದೇಶದ 12 ಪ್ರಯೋಗಶಾಲೆಗಳಲ್ಲಿ ಸುಮಾರು ಎರಡೂವರೆ ಸಾವಿರ ಆರೋಗ್ಯವಂತ ಯುವಕರ ಮೇಲೆ ಪ್ರಯೋಗ ನಡೆಸಿದ ನಂತರ ಈ ಲಸಿಕೆ ಬಿಡುಗಡೆ ಆಗತದ ಅಂತ ಹೇಳಿದರು.

ಅಷ್ಟ ಅಲ್ಲ, ಅದರ ಪರೀಕ್ಷೆ ಮುಗದು ಆಗಸ್ಟ್ 15 ರ ಸ್ವತಂತ್ರ ದಿನದ ದಿವಸ ಈ ದೇಶಕ್ಕ ಕೋರೋನಾದಿಂದ ಮುಕ್ತಿ ಸಿಗತದ ಅಂತ ಘೋಷಿಸಿ ಬಿಟ್ಟರು.

ಅಂದ್ರ ಅದು ಕೇವಲ 40 ದಿನದಾಗ ಬೆಳೆದು ಪರಿಪಕ್ವವಾಗಬೇಕಾದ ಲಸಿಕೆ. ಜೋನಾಸ ಸಾಹೇಬರ ಒಂಬತ್ತು ವರ್ಷ, ಇಪ್ಪತ್ತು ಲಕ್ಷ ಜನರ ಪರೀಕ್ಷೆ ಹಾಗೂ ಸಾಬಿನ ಸಾಹೇಬರ 10 ಕೋಟಿ ಜನರ ಪರೀಕ್ಷೆ ಇಲ್ಲೇ ನೆನಸಿಕೋರಿ.

ಅದೂ ಅಲ್ಲದ, ಹೈದರಾಬಾದು ಮತ್ತು ಅಹ್ಮದಾಬಾದು ನಗರದ ಎರಡು ಖಾಸಗಿ ಕಂಪನಿಗಳು ತಾವು ಲಸಿಕೆ ತಯಾರು ಮಾಡಿದರೂ ಕೂಡ ಭಾರತ ಸರ್ಕಾರದ ವೈದ್ಯ ಸಂಶೋಧನಾ ಪರಿಷತ್ತು, ನಮ್ಮ ಸಹಭಾಗಿತ್ವದಾಗ ಇದನ್ನ ತಯಾರು ಮಾಡಿದೆ ಅಂತ ಹೇಳಿಕೊಂಡವು.

ಪರಿಷತ್ತಿನ ಯಾವ ಅಧಿಕಾರಿಯೂ ಕೂಡ ಒಂದು ಪತ್ರಿಕಾ ಪ್ರಕಟಣೆ ಕೊಡಲಿಲ್ಲ, ಕೇಂದ್ರದ ಆರೋಗ್ಯ ಇಲಾಖೆ ಹೊರಡಿಸಿದ ಪ್ರಕಟಣೆಯೊಳಗ ಒಬ್ಬ ವಿಜ್ಞಾನಿಯ ಹೆಸರು ಇಲ್ಲ. ವಿವರ ತಿಳಿಸಲಿಕ್ಕೆ ಯಾರೂ ಒಂದು ಪತ್ರಿಕಾಗೋಷ್ಟಿ ಕರಿಯಲಿಲ್ಲ. ಗರ್ಭ ಗುಡಿಯ ದೇವರೇ ಕರೆಯದೇ ಇದ್ದಾಗ ದ್ವಾರಪಾಲಕರು ಯಾಕ ಕರೀತಾರ?, ಅದೂ ಖರೇನ.

ಸಮ ಪರೀಕ್ಷೆ ಆಗದೇ ಲಸಿಕೆ ಹೊರಗ ಬಂದು ಅದನ್ನು ನಮ್ಮ ಜನ ತೊಗೊಂಡು, ಕೆಲವರು ಉಳದು, ಕೆಲವರು ಸತ್ತು ಹೋದರ ಯಾವಾಗ ಏನು ಆಗತದ?

ಅಷ್ಟು ದೊಡ್ಡ ದೇಶದಾಗ ಅಷ್ಟು ದೊಡ್ಡ ಕೆಲಸ ಆಗೋವಾಗ ಅಷ್ಟು ಜನ ಸಾಯೋರ, ಅಂತ ಸರ್ಕಾರದ ಪ್ರತಿ ಕ್ರಮವನ್ನು ಕಣ್ಣು ಮುಚ್ಚಿ ಬೆಂಬಲಿಸೋರು ಅನ್ನಬಹುದು. ವಿರೋಧ ಪಕ್ಷದವರು ಇಲ್ಲ ನಾವು ಮೊದಲ ಹೇಳಿದ್ದೀವಿ, ಇವರು ಕೈ ಹಾಕೋ ಎಲ್ಲಾ ಕೆಲಸನೂ ಹಿಂಗ, ಪಿಷಕಿ, ಅಂತ ಮೂಗು ಮುರೀಬಹುದು. ವಸ್ತುನಿಷ್ಟವಾಗಿ ಮಾತಾಡೋ ವಿಜ್ಞಾನಿಗಳಿಗಂತೂ ಇಲ್ಲಿ ಜಾಗಾ ಇಲ್ಲಾ, ಹಿಂಗಾಗಿ ಸರ್ಕಾರಕ್ಕ ಅಂತೂ ಯಾವುದೇ ವ್ಯತ್ಯಾಸ ಆಗಂಗಿಲ್ಲ.

ಅದಕ್ಕ ಹೇಳೋದು, ಈ ಲಸಿಕಾ ಪರೀಕ್ಷೆ ಅನ್ನೋದು ಏಳು ಕೋಟೆಯ ರಾಜದುರ್ಗದಲ್ಲಿ ಲಸಿಕಾಯಣದ ರಹಸ್ಯ ಅಂತ.

  • ಡೇಟಾಮ್ಯಾಟಿಕ್ಸ್‌

ಇದನ್ನು ಓದಿ: ಕೊರೊನಾ: ವ್ಯಾಕ್ಸೀನ್ ಎಂದರೇನು? ಜಾಗತಿಕ ಸ್ಪರ್ಧೆಯು ಬೇಗ ವ್ಯಾಕ್ಸೀನ್ ಒದಗಿಸುತ್ತದೆಯೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಡೇಟಾಮ್ಯಾಟಿಕ್ಸ್ ಚೆನ್ನಾಗಿದೆ.
    ಐಸಿಎಂಆರ್ನಿಂದ 2-ಮಿನಿಟ್ ಮ್ಯಾಗಿ: ಚಟಾಪಟ್ ಲಸಿಕೆ
    ಅಗಸ್ಟ್ 15ಕ್ಕ ಪಿಎಂ ಮ್ಯಾಲ ಪ್ರಯೋಗ ಮಾಡ್ಲಿ. ಅದಕ್ಕೂ ಮೊದ್ಲ ಅವ್ರಿಗೆ ಸೋಂಕು ತಗುಲಿಸಬೇಕು ಅಲ್ಲವಾ? ಅವಾಗ ಫಸ್ಟ್ ಕ್ಲಿನಿಕಲ್ ಮ಻ತ್ತು ಕ್ಲೀನ್ ಟೆಸ್ಟು ಆಕ್ಕೈತಿ ನೋಡ್ರಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...