Homeಡೇಟಾ ಖೋಲಿಕೊರೊನಾಗೆ ಔಷಧಿ: ಏಳು ಕೋಟೆಯ ರಾಜದುರ್ಗದಲ್ಲಿ ಲಸಿಕಾಯಣದ ರಹಸ್ಯ

ಕೊರೊನಾಗೆ ಔಷಧಿ: ಏಳು ಕೋಟೆಯ ರಾಜದುರ್ಗದಲ್ಲಿ ಲಸಿಕಾಯಣದ ರಹಸ್ಯ

ಅದರ ನಮ್ಮವರು ಲಸಿಕೆ ಮಾಡತೇನಿ ಅಂತ ಹೇಳಿ ಟೂ ಮಿನಿಟ್ ಮ್ಯಾಗಿ ಮಾಡಾಕ ಹೊಂಟಾರ.

- Advertisement -
- Advertisement -

“ಕುಂಟ ಕುಂಟ ಕುರವತ್ತಿ, ರಂಟಿ ಹೊಡಿಯೋ ಬಾಳಪ್ಪ’’ ಅನ್ನೋದು ನಮ್ಮ ಬಾಲ್ಯದ ಫೇವರಿಟ್ ಹಾಡು. ಅದನ್ನ ಯಾರನ್ನರ ರೇಗಿಸಲಿಕ್ಕೆ ಹಾಡುತ್ತಾ ಇದ್ವಿ. ಯಾಕ ಅಂದ್ರ ನಮ್ಮ ಸಾಲಿಯೊಳಗ ಪ್ರತಿ ಕ್ಲಾಸ್‍ದಾಗು ಒಬ್ಬ ಕುಂಟ ಇರತಿದ್ದ.

ಅವರೆಲ್ಲರೂ ಪೋಲಿಯೋದಿಂದ ಕುಂಟತಿದ್ದರು.

ಈಗ ನೀವು ಯಾವುದರ ಶಹರ ಅಥವಾ ಹಳ್ಳಿಯ ಸರ್ಕಾರಿ ಸಾಲಿಗೆ ಹೋಗಿ ಹುಡುಕಿದರ ಒಬ್ಬನ ಒಬ್ಬ ಪೋಲಿಯೋ ರೋಗಿ ಸಿಗಂಗಿಲ್ಲ.

ಅದಕ್ಕ ಕಾರಣ ಎನಪಾ ಅಂದ್ರ, ಸುಮಾರು 25 ವರ್ಷದಿಂದ ನಮ್ಮ ದೇಶದಾಗ ನಡದುಕೊಂಡು ಬಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ.

ಭಾರತ ಸರಕಾರ, ವಿಶ್ವ ಆರೋಗ್ಯ ಸಂಸ್ಥೆ, ರೋಟರಿ ಕ್ಲಬ್, ಗೇಟ್ಸ್ ಫೌಂಡೇಶನ್ ಇತ್ಯಾದಿ ಸಂಸ್ಥೆಗಳ ಪ್ರಯತ್ನದಿಂದ ನಮ್ಮ ದೇಶದ ಎಲ್ಲಾ ಮಕ್ಕಳಿಗೂ ಉಚಿತವಾಗಿ ಇಷ್ಟು ವರ್ಷಗಟ್ಟಲೆ ಲಸಿಕೆ ಸಿಕ್ಕದ.

ಅದಕ್ಕ ಎರಡು ಕಾರಣ ಅದಾವು. ಆ ರೋಗ ಬರದಂಗ ಒಬ್ಬ ಪುಣ್ಯಾತ್ಮ ಲಸಿಕೆ ಕಂಡು ಹಿಡದ. ಮತ್ತು ಅದನ್ನು ಪೇಟೆಂಟು ಮಾಡಿ ರೊಕ್ಕ ಹೊಡಿಯೋ ವಿಚಾರ ಮಾಡಲಿಲ್ಲ.

ಭಾರತದಂತಹ ಬಡ, ಹಿಂದುಳಿದ ಅಸಂಖ್ಯ ದೇಶಗಳ ಕೋಟ್ಯಾಂತರ ಜನ ತಂಪ ಹೊತ್ತಿನಾಗ ನೆನೆಸಬೇಕಾದ ಆ ಮನುಷ್ಯನ ಹೆಸರು ಜೋನಾಸ ಸಾಲ್ಕ.

ಜಗತ್ತಿನಾದ್ಯಂತ ಕೋಟ್ಯಾಂತರ ಜನರ ಅಂಗವೈಕಲ್ಯ ತಪ್ಪಿಸಿದ ಈ ವಿಜ್ಞಾನಿಗೆ ಸಾವಿರಾರು ಪ್ರಶಸ್ತಿ ಬಂದವು. ಆದರ ಪ್ರಚಾರದಿಂದ ದೂರ ಇರಲು ಇಷ್ಟ ಪಡುತ್ತಾ ಇದ್ದ ಜೋನಾಸ, ‘ಈ ಕೀರ್ತಿ ಶನಿ ನನ್ನ ಕೆಲಸಕ್ಕೆ ಅಡ್ಡವಾಗುತ್ತಾನೆ’ ಅಂತ ಹೇಳುತ್ತಿದ್ದರು. ಈ ಲಸಿಕೆಗೆ ಪೇಟೆಂಟು ಮಾಡಿಸೋದಿಲ್ಲವೇ ಅಂತ ಕೇಳಿದರೆ ‘ಸೂರ್ಯನಿಗೆ ಪೇಟೆಂಟು ಮಾಡಬಹುದೇ’ ಅಂತ ಉತ್ತರ ಕೊಟ್ಟರು.

ಅರೆ ಶಿಕ್ಷಣ ಪಡೆದ ವಲಸೆ ಕಾರ್ಮಿಕರ ಮಗನಾಗಿದ್ದ ಜೋನಾಸ ಅವರು ಕಷ್ಟಪಟ್ಟು ಕಾಲೇಜಿಗೆ ಸೇರಿದರು.

ವೈದ್ಯ ಪದವಿಯ ನಂತರ ಸಂಶೋಧನೆ ನಡೆಸಬೇಕು ಅಂತ ಆಸ್ಪತ್ರೆ ಸೇರದೆ ಪ್ರಯೋಗಶಾಲೆ ಸೇರಿಕೊಂಡರು. ಅಮೇರಿಕದ ಮಕ್ಕಳಲ್ಲಿ ಹೆಚ್ಚು ಆಗ್ತಾ ಇರೋ ಪೋಲಿಯೋ ಪಿಡುಗು ನೋಡಿ ಬೇಸತ್ತು ಇದಕ್ಕ ಏನರ ಮಾಡ್ಬೇಕಲೇ ಅಂತ ಹೇಳಿ ಪೋಲಿಯೋ ವೈರಸ್ಸಿನ ಹಿಂದ ಬಿದ್ದರು.

ಸುಮಾರು ಒಂಬತ್ತು ವರ್ಷ ಸಂಶೋಧನೆ ಮಾಡಿದ ಮ್ಯಾಲೆ ಆ ವೈರಸ್ಸಿನ ನಿರ್ಜೀವ ಜೀವಾಣು ಹೊರಗ ತಗದು ಅದನ್ನ ಆರೋಗ್ಯವಂತ ಪ್ರಾಣಿ ಹಾಗೂ ಮನುಷ್ಯರ ದೇಹದೊಳಗ ಹಾಕಿ, ಅದನ್ನ ಸೋಲಿಸಿದ ಯಾಂಟೀಬಾಡಿ ಜೀವಕೋಶಗಳನ್ನ ತಗದು ಸಣ್ಣ ಮಕ್ಕಳಿಗೆ ಕೊಟ್ಟಾಗ ಲಸಿಕೆ ತಯಾರು ಆತು.

ಅದನ್ನ ಪರೀಕ್ಷೆ ಮಾಡಲಾರದೇ ಜನ ಸಾಮಾನ್ಯರಿಗೆ ಕೊಡಬಾರದು ಅಂತ ಹೇಳಿ ಪ್ರಾಯೋಗಿಕ ಪರೀಕ್ಷೆ ಮಾಡಿದರು. ಅದರಾಗ ಸುಮಾರು 18 ಲಕ್ಷ ಶಾಲಾ ವಿದ್ಯಾರ್ಥಿಗಳು, ಎರಡೂ ಕಾಲು ಲಕ್ಷ ಇತರೆ ವಿದ್ಯಾರ್ಥಿಗಳು, 65 ಸಾವಿರ ಶಿಕ್ಷಕರು, 20 ಸಾವಿರ ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ಇಂಥದೇ ಕೆಲಸ ಮಾಡಿದ ಇನ್ನೊಬ್ಬ ದೊಡ್ಡ ಮನುಷ್ಯ ಅಂದ್ರ ಆಲ್ಬರ್ಟ್ ಸಾಬಿನ. ಪೋಲಂಡ್ ದೇಶದಾಗ ಹುಟ್ಟಿದ ಈ ಮನುಷ್ಯ ಅಮೇರಿಕದಾಗ ಸಂಶೋಧನೆ ಮಾಡಿ ಔಷದಿ ತರ ನುಂಗೋ ಲಸಿಕೆ ಕಂಡು ಹಿಡದರು. ಈಗ ಎಲ್ಲಾ ದೇಶದಾಗ ಕೊಡೋ ಲಸಿಕೆ ಇದ ಸಾಬಿನ ಲಸಿಕೆ. ಇವರ ಓಪಿವಿ ಅಥವಾ ಬಾಯಿಯಿಂದ ತೊಗೊಳಲೋ ಲಸಿಕೆಯನ್ನು ಕಮ್ಮಿ ಅಂದರೂ ಹತ್ತು ಕೋಟಿ ಜನರ ಮ್ಯಾಲೆ ಪರೀಕ್ಷೆ ಮಾಡಲಾಯಿತು.

ಇಂತಹ ದುರಿತ ಕಾಲದಾಗ ಈ ಪುಣ್ಯವಂತರ ನೆನಪು ಯಾಕ ಆತಪ ಅಂದ್ರ ನಮ್ಮ ಸರಕಾರದವರು ಕೊರೊನಾ ವೈರಾಣು ವಿರುದ್ಧ ಒಂದು ಲಸಿಕೆ ರೆಡಿ ಮಾಡಾಕ ಹೊಂಟಾರು. ಅದು ಇನ್ನೂ ಕಾದು ಬೆಂದು ತಯಾರು ಆಗೋಕಿಂತಾ ಮೊದಲಿಗೆ ನಮ್ಮ ಮೂಗು ಬಾಯಿ ಹಿಡದು ಅದನ್ನ ಕೂಡಸಾಕ ತಯಾರಿ ಮಾಡಾಕ ಹತ್ಯಾರ್.

ಅದು ಹೆಂಗಪಾ ಅಂದ್ರ ಮದುವಿ ಮನಿಯೊಳಗ ದೊಡ್ಡ ಅಡಿಗಿ ತಯಾರು ಆಗೋ ಮುಂದ ಅಡಿಗಿ ಭಟ್ಟರಿಗೆ ಎನರ ಸಂಶಯ ಬಂದರ್ ಕಲ್ಯಾಣಮಂಟಪದ ಹೊರಗ ಕೂತಿರೋ ಭಿಕ್ಷ ಬೇಡುವರಿಗೆ ಕೊಟ್ಟು ನೋಡತಾರಲ್ಲಾ, ಹಂಗ.

ನಿಮಗ ಒಂದು ಲೆಕ್ಕ ಕೊಡತೇನಿ. ಜೋನಾಸ ಅವರ ಪರೀಕ್ಷೆಗೆ ಒಳಗಾದವರು ಸುಮಾರು 20 ಲಕ್ಷ ಮಂದಿ. ಅದು 1946 ರ ಸುಮಾರಿಗೆ ಅಮೇರಿಕಾದ ಜನ ಸಂಖ್ಯೆಯ ಶೇಕಡಾ ಒಂದರಷ್ಟು. ಇನ್ನ ಸಾಬಿನ ಅವರ ಪರೀಕ್ಷೆ ಯೊಳಗ 1960 ರಾಗ ಪಾಲುಗೊಂಡವರು ಸುಮಾರು 10 ಕೋಟಿ, ಅದು ಆವಾಗಿನ ವಿಶ್ವದ ಜನಸಂಖ್ಯೆಯ ಶೇಕಡಾ 3 ರಷ್ಟು.

ಅದರ ನಮ್ಮವರು ಲಸಿಕೆ ಮಾಡತೇನಿ ಅಂತ ಹೇಳಿ ಟೂ ಮಿನಿಟ್ ಮ್ಯಾಗಿ ಮಾಡಾಕ ಹೊಂಟಾರ.

ಮಾರ್ಚ್ 23 ರ ಸರಕಾರದವರು ವಿಧಿಸಿ, ಜನತಾ ಕರಫ್ಯೂ ಅಂತ ಹೆಸರು ಇಟ್ಟ ದಿನದ ನಂತರ ನಮ್ಮ ದೇಶದ 11 ಖಾಸಗಿ ಕಂಪನಿಗಳು ಲಸಿಕೆ ತಯಾರಿಕೆ ಆರಂಭ ಮಾಡಿದವು. ಆದರಾಗ ಇಬ್ಬರು ಭಾರಿ ಜೋರಾಗಿ ಓಡಿ ಮುಂದ ಹೋಗಿ ನಾವು ಕೋರೋನಾ ಲಸಿಕೆ ತಯಾರು ಮಾಡಿದೇವು. ನಮಗ ಜನರ ಮ್ಯಾಲೆ ಅದನ ಪ್ರಯೋಗ ಮಾಡಾಕ ಅನುಮತಿ ಕೊಡರಿ ಅಂತ ಸರ್ಕಾರದ ಮುಂದ ಕೂತರು. ಈ ವಿಷಮ ಸ್ಥಿತಿಯೊಳಗ ಸರಕಾರ ಎನ್ನೂ ಮಾಡಿಲ್ಲ ಅಂತ ಬೈಸಿಕೊಂಡು ಸಾಕಾಗಿದ್ದ ಸರ್ಕಾರದ ಮಂತ್ರಿ ಹಾಗೂ ಅವರ ಬಾಬುಗಳು ಅವರಿಗೆ ಹೂಂ ಅಂತ ಸೀಟಿ ಹೊಡದುಬಿಟ್ಟರು. ದೇಶದ 12 ಪ್ರಯೋಗಶಾಲೆಗಳಲ್ಲಿ ಸುಮಾರು ಎರಡೂವರೆ ಸಾವಿರ ಆರೋಗ್ಯವಂತ ಯುವಕರ ಮೇಲೆ ಪ್ರಯೋಗ ನಡೆಸಿದ ನಂತರ ಈ ಲಸಿಕೆ ಬಿಡುಗಡೆ ಆಗತದ ಅಂತ ಹೇಳಿದರು.

ಅಷ್ಟ ಅಲ್ಲ, ಅದರ ಪರೀಕ್ಷೆ ಮುಗದು ಆಗಸ್ಟ್ 15 ರ ಸ್ವತಂತ್ರ ದಿನದ ದಿವಸ ಈ ದೇಶಕ್ಕ ಕೋರೋನಾದಿಂದ ಮುಕ್ತಿ ಸಿಗತದ ಅಂತ ಘೋಷಿಸಿ ಬಿಟ್ಟರು.

ಅಂದ್ರ ಅದು ಕೇವಲ 40 ದಿನದಾಗ ಬೆಳೆದು ಪರಿಪಕ್ವವಾಗಬೇಕಾದ ಲಸಿಕೆ. ಜೋನಾಸ ಸಾಹೇಬರ ಒಂಬತ್ತು ವರ್ಷ, ಇಪ್ಪತ್ತು ಲಕ್ಷ ಜನರ ಪರೀಕ್ಷೆ ಹಾಗೂ ಸಾಬಿನ ಸಾಹೇಬರ 10 ಕೋಟಿ ಜನರ ಪರೀಕ್ಷೆ ಇಲ್ಲೇ ನೆನಸಿಕೋರಿ.

ಅದೂ ಅಲ್ಲದ, ಹೈದರಾಬಾದು ಮತ್ತು ಅಹ್ಮದಾಬಾದು ನಗರದ ಎರಡು ಖಾಸಗಿ ಕಂಪನಿಗಳು ತಾವು ಲಸಿಕೆ ತಯಾರು ಮಾಡಿದರೂ ಕೂಡ ಭಾರತ ಸರ್ಕಾರದ ವೈದ್ಯ ಸಂಶೋಧನಾ ಪರಿಷತ್ತು, ನಮ್ಮ ಸಹಭಾಗಿತ್ವದಾಗ ಇದನ್ನ ತಯಾರು ಮಾಡಿದೆ ಅಂತ ಹೇಳಿಕೊಂಡವು.

ಪರಿಷತ್ತಿನ ಯಾವ ಅಧಿಕಾರಿಯೂ ಕೂಡ ಒಂದು ಪತ್ರಿಕಾ ಪ್ರಕಟಣೆ ಕೊಡಲಿಲ್ಲ, ಕೇಂದ್ರದ ಆರೋಗ್ಯ ಇಲಾಖೆ ಹೊರಡಿಸಿದ ಪ್ರಕಟಣೆಯೊಳಗ ಒಬ್ಬ ವಿಜ್ಞಾನಿಯ ಹೆಸರು ಇಲ್ಲ. ವಿವರ ತಿಳಿಸಲಿಕ್ಕೆ ಯಾರೂ ಒಂದು ಪತ್ರಿಕಾಗೋಷ್ಟಿ ಕರಿಯಲಿಲ್ಲ. ಗರ್ಭ ಗುಡಿಯ ದೇವರೇ ಕರೆಯದೇ ಇದ್ದಾಗ ದ್ವಾರಪಾಲಕರು ಯಾಕ ಕರೀತಾರ?, ಅದೂ ಖರೇನ.

ಸಮ ಪರೀಕ್ಷೆ ಆಗದೇ ಲಸಿಕೆ ಹೊರಗ ಬಂದು ಅದನ್ನು ನಮ್ಮ ಜನ ತೊಗೊಂಡು, ಕೆಲವರು ಉಳದು, ಕೆಲವರು ಸತ್ತು ಹೋದರ ಯಾವಾಗ ಏನು ಆಗತದ?

ಅಷ್ಟು ದೊಡ್ಡ ದೇಶದಾಗ ಅಷ್ಟು ದೊಡ್ಡ ಕೆಲಸ ಆಗೋವಾಗ ಅಷ್ಟು ಜನ ಸಾಯೋರ, ಅಂತ ಸರ್ಕಾರದ ಪ್ರತಿ ಕ್ರಮವನ್ನು ಕಣ್ಣು ಮುಚ್ಚಿ ಬೆಂಬಲಿಸೋರು ಅನ್ನಬಹುದು. ವಿರೋಧ ಪಕ್ಷದವರು ಇಲ್ಲ ನಾವು ಮೊದಲ ಹೇಳಿದ್ದೀವಿ, ಇವರು ಕೈ ಹಾಕೋ ಎಲ್ಲಾ ಕೆಲಸನೂ ಹಿಂಗ, ಪಿಷಕಿ, ಅಂತ ಮೂಗು ಮುರೀಬಹುದು. ವಸ್ತುನಿಷ್ಟವಾಗಿ ಮಾತಾಡೋ ವಿಜ್ಞಾನಿಗಳಿಗಂತೂ ಇಲ್ಲಿ ಜಾಗಾ ಇಲ್ಲಾ, ಹಿಂಗಾಗಿ ಸರ್ಕಾರಕ್ಕ ಅಂತೂ ಯಾವುದೇ ವ್ಯತ್ಯಾಸ ಆಗಂಗಿಲ್ಲ.

ಅದಕ್ಕ ಹೇಳೋದು, ಈ ಲಸಿಕಾ ಪರೀಕ್ಷೆ ಅನ್ನೋದು ಏಳು ಕೋಟೆಯ ರಾಜದುರ್ಗದಲ್ಲಿ ಲಸಿಕಾಯಣದ ರಹಸ್ಯ ಅಂತ.

  • ಡೇಟಾಮ್ಯಾಟಿಕ್ಸ್‌

ಇದನ್ನು ಓದಿ: ಕೊರೊನಾ: ವ್ಯಾಕ್ಸೀನ್ ಎಂದರೇನು? ಜಾಗತಿಕ ಸ್ಪರ್ಧೆಯು ಬೇಗ ವ್ಯಾಕ್ಸೀನ್ ಒದಗಿಸುತ್ತದೆಯೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಡೇಟಾಮ್ಯಾಟಿಕ್ಸ್ ಚೆನ್ನಾಗಿದೆ.
    ಐಸಿಎಂಆರ್ನಿಂದ 2-ಮಿನಿಟ್ ಮ್ಯಾಗಿ: ಚಟಾಪಟ್ ಲಸಿಕೆ
    ಅಗಸ್ಟ್ 15ಕ್ಕ ಪಿಎಂ ಮ್ಯಾಲ ಪ್ರಯೋಗ ಮಾಡ್ಲಿ. ಅದಕ್ಕೂ ಮೊದ್ಲ ಅವ್ರಿಗೆ ಸೋಂಕು ತಗುಲಿಸಬೇಕು ಅಲ್ಲವಾ? ಅವಾಗ ಫಸ್ಟ್ ಕ್ಲಿನಿಕಲ್ ಮ಻ತ್ತು ಕ್ಲೀನ್ ಟೆಸ್ಟು ಆಕ್ಕೈತಿ ನೋಡ್ರಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...