Homeಮುಖಪುಟಗಾಜಿಪುರದಲ್ಲಿರುವ ಭದ್ರತಾ ವ್ಯವಸ್ಥೆ ಪಾಕಿಸ್ತಾನ ಗಡಿಯಲ್ಲೂ ಇಲ್ಲ: ರಾಮ್ ಗೋಪಾಲ್ ಯಾದವ್

ಗಾಜಿಪುರದಲ್ಲಿರುವ ಭದ್ರತಾ ವ್ಯವಸ್ಥೆ ಪಾಕಿಸ್ತಾನ ಗಡಿಯಲ್ಲೂ ಇಲ್ಲ: ರಾಮ್ ಗೋಪಾಲ್ ಯಾದವ್

- Advertisement -
- Advertisement -

ಪ್ರತಿಪಕ್ಷಗಳೊಂದಿಗಿನ ಮಾತುಕತೆಯ ನಂತರ ಸಂಸತ್ತಿನಲ್ಲಿ ಸುಮಾರು 15 ಗಂಟೆಗಳ ಕಾಲ ರೈತರ ವಿಷಯ ಚರ್ಚಿಸಲಾಗುತ್ತಿದೆ. ದೆಹಲಿಯ ಗಡಿಯಲ್ಲಿ ರೈತರ ಭಾರಿ ಆಂದೋಲನಕ್ಕೆ ಕಾರಣವಾಗಿರುವ ವಿವಾದಾತ್ಮಕ ಕಾನೂನುಗಳ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಿನ ನಿಲುವನ್ನು ವ್ಯಕ್ತಪಡಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದರು. “ಬ್ರಿಟಿಷರು ಕೂಡ ಒಮ್ಮೆ ಕೃಷಿ ಕಾನೂನನ್ನು ಹಿಂತೆಗೆದುಕೊಂಡಿದ್ದರು” ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹೇಳಿದರು.

ಪ್ರತಿಪಕ್ಷಗಳೊಂದಿಗಿನ ಮಾತುಕತೆಯ ನಂತರ ಸಂಸತ್ತಿನಲ್ಲಿ ಸುಮಾರು 15 ಗಂಟೆಗಳ ಕಾಲ ರೈತರ ವಿಷಯ ಚರ್ಚಿಸಲಾಗುತ್ತಿದೆ. ಎರಡು ದಿನಗಳ ಕಾಲ ಪ್ರಶ್ನೋತ್ತರ ಅವಧಿಯನ್ನು ಅಮಾನತುಗೊಳಿಸಿರುವ ರಾಜ್ಯಸಭೆಯಲ್ಲಿ ಈಗ ಈ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

“ಜನವರಿ 26 ರಿಂದ ಕಾಣೆಯಾದವರನ್ನು” ಹುಡುಕಲು ಸಮಿತಿಯನ್ನು ರಚಿಸುವಂತೆ ಪಿಎಂ ಮೋದಿಯವರನ್ನು ಅಜಾದ್ ಕೇಳಿಕೊಂಡರು. ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

16 ಕ್ಕೂ ಹೆಚ್ಚು ವಿರೋಧ ಪಕ್ಷಗಳು ರೈತ ಪ್ರತಿಭಟನೆ ಕುರಿತು ಐದು ಗಂಟೆಗಳ ಸ್ವತಂತ್ರ ಚರ್ಚೆಗೆ ಒತ್ತಾಯಿಸಿದ್ದವು, ಸ್ವತಂತ್ರ ಚರ್ಚೆಯ ಬದಲು ಅದನ್ನು ಒಟ್ಟು 15 ತಾಸುಗಳಿಗೆ ಹೆಚ್ಚಿಸಲು ಸರ್ಕಾರ ಒಪ್ಪಿಕೊಂಡಿತು.

ಗಾಜಿಪುರದ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿನ ಬೃಹತ್ ಭದ್ರತಾ ವ್ಯವಸ್ಥೆಗಳನ್ನು ಉಲ್ಲೇಖಿಸಿದ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, “ಗಾಜಿಪುರದಲ್ಲಿರುವ ಭದ್ರತಾ ವ್ಯವಸ್ಥೆ ಪಾಕಿಸ್ತಾನ ಗಡಿಯಲ್ಲಿಯೂ ಇಲ್ಲ. ನಾನು ಪಾಕಿಸ್ತಾನ ಗಡಿಯನ್ನು ನೋಡಿದ್ದೇನೆ” ಎಂದರು.

ಇದನ್ನೂ ಓದಿ: ಜಗತ್ತಿನ ಸರ್ವಾಧಿಕರಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

ಕಳೆದ ವರ್ಷ ಸಂಸತ್ತಿನಲ್ಲಿ ಕೃಷಿ ಮಸೂದೆಗಳನ್ನು ನಿರ್ಬಂಧಿಸಲು ಪ್ರಯತ್ನಿಸಿದ ವಿರೋಧ ಪಕ್ಷಗಳು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಮಸೂದೆಗಳಿಗೆ ಸಹಿ ಮಾಡದಂತೆ ಮನವಿ ಮಾಡಿದ್ದವು. ಮಸೂದೆಗಳನ್ನು ರಾಜ್ಯಸಭೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ಅಂಗೀಕರಿಸಲಾಗಿದೆ ಎಂದು ಅವು ಆರೋಪಿಸಿದ್ದವು. ಆದಾಗ್ಯೂ, ರಾಷ್ಟ್ರಪತಿ ಈ ಮೂರು ಮಸೂದೆಗಳಿಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದರು.

ಹೊಸ ಕಾನೂನುಗಳು ಖಾತರಿಪಡಿಸಿದ ಕನಿಷ್ಟ ಗಳಿಕೆಯನ್ನು ಕಿತ್ತುಕೊಳ್ಳುತ್ತವೆ ಮತ್ತು ದೊಡ್ಡ ಉದ್ಯಮಗಳಿಂದ ಶೋಷಣೆಗೆ ಅವಕಾಶ ಮಾಡಿಕೊಡುತ್ತವೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ರೈತರು ಮತ್ತು ಸರ್ಕಾರದ ನಡುವೆ ಹನ್ನೊಂದು ಸುತ್ತಿನ ಮಾತುಕತೆ ನಡೆದರೂ ಯಾವುದೇ ಪ್ರಗತಿಯಾಗಿಲ್ಲ. 18 ತಿಂಗಳ ಕಾಲ ಕಾನೂನುಗಳನ್ನು ಸ್ಥಗಿತಗೊಳಿಸುವ ಕೇಂದ್ರದ ಕೊನೆಯ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ.


ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...