Homeಮುಖಪುಟಗಾಜಿಪುರದಲ್ಲಿರುವ ಭದ್ರತಾ ವ್ಯವಸ್ಥೆ ಪಾಕಿಸ್ತಾನ ಗಡಿಯಲ್ಲೂ ಇಲ್ಲ: ರಾಮ್ ಗೋಪಾಲ್ ಯಾದವ್

ಗಾಜಿಪುರದಲ್ಲಿರುವ ಭದ್ರತಾ ವ್ಯವಸ್ಥೆ ಪಾಕಿಸ್ತಾನ ಗಡಿಯಲ್ಲೂ ಇಲ್ಲ: ರಾಮ್ ಗೋಪಾಲ್ ಯಾದವ್

- Advertisement -
- Advertisement -

ಪ್ರತಿಪಕ್ಷಗಳೊಂದಿಗಿನ ಮಾತುಕತೆಯ ನಂತರ ಸಂಸತ್ತಿನಲ್ಲಿ ಸುಮಾರು 15 ಗಂಟೆಗಳ ಕಾಲ ರೈತರ ವಿಷಯ ಚರ್ಚಿಸಲಾಗುತ್ತಿದೆ. ದೆಹಲಿಯ ಗಡಿಯಲ್ಲಿ ರೈತರ ಭಾರಿ ಆಂದೋಲನಕ್ಕೆ ಕಾರಣವಾಗಿರುವ ವಿವಾದಾತ್ಮಕ ಕಾನೂನುಗಳ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಿನ ನಿಲುವನ್ನು ವ್ಯಕ್ತಪಡಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದರು. “ಬ್ರಿಟಿಷರು ಕೂಡ ಒಮ್ಮೆ ಕೃಷಿ ಕಾನೂನನ್ನು ಹಿಂತೆಗೆದುಕೊಂಡಿದ್ದರು” ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹೇಳಿದರು.

ಪ್ರತಿಪಕ್ಷಗಳೊಂದಿಗಿನ ಮಾತುಕತೆಯ ನಂತರ ಸಂಸತ್ತಿನಲ್ಲಿ ಸುಮಾರು 15 ಗಂಟೆಗಳ ಕಾಲ ರೈತರ ವಿಷಯ ಚರ್ಚಿಸಲಾಗುತ್ತಿದೆ. ಎರಡು ದಿನಗಳ ಕಾಲ ಪ್ರಶ್ನೋತ್ತರ ಅವಧಿಯನ್ನು ಅಮಾನತುಗೊಳಿಸಿರುವ ರಾಜ್ಯಸಭೆಯಲ್ಲಿ ಈಗ ಈ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

“ಜನವರಿ 26 ರಿಂದ ಕಾಣೆಯಾದವರನ್ನು” ಹುಡುಕಲು ಸಮಿತಿಯನ್ನು ರಚಿಸುವಂತೆ ಪಿಎಂ ಮೋದಿಯವರನ್ನು ಅಜಾದ್ ಕೇಳಿಕೊಂಡರು. ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

16 ಕ್ಕೂ ಹೆಚ್ಚು ವಿರೋಧ ಪಕ್ಷಗಳು ರೈತ ಪ್ರತಿಭಟನೆ ಕುರಿತು ಐದು ಗಂಟೆಗಳ ಸ್ವತಂತ್ರ ಚರ್ಚೆಗೆ ಒತ್ತಾಯಿಸಿದ್ದವು, ಸ್ವತಂತ್ರ ಚರ್ಚೆಯ ಬದಲು ಅದನ್ನು ಒಟ್ಟು 15 ತಾಸುಗಳಿಗೆ ಹೆಚ್ಚಿಸಲು ಸರ್ಕಾರ ಒಪ್ಪಿಕೊಂಡಿತು.

ಗಾಜಿಪುರದ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿನ ಬೃಹತ್ ಭದ್ರತಾ ವ್ಯವಸ್ಥೆಗಳನ್ನು ಉಲ್ಲೇಖಿಸಿದ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, “ಗಾಜಿಪುರದಲ್ಲಿರುವ ಭದ್ರತಾ ವ್ಯವಸ್ಥೆ ಪಾಕಿಸ್ತಾನ ಗಡಿಯಲ್ಲಿಯೂ ಇಲ್ಲ. ನಾನು ಪಾಕಿಸ್ತಾನ ಗಡಿಯನ್ನು ನೋಡಿದ್ದೇನೆ” ಎಂದರು.

ಇದನ್ನೂ ಓದಿ: ಜಗತ್ತಿನ ಸರ್ವಾಧಿಕರಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

ಕಳೆದ ವರ್ಷ ಸಂಸತ್ತಿನಲ್ಲಿ ಕೃಷಿ ಮಸೂದೆಗಳನ್ನು ನಿರ್ಬಂಧಿಸಲು ಪ್ರಯತ್ನಿಸಿದ ವಿರೋಧ ಪಕ್ಷಗಳು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಮಸೂದೆಗಳಿಗೆ ಸಹಿ ಮಾಡದಂತೆ ಮನವಿ ಮಾಡಿದ್ದವು. ಮಸೂದೆಗಳನ್ನು ರಾಜ್ಯಸಭೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ಅಂಗೀಕರಿಸಲಾಗಿದೆ ಎಂದು ಅವು ಆರೋಪಿಸಿದ್ದವು. ಆದಾಗ್ಯೂ, ರಾಷ್ಟ್ರಪತಿ ಈ ಮೂರು ಮಸೂದೆಗಳಿಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದರು.

ಹೊಸ ಕಾನೂನುಗಳು ಖಾತರಿಪಡಿಸಿದ ಕನಿಷ್ಟ ಗಳಿಕೆಯನ್ನು ಕಿತ್ತುಕೊಳ್ಳುತ್ತವೆ ಮತ್ತು ದೊಡ್ಡ ಉದ್ಯಮಗಳಿಂದ ಶೋಷಣೆಗೆ ಅವಕಾಶ ಮಾಡಿಕೊಡುತ್ತವೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ರೈತರು ಮತ್ತು ಸರ್ಕಾರದ ನಡುವೆ ಹನ್ನೊಂದು ಸುತ್ತಿನ ಮಾತುಕತೆ ನಡೆದರೂ ಯಾವುದೇ ಪ್ರಗತಿಯಾಗಿಲ್ಲ. 18 ತಿಂಗಳ ಕಾಲ ಕಾನೂನುಗಳನ್ನು ಸ್ಥಗಿತಗೊಳಿಸುವ ಕೇಂದ್ರದ ಕೊನೆಯ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ.


ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...