Homeಮುಖಪುಟಗಾಜಿಪುರದಲ್ಲಿರುವ ಭದ್ರತಾ ವ್ಯವಸ್ಥೆ ಪಾಕಿಸ್ತಾನ ಗಡಿಯಲ್ಲೂ ಇಲ್ಲ: ರಾಮ್ ಗೋಪಾಲ್ ಯಾದವ್

ಗಾಜಿಪುರದಲ್ಲಿರುವ ಭದ್ರತಾ ವ್ಯವಸ್ಥೆ ಪಾಕಿಸ್ತಾನ ಗಡಿಯಲ್ಲೂ ಇಲ್ಲ: ರಾಮ್ ಗೋಪಾಲ್ ಯಾದವ್

- Advertisement -
- Advertisement -

ಪ್ರತಿಪಕ್ಷಗಳೊಂದಿಗಿನ ಮಾತುಕತೆಯ ನಂತರ ಸಂಸತ್ತಿನಲ್ಲಿ ಸುಮಾರು 15 ಗಂಟೆಗಳ ಕಾಲ ರೈತರ ವಿಷಯ ಚರ್ಚಿಸಲಾಗುತ್ತಿದೆ. ದೆಹಲಿಯ ಗಡಿಯಲ್ಲಿ ರೈತರ ಭಾರಿ ಆಂದೋಲನಕ್ಕೆ ಕಾರಣವಾಗಿರುವ ವಿವಾದಾತ್ಮಕ ಕಾನೂನುಗಳ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಿನ ನಿಲುವನ್ನು ವ್ಯಕ್ತಪಡಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದರು. “ಬ್ರಿಟಿಷರು ಕೂಡ ಒಮ್ಮೆ ಕೃಷಿ ಕಾನೂನನ್ನು ಹಿಂತೆಗೆದುಕೊಂಡಿದ್ದರು” ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹೇಳಿದರು.

ಪ್ರತಿಪಕ್ಷಗಳೊಂದಿಗಿನ ಮಾತುಕತೆಯ ನಂತರ ಸಂಸತ್ತಿನಲ್ಲಿ ಸುಮಾರು 15 ಗಂಟೆಗಳ ಕಾಲ ರೈತರ ವಿಷಯ ಚರ್ಚಿಸಲಾಗುತ್ತಿದೆ. ಎರಡು ದಿನಗಳ ಕಾಲ ಪ್ರಶ್ನೋತ್ತರ ಅವಧಿಯನ್ನು ಅಮಾನತುಗೊಳಿಸಿರುವ ರಾಜ್ಯಸಭೆಯಲ್ಲಿ ಈಗ ಈ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

“ಜನವರಿ 26 ರಿಂದ ಕಾಣೆಯಾದವರನ್ನು” ಹುಡುಕಲು ಸಮಿತಿಯನ್ನು ರಚಿಸುವಂತೆ ಪಿಎಂ ಮೋದಿಯವರನ್ನು ಅಜಾದ್ ಕೇಳಿಕೊಂಡರು. ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

16 ಕ್ಕೂ ಹೆಚ್ಚು ವಿರೋಧ ಪಕ್ಷಗಳು ರೈತ ಪ್ರತಿಭಟನೆ ಕುರಿತು ಐದು ಗಂಟೆಗಳ ಸ್ವತಂತ್ರ ಚರ್ಚೆಗೆ ಒತ್ತಾಯಿಸಿದ್ದವು, ಸ್ವತಂತ್ರ ಚರ್ಚೆಯ ಬದಲು ಅದನ್ನು ಒಟ್ಟು 15 ತಾಸುಗಳಿಗೆ ಹೆಚ್ಚಿಸಲು ಸರ್ಕಾರ ಒಪ್ಪಿಕೊಂಡಿತು.

ಗಾಜಿಪುರದ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿನ ಬೃಹತ್ ಭದ್ರತಾ ವ್ಯವಸ್ಥೆಗಳನ್ನು ಉಲ್ಲೇಖಿಸಿದ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, “ಗಾಜಿಪುರದಲ್ಲಿರುವ ಭದ್ರತಾ ವ್ಯವಸ್ಥೆ ಪಾಕಿಸ್ತಾನ ಗಡಿಯಲ್ಲಿಯೂ ಇಲ್ಲ. ನಾನು ಪಾಕಿಸ್ತಾನ ಗಡಿಯನ್ನು ನೋಡಿದ್ದೇನೆ” ಎಂದರು.

ಇದನ್ನೂ ಓದಿ: ಜಗತ್ತಿನ ಸರ್ವಾಧಿಕರಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

ಕಳೆದ ವರ್ಷ ಸಂಸತ್ತಿನಲ್ಲಿ ಕೃಷಿ ಮಸೂದೆಗಳನ್ನು ನಿರ್ಬಂಧಿಸಲು ಪ್ರಯತ್ನಿಸಿದ ವಿರೋಧ ಪಕ್ಷಗಳು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಮಸೂದೆಗಳಿಗೆ ಸಹಿ ಮಾಡದಂತೆ ಮನವಿ ಮಾಡಿದ್ದವು. ಮಸೂದೆಗಳನ್ನು ರಾಜ್ಯಸಭೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ಅಂಗೀಕರಿಸಲಾಗಿದೆ ಎಂದು ಅವು ಆರೋಪಿಸಿದ್ದವು. ಆದಾಗ್ಯೂ, ರಾಷ್ಟ್ರಪತಿ ಈ ಮೂರು ಮಸೂದೆಗಳಿಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದರು.

ಹೊಸ ಕಾನೂನುಗಳು ಖಾತರಿಪಡಿಸಿದ ಕನಿಷ್ಟ ಗಳಿಕೆಯನ್ನು ಕಿತ್ತುಕೊಳ್ಳುತ್ತವೆ ಮತ್ತು ದೊಡ್ಡ ಉದ್ಯಮಗಳಿಂದ ಶೋಷಣೆಗೆ ಅವಕಾಶ ಮಾಡಿಕೊಡುತ್ತವೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ರೈತರು ಮತ್ತು ಸರ್ಕಾರದ ನಡುವೆ ಹನ್ನೊಂದು ಸುತ್ತಿನ ಮಾತುಕತೆ ನಡೆದರೂ ಯಾವುದೇ ಪ್ರಗತಿಯಾಗಿಲ್ಲ. 18 ತಿಂಗಳ ಕಾಲ ಕಾನೂನುಗಳನ್ನು ಸ್ಥಗಿತಗೊಳಿಸುವ ಕೇಂದ್ರದ ಕೊನೆಯ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ.


ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...