Homeಮುಖಪುಟಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

- Advertisement -
- Advertisement -

ಕಳೆದ ಬುಧವಾರ ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯದ ಕುರಿತು ಬೇಸರ ವ್ಯಕ್ತಪಡಿಸಿರುವ ಸ್ಪೀಕರ್ ಓಂ ಬಿರ್ಲಾ, ‘ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು’ ಎಂದು ಸಂಸತ್ ಸದಸ್ಯರನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ.

‘ಗೌರವಾನ್ವಿತ ಸದಸ್ಯರೇ, ಡಿಸೆಂಬರ್ 13, 2023ರಂದು ಸದನದೊಳಗೆ ನಡೆದ ಅಹಿತಕರ ಘಟನೆಯು ನಮ್ಮೆಲ್ಲರಿಗೂ ಗಂಭೀರ ಕಾಳಜಿಯ ವಿಷಯವಾಗಿದ್ದು, ಈ ಬಗ್ಗೆ ನಾವು ನಮ್ಮ ಸಾಮೂಹಿಕ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಇದೆಲ್ಲಾ ಹೇಗೆ ಸಾಧ್ಯವಾಯಿತು ಎಂದು ಅದೇ ದಿನ ನಾವು ಎಲ್ಲ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿದ್ದೇವೆ. ಸಂಸತ್ತಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರ ಜತೆಗೆ, ಸಭೆಯಲ್ಲಿ ನೀಡಿದ ಕೆಲವು ಪ್ರಮುಖ ಸಲಹೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.

‘ಸದನದ ಒಳಗೆ ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ಆಳವಾದ ತನಿಖೆ ನಡೆಸಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಸದಸ್ಯರು ತಮ್ಮ ತನಿಖೆ ಆರಂಭಿಸಿದ್ದಾರೆ. ಈ ಸಮಿತಿಯ ವರದಿ ನೀಡಲಿದ್ದು, ಶೀಘ್ರದಲ್ಲೇ ಅದನ್ನು ಸದನದೊಂದಿಗೆ ಹಂಚಿಕೊಳ್ಳಲಾಗುವುದು. ಜೊತೆಗೆ, ಉನ್ನತ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ, ಇವರು ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸುತ್ತಾರೆ. ಸಂಸತ್ತಿನ ಕಟ್ಟಡ ಸಂಕೀರ್ಣದಲ್ಲಿ ಪುನಃ ಅಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ‘ಕಾಂಕ್ರೀಟ್ ಕ್ರಿಯಾ ಯೋಜನೆ’ಯನ್ನು ರೂಪಿಸಲಿದೆ’ ಎಂದು ವಿವರಣೆ ನೀಡಿದ್ದಾರೆ.

ಹಿಂದೆಯೂ ಇಂತಹ ಘಟನೆ ನಡೆದಿವೆ:

‘ಪಿಸ್ತೂಲುಗಳನ್ನು ತಂದದ್ದು, ಘೋಷಣೆಗಳನ್ನು ಕೂಗುವುದು, ಸಂದರ್ಶಕರ ಗ್ಯಾಲರಿಯಿಂದ ಜಿಗಿಯುವುದು ಮತ್ತು ಕರಪತ್ರಗಳನ್ನು ಎಸೆಯುವ ಪ್ರಕರಣಗಳು ಈ ಹಿಂದೆ ನಡೆದಿರುವುದಕ್ಕೆ ರಾಷ್ಟ್ರವು ಸಾಕ್ಷಿಯಾಗಿದೆ. ಕೆಲವು ಗೌರವಾನ್ವಿತ ಸದಸ್ಯರು ಪೆಪ್ಪರ್ ಸ್ಪ್ರೇ ತಂದು ಸದನದ ಒಳಗೆ ಸಿಂಪಡಿಸಿದ ಘಟನೆಗೆ ಕೂಡ ದೇಶ ಸಾಕ್ಷಿಯಾಗಿದೆ. ಅಂತಹ ಎಲ್ಲ ಘಟನೆಗಳ ಸಮಯದಲ್ಲಿ ಸದನವು ಮಾದರಿಯಾಗಿ ನಡೆದುಕೊಂಡಿದೆ. ಒಗ್ಗಟ್ಟು ಮತ್ತು ಅಂತಹ ಘಟನೆಗಳ ವಿರುದ್ಧ ತನ್ನ ಸಾಮೂಹಿಕ ಸಂಕಲ್ಪವನ್ನು ವ್ಯಕ್ತಪಡಿಸಿತ್ತು’ ಎಂದು ನೆನಪು ಮಾಡಿದ್ದಾರೆ.

‘ಸಂಸತ್ ಆವರಣದ ಭದ್ರತೆಯು ನಮ್ಮ ಅಧಿಕಾರ ವ್ಯಾಪ್ತಿಗೆ ಬರುತ್ತದೆ ಎಂಬುದು ತಮಗೆಲ್ಲಾ ಚೆನ್ನಾಗಿ ತಿಳಿದಿರುತ್ತದೆ. ಅದರಂತೆ, ವಿವರವಾದ ಕ್ರಮವನ್ನು ರೂಪಿಸುವುದು ಸಂಸತ್ತಿನ ಜವಾಬ್ದಾರಿಯಾಗಿದೆ. ನಿಮ್ಮ ಸಲಹೆಗಳಿಗೆ ಅನುಗುಣವಾಗಿ ಭದ್ರತಾ ಕ್ರಮಗಳನ್ನು ಯೋಜಿಸಿಸಲಾಗುವುದು’ ಎಂದು ಸ್ಪೀಕರ್ ಭರವಸೆ ನೀಡಿದ್ದಾರೆ.

‘ಕೆಲವು ಸದಸ್ಯರು ಮತ್ತು ಪಕ್ಷಗಳು ಈ ಘಟನೆಯನ್ನು ರಾಜಕೀಯಕ್ಕೆ ಲಿಂಕ್ ಮಾಡುತ್ತಿರುವುದು ನಿಜಕ್ಕೂ ದುರಾದೃಷ್ಟಕರ. ಇದರಿಂದ, ಕೆಲವು ಗೌರವಾನ್ವಿತ ಸದಸ್ಯರನ್ನು ಸದನದಿಂದ ಅಮಾನತುಗೊಳಿಸಲು ಸದನದ ನಿರ್ಧಾರ ಮಾಡಿದ್ದು, ಇದು ಅನಗತ್ಯವಾಗಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ಎಲ್ಲ ಗೌರವಾನ್ವಿತ ಸದಸ್ಯರು ಸದನದ ಘನತೆಗೆ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ನಿರೀಕ್ಷಿಸುತ್ತೇನೆ. ಲೋಕಸಭೆಯ ಸ್ಪೀಕರ್ ಆಗಿ, ಅದನ್ನು ಖಚಿತಪಡಿಸಿಕೊಳ್ಳುವುದು ನನ್ನ ಪ್ರಯತ್ನವಾಗಿದೆ. ರಚನಾತ್ಮಕ ಸಂವಾದ ಮತ್ತು ಎಲ್ಲರ ಪಾಲ್ಗೊಳ್ಳುವಿಕೆಯ ಮೂಲಕ ಸದಸ್ಯರು ಸದನದಲ್ಲಿ ಅರ್ಥಪೂರ್ಣ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...