Homeಮುಖಪುಟಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

- Advertisement -
- Advertisement -

ಕಳೆದ ಬುಧವಾರ ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯದ ಕುರಿತು ಬೇಸರ ವ್ಯಕ್ತಪಡಿಸಿರುವ ಸ್ಪೀಕರ್ ಓಂ ಬಿರ್ಲಾ, ‘ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು’ ಎಂದು ಸಂಸತ್ ಸದಸ್ಯರನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ.

‘ಗೌರವಾನ್ವಿತ ಸದಸ್ಯರೇ, ಡಿಸೆಂಬರ್ 13, 2023ರಂದು ಸದನದೊಳಗೆ ನಡೆದ ಅಹಿತಕರ ಘಟನೆಯು ನಮ್ಮೆಲ್ಲರಿಗೂ ಗಂಭೀರ ಕಾಳಜಿಯ ವಿಷಯವಾಗಿದ್ದು, ಈ ಬಗ್ಗೆ ನಾವು ನಮ್ಮ ಸಾಮೂಹಿಕ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಇದೆಲ್ಲಾ ಹೇಗೆ ಸಾಧ್ಯವಾಯಿತು ಎಂದು ಅದೇ ದಿನ ನಾವು ಎಲ್ಲ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿದ್ದೇವೆ. ಸಂಸತ್ತಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರ ಜತೆಗೆ, ಸಭೆಯಲ್ಲಿ ನೀಡಿದ ಕೆಲವು ಪ್ರಮುಖ ಸಲಹೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.

‘ಸದನದ ಒಳಗೆ ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ಆಳವಾದ ತನಿಖೆ ನಡೆಸಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಸದಸ್ಯರು ತಮ್ಮ ತನಿಖೆ ಆರಂಭಿಸಿದ್ದಾರೆ. ಈ ಸಮಿತಿಯ ವರದಿ ನೀಡಲಿದ್ದು, ಶೀಘ್ರದಲ್ಲೇ ಅದನ್ನು ಸದನದೊಂದಿಗೆ ಹಂಚಿಕೊಳ್ಳಲಾಗುವುದು. ಜೊತೆಗೆ, ಉನ್ನತ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ, ಇವರು ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸುತ್ತಾರೆ. ಸಂಸತ್ತಿನ ಕಟ್ಟಡ ಸಂಕೀರ್ಣದಲ್ಲಿ ಪುನಃ ಅಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ‘ಕಾಂಕ್ರೀಟ್ ಕ್ರಿಯಾ ಯೋಜನೆ’ಯನ್ನು ರೂಪಿಸಲಿದೆ’ ಎಂದು ವಿವರಣೆ ನೀಡಿದ್ದಾರೆ.

ಹಿಂದೆಯೂ ಇಂತಹ ಘಟನೆ ನಡೆದಿವೆ:

‘ಪಿಸ್ತೂಲುಗಳನ್ನು ತಂದದ್ದು, ಘೋಷಣೆಗಳನ್ನು ಕೂಗುವುದು, ಸಂದರ್ಶಕರ ಗ್ಯಾಲರಿಯಿಂದ ಜಿಗಿಯುವುದು ಮತ್ತು ಕರಪತ್ರಗಳನ್ನು ಎಸೆಯುವ ಪ್ರಕರಣಗಳು ಈ ಹಿಂದೆ ನಡೆದಿರುವುದಕ್ಕೆ ರಾಷ್ಟ್ರವು ಸಾಕ್ಷಿಯಾಗಿದೆ. ಕೆಲವು ಗೌರವಾನ್ವಿತ ಸದಸ್ಯರು ಪೆಪ್ಪರ್ ಸ್ಪ್ರೇ ತಂದು ಸದನದ ಒಳಗೆ ಸಿಂಪಡಿಸಿದ ಘಟನೆಗೆ ಕೂಡ ದೇಶ ಸಾಕ್ಷಿಯಾಗಿದೆ. ಅಂತಹ ಎಲ್ಲ ಘಟನೆಗಳ ಸಮಯದಲ್ಲಿ ಸದನವು ಮಾದರಿಯಾಗಿ ನಡೆದುಕೊಂಡಿದೆ. ಒಗ್ಗಟ್ಟು ಮತ್ತು ಅಂತಹ ಘಟನೆಗಳ ವಿರುದ್ಧ ತನ್ನ ಸಾಮೂಹಿಕ ಸಂಕಲ್ಪವನ್ನು ವ್ಯಕ್ತಪಡಿಸಿತ್ತು’ ಎಂದು ನೆನಪು ಮಾಡಿದ್ದಾರೆ.

‘ಸಂಸತ್ ಆವರಣದ ಭದ್ರತೆಯು ನಮ್ಮ ಅಧಿಕಾರ ವ್ಯಾಪ್ತಿಗೆ ಬರುತ್ತದೆ ಎಂಬುದು ತಮಗೆಲ್ಲಾ ಚೆನ್ನಾಗಿ ತಿಳಿದಿರುತ್ತದೆ. ಅದರಂತೆ, ವಿವರವಾದ ಕ್ರಮವನ್ನು ರೂಪಿಸುವುದು ಸಂಸತ್ತಿನ ಜವಾಬ್ದಾರಿಯಾಗಿದೆ. ನಿಮ್ಮ ಸಲಹೆಗಳಿಗೆ ಅನುಗುಣವಾಗಿ ಭದ್ರತಾ ಕ್ರಮಗಳನ್ನು ಯೋಜಿಸಿಸಲಾಗುವುದು’ ಎಂದು ಸ್ಪೀಕರ್ ಭರವಸೆ ನೀಡಿದ್ದಾರೆ.

‘ಕೆಲವು ಸದಸ್ಯರು ಮತ್ತು ಪಕ್ಷಗಳು ಈ ಘಟನೆಯನ್ನು ರಾಜಕೀಯಕ್ಕೆ ಲಿಂಕ್ ಮಾಡುತ್ತಿರುವುದು ನಿಜಕ್ಕೂ ದುರಾದೃಷ್ಟಕರ. ಇದರಿಂದ, ಕೆಲವು ಗೌರವಾನ್ವಿತ ಸದಸ್ಯರನ್ನು ಸದನದಿಂದ ಅಮಾನತುಗೊಳಿಸಲು ಸದನದ ನಿರ್ಧಾರ ಮಾಡಿದ್ದು, ಇದು ಅನಗತ್ಯವಾಗಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ಎಲ್ಲ ಗೌರವಾನ್ವಿತ ಸದಸ್ಯರು ಸದನದ ಘನತೆಗೆ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ನಿರೀಕ್ಷಿಸುತ್ತೇನೆ. ಲೋಕಸಭೆಯ ಸ್ಪೀಕರ್ ಆಗಿ, ಅದನ್ನು ಖಚಿತಪಡಿಸಿಕೊಳ್ಳುವುದು ನನ್ನ ಪ್ರಯತ್ನವಾಗಿದೆ. ರಚನಾತ್ಮಕ ಸಂವಾದ ಮತ್ತು ಎಲ್ಲರ ಪಾಲ್ಗೊಳ್ಳುವಿಕೆಯ ಮೂಲಕ ಸದಸ್ಯರು ಸದನದಲ್ಲಿ ಅರ್ಥಪೂರ್ಣ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...