Homeಮುಖಪುಟಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

- Advertisement -
- Advertisement -

ಕಳೆದ ಬುಧವಾರ ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯದ ಕುರಿತು ಬೇಸರ ವ್ಯಕ್ತಪಡಿಸಿರುವ ಸ್ಪೀಕರ್ ಓಂ ಬಿರ್ಲಾ, ‘ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು’ ಎಂದು ಸಂಸತ್ ಸದಸ್ಯರನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ.

‘ಗೌರವಾನ್ವಿತ ಸದಸ್ಯರೇ, ಡಿಸೆಂಬರ್ 13, 2023ರಂದು ಸದನದೊಳಗೆ ನಡೆದ ಅಹಿತಕರ ಘಟನೆಯು ನಮ್ಮೆಲ್ಲರಿಗೂ ಗಂಭೀರ ಕಾಳಜಿಯ ವಿಷಯವಾಗಿದ್ದು, ಈ ಬಗ್ಗೆ ನಾವು ನಮ್ಮ ಸಾಮೂಹಿಕ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಇದೆಲ್ಲಾ ಹೇಗೆ ಸಾಧ್ಯವಾಯಿತು ಎಂದು ಅದೇ ದಿನ ನಾವು ಎಲ್ಲ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿದ್ದೇವೆ. ಸಂಸತ್ತಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರ ಜತೆಗೆ, ಸಭೆಯಲ್ಲಿ ನೀಡಿದ ಕೆಲವು ಪ್ರಮುಖ ಸಲಹೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.

‘ಸದನದ ಒಳಗೆ ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ಆಳವಾದ ತನಿಖೆ ನಡೆಸಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಸದಸ್ಯರು ತಮ್ಮ ತನಿಖೆ ಆರಂಭಿಸಿದ್ದಾರೆ. ಈ ಸಮಿತಿಯ ವರದಿ ನೀಡಲಿದ್ದು, ಶೀಘ್ರದಲ್ಲೇ ಅದನ್ನು ಸದನದೊಂದಿಗೆ ಹಂಚಿಕೊಳ್ಳಲಾಗುವುದು. ಜೊತೆಗೆ, ಉನ್ನತ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ, ಇವರು ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸುತ್ತಾರೆ. ಸಂಸತ್ತಿನ ಕಟ್ಟಡ ಸಂಕೀರ್ಣದಲ್ಲಿ ಪುನಃ ಅಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ‘ಕಾಂಕ್ರೀಟ್ ಕ್ರಿಯಾ ಯೋಜನೆ’ಯನ್ನು ರೂಪಿಸಲಿದೆ’ ಎಂದು ವಿವರಣೆ ನೀಡಿದ್ದಾರೆ.

ಹಿಂದೆಯೂ ಇಂತಹ ಘಟನೆ ನಡೆದಿವೆ:

‘ಪಿಸ್ತೂಲುಗಳನ್ನು ತಂದದ್ದು, ಘೋಷಣೆಗಳನ್ನು ಕೂಗುವುದು, ಸಂದರ್ಶಕರ ಗ್ಯಾಲರಿಯಿಂದ ಜಿಗಿಯುವುದು ಮತ್ತು ಕರಪತ್ರಗಳನ್ನು ಎಸೆಯುವ ಪ್ರಕರಣಗಳು ಈ ಹಿಂದೆ ನಡೆದಿರುವುದಕ್ಕೆ ರಾಷ್ಟ್ರವು ಸಾಕ್ಷಿಯಾಗಿದೆ. ಕೆಲವು ಗೌರವಾನ್ವಿತ ಸದಸ್ಯರು ಪೆಪ್ಪರ್ ಸ್ಪ್ರೇ ತಂದು ಸದನದ ಒಳಗೆ ಸಿಂಪಡಿಸಿದ ಘಟನೆಗೆ ಕೂಡ ದೇಶ ಸಾಕ್ಷಿಯಾಗಿದೆ. ಅಂತಹ ಎಲ್ಲ ಘಟನೆಗಳ ಸಮಯದಲ್ಲಿ ಸದನವು ಮಾದರಿಯಾಗಿ ನಡೆದುಕೊಂಡಿದೆ. ಒಗ್ಗಟ್ಟು ಮತ್ತು ಅಂತಹ ಘಟನೆಗಳ ವಿರುದ್ಧ ತನ್ನ ಸಾಮೂಹಿಕ ಸಂಕಲ್ಪವನ್ನು ವ್ಯಕ್ತಪಡಿಸಿತ್ತು’ ಎಂದು ನೆನಪು ಮಾಡಿದ್ದಾರೆ.

‘ಸಂಸತ್ ಆವರಣದ ಭದ್ರತೆಯು ನಮ್ಮ ಅಧಿಕಾರ ವ್ಯಾಪ್ತಿಗೆ ಬರುತ್ತದೆ ಎಂಬುದು ತಮಗೆಲ್ಲಾ ಚೆನ್ನಾಗಿ ತಿಳಿದಿರುತ್ತದೆ. ಅದರಂತೆ, ವಿವರವಾದ ಕ್ರಮವನ್ನು ರೂಪಿಸುವುದು ಸಂಸತ್ತಿನ ಜವಾಬ್ದಾರಿಯಾಗಿದೆ. ನಿಮ್ಮ ಸಲಹೆಗಳಿಗೆ ಅನುಗುಣವಾಗಿ ಭದ್ರತಾ ಕ್ರಮಗಳನ್ನು ಯೋಜಿಸಿಸಲಾಗುವುದು’ ಎಂದು ಸ್ಪೀಕರ್ ಭರವಸೆ ನೀಡಿದ್ದಾರೆ.

‘ಕೆಲವು ಸದಸ್ಯರು ಮತ್ತು ಪಕ್ಷಗಳು ಈ ಘಟನೆಯನ್ನು ರಾಜಕೀಯಕ್ಕೆ ಲಿಂಕ್ ಮಾಡುತ್ತಿರುವುದು ನಿಜಕ್ಕೂ ದುರಾದೃಷ್ಟಕರ. ಇದರಿಂದ, ಕೆಲವು ಗೌರವಾನ್ವಿತ ಸದಸ್ಯರನ್ನು ಸದನದಿಂದ ಅಮಾನತುಗೊಳಿಸಲು ಸದನದ ನಿರ್ಧಾರ ಮಾಡಿದ್ದು, ಇದು ಅನಗತ್ಯವಾಗಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ಎಲ್ಲ ಗೌರವಾನ್ವಿತ ಸದಸ್ಯರು ಸದನದ ಘನತೆಗೆ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ನಿರೀಕ್ಷಿಸುತ್ತೇನೆ. ಲೋಕಸಭೆಯ ಸ್ಪೀಕರ್ ಆಗಿ, ಅದನ್ನು ಖಚಿತಪಡಿಸಿಕೊಳ್ಳುವುದು ನನ್ನ ಪ್ರಯತ್ನವಾಗಿದೆ. ರಚನಾತ್ಮಕ ಸಂವಾದ ಮತ್ತು ಎಲ್ಲರ ಪಾಲ್ಗೊಳ್ಳುವಿಕೆಯ ಮೂಲಕ ಸದಸ್ಯರು ಸದನದಲ್ಲಿ ಅರ್ಥಪೂರ್ಣ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...