Homeಮುಖಪುಟಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

- Advertisement -
- Advertisement -

ಕಳೆದ ಬುಧವಾರ ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯದ ಕುರಿತು ಬೇಸರ ವ್ಯಕ್ತಪಡಿಸಿರುವ ಸ್ಪೀಕರ್ ಓಂ ಬಿರ್ಲಾ, ‘ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು’ ಎಂದು ಸಂಸತ್ ಸದಸ್ಯರನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ.

‘ಗೌರವಾನ್ವಿತ ಸದಸ್ಯರೇ, ಡಿಸೆಂಬರ್ 13, 2023ರಂದು ಸದನದೊಳಗೆ ನಡೆದ ಅಹಿತಕರ ಘಟನೆಯು ನಮ್ಮೆಲ್ಲರಿಗೂ ಗಂಭೀರ ಕಾಳಜಿಯ ವಿಷಯವಾಗಿದ್ದು, ಈ ಬಗ್ಗೆ ನಾವು ನಮ್ಮ ಸಾಮೂಹಿಕ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಇದೆಲ್ಲಾ ಹೇಗೆ ಸಾಧ್ಯವಾಯಿತು ಎಂದು ಅದೇ ದಿನ ನಾವು ಎಲ್ಲ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿದ್ದೇವೆ. ಸಂಸತ್ತಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರ ಜತೆಗೆ, ಸಭೆಯಲ್ಲಿ ನೀಡಿದ ಕೆಲವು ಪ್ರಮುಖ ಸಲಹೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.

‘ಸದನದ ಒಳಗೆ ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ಆಳವಾದ ತನಿಖೆ ನಡೆಸಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಸದಸ್ಯರು ತಮ್ಮ ತನಿಖೆ ಆರಂಭಿಸಿದ್ದಾರೆ. ಈ ಸಮಿತಿಯ ವರದಿ ನೀಡಲಿದ್ದು, ಶೀಘ್ರದಲ್ಲೇ ಅದನ್ನು ಸದನದೊಂದಿಗೆ ಹಂಚಿಕೊಳ್ಳಲಾಗುವುದು. ಜೊತೆಗೆ, ಉನ್ನತ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ, ಇವರು ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸುತ್ತಾರೆ. ಸಂಸತ್ತಿನ ಕಟ್ಟಡ ಸಂಕೀರ್ಣದಲ್ಲಿ ಪುನಃ ಅಂತಹ ಘಟನೆಗಳು ಮರುಕಳಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ‘ಕಾಂಕ್ರೀಟ್ ಕ್ರಿಯಾ ಯೋಜನೆ’ಯನ್ನು ರೂಪಿಸಲಿದೆ’ ಎಂದು ವಿವರಣೆ ನೀಡಿದ್ದಾರೆ.

ಹಿಂದೆಯೂ ಇಂತಹ ಘಟನೆ ನಡೆದಿವೆ:

‘ಪಿಸ್ತೂಲುಗಳನ್ನು ತಂದದ್ದು, ಘೋಷಣೆಗಳನ್ನು ಕೂಗುವುದು, ಸಂದರ್ಶಕರ ಗ್ಯಾಲರಿಯಿಂದ ಜಿಗಿಯುವುದು ಮತ್ತು ಕರಪತ್ರಗಳನ್ನು ಎಸೆಯುವ ಪ್ರಕರಣಗಳು ಈ ಹಿಂದೆ ನಡೆದಿರುವುದಕ್ಕೆ ರಾಷ್ಟ್ರವು ಸಾಕ್ಷಿಯಾಗಿದೆ. ಕೆಲವು ಗೌರವಾನ್ವಿತ ಸದಸ್ಯರು ಪೆಪ್ಪರ್ ಸ್ಪ್ರೇ ತಂದು ಸದನದ ಒಳಗೆ ಸಿಂಪಡಿಸಿದ ಘಟನೆಗೆ ಕೂಡ ದೇಶ ಸಾಕ್ಷಿಯಾಗಿದೆ. ಅಂತಹ ಎಲ್ಲ ಘಟನೆಗಳ ಸಮಯದಲ್ಲಿ ಸದನವು ಮಾದರಿಯಾಗಿ ನಡೆದುಕೊಂಡಿದೆ. ಒಗ್ಗಟ್ಟು ಮತ್ತು ಅಂತಹ ಘಟನೆಗಳ ವಿರುದ್ಧ ತನ್ನ ಸಾಮೂಹಿಕ ಸಂಕಲ್ಪವನ್ನು ವ್ಯಕ್ತಪಡಿಸಿತ್ತು’ ಎಂದು ನೆನಪು ಮಾಡಿದ್ದಾರೆ.

‘ಸಂಸತ್ ಆವರಣದ ಭದ್ರತೆಯು ನಮ್ಮ ಅಧಿಕಾರ ವ್ಯಾಪ್ತಿಗೆ ಬರುತ್ತದೆ ಎಂಬುದು ತಮಗೆಲ್ಲಾ ಚೆನ್ನಾಗಿ ತಿಳಿದಿರುತ್ತದೆ. ಅದರಂತೆ, ವಿವರವಾದ ಕ್ರಮವನ್ನು ರೂಪಿಸುವುದು ಸಂಸತ್ತಿನ ಜವಾಬ್ದಾರಿಯಾಗಿದೆ. ನಿಮ್ಮ ಸಲಹೆಗಳಿಗೆ ಅನುಗುಣವಾಗಿ ಭದ್ರತಾ ಕ್ರಮಗಳನ್ನು ಯೋಜಿಸಿಸಲಾಗುವುದು’ ಎಂದು ಸ್ಪೀಕರ್ ಭರವಸೆ ನೀಡಿದ್ದಾರೆ.

‘ಕೆಲವು ಸದಸ್ಯರು ಮತ್ತು ಪಕ್ಷಗಳು ಈ ಘಟನೆಯನ್ನು ರಾಜಕೀಯಕ್ಕೆ ಲಿಂಕ್ ಮಾಡುತ್ತಿರುವುದು ನಿಜಕ್ಕೂ ದುರಾದೃಷ್ಟಕರ. ಇದರಿಂದ, ಕೆಲವು ಗೌರವಾನ್ವಿತ ಸದಸ್ಯರನ್ನು ಸದನದಿಂದ ಅಮಾನತುಗೊಳಿಸಲು ಸದನದ ನಿರ್ಧಾರ ಮಾಡಿದ್ದು, ಇದು ಅನಗತ್ಯವಾಗಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ಎಲ್ಲ ಗೌರವಾನ್ವಿತ ಸದಸ್ಯರು ಸದನದ ಘನತೆಗೆ ಪ್ರಾಮುಖ್ಯತೆಯನ್ನು ನೀಡುತ್ತಾರೆ ಎಂದು ನಿರೀಕ್ಷಿಸುತ್ತೇನೆ. ಲೋಕಸಭೆಯ ಸ್ಪೀಕರ್ ಆಗಿ, ಅದನ್ನು ಖಚಿತಪಡಿಸಿಕೊಳ್ಳುವುದು ನನ್ನ ಪ್ರಯತ್ನವಾಗಿದೆ. ರಚನಾತ್ಮಕ ಸಂವಾದ ಮತ್ತು ಎಲ್ಲರ ಪಾಲ್ಗೊಳ್ಳುವಿಕೆಯ ಮೂಲಕ ಸದಸ್ಯರು ಸದನದಲ್ಲಿ ಅರ್ಥಪೂರ್ಣ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...