HomeUncategorizedಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

ಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

- Advertisement -
- Advertisement -

ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಸಂಸ್ಥೆಯಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೊರೊನಾ ಲಸಿಕೆಗೆ ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 600 ರೂ. ಮತ್ತು ರಾಜ್ಯ ಸರ್ಕಾರಗಳಿಗೆ ಡೋಸ್‌ಗೆ 400 ರೂ. ಎಂದು ಬುಧವಾರ ಬೆಲೆ ನಿಗದಿಪಡಿಸಿದೆ.

ಸೋಮವಾರದಂದು ಕೇಂದ್ರ ಸರ್ಕಾರವು ವ್ಯಾಕ್ಸಿನೇಷನ್ ನೀತಿಗಳಲ್ಲಿ ಬದಲಾವಣೆ ಮಾಡಿ ಲಸಿಕೆಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತಹ ನಿಯಮವನ್ನು ಜಾರಿಗೆ ತಂದಿತ್ತು. ಅದರಂತೆ ಸೀರಮ್‌ ತನ್ನ ಲಸಿಕೆಯ ಬೆಲೆಯನ್ನು ಘೋಷಣೆ ಮಾಡಿದೆ.

ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಮುಂದಿನ ಎರಡು ತಿಂಗಳುಗಳಲ್ಲಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವುದಗಿ ಎಸ್‌ಐಐ ಟ್ವಿಟರ್ ಹ್ಯಾಂಡಲ್‌ನಲ್ಲಿ ಹೇಳಿಕೆ ನೀಡಿದೆ.

“ನಮ್ಮ ಸಾಮರ್ಥ್ಯದ 50% ಭಾರತ ಸರ್ಕಾರದ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ನೀಡಲಾಗುವುದು. ಉಳಿದ 50% ದಷ್ಟು ಲಸಿಕೆಯನ್ನು ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ನೀಡುತ್ತೇವೆ” ಎಂದು ಸೀರಮ್‌‌ ಹೇಳಿದೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ನೀಡಿದ ವರದಿ

ಸೀರಮ್‌‌ ಸಂಸ್ಥೆಯು ಕೋವಿಶೀಲ್ಡ್ ಲಸಿಕೆಯನ್ನು ಉತ್ಪಾದಿಸುತ್ತಿದ್ದು, ಅದು ತನ್ನ ಹೇಳಿಕೆಯಲ್ಲಿ ವಿಶ್ವದ ಇತರ ಲಸಿಕೆಯನ್ನು ಹೋಲಿಕೆ ಮಾಡಿ, ತಾವು ಅತ್ಯಂತ ಕಡಿಮೆಗೆ ಲಸಿಕೆ ಮಾರಾಟ ಮಾಡುತ್ತಿದ್ದೇವೆ ಎಂದು ಕೂಡಾ ಹೇಳಿದೆ.

ಸೀರಮ್‌ ತನ್ನ ಲಸಿಕೆಯ ಬೆಲೆಯನ್ನು ಬಿಡುಗಡೆ ಮಾಡುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಈ ಹಿಂದೆ ಸೀರಮ್‌ ಕಡಿಮೆ ಬೆಲೆಗೆ ಕೇಂದ್ರ ಸರ್ಕಾರಕ್ಕೆ ಲಸಿಕೆಯನ್ನು ನೀಡುತ್ತಿತ್ತು ಎಂದು ಸೂಚಿಸಿದೆ.

ಅದು ತನ್ನ ಟ್ವೀಟ್‌ನಲ್ಲಿ, “ಸೀರಮ್‌ ಸಂಸ್ಥೆ ತನ್ನ ಕೋವಿಶೀಲ್ಡ್ ಲಸಿಕೆಗೆ ನಿಗದಿಪಡಿಸಿದ ಬೆಲೆ ರಾಜ್ಯ ಸರ್ಕಾರಗಳಿಗೆ ₹400/ಡೋಸ್, ಖಾಸಗಿ ಆಸ್ಪತ್ರೆಗಳಿಗೆ ₹600/ ಡೋಸ್. ಇದೇ ಸಂಸ್ಥೆ ಹಿಂದೆ ಕೇಂದ್ರ ಸರ್ಕಾರಕ್ಕೆ ₹157.50 ಕ್ಕೆ ನೀಡಿತ್ತು. ಲಸಿಕೆ ಖರೀದಿಯ ಹೊರೆ ರಾಜ್ಯಗಳ ತಲೆ ಮೇಲೆ!” ಲಸಿಕೆ ಖರೀದಿಗೆ ಎಷ್ಟು ಹಣ ಮೀಸಲಿರಿಸಿದ್ದೀರಿ?” ಎಂದು ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಪ್ರಶ್ನಿಸಿದೆ.

ಇದನ್ನೂ ಓದಿ: ದೆಹಲಿ ಹೈಕೋರ್ಟ್ ಆದೇಶದ ನಂತರ ಆಕ್ಸಿಜನ್ ಪಡೆದ ದೆಹಲಿ ಆಸ್ಪತ್ರೆಗಳು

ವಿಡಿಯೊ ನೋಡಿ: ಅಸ್ಸಾಂ ರಾಜ್ಯದ ಹೊಸ ಡಿಎಸ್‌‌ಪಿ ಚಿನ್ನದ ಹುಡುಗಿ ‘ಹಿಮಾ ದಾಸ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...