HomeUncategorizedಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

ಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

- Advertisement -
- Advertisement -

ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಸಂಸ್ಥೆಯಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೊರೊನಾ ಲಸಿಕೆಗೆ ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 600 ರೂ. ಮತ್ತು ರಾಜ್ಯ ಸರ್ಕಾರಗಳಿಗೆ ಡೋಸ್‌ಗೆ 400 ರೂ. ಎಂದು ಬುಧವಾರ ಬೆಲೆ ನಿಗದಿಪಡಿಸಿದೆ.

ಸೋಮವಾರದಂದು ಕೇಂದ್ರ ಸರ್ಕಾರವು ವ್ಯಾಕ್ಸಿನೇಷನ್ ನೀತಿಗಳಲ್ಲಿ ಬದಲಾವಣೆ ಮಾಡಿ ಲಸಿಕೆಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತಹ ನಿಯಮವನ್ನು ಜಾರಿಗೆ ತಂದಿತ್ತು. ಅದರಂತೆ ಸೀರಮ್‌ ತನ್ನ ಲಸಿಕೆಯ ಬೆಲೆಯನ್ನು ಘೋಷಣೆ ಮಾಡಿದೆ.

ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಮುಂದಿನ ಎರಡು ತಿಂಗಳುಗಳಲ್ಲಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವುದಗಿ ಎಸ್‌ಐಐ ಟ್ವಿಟರ್ ಹ್ಯಾಂಡಲ್‌ನಲ್ಲಿ ಹೇಳಿಕೆ ನೀಡಿದೆ.

“ನಮ್ಮ ಸಾಮರ್ಥ್ಯದ 50% ಭಾರತ ಸರ್ಕಾರದ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ನೀಡಲಾಗುವುದು. ಉಳಿದ 50% ದಷ್ಟು ಲಸಿಕೆಯನ್ನು ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ನೀಡುತ್ತೇವೆ” ಎಂದು ಸೀರಮ್‌‌ ಹೇಳಿದೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ನೀಡಿದ ವರದಿ

ಸೀರಮ್‌‌ ಸಂಸ್ಥೆಯು ಕೋವಿಶೀಲ್ಡ್ ಲಸಿಕೆಯನ್ನು ಉತ್ಪಾದಿಸುತ್ತಿದ್ದು, ಅದು ತನ್ನ ಹೇಳಿಕೆಯಲ್ಲಿ ವಿಶ್ವದ ಇತರ ಲಸಿಕೆಯನ್ನು ಹೋಲಿಕೆ ಮಾಡಿ, ತಾವು ಅತ್ಯಂತ ಕಡಿಮೆಗೆ ಲಸಿಕೆ ಮಾರಾಟ ಮಾಡುತ್ತಿದ್ದೇವೆ ಎಂದು ಕೂಡಾ ಹೇಳಿದೆ.

ಸೀರಮ್‌ ತನ್ನ ಲಸಿಕೆಯ ಬೆಲೆಯನ್ನು ಬಿಡುಗಡೆ ಮಾಡುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಈ ಹಿಂದೆ ಸೀರಮ್‌ ಕಡಿಮೆ ಬೆಲೆಗೆ ಕೇಂದ್ರ ಸರ್ಕಾರಕ್ಕೆ ಲಸಿಕೆಯನ್ನು ನೀಡುತ್ತಿತ್ತು ಎಂದು ಸೂಚಿಸಿದೆ.

ಅದು ತನ್ನ ಟ್ವೀಟ್‌ನಲ್ಲಿ, “ಸೀರಮ್‌ ಸಂಸ್ಥೆ ತನ್ನ ಕೋವಿಶೀಲ್ಡ್ ಲಸಿಕೆಗೆ ನಿಗದಿಪಡಿಸಿದ ಬೆಲೆ ರಾಜ್ಯ ಸರ್ಕಾರಗಳಿಗೆ ₹400/ಡೋಸ್, ಖಾಸಗಿ ಆಸ್ಪತ್ರೆಗಳಿಗೆ ₹600/ ಡೋಸ್. ಇದೇ ಸಂಸ್ಥೆ ಹಿಂದೆ ಕೇಂದ್ರ ಸರ್ಕಾರಕ್ಕೆ ₹157.50 ಕ್ಕೆ ನೀಡಿತ್ತು. ಲಸಿಕೆ ಖರೀದಿಯ ಹೊರೆ ರಾಜ್ಯಗಳ ತಲೆ ಮೇಲೆ!” ಲಸಿಕೆ ಖರೀದಿಗೆ ಎಷ್ಟು ಹಣ ಮೀಸಲಿರಿಸಿದ್ದೀರಿ?” ಎಂದು ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಪ್ರಶ್ನಿಸಿದೆ.

ಇದನ್ನೂ ಓದಿ: ದೆಹಲಿ ಹೈಕೋರ್ಟ್ ಆದೇಶದ ನಂತರ ಆಕ್ಸಿಜನ್ ಪಡೆದ ದೆಹಲಿ ಆಸ್ಪತ್ರೆಗಳು

ವಿಡಿಯೊ ನೋಡಿ: ಅಸ್ಸಾಂ ರಾಜ್ಯದ ಹೊಸ ಡಿಎಸ್‌‌ಪಿ ಚಿನ್ನದ ಹುಡುಗಿ ‘ಹಿಮಾ ದಾಸ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...