HomeUncategorizedಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

ಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

- Advertisement -
- Advertisement -

ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಸಂಸ್ಥೆಯಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೊರೊನಾ ಲಸಿಕೆಗೆ ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 600 ರೂ. ಮತ್ತು ರಾಜ್ಯ ಸರ್ಕಾರಗಳಿಗೆ ಡೋಸ್‌ಗೆ 400 ರೂ. ಎಂದು ಬುಧವಾರ ಬೆಲೆ ನಿಗದಿಪಡಿಸಿದೆ.

ಸೋಮವಾರದಂದು ಕೇಂದ್ರ ಸರ್ಕಾರವು ವ್ಯಾಕ್ಸಿನೇಷನ್ ನೀತಿಗಳಲ್ಲಿ ಬದಲಾವಣೆ ಮಾಡಿ ಲಸಿಕೆಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತಹ ನಿಯಮವನ್ನು ಜಾರಿಗೆ ತಂದಿತ್ತು. ಅದರಂತೆ ಸೀರಮ್‌ ತನ್ನ ಲಸಿಕೆಯ ಬೆಲೆಯನ್ನು ಘೋಷಣೆ ಮಾಡಿದೆ.

ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಮುಂದಿನ ಎರಡು ತಿಂಗಳುಗಳಲ್ಲಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವುದಗಿ ಎಸ್‌ಐಐ ಟ್ವಿಟರ್ ಹ್ಯಾಂಡಲ್‌ನಲ್ಲಿ ಹೇಳಿಕೆ ನೀಡಿದೆ.

“ನಮ್ಮ ಸಾಮರ್ಥ್ಯದ 50% ಭಾರತ ಸರ್ಕಾರದ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ನೀಡಲಾಗುವುದು. ಉಳಿದ 50% ದಷ್ಟು ಲಸಿಕೆಯನ್ನು ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ನೀಡುತ್ತೇವೆ” ಎಂದು ಸೀರಮ್‌‌ ಹೇಳಿದೆ.

ಇದನ್ನೂ ಓದಿ: ರೋಣಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ದೋಷಾರೋಪಣೆ ಸೇರಿಸಲಾಗಿದೆ: ಹೊಸ ಸಾಕ್ಷ್ಯಗಳನ್ನು ನೀಡಿದ ವರದಿ

ಸೀರಮ್‌‌ ಸಂಸ್ಥೆಯು ಕೋವಿಶೀಲ್ಡ್ ಲಸಿಕೆಯನ್ನು ಉತ್ಪಾದಿಸುತ್ತಿದ್ದು, ಅದು ತನ್ನ ಹೇಳಿಕೆಯಲ್ಲಿ ವಿಶ್ವದ ಇತರ ಲಸಿಕೆಯನ್ನು ಹೋಲಿಕೆ ಮಾಡಿ, ತಾವು ಅತ್ಯಂತ ಕಡಿಮೆಗೆ ಲಸಿಕೆ ಮಾರಾಟ ಮಾಡುತ್ತಿದ್ದೇವೆ ಎಂದು ಕೂಡಾ ಹೇಳಿದೆ.

ಸೀರಮ್‌ ತನ್ನ ಲಸಿಕೆಯ ಬೆಲೆಯನ್ನು ಬಿಡುಗಡೆ ಮಾಡುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಈ ಹಿಂದೆ ಸೀರಮ್‌ ಕಡಿಮೆ ಬೆಲೆಗೆ ಕೇಂದ್ರ ಸರ್ಕಾರಕ್ಕೆ ಲಸಿಕೆಯನ್ನು ನೀಡುತ್ತಿತ್ತು ಎಂದು ಸೂಚಿಸಿದೆ.

ಅದು ತನ್ನ ಟ್ವೀಟ್‌ನಲ್ಲಿ, “ಸೀರಮ್‌ ಸಂಸ್ಥೆ ತನ್ನ ಕೋವಿಶೀಲ್ಡ್ ಲಸಿಕೆಗೆ ನಿಗದಿಪಡಿಸಿದ ಬೆಲೆ ರಾಜ್ಯ ಸರ್ಕಾರಗಳಿಗೆ ₹400/ಡೋಸ್, ಖಾಸಗಿ ಆಸ್ಪತ್ರೆಗಳಿಗೆ ₹600/ ಡೋಸ್. ಇದೇ ಸಂಸ್ಥೆ ಹಿಂದೆ ಕೇಂದ್ರ ಸರ್ಕಾರಕ್ಕೆ ₹157.50 ಕ್ಕೆ ನೀಡಿತ್ತು. ಲಸಿಕೆ ಖರೀದಿಯ ಹೊರೆ ರಾಜ್ಯಗಳ ತಲೆ ಮೇಲೆ!” ಲಸಿಕೆ ಖರೀದಿಗೆ ಎಷ್ಟು ಹಣ ಮೀಸಲಿರಿಸಿದ್ದೀರಿ?” ಎಂದು ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಪ್ರಶ್ನಿಸಿದೆ.

ಇದನ್ನೂ ಓದಿ: ದೆಹಲಿ ಹೈಕೋರ್ಟ್ ಆದೇಶದ ನಂತರ ಆಕ್ಸಿಜನ್ ಪಡೆದ ದೆಹಲಿ ಆಸ್ಪತ್ರೆಗಳು

ವಿಡಿಯೊ ನೋಡಿ: ಅಸ್ಸಾಂ ರಾಜ್ಯದ ಹೊಸ ಡಿಎಸ್‌‌ಪಿ ಚಿನ್ನದ ಹುಡುಗಿ ‘ಹಿಮಾ ದಾಸ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...