Homeಮುಖಪುಟ’ಮುಂದಿನ 25 ವರ್ಷ ನಮ್ಮದೇ ಸರ್ಕಾರ ಎಂದ ಶಿವಸೇನೆಯ ಸಂಜಯ್ ರಾವತ್

’ಮುಂದಿನ 25 ವರ್ಷ ನಮ್ಮದೇ ಸರ್ಕಾರ ಎಂದ ಶಿವಸೇನೆಯ ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮುಂದಿನ 25 ವರ್ಷಗಳವರೆಗೆ ಶಿವಸೇನೆ ನೇತೃತ್ವದ ಸರ್ಕಾರ ಆಡಳಿತ ನಡೆಸಲಿದೆ ಎಂದು ಪಕ್ಷದ ವಕ್ತಾರ ಸಂಜಯ್‌ ರಾವತ್‌ ವಿಶ್ವಾಸ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಜತೆಗೆ ಮೈತ್ರಿಗೆ ಮನವಿ ಮಾಡಿರುವ ಶಿವಸೇನೆ ಸ್ಥಿರ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಈ ಮಧ್ಯೆ ಮೂರು ಪಕ್ಷಗಳ ನಿರ್ಧಾರ ಅಂತಿಮ ಹಂತದಲ್ಲಿದ್ದು, ಮಹಾರಾಷ್ಟ್ರದಲ್ಲಿ ಮುಂದಿನ ದಿನಗಳಲ್ಲಿ ಶಿವಸೇನೆಯ ಆಡಳಿತ ನಡೆಯಲಿದೆ. ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉದ್ಧವ್‌ ಠಾಕ್ರೆ ತಿಳಿಸಿರುವುದಾಗಿ, ಸಂಜಯ್‌ ರಾವತ್ ಹೇಳಿದರು.

ರಾಜ್ಯದ ಹಿತದೃಷ್ಟಿಯನ್ನು ಮುಂದಿಟ್ಟುಕೊಂಡು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಮಾತುಕತೆ ನಡೆಯುತ್ತಿದೆ. ಇದು ಏಕ ಪಕ್ಷದ ಸರ್ಕಾರವೇ ಆಗಿರಲಿ ಅಥವಾ ಮೈತ್ರಿ ಮಾಡಿಕೊಳ್ಳಲಿ, ಇದರಲ್ಲಿ ಆಡಳಿತದ ಕಾರ್ಯಸೂಚಿಯ ಅವಶ್ಯಕತೆಯಿದೆ. ರಾಜ್ಯದ ಜನತೆಗೆ ಮೂಲ ಸೌಕರ್ಯ, ಬರ ನಿರ್ವಹಣೆ ಮತ್ತು ಅತಿವೃಷ್ಟಿಯಿಂದ ಆದ ಹಾನಿ, ತೊಂದರೆ ನಿಭಾಯಿಸಬೇಕಿದೆ. ನಮ್ಮೊಂದಿಗೆ ಬರುವವರು ಅನುಭವ ಉಳ್ಳವರು. ಅವರ ಅನುಭವದ ಪ್ರಯೋಜನವನ್ನು ನಾವು ಪಡೆಯಲಿದ್ದೇವೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

ಇದನ್ನೂ ಓದಿ: `ಮಹಾ’ ಸರ್ಕಾರ ರಚನೆ ಸರ್ಕಸ್‌: ಸಿಎಂ ಹುದ್ದೆ ಶಿವಸೇನೆಗೆ ಎಂದ ಎನ್‌ಸಿಪಿ..!

ಇಲ್ಲಿಯವರೆಗೆ ಸೇನಾದ ರಾಜಕೀಯ ಪ್ರತಿಸ್ಪರ್ಧಿ ಆಗಿದ್ದ ಕಾಂಗ್ರೆಸ್‌ ಜತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವ ಮುಂದಿರಿಸಿದ್ದೇವೆ. ದೇಶದ ಅತ್ಯಂತ ಹಳೆಯ ಪಕ್ಷದ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಿದ್ದಾರೆ ಎಂದು ಹೇಳಿದರು.

ಸಿಎಂ ಹುದ್ದೆಯನ್ನು ಕಾಂಗ್ರೆಸ್‌ ಮತ್ತು ಎನ್‌ಸಿಪಿ ಜತೆಗೆ ಹಂಚಿಕೊಳ್ಳುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವತ್‌, ’ಮುಂದಿನ 25 ವರ್ಷಗಳವರೆಗೆ ನಾವು ಮುಖ್ಯಮಂತ್ರಿ ಹುದ್ದೆ ಹೊಂದಲು ಬಯಸುತ್ತೇವೆ. ಶಿವಸೇನೆ ರಾಜ್ಯಕ್ಕೆ ನಾಯಕತ್ವವನ್ನು ಒದಗಿಸಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಹಾರಾಷ್ಟ್ರದ ಜತೆಗೆ ತಮ್ಮ ಪಕ್ಷದ ಸಂಬಂಧ ಶಾಶ್ವತ. ಇದು ತಾತ್ಕಾಲಿಕವಲ್ಲ. 50 ವರ್ಷಗಳವರೆಗೆ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿದೆ. ಶಿವಸೇನೆ ಪಕ್ಷವನ್ನು 1966 ರಲ್ಲಿ ಬಾಳಾ ಠಾಕ್ರೆ ಸ್ಥಾಪಿಸಿದ್ದರು ಎಂದು ರಾವತ್‌ ಹೇಳಿದರು.

ಇನ್ನು ಕಾಂಗ್ರೆಸ್-ಎನ್‌ಸಿಪಿ ಜತೆಗಿನ ಒಪ್ಪಂದದ ನಂತರ ವೀರ್‌ ಸಾವರ್ಕರ್‌ಗೆ ಭಾರತ ರತ್ನ ಕೊಡುವುದನ್ನು ವಿರೋಧಿಸುವುದು, ಮುಸ್ಲಿಂರಿಗೆ ಮೀಸಲಾತಿ ಒದಗಿಸಲು ನೀವು ಒಪ್ಪಿಕೊಳ್ಳುತ್ತೀರಾ ಎಂದು ಕೇಳಿ ಬಂದ ಪ್ರಶ್ನೆಗೆ ರಾವತ್‌ ನೇರವಾಗಿ ಉತ್ತರಿಸಲಿಲ್ಲ. ಈ ಪ್ರಶ್ನೆಯ ಮೂಲ ಮಾಹಿತಿ ಎಲ್ಲಿಯದು ಎಂದು ತಮಗೆ ತಿಳಿದಿದೆ ಎಂದು ಹಾರಿಕೆಯ ಉತ್ತರ ನೀಡಿದರು.

ಇದನ್ನೂ ಓದಿ: ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ನಡುವೆ ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್‌ ಸೂತ್ರಗಳೇ ಹೆಚ್ಚಿವೆ ಎಂಬ ಪ್ರಶ್ನೆಗೆ ಸೇನಾ ಪತ್ರಿಕೆ ಸಾಮ್ನಾದ ಪ್ರಮುಖ ಉತ್ತರಿಸಿ, ನೀವು ಇದಕ್ಕೆಲ್ಲಾ ಆಲೋಚನೆ ಮಾಡಬೇಕಾಗಿಲ್ಲ. ಯಾಕೆಂದರೆ ಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ನಿರ್ಧಾರ ತೆಗೆದುಕೊಳ್ಳುವಲ್ಲಿ ನಿಸ್ಸೀಮರು ಎಂದು ಹೇಳಿದರು.

ಇನ್ನು ಹಿಂದುತ್ವ ರಾಜಕೀಯ, ಕಾಂಗ್ರೆಸ್‌ ವಿರೋಧಿ ಅಜೆಂಡಾ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ, ಯಾವುದು ಸಿದ್ಧಾಂತ..? ನಾವು ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಮೂಲಕ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...