Homeಮುಖಪುಟ’ಮುಂದಿನ 25 ವರ್ಷ ನಮ್ಮದೇ ಸರ್ಕಾರ ಎಂದ ಶಿವಸೇನೆಯ ಸಂಜಯ್ ರಾವತ್

’ಮುಂದಿನ 25 ವರ್ಷ ನಮ್ಮದೇ ಸರ್ಕಾರ ಎಂದ ಶಿವಸೇನೆಯ ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮುಂದಿನ 25 ವರ್ಷಗಳವರೆಗೆ ಶಿವಸೇನೆ ನೇತೃತ್ವದ ಸರ್ಕಾರ ಆಡಳಿತ ನಡೆಸಲಿದೆ ಎಂದು ಪಕ್ಷದ ವಕ್ತಾರ ಸಂಜಯ್‌ ರಾವತ್‌ ವಿಶ್ವಾಸ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಜತೆಗೆ ಮೈತ್ರಿಗೆ ಮನವಿ ಮಾಡಿರುವ ಶಿವಸೇನೆ ಸ್ಥಿರ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಈ ಮಧ್ಯೆ ಮೂರು ಪಕ್ಷಗಳ ನಿರ್ಧಾರ ಅಂತಿಮ ಹಂತದಲ್ಲಿದ್ದು, ಮಹಾರಾಷ್ಟ್ರದಲ್ಲಿ ಮುಂದಿನ ದಿನಗಳಲ್ಲಿ ಶಿವಸೇನೆಯ ಆಡಳಿತ ನಡೆಯಲಿದೆ. ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉದ್ಧವ್‌ ಠಾಕ್ರೆ ತಿಳಿಸಿರುವುದಾಗಿ, ಸಂಜಯ್‌ ರಾವತ್ ಹೇಳಿದರು.

ರಾಜ್ಯದ ಹಿತದೃಷ್ಟಿಯನ್ನು ಮುಂದಿಟ್ಟುಕೊಂಡು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಮಾತುಕತೆ ನಡೆಯುತ್ತಿದೆ. ಇದು ಏಕ ಪಕ್ಷದ ಸರ್ಕಾರವೇ ಆಗಿರಲಿ ಅಥವಾ ಮೈತ್ರಿ ಮಾಡಿಕೊಳ್ಳಲಿ, ಇದರಲ್ಲಿ ಆಡಳಿತದ ಕಾರ್ಯಸೂಚಿಯ ಅವಶ್ಯಕತೆಯಿದೆ. ರಾಜ್ಯದ ಜನತೆಗೆ ಮೂಲ ಸೌಕರ್ಯ, ಬರ ನಿರ್ವಹಣೆ ಮತ್ತು ಅತಿವೃಷ್ಟಿಯಿಂದ ಆದ ಹಾನಿ, ತೊಂದರೆ ನಿಭಾಯಿಸಬೇಕಿದೆ. ನಮ್ಮೊಂದಿಗೆ ಬರುವವರು ಅನುಭವ ಉಳ್ಳವರು. ಅವರ ಅನುಭವದ ಪ್ರಯೋಜನವನ್ನು ನಾವು ಪಡೆಯಲಿದ್ದೇವೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

ಇದನ್ನೂ ಓದಿ: `ಮಹಾ’ ಸರ್ಕಾರ ರಚನೆ ಸರ್ಕಸ್‌: ಸಿಎಂ ಹುದ್ದೆ ಶಿವಸೇನೆಗೆ ಎಂದ ಎನ್‌ಸಿಪಿ..!

ಇಲ್ಲಿಯವರೆಗೆ ಸೇನಾದ ರಾಜಕೀಯ ಪ್ರತಿಸ್ಪರ್ಧಿ ಆಗಿದ್ದ ಕಾಂಗ್ರೆಸ್‌ ಜತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವ ಮುಂದಿರಿಸಿದ್ದೇವೆ. ದೇಶದ ಅತ್ಯಂತ ಹಳೆಯ ಪಕ್ಷದ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಿದ್ದಾರೆ ಎಂದು ಹೇಳಿದರು.

ಸಿಎಂ ಹುದ್ದೆಯನ್ನು ಕಾಂಗ್ರೆಸ್‌ ಮತ್ತು ಎನ್‌ಸಿಪಿ ಜತೆಗೆ ಹಂಚಿಕೊಳ್ಳುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವತ್‌, ’ಮುಂದಿನ 25 ವರ್ಷಗಳವರೆಗೆ ನಾವು ಮುಖ್ಯಮಂತ್ರಿ ಹುದ್ದೆ ಹೊಂದಲು ಬಯಸುತ್ತೇವೆ. ಶಿವಸೇನೆ ರಾಜ್ಯಕ್ಕೆ ನಾಯಕತ್ವವನ್ನು ಒದಗಿಸಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಹಾರಾಷ್ಟ್ರದ ಜತೆಗೆ ತಮ್ಮ ಪಕ್ಷದ ಸಂಬಂಧ ಶಾಶ್ವತ. ಇದು ತಾತ್ಕಾಲಿಕವಲ್ಲ. 50 ವರ್ಷಗಳವರೆಗೆ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿದೆ. ಶಿವಸೇನೆ ಪಕ್ಷವನ್ನು 1966 ರಲ್ಲಿ ಬಾಳಾ ಠಾಕ್ರೆ ಸ್ಥಾಪಿಸಿದ್ದರು ಎಂದು ರಾವತ್‌ ಹೇಳಿದರು.

ಇನ್ನು ಕಾಂಗ್ರೆಸ್-ಎನ್‌ಸಿಪಿ ಜತೆಗಿನ ಒಪ್ಪಂದದ ನಂತರ ವೀರ್‌ ಸಾವರ್ಕರ್‌ಗೆ ಭಾರತ ರತ್ನ ಕೊಡುವುದನ್ನು ವಿರೋಧಿಸುವುದು, ಮುಸ್ಲಿಂರಿಗೆ ಮೀಸಲಾತಿ ಒದಗಿಸಲು ನೀವು ಒಪ್ಪಿಕೊಳ್ಳುತ್ತೀರಾ ಎಂದು ಕೇಳಿ ಬಂದ ಪ್ರಶ್ನೆಗೆ ರಾವತ್‌ ನೇರವಾಗಿ ಉತ್ತರಿಸಲಿಲ್ಲ. ಈ ಪ್ರಶ್ನೆಯ ಮೂಲ ಮಾಹಿತಿ ಎಲ್ಲಿಯದು ಎಂದು ತಮಗೆ ತಿಳಿದಿದೆ ಎಂದು ಹಾರಿಕೆಯ ಉತ್ತರ ನೀಡಿದರು.

ಇದನ್ನೂ ಓದಿ: ಗಾಂಧಿ ಸಾವು ಆಕಸ್ಮಿಕ ಎನ್ನುತ್ತಿವೆ ಒಡಿಶಾದ ಪುಸ್ತಕಗಳು: ಹಲವರಿಂದ ತೀವ್ರ ಖಂಡನೆ

ಕಾಂಗ್ರೆಸ್‌, ಎನ್‌ಸಿಪಿ ಮತ್ತು ಶಿವಸೇನೆ ನಡುವೆ ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್‌ ಸೂತ್ರಗಳೇ ಹೆಚ್ಚಿವೆ ಎಂಬ ಪ್ರಶ್ನೆಗೆ ಸೇನಾ ಪತ್ರಿಕೆ ಸಾಮ್ನಾದ ಪ್ರಮುಖ ಉತ್ತರಿಸಿ, ನೀವು ಇದಕ್ಕೆಲ್ಲಾ ಆಲೋಚನೆ ಮಾಡಬೇಕಾಗಿಲ್ಲ. ಯಾಕೆಂದರೆ ಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ನಿರ್ಧಾರ ತೆಗೆದುಕೊಳ್ಳುವಲ್ಲಿ ನಿಸ್ಸೀಮರು ಎಂದು ಹೇಳಿದರು.

ಇನ್ನು ಹಿಂದುತ್ವ ರಾಜಕೀಯ, ಕಾಂಗ್ರೆಸ್‌ ವಿರೋಧಿ ಅಜೆಂಡಾ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ, ಯಾವುದು ಸಿದ್ಧಾಂತ..? ನಾವು ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಮೂಲಕ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...