Homeಮುಖಪುಟಅಯೋಧ್ಯೆ ತೀರ್ಪು ಪ್ರಕಟಿಸಿದ ಐವರು ನ್ಯಾಯಾಧೀಶರ ಕಿರುಪರಿಚಯ

ಅಯೋಧ್ಯೆ ತೀರ್ಪು ಪ್ರಕಟಿಸಿದ ಐವರು ನ್ಯಾಯಾಧೀಶರ ಕಿರುಪರಿಚಯ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ರಾಮ ಜನ್ಮಭೂಮ- ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನು ಶನಿವಾರ ನೀಡಿತು. ಈ ಐವರು ನ್ಯಾಯಾಧೀಶರ ಕಿರುಪರಿಚಯ ಇಲ್ಲಿದೆ.

ರಂಜನ್ ಗೊಗೋಯ್

1978ರಲ್ಲಿ ವೃತ್ತಿ ಆರಂಭಿಸಿದ ನ್ಯಾ. ರಂಜನ್ ಗೊಗೋಯ್ ಅವರು, ಮುಖ್ಯವಾಗಿ ಗುವಾಹಟಿ ಹೈಕೋರ್ಟಿನಲ್ಲಿ ವಕಾಲತ್ತು ಮಾಡುತ್ತಿದ್ದರು. ಫೆಬ್ರವರಿ 28, 2001ರಲ್ಲಿ ಅವರು ಗುವಾಹಟಿ ಹೈಕೋರ್ಟಿನ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ಸೆಪ್ಟೆಂಬರ್ 9, 2010ರಲ್ಲಿ ಅವರನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು. ಫೆಬ್ರವರಿ 12, 2011ರಲ್ಲಿ ಅವರು ಅಲ್ಲಿನ ಮುಖ್ಯ ನ್ಯಾಯಾಧೀಶರಾದರು. ಎಪ್ರಿಲ್ 23, 2012ರಲ್ಲಿ ಅವರು ಸುಪ್ರೀಂಕೋರ್ಟಿಗೆ ಭಡ್ತಿ ಹೊಂದಿದರು.

ಅಕ್ಟೋಬರ್ 3, 2018ರಂದು ಭಾರತದ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ಇದೇ ನವೆಂಬರ್ 17ರಂದು ನಿವೃತ್ತರಾಗಲಿದ್ದಾರೆ. ಈ ಪೀಠವು ಪ್ರಕರಣದ 40 ದಿನಗಳ ವಿಚಾರಣೆಯನ್ನು ಅಕ್ಟೋಬರ್ 16ರಂದು ಪೂರ್ಣಗೊಳಿಸಿ, ತೀರ್ಪನ್ನು ಕಾದಿರಿಸಿತ್ತು. ನಿವೃತ್ತಿಗೆ ಮುನ್ನ ಗೊಗೋಯ್ ಅವರು ಇನ್ನೂ ಮೂರು ಪ್ರಕರಣಗಳಲ್ಲಿ ತೀರ್ಪು ನೀಡಲಿದ್ದಾರೆ. ಅವುಗಳೆಂದರೆ ರಫೇಲ್ ಪುನರ್ವಿಮರ್ಶಾ ಅರ್ಜಿ, ಶಬರಿಮಲೆ ಪುನರ್ವಿಮರ್ಶಾ ಅರ್ಜಿ ಮತ್ತು ಭಾರತದ ಮುಖ್ಯ ನ್ಯಾಯಾಧೀಶರ (ಸಿಜೆಐ) ಕಚೇರಿಯು ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ವ್ಯಾಪ್ತಿಗೆ ಬರುತ್ತದೋ, ಇಲ್ಲವೋ ಎಂಬುದು.

ನ್ಯಾ. ಎಸ್.ಎ. ಬೋಬ್ಡೆ

ಅವರು ಭಾರತದ ನಿಯುಕ್ತ ಮುಖ್ಯ ನ್ಯಾಯಾಧೀಶರಾಗಿದ್ದು, ನವೆಂಬರ್ 18ರಂದು ಅಧಿಕಾರ ಸ್ವೀಕರಿಸುವರು. ಅವರು 1978ರಲ್ಲಿ ಮಹಾರಾಷ್ಟ್ರ ಬಾರ್ ಕೌನ್ಸಿಲ್‌ಗೆ ಸೇರ್ಪಡೆಯಾಗಿದ್ದು, ಬಾಂಬೆ ಹೈಕೋರ್ಟಿನ ನಾಗಪುರ ಪೀಠದಲ್ಲಿ ವಕಾಲತ್ತು ನಡೆಸುತ್ತಿದ್ದರು. 21 ವರ್ಷಗಳ ಕಾಲ ಅವರು ಬಾಂಬೆ ಹೈಕೋರ್ಟಿನ ಮುಖ್ಯ ಪೀಠ ಹಾಗೂ ಸುಪ್ರೀಂಕೋರ್ಟಿನಲ್ಲಿಯೂ ವಕಾಲತ್ತು ನಡೆಸಿದ್ದಾರೆ. 1998ರಲ್ಲಿ ಅವರು ಹಿರಿ ವಕೀಲರಾಗಿ ನಾಮಕರಣಗೊಂಡರು.

ಮಾರ್ಚ್ 29, 2000ದಲ್ಲಿ ಅವರು ಬಾಂಬೆ ಹೈಕೋರ್ಟಿನ ಹೆಚ್ಚುವರಿ ನ್ಯಾಯಾಧೀಶರಾಗಿ ಭಡ್ತಿ ಪಡೆದರು. ಅಕ್ಟೋಬರ್ 16, 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು. ಎಪ್ರಿಲ್ 12, 2013ರಂದು ಅವರು ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ಭಡ್ತಿ ಹೊಂದಿದರು. ಅವರು ಎಪ್ರಿಲ್ 23, 2021ರಂದು ಮುಖ್ಯ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಲಿದ್ದಾರೆ.

ನ್ಯಾ. ಡಿ.ವೈ. ಚಂದ್ರಚೂಡ್

ಅವರು ಅನೇಕ ಸಂವಿಧಾನ ಪೀಠಗಳ ಭಾಗವಾಗಿದ್ದು, ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿ ತಮ್ಮ ಉದಾರವಾದಿ ನಿಲುವುಗಳಿಗಾಗಿ ಹೆಸರಾಗಿದ್ದಾರೆ. ಅವರು ಮಹಾರಾಷ್ಟ್ರ ನ್ಯಾಯಾಂಗ ಅಕಾಡೆಮಿಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಬಾಂಬೆ ಹೈಕೋರ್ಟಿನಿಂದ ಜೂನ್ 1998ರಲ್ಲಿ ಹಿರಿಯ ವಕೀಲರಾಗಿ ನಿಯುಕ್ತರಾದರು. ಅವರು ಅಲ್ಲಿ ಮತ್ತು ಸುಪ್ರೀಂಕೋರ್ಟಿನಲ್ಲಿ ವಕಾಲತ್ತು ನಡೆಸುತ್ತಿದ್ದರು.

ಮಾರ್ಚ್ 29, 2000ರಂದು ಬಾಂಬೆ ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳುವ ತನಕ, 1998ರಿಂದ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ಅಕ್ಟೋಬರ್ 31, 2013ರಲ್ಲಿ ಅವರು ಅಲಹಾಬಾದ್ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡರು. ಮೇ 13, 2016ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಭಡ್ತಿ ಹೊಂದಿದರು.

ನ್ಯಾ. ಅಶೋಕ್ ಭೂಷಣ್

ಅಲಹಾಬಾದ್ ವಿಶ್ವವಿದ್ಯಾಲಯದಿಂದ 1979ರಲ್ಲಿ ಪದವಿ ಪಡೆದ ಅವರು, ಅದೇ ವರ್ಷ ಎಪ್ರಿಲ್ 6ರಂದು ಉತ್ತರಪ್ರದೇಶ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಹೊಂದಿದರು. ಅವರು ನಂತರ ನ್ಯಾಯಾಧೀಶರಾಗಿ ಆಯ್ಕೆಯಾಗುವ ತನಕ ಅಲಹಾಬಾದ್ ಹೈಕೋರ್ಟಿನಲ್ಲಿಯೇ ವಕಾಲತ್ತು ಮಾಡುತ್ತಿದ್ದರು. ಅವರು ಅಲಹಾಬಾದ್ ವಿಶ್ವವಿದ್ಯಾನಿಲಯ, ಸ್ಟೇಟ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್, ಹಲವು ಮುನಿಸಿಪಲ್ ಮಂಡಳಿಗಳು, ಬ್ಯಾಂಕುಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸ್ಥಾಯಿ ವಕೀಲರಾಗಿದ್ದರು.

ಭೂಷಣ್ ಅವರು ನಂತರ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಹಿರಿಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ, ಅಲಹಾಬಾದ್ ಹೈಕೋರ್ಟಿನ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ನ್ಯಾಯಾಂಗ ಸೇವಾ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜುಲೈ 10, 2014ರಲ್ಲಿ ಅವರು ಕೇರಳ ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡು, ಆಗಸ್ಟ್ 1, 2014ರಲ್ಲಿ ಪ್ರಭಾರ ಮುಖ್ಯ ನ್ಯಾಯಾಧೀಶರಾಗಿಯೂ, ಮಾರ್ಚ್ 3, 2015ರಲ್ಲಿ ಮುಖ್ಯ ನ್ಯಾಯಾಧೀಶರಾಗಿಯೂ ಪ್ರಮಾಣವಚನ ಸ್ವೀಕರಿಸಿದರು.

ನ್ಯಾ. ಅಬ್ದುಲ್ ನಸೀರ್

ಅವರು ಈ ಪೀಠದಲ್ಲಿದ್ದ ಏಕೈಕ ಮುಸ್ಲಿಂ ನ್ಯಾಯಾಧೀಶರು. ಅವರು ಫೆಬ್ರವರಿ 18, 1983ರಂದು ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ನೋಂದಣಿಗೊಂಡು, ರಾಜ್ಯ ಹೈಕೋರ್ಟಿನಲ್ಲಿ ವಕಾಲತ್ತು ನಡೆಸುತ್ತಿದ್ದರು. ಮೇ 12, 2003ರಂದು ಅವರು ಕರ್ನಾಟಕ ಹೈಕೋರ್ಟಿನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡು, ಸೆಪ್ಟೆಂಬರ್ 24, 2004ರಲ್ಲಿ ಖಾಯಂಗೊಂಡರು. ಫೆಬ್ರವರಿ 17, 2017ರಂದು ಅವರು ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ಭಡ್ತಿ ಪಡೆದರು.

ಕೃಪೆ: ಹಿಂದೂಸ್ತಾನ್ ಟೈಮ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...