Homeಮುಖಪುಟಅಯೋಧ್ಯೆ ತೀರ್ಪು ಪ್ರಕಟಿಸಿದ ಐವರು ನ್ಯಾಯಾಧೀಶರ ಕಿರುಪರಿಚಯ

ಅಯೋಧ್ಯೆ ತೀರ್ಪು ಪ್ರಕಟಿಸಿದ ಐವರು ನ್ಯಾಯಾಧೀಶರ ಕಿರುಪರಿಚಯ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ರಾಮ ಜನ್ಮಭೂಮ- ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನು ಶನಿವಾರ ನೀಡಿತು. ಈ ಐವರು ನ್ಯಾಯಾಧೀಶರ ಕಿರುಪರಿಚಯ ಇಲ್ಲಿದೆ.

ರಂಜನ್ ಗೊಗೋಯ್

1978ರಲ್ಲಿ ವೃತ್ತಿ ಆರಂಭಿಸಿದ ನ್ಯಾ. ರಂಜನ್ ಗೊಗೋಯ್ ಅವರು, ಮುಖ್ಯವಾಗಿ ಗುವಾಹಟಿ ಹೈಕೋರ್ಟಿನಲ್ಲಿ ವಕಾಲತ್ತು ಮಾಡುತ್ತಿದ್ದರು. ಫೆಬ್ರವರಿ 28, 2001ರಲ್ಲಿ ಅವರು ಗುವಾಹಟಿ ಹೈಕೋರ್ಟಿನ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ಸೆಪ್ಟೆಂಬರ್ 9, 2010ರಲ್ಲಿ ಅವರನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು. ಫೆಬ್ರವರಿ 12, 2011ರಲ್ಲಿ ಅವರು ಅಲ್ಲಿನ ಮುಖ್ಯ ನ್ಯಾಯಾಧೀಶರಾದರು. ಎಪ್ರಿಲ್ 23, 2012ರಲ್ಲಿ ಅವರು ಸುಪ್ರೀಂಕೋರ್ಟಿಗೆ ಭಡ್ತಿ ಹೊಂದಿದರು.

ಅಕ್ಟೋಬರ್ 3, 2018ರಂದು ಭಾರತದ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ಇದೇ ನವೆಂಬರ್ 17ರಂದು ನಿವೃತ್ತರಾಗಲಿದ್ದಾರೆ. ಈ ಪೀಠವು ಪ್ರಕರಣದ 40 ದಿನಗಳ ವಿಚಾರಣೆಯನ್ನು ಅಕ್ಟೋಬರ್ 16ರಂದು ಪೂರ್ಣಗೊಳಿಸಿ, ತೀರ್ಪನ್ನು ಕಾದಿರಿಸಿತ್ತು. ನಿವೃತ್ತಿಗೆ ಮುನ್ನ ಗೊಗೋಯ್ ಅವರು ಇನ್ನೂ ಮೂರು ಪ್ರಕರಣಗಳಲ್ಲಿ ತೀರ್ಪು ನೀಡಲಿದ್ದಾರೆ. ಅವುಗಳೆಂದರೆ ರಫೇಲ್ ಪುನರ್ವಿಮರ್ಶಾ ಅರ್ಜಿ, ಶಬರಿಮಲೆ ಪುನರ್ವಿಮರ್ಶಾ ಅರ್ಜಿ ಮತ್ತು ಭಾರತದ ಮುಖ್ಯ ನ್ಯಾಯಾಧೀಶರ (ಸಿಜೆಐ) ಕಚೇರಿಯು ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ವ್ಯಾಪ್ತಿಗೆ ಬರುತ್ತದೋ, ಇಲ್ಲವೋ ಎಂಬುದು.

ನ್ಯಾ. ಎಸ್.ಎ. ಬೋಬ್ಡೆ

ಅವರು ಭಾರತದ ನಿಯುಕ್ತ ಮುಖ್ಯ ನ್ಯಾಯಾಧೀಶರಾಗಿದ್ದು, ನವೆಂಬರ್ 18ರಂದು ಅಧಿಕಾರ ಸ್ವೀಕರಿಸುವರು. ಅವರು 1978ರಲ್ಲಿ ಮಹಾರಾಷ್ಟ್ರ ಬಾರ್ ಕೌನ್ಸಿಲ್‌ಗೆ ಸೇರ್ಪಡೆಯಾಗಿದ್ದು, ಬಾಂಬೆ ಹೈಕೋರ್ಟಿನ ನಾಗಪುರ ಪೀಠದಲ್ಲಿ ವಕಾಲತ್ತು ನಡೆಸುತ್ತಿದ್ದರು. 21 ವರ್ಷಗಳ ಕಾಲ ಅವರು ಬಾಂಬೆ ಹೈಕೋರ್ಟಿನ ಮುಖ್ಯ ಪೀಠ ಹಾಗೂ ಸುಪ್ರೀಂಕೋರ್ಟಿನಲ್ಲಿಯೂ ವಕಾಲತ್ತು ನಡೆಸಿದ್ದಾರೆ. 1998ರಲ್ಲಿ ಅವರು ಹಿರಿ ವಕೀಲರಾಗಿ ನಾಮಕರಣಗೊಂಡರು.

ಮಾರ್ಚ್ 29, 2000ದಲ್ಲಿ ಅವರು ಬಾಂಬೆ ಹೈಕೋರ್ಟಿನ ಹೆಚ್ಚುವರಿ ನ್ಯಾಯಾಧೀಶರಾಗಿ ಭಡ್ತಿ ಪಡೆದರು. ಅಕ್ಟೋಬರ್ 16, 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು. ಎಪ್ರಿಲ್ 12, 2013ರಂದು ಅವರು ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ಭಡ್ತಿ ಹೊಂದಿದರು. ಅವರು ಎಪ್ರಿಲ್ 23, 2021ರಂದು ಮುಖ್ಯ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಲಿದ್ದಾರೆ.

ನ್ಯಾ. ಡಿ.ವೈ. ಚಂದ್ರಚೂಡ್

ಅವರು ಅನೇಕ ಸಂವಿಧಾನ ಪೀಠಗಳ ಭಾಗವಾಗಿದ್ದು, ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿ ತಮ್ಮ ಉದಾರವಾದಿ ನಿಲುವುಗಳಿಗಾಗಿ ಹೆಸರಾಗಿದ್ದಾರೆ. ಅವರು ಮಹಾರಾಷ್ಟ್ರ ನ್ಯಾಯಾಂಗ ಅಕಾಡೆಮಿಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಬಾಂಬೆ ಹೈಕೋರ್ಟಿನಿಂದ ಜೂನ್ 1998ರಲ್ಲಿ ಹಿರಿಯ ವಕೀಲರಾಗಿ ನಿಯುಕ್ತರಾದರು. ಅವರು ಅಲ್ಲಿ ಮತ್ತು ಸುಪ್ರೀಂಕೋರ್ಟಿನಲ್ಲಿ ವಕಾಲತ್ತು ನಡೆಸುತ್ತಿದ್ದರು.

ಮಾರ್ಚ್ 29, 2000ರಂದು ಬಾಂಬೆ ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳುವ ತನಕ, 1998ರಿಂದ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ಅಕ್ಟೋಬರ್ 31, 2013ರಲ್ಲಿ ಅವರು ಅಲಹಾಬಾದ್ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡರು. ಮೇ 13, 2016ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಭಡ್ತಿ ಹೊಂದಿದರು.

ನ್ಯಾ. ಅಶೋಕ್ ಭೂಷಣ್

ಅಲಹಾಬಾದ್ ವಿಶ್ವವಿದ್ಯಾಲಯದಿಂದ 1979ರಲ್ಲಿ ಪದವಿ ಪಡೆದ ಅವರು, ಅದೇ ವರ್ಷ ಎಪ್ರಿಲ್ 6ರಂದು ಉತ್ತರಪ್ರದೇಶ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಹೊಂದಿದರು. ಅವರು ನಂತರ ನ್ಯಾಯಾಧೀಶರಾಗಿ ಆಯ್ಕೆಯಾಗುವ ತನಕ ಅಲಹಾಬಾದ್ ಹೈಕೋರ್ಟಿನಲ್ಲಿಯೇ ವಕಾಲತ್ತು ಮಾಡುತ್ತಿದ್ದರು. ಅವರು ಅಲಹಾಬಾದ್ ವಿಶ್ವವಿದ್ಯಾನಿಲಯ, ಸ್ಟೇಟ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್, ಹಲವು ಮುನಿಸಿಪಲ್ ಮಂಡಳಿಗಳು, ಬ್ಯಾಂಕುಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸ್ಥಾಯಿ ವಕೀಲರಾಗಿದ್ದರು.

ಭೂಷಣ್ ಅವರು ನಂತರ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಹಿರಿಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ, ಅಲಹಾಬಾದ್ ಹೈಕೋರ್ಟಿನ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ನ್ಯಾಯಾಂಗ ಸೇವಾ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜುಲೈ 10, 2014ರಲ್ಲಿ ಅವರು ಕೇರಳ ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡು, ಆಗಸ್ಟ್ 1, 2014ರಲ್ಲಿ ಪ್ರಭಾರ ಮುಖ್ಯ ನ್ಯಾಯಾಧೀಶರಾಗಿಯೂ, ಮಾರ್ಚ್ 3, 2015ರಲ್ಲಿ ಮುಖ್ಯ ನ್ಯಾಯಾಧೀಶರಾಗಿಯೂ ಪ್ರಮಾಣವಚನ ಸ್ವೀಕರಿಸಿದರು.

ನ್ಯಾ. ಅಬ್ದುಲ್ ನಸೀರ್

ಅವರು ಈ ಪೀಠದಲ್ಲಿದ್ದ ಏಕೈಕ ಮುಸ್ಲಿಂ ನ್ಯಾಯಾಧೀಶರು. ಅವರು ಫೆಬ್ರವರಿ 18, 1983ರಂದು ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ನೋಂದಣಿಗೊಂಡು, ರಾಜ್ಯ ಹೈಕೋರ್ಟಿನಲ್ಲಿ ವಕಾಲತ್ತು ನಡೆಸುತ್ತಿದ್ದರು. ಮೇ 12, 2003ರಂದು ಅವರು ಕರ್ನಾಟಕ ಹೈಕೋರ್ಟಿನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡು, ಸೆಪ್ಟೆಂಬರ್ 24, 2004ರಲ್ಲಿ ಖಾಯಂಗೊಂಡರು. ಫೆಬ್ರವರಿ 17, 2017ರಂದು ಅವರು ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ಭಡ್ತಿ ಪಡೆದರು.

ಕೃಪೆ: ಹಿಂದೂಸ್ತಾನ್ ಟೈಮ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...