Homeಮುಖಪುಟಅಯೋಧ್ಯೆ ತೀರ್ಪು ಪ್ರಕಟಿಸಿದ ಐವರು ನ್ಯಾಯಾಧೀಶರ ಕಿರುಪರಿಚಯ

ಅಯೋಧ್ಯೆ ತೀರ್ಪು ಪ್ರಕಟಿಸಿದ ಐವರು ನ್ಯಾಯಾಧೀಶರ ಕಿರುಪರಿಚಯ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ರಾಮ ಜನ್ಮಭೂಮ- ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನು ಶನಿವಾರ ನೀಡಿತು. ಈ ಐವರು ನ್ಯಾಯಾಧೀಶರ ಕಿರುಪರಿಚಯ ಇಲ್ಲಿದೆ.

ರಂಜನ್ ಗೊಗೋಯ್

1978ರಲ್ಲಿ ವೃತ್ತಿ ಆರಂಭಿಸಿದ ನ್ಯಾ. ರಂಜನ್ ಗೊಗೋಯ್ ಅವರು, ಮುಖ್ಯವಾಗಿ ಗುವಾಹಟಿ ಹೈಕೋರ್ಟಿನಲ್ಲಿ ವಕಾಲತ್ತು ಮಾಡುತ್ತಿದ್ದರು. ಫೆಬ್ರವರಿ 28, 2001ರಲ್ಲಿ ಅವರು ಗುವಾಹಟಿ ಹೈಕೋರ್ಟಿನ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ಸೆಪ್ಟೆಂಬರ್ 9, 2010ರಲ್ಲಿ ಅವರನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಲಾಯಿತು. ಫೆಬ್ರವರಿ 12, 2011ರಲ್ಲಿ ಅವರು ಅಲ್ಲಿನ ಮುಖ್ಯ ನ್ಯಾಯಾಧೀಶರಾದರು. ಎಪ್ರಿಲ್ 23, 2012ರಲ್ಲಿ ಅವರು ಸುಪ್ರೀಂಕೋರ್ಟಿಗೆ ಭಡ್ತಿ ಹೊಂದಿದರು.

ಅಕ್ಟೋಬರ್ 3, 2018ರಂದು ಭಾರತದ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ಇದೇ ನವೆಂಬರ್ 17ರಂದು ನಿವೃತ್ತರಾಗಲಿದ್ದಾರೆ. ಈ ಪೀಠವು ಪ್ರಕರಣದ 40 ದಿನಗಳ ವಿಚಾರಣೆಯನ್ನು ಅಕ್ಟೋಬರ್ 16ರಂದು ಪೂರ್ಣಗೊಳಿಸಿ, ತೀರ್ಪನ್ನು ಕಾದಿರಿಸಿತ್ತು. ನಿವೃತ್ತಿಗೆ ಮುನ್ನ ಗೊಗೋಯ್ ಅವರು ಇನ್ನೂ ಮೂರು ಪ್ರಕರಣಗಳಲ್ಲಿ ತೀರ್ಪು ನೀಡಲಿದ್ದಾರೆ. ಅವುಗಳೆಂದರೆ ರಫೇಲ್ ಪುನರ್ವಿಮರ್ಶಾ ಅರ್ಜಿ, ಶಬರಿಮಲೆ ಪುನರ್ವಿಮರ್ಶಾ ಅರ್ಜಿ ಮತ್ತು ಭಾರತದ ಮುಖ್ಯ ನ್ಯಾಯಾಧೀಶರ (ಸಿಜೆಐ) ಕಚೇರಿಯು ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ವ್ಯಾಪ್ತಿಗೆ ಬರುತ್ತದೋ, ಇಲ್ಲವೋ ಎಂಬುದು.

ನ್ಯಾ. ಎಸ್.ಎ. ಬೋಬ್ಡೆ

ಅವರು ಭಾರತದ ನಿಯುಕ್ತ ಮುಖ್ಯ ನ್ಯಾಯಾಧೀಶರಾಗಿದ್ದು, ನವೆಂಬರ್ 18ರಂದು ಅಧಿಕಾರ ಸ್ವೀಕರಿಸುವರು. ಅವರು 1978ರಲ್ಲಿ ಮಹಾರಾಷ್ಟ್ರ ಬಾರ್ ಕೌನ್ಸಿಲ್‌ಗೆ ಸೇರ್ಪಡೆಯಾಗಿದ್ದು, ಬಾಂಬೆ ಹೈಕೋರ್ಟಿನ ನಾಗಪುರ ಪೀಠದಲ್ಲಿ ವಕಾಲತ್ತು ನಡೆಸುತ್ತಿದ್ದರು. 21 ವರ್ಷಗಳ ಕಾಲ ಅವರು ಬಾಂಬೆ ಹೈಕೋರ್ಟಿನ ಮುಖ್ಯ ಪೀಠ ಹಾಗೂ ಸುಪ್ರೀಂಕೋರ್ಟಿನಲ್ಲಿಯೂ ವಕಾಲತ್ತು ನಡೆಸಿದ್ದಾರೆ. 1998ರಲ್ಲಿ ಅವರು ಹಿರಿ ವಕೀಲರಾಗಿ ನಾಮಕರಣಗೊಂಡರು.

ಮಾರ್ಚ್ 29, 2000ದಲ್ಲಿ ಅವರು ಬಾಂಬೆ ಹೈಕೋರ್ಟಿನ ಹೆಚ್ಚುವರಿ ನ್ಯಾಯಾಧೀಶರಾಗಿ ಭಡ್ತಿ ಪಡೆದರು. ಅಕ್ಟೋಬರ್ 16, 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು. ಎಪ್ರಿಲ್ 12, 2013ರಂದು ಅವರು ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ಭಡ್ತಿ ಹೊಂದಿದರು. ಅವರು ಎಪ್ರಿಲ್ 23, 2021ರಂದು ಮುಖ್ಯ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಲಿದ್ದಾರೆ.

ನ್ಯಾ. ಡಿ.ವೈ. ಚಂದ್ರಚೂಡ್

ಅವರು ಅನೇಕ ಸಂವಿಧಾನ ಪೀಠಗಳ ಭಾಗವಾಗಿದ್ದು, ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿ ತಮ್ಮ ಉದಾರವಾದಿ ನಿಲುವುಗಳಿಗಾಗಿ ಹೆಸರಾಗಿದ್ದಾರೆ. ಅವರು ಮಹಾರಾಷ್ಟ್ರ ನ್ಯಾಯಾಂಗ ಅಕಾಡೆಮಿಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಬಾಂಬೆ ಹೈಕೋರ್ಟಿನಿಂದ ಜೂನ್ 1998ರಲ್ಲಿ ಹಿರಿಯ ವಕೀಲರಾಗಿ ನಿಯುಕ್ತರಾದರು. ಅವರು ಅಲ್ಲಿ ಮತ್ತು ಸುಪ್ರೀಂಕೋರ್ಟಿನಲ್ಲಿ ವಕಾಲತ್ತು ನಡೆಸುತ್ತಿದ್ದರು.

ಮಾರ್ಚ್ 29, 2000ರಂದು ಬಾಂಬೆ ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳ್ಳುವ ತನಕ, 1998ರಿಂದ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ಅಕ್ಟೋಬರ್ 31, 2013ರಲ್ಲಿ ಅವರು ಅಲಹಾಬಾದ್ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡರು. ಮೇ 13, 2016ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಭಡ್ತಿ ಹೊಂದಿದರು.

ನ್ಯಾ. ಅಶೋಕ್ ಭೂಷಣ್

ಅಲಹಾಬಾದ್ ವಿಶ್ವವಿದ್ಯಾಲಯದಿಂದ 1979ರಲ್ಲಿ ಪದವಿ ಪಡೆದ ಅವರು, ಅದೇ ವರ್ಷ ಎಪ್ರಿಲ್ 6ರಂದು ಉತ್ತರಪ್ರದೇಶ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಹೊಂದಿದರು. ಅವರು ನಂತರ ನ್ಯಾಯಾಧೀಶರಾಗಿ ಆಯ್ಕೆಯಾಗುವ ತನಕ ಅಲಹಾಬಾದ್ ಹೈಕೋರ್ಟಿನಲ್ಲಿಯೇ ವಕಾಲತ್ತು ಮಾಡುತ್ತಿದ್ದರು. ಅವರು ಅಲಹಾಬಾದ್ ವಿಶ್ವವಿದ್ಯಾನಿಲಯ, ಸ್ಟೇಟ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್, ಹಲವು ಮುನಿಸಿಪಲ್ ಮಂಡಳಿಗಳು, ಬ್ಯಾಂಕುಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸ್ಥಾಯಿ ವಕೀಲರಾಗಿದ್ದರು.

ಭೂಷಣ್ ಅವರು ನಂತರ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಹಿರಿಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ, ಅಲಹಾಬಾದ್ ಹೈಕೋರ್ಟಿನ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ನ್ಯಾಯಾಂಗ ಸೇವಾ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜುಲೈ 10, 2014ರಲ್ಲಿ ಅವರು ಕೇರಳ ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡು, ಆಗಸ್ಟ್ 1, 2014ರಲ್ಲಿ ಪ್ರಭಾರ ಮುಖ್ಯ ನ್ಯಾಯಾಧೀಶರಾಗಿಯೂ, ಮಾರ್ಚ್ 3, 2015ರಲ್ಲಿ ಮುಖ್ಯ ನ್ಯಾಯಾಧೀಶರಾಗಿಯೂ ಪ್ರಮಾಣವಚನ ಸ್ವೀಕರಿಸಿದರು.

ನ್ಯಾ. ಅಬ್ದುಲ್ ನಸೀರ್

ಅವರು ಈ ಪೀಠದಲ್ಲಿದ್ದ ಏಕೈಕ ಮುಸ್ಲಿಂ ನ್ಯಾಯಾಧೀಶರು. ಅವರು ಫೆಬ್ರವರಿ 18, 1983ರಂದು ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ನೋಂದಣಿಗೊಂಡು, ರಾಜ್ಯ ಹೈಕೋರ್ಟಿನಲ್ಲಿ ವಕಾಲತ್ತು ನಡೆಸುತ್ತಿದ್ದರು. ಮೇ 12, 2003ರಂದು ಅವರು ಕರ್ನಾಟಕ ಹೈಕೋರ್ಟಿನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡು, ಸೆಪ್ಟೆಂಬರ್ 24, 2004ರಲ್ಲಿ ಖಾಯಂಗೊಂಡರು. ಫೆಬ್ರವರಿ 17, 2017ರಂದು ಅವರು ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ಭಡ್ತಿ ಪಡೆದರು.

ಕೃಪೆ: ಹಿಂದೂಸ್ತಾನ್ ಟೈಮ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...