Homeಮುಖಪುಟಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

- Advertisement -
- Advertisement -

2020ರ ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಆಳುವ ಬಿಜೆಪಿಯ ವರಿಷ್ಠರು ನಿರ್ಧರಿಸಿದ್ದಾರೆ. ಆ ಜಾಗದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸುವುದು ಅವರ ಉದ್ದೇಶವೆಂದು ತಿಳಿಸಲಾಗಿದೆ. ಆ ಮಂದಿರ ಭವ್ಯವಾಗಿ ಇರಬಹುದು; ಆದರೆ ಖಂಡಿತ ಪವಿತ್ರವಾಗಿರುವುದಿಲ್ಲ. ಅದಕ್ಕೊಂದು ಕಾರಣವಿದೆ. ಈ ಪ್ರಸ್ತಾಪಿತ ರಾಮಮಂದಿರವನ್ನು ಅಕ್ಷರಶಃ ಮನುಷ್ಯರ ಹೆಣಗಳ ಮೇಲೆ ನಿರ್ಮಿಸಲಾಗುತ್ತಿದೆ.

ನಾವು ಒಮ್ಮೆ 1992ರ ಡಿಸೆಂಬರ್ 6ರ ದಿನಗಳನ್ನು ಮನಸ್ಸಿನೊಳಗೆ ತಂದುಕೊಳ್ಳಬೇಕು. ಆ ದಿನ ದೇಶದ ಎಲ್ಲೆಡೆಯಿಂದ ಫೈಜಾಬಾದ್ ಸಮೀಪದ ಅಯೋಧ್ಯೆಗೆ ಲಕ್ಷಾಂತರ ಜನ ಕರಸೇವಕರು ಬಂದಿದ್ದರು. ಅವರು ಬಿಜೆಪಿ ಕಾರ್ಯಕರ್ತರು; ಹೆಚ್ಚಿನವರು ಆರ್ ಎಸ್‍ ಎಸ್ ಸ್ವಯಂಸೇವಕರು. ಕರಸೇವಕರಲ್ಲಿ ಕೆಲವರು ಹಾರೆ ಪಿಕಾಸಿಗಳ ಸಮೇತ ಅಲ್ಲಿ ಜಮಾಯಿಸಿದ್ದರು. ಅಂದು ಲಕ್ಷಾಂತರ ಜನರ ಸಮ್ಮುಖದಲ್ಲಿ, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಅದರ ಬೆನ್ನಿಗೆ ಮುಂಬೈ ಶಹರದಲ್ಲಿ, ಮತೀಯ ಹಿಂಸಾ ಕೃತ್ಯಗಳು ಪ್ರಾರಂಭವಾಗಿ, ಮುಂದೆ ಮೂರು ನಾಲ್ಕು ತಿಂಗಳುಗಳ ಕಾಲ ಆ ಶಹರದಲ್ಲಿ ಮಾರಣಹೋಮ ಅವ್ಯಾಹತವಾಗಿ ನಡೆಯಿತು.

ಈ ಗಲಭೆಗಳಲ್ಲಿ, ಬಿಜೆಪಿ ಶಿವಸೇನಾ ಮಾತ್ರವಲ್ಲ, ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿ ಹಿಂಸಾಚಾರವೆಸಗಿದ್ದರು. ಈ ಕುರಿತು ಸರಕಾರ ನೇಮಿಸಿದ, ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಆಯೋಗ ಹಿಂಸಾಚಾರದ ಕುರಿತು ಸಾಕ್ಷ್ಯಾಧಾರ ಸಹಿತ ವಿವರವಾದ ವರದಿ ಸಲ್ಲಿಸಿದೆ. ನನಗೆ ಗೊತ್ತಿರುವ ಮಟ್ಟಿಗೆ ಈ ವರದಿಯನ್ನು ಯಾವ ಸರಕಾರವೂ ಅಧಿಕೃತವಾಗಿ ಇದುವರೆಗೆ ಸ್ವೀಕರಿಸಿಲ್ಲ.

ಒಂದು ದೃಷ್ಟಿಯಿಂದ 1992ರ ಮುಂಬೈ ಗಲಭೆಗಳು, 2002ರ ಗುಜರಾತ್‍ನ ಮುಸ್ಲಿಂ ನರಮೇಧಕ್ಕೂ ನಾಂದಿ ಹಾಡಿತು. 92ರಲ್ಲಿ ಅಡ್ವಾಣಿ ನೇತೃತ್ವದ ರಥಯಾತ್ರೆಗೆ ಆಯೋಜಕನಾಗಿ ಕೆಲಸ ಮಾಡಿದ್ದ ಒಬ್ಬ ಗುಜರಾತ್‍ನ ಕಾರ್ಯಕರ್ತ, ನರಮೇಧದ ಬಂಡವಾಳ ತರುವ ಲಾಭದ ಅರಿವು ಪಡೆದುಕೊಂಡ. ಈಗ ದೇಶದ ಪ್ರಧಾನಿಯಾಗಿರುವ ಮೋದಿ ಮಹಾಶಯರೇ 2002ರಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಆ ಸಂದರ್ಭದಲ್ಲಿ ನಡೆದ ನರಮೇಧದಿಂದ ಈತನ ಜನಪ್ರಿಯತೆ ಕುಸಿಯುವ ಬದಲು ಇನ್ನಷ್ಟು ಹಿಗ್ಗಿತು. ಖ್ಯಾತ ಚಿಂತಕ ಶಿವ ವಿಶ್ವನಾಥನ್, ಮುಸ್ಲಿಮರ ನರಮೇಧ, ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸದೆ ಅವರು ಇನ್ನಷ್ಟು ಜನಪ್ರಿಯರಾದರು ಎಂದು ವಿಶ್ಲೇಷಿಸಿದ್ದರು. ಇದು ಸ್ವತಃ ಅಂದಿನ ಮುಖ್ಯಮಂತ್ರಿಯ ಸಂಚಾಲಕತ್ವದಲ್ಲಿ ನಡೆಯಿತೆಂಬ ಆರೋಪ ಕೇಳಿಬಂತಲ್ಲದೇ ವಿಚಾರಣೆಗಳೂ ನಡೆದವು. ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರಿಗೆ ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯವು 28 ವರ್ಷಗಳ ಶಿಕ್ಷೆಯನ್ನೂ ವಿಧಿಸಿತ್ತು. ಗುಜರಾತ್‍ನಲ್ಲಿ ಆಗಿನಿಂದಲೂ ಅದೇ ಪಕ್ಷಕ್ಕೆ ಸೇರಿದ ಸರ್ಕಾರವಿದೆ ಎಂಬುದನ್ನು ಮರೆಯಲಾಗದು. ಆ ರಾಜ್ಯದಲ್ಲಿ ವಿಚಾರಣೆ ನಡೆದರೆ ನ್ಯಾಯಯುತವಾಗಿರಲಾರದೆಂಬ ಕಾರಣಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗಳನ್ನು ಬೇರೆಡೆಗೆ ವರ್ಗಾಯಿಸಿತ್ತು. ಆ ರಾಜ್ಯದ ಗೃಹಮಂತ್ರಿಯನ್ನು ಬೇರೆಡೆಗೆ ಗಡಿಪಾರು ಮಾಡಲಾಗಿತ್ತು. ಅದೇ ಗೃಹಮಂತ್ರಿ ಇದೀಗ ದೇಶದ ಗೃಹಮಂತ್ರಿ ಮತ್ತು ಅಂತಹ ಘನಘೋರ ಹಿಂಸೆ ಮಾಡಿಸಿದ ಆರೋಪ ಹೊತ್ತಿದ್ದ ಮಹಾಶಯರೇ ಈಗ ನಮ್ಮ ಸಂವಿಧಾನದ ಮೌಲ್ಯಗಳ ವಿರುದ್ಧ ಮಂದಿರದ ಶಿಲಾನ್ಯಾಸ ಮಾಡಲಿದ್ದಾರೆ.

ಭಾರತದಲ್ಲಿ, ಇದುವರೆಗೆ ಹತ್ತಿರ ಹತ್ತಿರ 40,000 ಜನ ಕೋವಿಡ್ ಸೋಂಕಿನಿಂದ ಸತ್ತಿದ್ದಾರೆ. ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಾಣದ ರೀತಿಯಲ್ಲಿ ಜರ್ಜರಿತವಾಗಿದೆ. ಇದು ಕೂಡ ಒಂದು ಪ್ರಭುತ್ವ ಆಯೋಜಿತ ಮಾರಣಹೋಮ. ಈ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಕಡೆಗೆ ಒಂದು ಮಹತ್ವದ ಹೆಜ್ಜೆ, ಈ ರಾಮ ಮಂದಿರವೆಂದು ಭಾವಿಸಲಾಗುತ್ತಿದೆ. ಇವೆಲ್ಲವುಗಳಿಗೆ ರಾಮಾಯಣದ ರೂಪಕ ಒಂದೇ; ಮಾನವೀಯತೆ, ನ್ಯಾಯ, ವಿವೇಕ ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ದೀರ್ಘ ವನವಾಸಕ್ಕೆ ಕಳುಹಿಸಲಾಗುತ್ತಿದೆ.

– ಜಿ ರಾಜಶೇಖರ್, ಉಡುಪಿ


ಇದನ್ನು ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...