Homeಮುಖಪುಟಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

- Advertisement -
- Advertisement -

2020ರ ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಆಳುವ ಬಿಜೆಪಿಯ ವರಿಷ್ಠರು ನಿರ್ಧರಿಸಿದ್ದಾರೆ. ಆ ಜಾಗದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸುವುದು ಅವರ ಉದ್ದೇಶವೆಂದು ತಿಳಿಸಲಾಗಿದೆ. ಆ ಮಂದಿರ ಭವ್ಯವಾಗಿ ಇರಬಹುದು; ಆದರೆ ಖಂಡಿತ ಪವಿತ್ರವಾಗಿರುವುದಿಲ್ಲ. ಅದಕ್ಕೊಂದು ಕಾರಣವಿದೆ. ಈ ಪ್ರಸ್ತಾಪಿತ ರಾಮಮಂದಿರವನ್ನು ಅಕ್ಷರಶಃ ಮನುಷ್ಯರ ಹೆಣಗಳ ಮೇಲೆ ನಿರ್ಮಿಸಲಾಗುತ್ತಿದೆ.

ನಾವು ಒಮ್ಮೆ 1992ರ ಡಿಸೆಂಬರ್ 6ರ ದಿನಗಳನ್ನು ಮನಸ್ಸಿನೊಳಗೆ ತಂದುಕೊಳ್ಳಬೇಕು. ಆ ದಿನ ದೇಶದ ಎಲ್ಲೆಡೆಯಿಂದ ಫೈಜಾಬಾದ್ ಸಮೀಪದ ಅಯೋಧ್ಯೆಗೆ ಲಕ್ಷಾಂತರ ಜನ ಕರಸೇವಕರು ಬಂದಿದ್ದರು. ಅವರು ಬಿಜೆಪಿ ಕಾರ್ಯಕರ್ತರು; ಹೆಚ್ಚಿನವರು ಆರ್ ಎಸ್‍ ಎಸ್ ಸ್ವಯಂಸೇವಕರು. ಕರಸೇವಕರಲ್ಲಿ ಕೆಲವರು ಹಾರೆ ಪಿಕಾಸಿಗಳ ಸಮೇತ ಅಲ್ಲಿ ಜಮಾಯಿಸಿದ್ದರು. ಅಂದು ಲಕ್ಷಾಂತರ ಜನರ ಸಮ್ಮುಖದಲ್ಲಿ, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಅದರ ಬೆನ್ನಿಗೆ ಮುಂಬೈ ಶಹರದಲ್ಲಿ, ಮತೀಯ ಹಿಂಸಾ ಕೃತ್ಯಗಳು ಪ್ರಾರಂಭವಾಗಿ, ಮುಂದೆ ಮೂರು ನಾಲ್ಕು ತಿಂಗಳುಗಳ ಕಾಲ ಆ ಶಹರದಲ್ಲಿ ಮಾರಣಹೋಮ ಅವ್ಯಾಹತವಾಗಿ ನಡೆಯಿತು.

ಈ ಗಲಭೆಗಳಲ್ಲಿ, ಬಿಜೆಪಿ ಶಿವಸೇನಾ ಮಾತ್ರವಲ್ಲ, ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿ ಹಿಂಸಾಚಾರವೆಸಗಿದ್ದರು. ಈ ಕುರಿತು ಸರಕಾರ ನೇಮಿಸಿದ, ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಆಯೋಗ ಹಿಂಸಾಚಾರದ ಕುರಿತು ಸಾಕ್ಷ್ಯಾಧಾರ ಸಹಿತ ವಿವರವಾದ ವರದಿ ಸಲ್ಲಿಸಿದೆ. ನನಗೆ ಗೊತ್ತಿರುವ ಮಟ್ಟಿಗೆ ಈ ವರದಿಯನ್ನು ಯಾವ ಸರಕಾರವೂ ಅಧಿಕೃತವಾಗಿ ಇದುವರೆಗೆ ಸ್ವೀಕರಿಸಿಲ್ಲ.

ಒಂದು ದೃಷ್ಟಿಯಿಂದ 1992ರ ಮುಂಬೈ ಗಲಭೆಗಳು, 2002ರ ಗುಜರಾತ್‍ನ ಮುಸ್ಲಿಂ ನರಮೇಧಕ್ಕೂ ನಾಂದಿ ಹಾಡಿತು. 92ರಲ್ಲಿ ಅಡ್ವಾಣಿ ನೇತೃತ್ವದ ರಥಯಾತ್ರೆಗೆ ಆಯೋಜಕನಾಗಿ ಕೆಲಸ ಮಾಡಿದ್ದ ಒಬ್ಬ ಗುಜರಾತ್‍ನ ಕಾರ್ಯಕರ್ತ, ನರಮೇಧದ ಬಂಡವಾಳ ತರುವ ಲಾಭದ ಅರಿವು ಪಡೆದುಕೊಂಡ. ಈಗ ದೇಶದ ಪ್ರಧಾನಿಯಾಗಿರುವ ಮೋದಿ ಮಹಾಶಯರೇ 2002ರಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಆ ಸಂದರ್ಭದಲ್ಲಿ ನಡೆದ ನರಮೇಧದಿಂದ ಈತನ ಜನಪ್ರಿಯತೆ ಕುಸಿಯುವ ಬದಲು ಇನ್ನಷ್ಟು ಹಿಗ್ಗಿತು. ಖ್ಯಾತ ಚಿಂತಕ ಶಿವ ವಿಶ್ವನಾಥನ್, ಮುಸ್ಲಿಮರ ನರಮೇಧ, ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸದೆ ಅವರು ಇನ್ನಷ್ಟು ಜನಪ್ರಿಯರಾದರು ಎಂದು ವಿಶ್ಲೇಷಿಸಿದ್ದರು. ಇದು ಸ್ವತಃ ಅಂದಿನ ಮುಖ್ಯಮಂತ್ರಿಯ ಸಂಚಾಲಕತ್ವದಲ್ಲಿ ನಡೆಯಿತೆಂಬ ಆರೋಪ ಕೇಳಿಬಂತಲ್ಲದೇ ವಿಚಾರಣೆಗಳೂ ನಡೆದವು. ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರಿಗೆ ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯವು 28 ವರ್ಷಗಳ ಶಿಕ್ಷೆಯನ್ನೂ ವಿಧಿಸಿತ್ತು. ಗುಜರಾತ್‍ನಲ್ಲಿ ಆಗಿನಿಂದಲೂ ಅದೇ ಪಕ್ಷಕ್ಕೆ ಸೇರಿದ ಸರ್ಕಾರವಿದೆ ಎಂಬುದನ್ನು ಮರೆಯಲಾಗದು. ಆ ರಾಜ್ಯದಲ್ಲಿ ವಿಚಾರಣೆ ನಡೆದರೆ ನ್ಯಾಯಯುತವಾಗಿರಲಾರದೆಂಬ ಕಾರಣಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗಳನ್ನು ಬೇರೆಡೆಗೆ ವರ್ಗಾಯಿಸಿತ್ತು. ಆ ರಾಜ್ಯದ ಗೃಹಮಂತ್ರಿಯನ್ನು ಬೇರೆಡೆಗೆ ಗಡಿಪಾರು ಮಾಡಲಾಗಿತ್ತು. ಅದೇ ಗೃಹಮಂತ್ರಿ ಇದೀಗ ದೇಶದ ಗೃಹಮಂತ್ರಿ ಮತ್ತು ಅಂತಹ ಘನಘೋರ ಹಿಂಸೆ ಮಾಡಿಸಿದ ಆರೋಪ ಹೊತ್ತಿದ್ದ ಮಹಾಶಯರೇ ಈಗ ನಮ್ಮ ಸಂವಿಧಾನದ ಮೌಲ್ಯಗಳ ವಿರುದ್ಧ ಮಂದಿರದ ಶಿಲಾನ್ಯಾಸ ಮಾಡಲಿದ್ದಾರೆ.

ಭಾರತದಲ್ಲಿ, ಇದುವರೆಗೆ ಹತ್ತಿರ ಹತ್ತಿರ 40,000 ಜನ ಕೋವಿಡ್ ಸೋಂಕಿನಿಂದ ಸತ್ತಿದ್ದಾರೆ. ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಾಣದ ರೀತಿಯಲ್ಲಿ ಜರ್ಜರಿತವಾಗಿದೆ. ಇದು ಕೂಡ ಒಂದು ಪ್ರಭುತ್ವ ಆಯೋಜಿತ ಮಾರಣಹೋಮ. ಈ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಕಡೆಗೆ ಒಂದು ಮಹತ್ವದ ಹೆಜ್ಜೆ, ಈ ರಾಮ ಮಂದಿರವೆಂದು ಭಾವಿಸಲಾಗುತ್ತಿದೆ. ಇವೆಲ್ಲವುಗಳಿಗೆ ರಾಮಾಯಣದ ರೂಪಕ ಒಂದೇ; ಮಾನವೀಯತೆ, ನ್ಯಾಯ, ವಿವೇಕ ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ದೀರ್ಘ ವನವಾಸಕ್ಕೆ ಕಳುಹಿಸಲಾಗುತ್ತಿದೆ.

– ಜಿ ರಾಜಶೇಖರ್, ಉಡುಪಿ


ಇದನ್ನು ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...