Homeಮುಖಪುಟಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

- Advertisement -
- Advertisement -

2020ರ ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಆಳುವ ಬಿಜೆಪಿಯ ವರಿಷ್ಠರು ನಿರ್ಧರಿಸಿದ್ದಾರೆ. ಆ ಜಾಗದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸುವುದು ಅವರ ಉದ್ದೇಶವೆಂದು ತಿಳಿಸಲಾಗಿದೆ. ಆ ಮಂದಿರ ಭವ್ಯವಾಗಿ ಇರಬಹುದು; ಆದರೆ ಖಂಡಿತ ಪವಿತ್ರವಾಗಿರುವುದಿಲ್ಲ. ಅದಕ್ಕೊಂದು ಕಾರಣವಿದೆ. ಈ ಪ್ರಸ್ತಾಪಿತ ರಾಮಮಂದಿರವನ್ನು ಅಕ್ಷರಶಃ ಮನುಷ್ಯರ ಹೆಣಗಳ ಮೇಲೆ ನಿರ್ಮಿಸಲಾಗುತ್ತಿದೆ.

ನಾವು ಒಮ್ಮೆ 1992ರ ಡಿಸೆಂಬರ್ 6ರ ದಿನಗಳನ್ನು ಮನಸ್ಸಿನೊಳಗೆ ತಂದುಕೊಳ್ಳಬೇಕು. ಆ ದಿನ ದೇಶದ ಎಲ್ಲೆಡೆಯಿಂದ ಫೈಜಾಬಾದ್ ಸಮೀಪದ ಅಯೋಧ್ಯೆಗೆ ಲಕ್ಷಾಂತರ ಜನ ಕರಸೇವಕರು ಬಂದಿದ್ದರು. ಅವರು ಬಿಜೆಪಿ ಕಾರ್ಯಕರ್ತರು; ಹೆಚ್ಚಿನವರು ಆರ್ ಎಸ್‍ ಎಸ್ ಸ್ವಯಂಸೇವಕರು. ಕರಸೇವಕರಲ್ಲಿ ಕೆಲವರು ಹಾರೆ ಪಿಕಾಸಿಗಳ ಸಮೇತ ಅಲ್ಲಿ ಜಮಾಯಿಸಿದ್ದರು. ಅಂದು ಲಕ್ಷಾಂತರ ಜನರ ಸಮ್ಮುಖದಲ್ಲಿ, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಅದರ ಬೆನ್ನಿಗೆ ಮುಂಬೈ ಶಹರದಲ್ಲಿ, ಮತೀಯ ಹಿಂಸಾ ಕೃತ್ಯಗಳು ಪ್ರಾರಂಭವಾಗಿ, ಮುಂದೆ ಮೂರು ನಾಲ್ಕು ತಿಂಗಳುಗಳ ಕಾಲ ಆ ಶಹರದಲ್ಲಿ ಮಾರಣಹೋಮ ಅವ್ಯಾಹತವಾಗಿ ನಡೆಯಿತು.

ಈ ಗಲಭೆಗಳಲ್ಲಿ, ಬಿಜೆಪಿ ಶಿವಸೇನಾ ಮಾತ್ರವಲ್ಲ, ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿ ಹಿಂಸಾಚಾರವೆಸಗಿದ್ದರು. ಈ ಕುರಿತು ಸರಕಾರ ನೇಮಿಸಿದ, ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಆಯೋಗ ಹಿಂಸಾಚಾರದ ಕುರಿತು ಸಾಕ್ಷ್ಯಾಧಾರ ಸಹಿತ ವಿವರವಾದ ವರದಿ ಸಲ್ಲಿಸಿದೆ. ನನಗೆ ಗೊತ್ತಿರುವ ಮಟ್ಟಿಗೆ ಈ ವರದಿಯನ್ನು ಯಾವ ಸರಕಾರವೂ ಅಧಿಕೃತವಾಗಿ ಇದುವರೆಗೆ ಸ್ವೀಕರಿಸಿಲ್ಲ.

ಒಂದು ದೃಷ್ಟಿಯಿಂದ 1992ರ ಮುಂಬೈ ಗಲಭೆಗಳು, 2002ರ ಗುಜರಾತ್‍ನ ಮುಸ್ಲಿಂ ನರಮೇಧಕ್ಕೂ ನಾಂದಿ ಹಾಡಿತು. 92ರಲ್ಲಿ ಅಡ್ವಾಣಿ ನೇತೃತ್ವದ ರಥಯಾತ್ರೆಗೆ ಆಯೋಜಕನಾಗಿ ಕೆಲಸ ಮಾಡಿದ್ದ ಒಬ್ಬ ಗುಜರಾತ್‍ನ ಕಾರ್ಯಕರ್ತ, ನರಮೇಧದ ಬಂಡವಾಳ ತರುವ ಲಾಭದ ಅರಿವು ಪಡೆದುಕೊಂಡ. ಈಗ ದೇಶದ ಪ್ರಧಾನಿಯಾಗಿರುವ ಮೋದಿ ಮಹಾಶಯರೇ 2002ರಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಆ ಸಂದರ್ಭದಲ್ಲಿ ನಡೆದ ನರಮೇಧದಿಂದ ಈತನ ಜನಪ್ರಿಯತೆ ಕುಸಿಯುವ ಬದಲು ಇನ್ನಷ್ಟು ಹಿಗ್ಗಿತು. ಖ್ಯಾತ ಚಿಂತಕ ಶಿವ ವಿಶ್ವನಾಥನ್, ಮುಸ್ಲಿಮರ ನರಮೇಧ, ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸದೆ ಅವರು ಇನ್ನಷ್ಟು ಜನಪ್ರಿಯರಾದರು ಎಂದು ವಿಶ್ಲೇಷಿಸಿದ್ದರು. ಇದು ಸ್ವತಃ ಅಂದಿನ ಮುಖ್ಯಮಂತ್ರಿಯ ಸಂಚಾಲಕತ್ವದಲ್ಲಿ ನಡೆಯಿತೆಂಬ ಆರೋಪ ಕೇಳಿಬಂತಲ್ಲದೇ ವಿಚಾರಣೆಗಳೂ ನಡೆದವು. ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರಿಗೆ ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯವು 28 ವರ್ಷಗಳ ಶಿಕ್ಷೆಯನ್ನೂ ವಿಧಿಸಿತ್ತು. ಗುಜರಾತ್‍ನಲ್ಲಿ ಆಗಿನಿಂದಲೂ ಅದೇ ಪಕ್ಷಕ್ಕೆ ಸೇರಿದ ಸರ್ಕಾರವಿದೆ ಎಂಬುದನ್ನು ಮರೆಯಲಾಗದು. ಆ ರಾಜ್ಯದಲ್ಲಿ ವಿಚಾರಣೆ ನಡೆದರೆ ನ್ಯಾಯಯುತವಾಗಿರಲಾರದೆಂಬ ಕಾರಣಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗಳನ್ನು ಬೇರೆಡೆಗೆ ವರ್ಗಾಯಿಸಿತ್ತು. ಆ ರಾಜ್ಯದ ಗೃಹಮಂತ್ರಿಯನ್ನು ಬೇರೆಡೆಗೆ ಗಡಿಪಾರು ಮಾಡಲಾಗಿತ್ತು. ಅದೇ ಗೃಹಮಂತ್ರಿ ಇದೀಗ ದೇಶದ ಗೃಹಮಂತ್ರಿ ಮತ್ತು ಅಂತಹ ಘನಘೋರ ಹಿಂಸೆ ಮಾಡಿಸಿದ ಆರೋಪ ಹೊತ್ತಿದ್ದ ಮಹಾಶಯರೇ ಈಗ ನಮ್ಮ ಸಂವಿಧಾನದ ಮೌಲ್ಯಗಳ ವಿರುದ್ಧ ಮಂದಿರದ ಶಿಲಾನ್ಯಾಸ ಮಾಡಲಿದ್ದಾರೆ.

ಭಾರತದಲ್ಲಿ, ಇದುವರೆಗೆ ಹತ್ತಿರ ಹತ್ತಿರ 40,000 ಜನ ಕೋವಿಡ್ ಸೋಂಕಿನಿಂದ ಸತ್ತಿದ್ದಾರೆ. ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಾಣದ ರೀತಿಯಲ್ಲಿ ಜರ್ಜರಿತವಾಗಿದೆ. ಇದು ಕೂಡ ಒಂದು ಪ್ರಭುತ್ವ ಆಯೋಜಿತ ಮಾರಣಹೋಮ. ಈ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಕಡೆಗೆ ಒಂದು ಮಹತ್ವದ ಹೆಜ್ಜೆ, ಈ ರಾಮ ಮಂದಿರವೆಂದು ಭಾವಿಸಲಾಗುತ್ತಿದೆ. ಇವೆಲ್ಲವುಗಳಿಗೆ ರಾಮಾಯಣದ ರೂಪಕ ಒಂದೇ; ಮಾನವೀಯತೆ, ನ್ಯಾಯ, ವಿವೇಕ ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ದೀರ್ಘ ವನವಾಸಕ್ಕೆ ಕಳುಹಿಸಲಾಗುತ್ತಿದೆ.

– ಜಿ ರಾಜಶೇಖರ್, ಉಡುಪಿ


ಇದನ್ನು ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...