Homeಮುಖಪುಟಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

- Advertisement -
- Advertisement -

2020ರ ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಆಳುವ ಬಿಜೆಪಿಯ ವರಿಷ್ಠರು ನಿರ್ಧರಿಸಿದ್ದಾರೆ. ಆ ಜಾಗದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸುವುದು ಅವರ ಉದ್ದೇಶವೆಂದು ತಿಳಿಸಲಾಗಿದೆ. ಆ ಮಂದಿರ ಭವ್ಯವಾಗಿ ಇರಬಹುದು; ಆದರೆ ಖಂಡಿತ ಪವಿತ್ರವಾಗಿರುವುದಿಲ್ಲ. ಅದಕ್ಕೊಂದು ಕಾರಣವಿದೆ. ಈ ಪ್ರಸ್ತಾಪಿತ ರಾಮಮಂದಿರವನ್ನು ಅಕ್ಷರಶಃ ಮನುಷ್ಯರ ಹೆಣಗಳ ಮೇಲೆ ನಿರ್ಮಿಸಲಾಗುತ್ತಿದೆ.

ನಾವು ಒಮ್ಮೆ 1992ರ ಡಿಸೆಂಬರ್ 6ರ ದಿನಗಳನ್ನು ಮನಸ್ಸಿನೊಳಗೆ ತಂದುಕೊಳ್ಳಬೇಕು. ಆ ದಿನ ದೇಶದ ಎಲ್ಲೆಡೆಯಿಂದ ಫೈಜಾಬಾದ್ ಸಮೀಪದ ಅಯೋಧ್ಯೆಗೆ ಲಕ್ಷಾಂತರ ಜನ ಕರಸೇವಕರು ಬಂದಿದ್ದರು. ಅವರು ಬಿಜೆಪಿ ಕಾರ್ಯಕರ್ತರು; ಹೆಚ್ಚಿನವರು ಆರ್ ಎಸ್‍ ಎಸ್ ಸ್ವಯಂಸೇವಕರು. ಕರಸೇವಕರಲ್ಲಿ ಕೆಲವರು ಹಾರೆ ಪಿಕಾಸಿಗಳ ಸಮೇತ ಅಲ್ಲಿ ಜಮಾಯಿಸಿದ್ದರು. ಅಂದು ಲಕ್ಷಾಂತರ ಜನರ ಸಮ್ಮುಖದಲ್ಲಿ, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಅದರ ಬೆನ್ನಿಗೆ ಮುಂಬೈ ಶಹರದಲ್ಲಿ, ಮತೀಯ ಹಿಂಸಾ ಕೃತ್ಯಗಳು ಪ್ರಾರಂಭವಾಗಿ, ಮುಂದೆ ಮೂರು ನಾಲ್ಕು ತಿಂಗಳುಗಳ ಕಾಲ ಆ ಶಹರದಲ್ಲಿ ಮಾರಣಹೋಮ ಅವ್ಯಾಹತವಾಗಿ ನಡೆಯಿತು.

ಈ ಗಲಭೆಗಳಲ್ಲಿ, ಬಿಜೆಪಿ ಶಿವಸೇನಾ ಮಾತ್ರವಲ್ಲ, ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿ ಹಿಂಸಾಚಾರವೆಸಗಿದ್ದರು. ಈ ಕುರಿತು ಸರಕಾರ ನೇಮಿಸಿದ, ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಆಯೋಗ ಹಿಂಸಾಚಾರದ ಕುರಿತು ಸಾಕ್ಷ್ಯಾಧಾರ ಸಹಿತ ವಿವರವಾದ ವರದಿ ಸಲ್ಲಿಸಿದೆ. ನನಗೆ ಗೊತ್ತಿರುವ ಮಟ್ಟಿಗೆ ಈ ವರದಿಯನ್ನು ಯಾವ ಸರಕಾರವೂ ಅಧಿಕೃತವಾಗಿ ಇದುವರೆಗೆ ಸ್ವೀಕರಿಸಿಲ್ಲ.

ಒಂದು ದೃಷ್ಟಿಯಿಂದ 1992ರ ಮುಂಬೈ ಗಲಭೆಗಳು, 2002ರ ಗುಜರಾತ್‍ನ ಮುಸ್ಲಿಂ ನರಮೇಧಕ್ಕೂ ನಾಂದಿ ಹಾಡಿತು. 92ರಲ್ಲಿ ಅಡ್ವಾಣಿ ನೇತೃತ್ವದ ರಥಯಾತ್ರೆಗೆ ಆಯೋಜಕನಾಗಿ ಕೆಲಸ ಮಾಡಿದ್ದ ಒಬ್ಬ ಗುಜರಾತ್‍ನ ಕಾರ್ಯಕರ್ತ, ನರಮೇಧದ ಬಂಡವಾಳ ತರುವ ಲಾಭದ ಅರಿವು ಪಡೆದುಕೊಂಡ. ಈಗ ದೇಶದ ಪ್ರಧಾನಿಯಾಗಿರುವ ಮೋದಿ ಮಹಾಶಯರೇ 2002ರಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಆ ಸಂದರ್ಭದಲ್ಲಿ ನಡೆದ ನರಮೇಧದಿಂದ ಈತನ ಜನಪ್ರಿಯತೆ ಕುಸಿಯುವ ಬದಲು ಇನ್ನಷ್ಟು ಹಿಗ್ಗಿತು. ಖ್ಯಾತ ಚಿಂತಕ ಶಿವ ವಿಶ್ವನಾಥನ್, ಮುಸ್ಲಿಮರ ನರಮೇಧ, ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸದೆ ಅವರು ಇನ್ನಷ್ಟು ಜನಪ್ರಿಯರಾದರು ಎಂದು ವಿಶ್ಲೇಷಿಸಿದ್ದರು. ಇದು ಸ್ವತಃ ಅಂದಿನ ಮುಖ್ಯಮಂತ್ರಿಯ ಸಂಚಾಲಕತ್ವದಲ್ಲಿ ನಡೆಯಿತೆಂಬ ಆರೋಪ ಕೇಳಿಬಂತಲ್ಲದೇ ವಿಚಾರಣೆಗಳೂ ನಡೆದವು. ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರಿಗೆ ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯವು 28 ವರ್ಷಗಳ ಶಿಕ್ಷೆಯನ್ನೂ ವಿಧಿಸಿತ್ತು. ಗುಜರಾತ್‍ನಲ್ಲಿ ಆಗಿನಿಂದಲೂ ಅದೇ ಪಕ್ಷಕ್ಕೆ ಸೇರಿದ ಸರ್ಕಾರವಿದೆ ಎಂಬುದನ್ನು ಮರೆಯಲಾಗದು. ಆ ರಾಜ್ಯದಲ್ಲಿ ವಿಚಾರಣೆ ನಡೆದರೆ ನ್ಯಾಯಯುತವಾಗಿರಲಾರದೆಂಬ ಕಾರಣಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗಳನ್ನು ಬೇರೆಡೆಗೆ ವರ್ಗಾಯಿಸಿತ್ತು. ಆ ರಾಜ್ಯದ ಗೃಹಮಂತ್ರಿಯನ್ನು ಬೇರೆಡೆಗೆ ಗಡಿಪಾರು ಮಾಡಲಾಗಿತ್ತು. ಅದೇ ಗೃಹಮಂತ್ರಿ ಇದೀಗ ದೇಶದ ಗೃಹಮಂತ್ರಿ ಮತ್ತು ಅಂತಹ ಘನಘೋರ ಹಿಂಸೆ ಮಾಡಿಸಿದ ಆರೋಪ ಹೊತ್ತಿದ್ದ ಮಹಾಶಯರೇ ಈಗ ನಮ್ಮ ಸಂವಿಧಾನದ ಮೌಲ್ಯಗಳ ವಿರುದ್ಧ ಮಂದಿರದ ಶಿಲಾನ್ಯಾಸ ಮಾಡಲಿದ್ದಾರೆ.

ಭಾರತದಲ್ಲಿ, ಇದುವರೆಗೆ ಹತ್ತಿರ ಹತ್ತಿರ 40,000 ಜನ ಕೋವಿಡ್ ಸೋಂಕಿನಿಂದ ಸತ್ತಿದ್ದಾರೆ. ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಾಣದ ರೀತಿಯಲ್ಲಿ ಜರ್ಜರಿತವಾಗಿದೆ. ಇದು ಕೂಡ ಒಂದು ಪ್ರಭುತ್ವ ಆಯೋಜಿತ ಮಾರಣಹೋಮ. ಈ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಕಡೆಗೆ ಒಂದು ಮಹತ್ವದ ಹೆಜ್ಜೆ, ಈ ರಾಮ ಮಂದಿರವೆಂದು ಭಾವಿಸಲಾಗುತ್ತಿದೆ. ಇವೆಲ್ಲವುಗಳಿಗೆ ರಾಮಾಯಣದ ರೂಪಕ ಒಂದೇ; ಮಾನವೀಯತೆ, ನ್ಯಾಯ, ವಿವೇಕ ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ದೀರ್ಘ ವನವಾಸಕ್ಕೆ ಕಳುಹಿಸಲಾಗುತ್ತಿದೆ.

– ಜಿ ರಾಜಶೇಖರ್, ಉಡುಪಿ


ಇದನ್ನು ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....